ನೂರಾರು ನೀರುನಾಯಿಗಳ ಚಿನ್ನಾಟ ನೋಡುವ ಭಾಗ್ಯ! ಎಲ್ಲಿ ಅಂತೀರಾ. . .?
ಸುದ್ದಿ360 ವಿಜಯನಗರ (ಹೊಸಪೇಟೆ) ಜು.30: ತುಂಗಭದ್ರಾ ನದಿ ಹಿನ್ನೀರು ಪ್ರದೇಶದ ಗುಂಡಾ ಸಸ್ಯೋದ್ಯಾನವನ ವೀಕ್ಷಣೆಗೆ ಬಂದ ಪ್ರವಾಸಿಗರಿಗೆ ಶನಿವಾರ ಕಾದಿತ್ತು ನೋಡಿ ನೂರಾರು ನೀರು ನಾಯಿಗಳ ಚಿನ್ನಾಟದ ದೃಶ್ಯ. ಸಸ್ಯೋದ್ಯಾನವನದ ಬಳಿಯ ಹಿನ್ನೀರಿನಲ್ಲಿ ಈ ರೀತಿಯಾಗಿ ಕಾಣಿಸಿಕೊಂಡ ನೀರು ನಾಯಿಗಳ ಗುಂಪು ಪ್ರವಾಸಿಗರ ಮನಕೆ ಕಚಗುಳಿ ಕೊಟ್ಟಿದೆ. ಕಳೆದ ಎರಡು ವರ್ಷದಿಂದ ತುಂಗಭದ್ರಾ ಹಿನ್ನೀರು ಪ್ರದೇಶ ನೀರಿನಿಂದ ತುಂಬಿದ್ದ ಕಾರಣ ಗುಂಡಾ ಕಾಯ್ದಿಟ್ಟ ಅರಣ್ಯ ಪ್ರದೇಶವು ಹತ್ತಾರು ವಿವಿಧ ಜೀವ ಸಂಕುಲದ ತಾಣವಾಗಿ ಮಾರ್ಪಟ್ಟಿದ್ದು, ಅರಣ್ಯ ಇಲಾಖೆಯಿಂದ … Read more