ದಾವಣಗೆರೆ: ಅಕ್ರಮ ಚುನಾವಣಾ ಪ್ರಚಾರ ಆರೋಪ – ಕಾರ್ಯಕರ್ತರ ಜಟಾಪಟಿ

59 ಲ್ಯಾಪ್ ಟಾಪ್ ಜಪ್ತಿ – ವಿಚಾರಣೆ ದಾವಣಗೆರೆ, ಸುದ್ದಿ 360: ಅನುಮತಿ ಪಡೆಯದೆ ಟೆಲಿಕಾಲಿಂಗ್ ಮೂಲಕ‌ ಮತಬೇಟೆಯ ತಂತ್ರದಲ್ಲಿ‌ ತೊಡಗಿದ್ದ ಬಿಜೆಪಿಯ ತಂತ್ರಗಾರಿಕೆಯನ್ನು ಕಾಂಗ್ರೆಸ್ ಬಟಾಬಯಲು ಮಾಡಿದೆ. ನಗರದ ಚೇತನಾ ಹೋಟೆಲ್ ಎದುರಿನ ಜೆಪಿ‌ ಫಂಕ್ಷನ್ ಹಾಲ್ನಲ್ಲಿ ಟೆಲಿಕಾಲಿಂಗ್ ಮೂಲಕ ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿತ್ತು. ಇದರ ಸುಳಿವು‌ ಪತ್ತೆ ಹಚ್ಚಿದ ಕಾಂಗ್ರೆಸ್‌ ಮುಖಂಡರು ಪ್ರಕರಣ ಕುರಿತಾಗಿ‌‌ ದೂರು ನೀಡಿದ ಹಿನ್ನೆಲೆಯಲ್ಲಿ ದಾಳಿ ಮಾಡಿರುವ ಚುನಾವಣಾಧಿಕಾರಿಗಳು 59 ಲ್ಯಾಪ್ ಟಾಪ್ ಸೇರಿದಂತೆ ಕೆಲವರ  ಮೊಬೈಲ್ ಗಳನ್ನು … Read more

ದಾವಣಗೆರೆ: ಜಿಲ್ಲಾಸ್ಪತ್ರೆ ಹೊರಗುತ್ತಿಗೆ ನೌಕರರ ಧರಣಿಗೆ ಅಲ್ಪ ವಿರಾಮ – ಕಪ್ಪುಪಟ್ಟಿಯೊಂದಿಗೆ  ಮರಳಿದ  ನೌಕರರು

ಮಾರ್ಚ್ 26ರೊಳಗೆ ಬೇಡಿಕೆ ಈಡೇರುವ ಆಶ್ವಾಸನೆ ಸುದ್ದಿ360 ದಾವಣಗೆರೆ, ಮಾ.18: ಹಲವು ಬೇಡಿಕೆಗಳ ಈಡೇರಿಸುವಂತೆ ಸತತ ನಾಲ್ಕು ದಿನಗಳಿಂದ ಕೆಲಸಕ್ಕೆ ಹಾಜರಾಗದೆ ಪ್ರತಿಭಟನಾ ಧರಣಿಯಲ್ಲಿ ನಿರತರಾಗಿದ್ದ ಇಲ್ಲಿನ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಹೊರಗುತ್ತಿಗೆ ನೌಕರರು ಕಪ್ಪುಪಟ್ಟಿ ಧರಿಸಿ ಇಂದು ಸೇವೆಗೆ ಹಾಜರಾಗಿದ್ದಾರೆ. ಮುಖ್ಯಮಂತ್ರಿಗಳು, ಜಿಲ್ಲಾಧಿಕಾರಿಗಳು ಮತ್ತು ಅಧೀಕ್ಷಕರು ನಮ್ಮ ಬೇಡಿಕೆಗೆ ಸ್ಪಂದಿಸಿ, ತಮ್ಮ ಬೇಡಿಕೆಗಳನ್ನು ಇದೇ ಮಾರ್ಚ್ 26 ರೊಳಗಾಗಿ ಈಡೇರಿಸುವ  ಆಶ್ವಾಸನೆ ನೀಡಿದ್ದರಿಂದ ನೌಕರರು ಸೇವೆಗೆ ಹಿಂದಿರುಗಲು ಒಪ್ಪಿದ್ದು, ಕೈಗೆ ಕಪ್ಪುಪಟ್ಟಿ ಧರಿಸಿ ಧರಣಿಯನ್ನು ಜೀವಂತವಾಗಿಡಲಾಗಿದೆ … Read more

ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಬಳಗದಿಂದ ಬಿ.ಎಸ್. ಜಗದೀಶ್ ಜನ್ಮದಿನಾಚರಣೆ

ಸುದ್ದಿ360 ದಾವಣಗೆರೆ ಜ.3: ಶ್ರೀ ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಬಳಗದ ವತಿಯಿಂದ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್ ಅವರ ಹುಟ್ಟುಹಬ್ಬವನ್ನು ಜ.5ರಂದು ಸಂಜೆ 6 ಗಂಟೆಗೆ ನಗರದ ದಾವಣಗೆರೆ-ಹರಿಹರ ಅರ್ಬನ್ ಕೋ-ಆಫ್ ಬ್ಯಾಂಕ್ ಸಮುದಾಯ ಭವನದಲ್ಲಿ ಹಮ್ಮಿಕೊಂಡಿರುವುದಾಗಿ ಮಾಜಿ ಮಹಾಪೌರರಾದ ಪಿ.ಎಸ್. ಜಯಣ್ಣ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜ ಸೇವಕ ಕೆ.ಬಿ. ಶಂಕರನಾರಾಯಣ ಅವರು ವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ, ಸಂಸದರಾದ ಡಾ. ಜಿ.ಎಂ. ಸಿದ್ದೇಶ್ವರ, ಬಿಜೆಪಿ ಜಿಲ್ಲಾಧ್ಯಕ್ಷ  ಎಸ್.ಎಂ. … Read more

ಜಿಂಕೆ ಮರಿ ಓಡ್ತಾಯ್ತೆ ನೋಡ್ಲಾ ಮಗಾ. . . ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಅಕ್ರಮ ವನ್ಯಜೀವಿ ಸಾಕಾಣಿಕೆ?

ಆಡಳಿತ ಪಕ್ಷಕ್ಕೆ ನುಂಗಲಾರದ ತುತ್ತಾಯಿತೆ. . . !? ಸುದ್ದಿ360 ದಾವಣಗೆರೆ: ಇಲ್ಲಿ ಯಾರನ್ನಾದರೂ ರಾಜಕೀಯ ಕುರಿತು ಮಾತಿಗೆಳೆದರೆ, ಜಿಂಕೆ ನಿಮ್ಮ ಕಣ್ಣಮುಂದೆ ಹಾದು ಹೋಗುತ್ತದೆ. ಅಷ್ಟೇ ಅಲ್ಲ ಕೃಷ್ಣಮೃಗ, ಕಾಡು ಹಂದಿ, ನರಿ, ಮುಂಗಸಿ ಇವುಗಳೂ ಕೂಡ ನಿಮ್ಮ ಕಣ್ಣಮುಂದೆ ಬರದೇ ಇರವು. ಅರೆರೆ ರಾಜಕೀಯಕ್ಕು ಈ ವನ್ಯಜೀವಿಗಳಿಗೂ ಏನು ಸಂಬಂಧ ಅಂತೀರಾ . . .? ನಗರದ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ವನ್ಯಜೀವಿಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ಕಳೆದ ಒಂದು ವಾರದಿಂದ ದಾವಣಗೆರೆಯಲ್ಲಿ … Read more

ಎಪಿಸಿ ಕಪ್ ಚದುರಂಗ ಸ್ಪರ್ಧೆ ತನುಶ್ ಜೆ ಗೆ ಪ್ರಥಮ ಸ್ಥಾನ

ಸುದ್ದಿ360 ದಾವಣಗೆರೆ ನ. 13: ನಗರದ ವಿನಾಯಕ ಬಡಾವಣೆ ಯಲ್ಲಿರುವ ಆನಂದ್ ಪಿಯು ಕಾಲೇಜ್ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ಮಕ್ಕಳಿಗೆ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ಏರ್ಪಡಿಸಲಾಗಿತ್ತು  ಆನಂದ್ ಪಿಯು ಕಾಲೇಜಿನ ಅಧ್ಯಕ್ಷರಾದ ಆನಂದ್  ಚದುರಂಗ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳ ಬುದ್ಧಿವಂತಿಕೆ ಶಕ್ತಿ ಬೆಳವಣಿಗೆಗೆ ಚೆಸ್ ಸಹಕಾರಿಯಾಗಲಿದೆ. ಇದು ಬುದ್ಧಿವಂತರ ಆಟ ಅಲ್ಲ ಮಕ್ಕಳನ್ನು ಬುದ್ಧಿವಂತರನ್ನಾಗಿ ಮಾಡುವ ಆಟ ಎಂದರು. ಇದೇ ರೀತಿ ಪ್ರತಿ ವರ್ಷವೂ ಎಪಿಸಿ ಕಪ್ ಚದುರಂಗ ಸ್ಪರ್ಧೆಯನ್ನು  … Read more

ನಮ್ಮ ದಾವಣಗೆರೆಯ ಫಲಪುಷ್ಪ ಪ್ರದರ್ಶನದಲ್ಲಿ ಕರ್ನಾಟಕ ರತ್ನ ಪುನೀತನ ಮೆರುಗು

ಕಣ್ಮನ ಸೆಳೆದ ಫಲಪುಷ್ಪ ಪ್ರದರ್ಶನ ಸುದ್ದಿ360 ದಾವಣಗೆರೆ ನ.12: ಏಷ್ಯಾದಲ್ಲಿಯೇ ದೊಡ್ಡ ಗಾಜಿನಮನೆ ಎಂಬ ಖ್ಯಾತಿ ಹೊಂದಿರುವ ಬೆಣ್ಣೆನಗರಿಯ ಗಾಜಿನ ಮನೆಯಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ವೀಕ್ಷಕರ ಕಣ್ಮನ ಸೆಳೆಯುತ್ತಿದೆ. ನಗರದ ಹೊರ ವಲಯ ಗಾಜಿನಮನೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ತೋಟಗಾರಿಕೆ ಸಂಘದ ಸಂಯುಕ್ತಾಶ್ರಯದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆಗೊಂಡಿದ್ದು,  ಇದೇ ನವೆಂಬರ್ 10 ರಿಂದ 4 ದಿನಗಳ ಕಾಲ ನಡೆಯುತ್ತಿದೆ. ವಿಶೇಷವಾಗಿ ಇಲ್ಲಿ ಅಪ್ಪುವಿನ ತೀಮ್ ನೋಡುಗರನ್ನು ಪುನೀತನನ್ನಾಗಿ ಮಾಡಿದೆ. … Read more

ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕಿತ್ತೂರಿನ ರಾಣಿ ಚೆನ್ನಮ್ಮ ಸ್ಮರಣೆ

ಶೌರ್ಯ ಮತ್ತು ಸಾಹಸಕ್ಕೆ ಮತ್ತೊಂದು ಹೆಸರೇ ವೀರಾಗ್ರಣಿ ಕಿತ್ತೂರಿನ ರಾಣಿ ಚೆನ್ನಮ್ಮಜಿ.-ಬಿ ವಾಮದೇವಪ್ಪ, ಅಧ್ಯಕ್ಷರು, ಜಿಲ್ಲಾ ಕಸಾಪ, ದಾವಣಗೆರೆ ಕರ್ನಾಟಕದ ಕನ್ನಡತಿ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿ ಅವರ ವಿರುದ್ಧ ಹೋರಾಟ ಮಾಡಿ ಜಯಗಳಿಸಿದ ಕಿತ್ತೂರಿನ ರಾಣಿ ವೀರಾಗ್ರಣಿ ಎಂದೇ ಪ್ರಸಿದ್ಧರಾದ ಕಿತ್ತೂರಿನ ರಾಣಿ ಚನ್ನಮ್ಮಜಿಯವರ ವಿಜಯೋತ್ಸವದ ಸಂದರ್ಭವನ್ನು ಪ್ರತಿಯೊಬ್ಬರೂ ಸ್ಮರಿಸಲೇಬೇಕು ಎಂದು ಅವರ ಜಯಂತೋತ್ಸವದ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಬಿ. ವಾಮದೇವಪ್ಪ ಅವರು ಅತ್ಯಂತ ಗೌರವ ಭಾವನೆಯಿಂದ ಚನ್ನಮ್ಮಾಜಿ ಅವರ ಗುಣಗಾನ … Read more

ಪುಸ್ತಕ ಓದುವ ಸಂಸ್ಕೃತಿ ಕಣ್ಮರೆ – ಆತಂಕಕಾರಿ – ಡಾ.ಎಸ್.ಆರ್. ಅಂಜನಪ್ಪ ವಿಷಾದ

ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಅಮೃತ ಪುಸ್ತಕ ಮಾರಾಟ ಅಭಿಯಾನ ಸುದ್ದಿ360 ದಾವಣಗೆರೆ, ಆ.25: ವಿದ್ಯಾರ್ಥಿಗಳು ಮತ್ತು ಜನ ಸಾಮಾನ್ಯರು ಇತ್ತೀಚೆಗೆ ಪುಸ್ತಕಗಳಿಂದ ದೂರ ಉಳಿಯುತ್ತಿದ್ದಾರೆ. ಪುಸ್ತಕ ಓದುವ ಸಂಸ್ಕೃತಿ ದಿನೇ ದಿನೇ ಕಣ್ಮರೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಸರಕಾರಿ ಪ್ರಥಮದರ್ಜೆ ಲೀಡ್ ಕಾಲೇಜು ಪ್ರಾಂಶುಪಾಲ ಡಾ.ಎಸ್.ಆರ್. ಅಂಜನಪ್ಪ ವಿಷಾದ ವ್ಯಕ್ತಪಡಿಸಿದರು. ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನದ ಅಂಗವಾಗಿ ನಗರದ ಡೆಂಟಲ್ ಕಾಲೇಜು ರಸ್ತೆಯ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಇಂದು ಹಮ್ಮಿಕೊಂಡಿದ್ದ ಅಮೃತ ಪುಸ್ತಕ ಮಾರಾಟ ಅಭಿಯಾನ ಮತ್ತು … Read more

ಗುರು ಅನ್ನದಾನ ಮಹಾಶಿವಯೋಗಿಗಳ ಮತ್ತು ಡಾ. ಅಭಿನವ ಅನ್ನದಾನ ಶ್ರೀಗಳ ಪುಣ್ಯಾರಾಧನೆ – 249ನೇ ಶಿವಾನುಭವ ಸಂಪದ

ಸುದ್ದಿ360 ದಾವಣಗೆರೆ, ಆ.18: ಗುರು ಅನ್ನದಾನ ಮಹಾಶಿವಯೋಗಿಗಳವರ 45ನೇ ಪುಣ್ಯಾರಾಧನೆ ಮತ್ತು ಕಾಯಕಯೋಗಿ ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ. ಅಭಿನವ ಅನ್ನದಾನ ಮಹಾಸ್ವಾಮಿಗಳ ಪ್ರಥಮ ವರ್ಷದ ಪುಣ್ಯಾರಾಧನೆಯನ್ನು ಇದೇ ಆಗಸ್ಟ್ 20 ಮತ್ತು 21ರಂದು ದಾವಣಗೆರೆಯಲ್ಲಿ ಆಯೋಜಿಸಲಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಶ್ರೀ ಅನ್ನದಾನೇಶ್ವರ ಸಾರ್ವಜನಿಕ ಸೇವಾ ಟ್ರಸ್ಟ್ ಅಧ್ಯಕ್ಷ ಅಥಣಿ ವೀರಣ್ಣ ಮಾತನಾಡಿ, 21ರ ಭಾನುವಾರ ಬೆಳಿಗ್ಗೆ 10ಕ್ಕೆ ನಗರದ ಶ್ರೀ ದೇವರಾಜ ಅರಸು ಬಡಾವಣೆಯ ಬಿ ಬ್ಲಾಕ್ ನಲ್ಲಿರುವ ಅನ್ನದಾನೇಶ್ವರ ಶಾಖಾಮಠದಲ್ಲಿ ಉಭಯ ಗುರುಗಳ … Read more

ಯುವಾ ಬ್ರಿಗೇಡ್ ಹರಿಹರ ತಂಡದಿಂದ ಹಳೆಯ ದೇವರ ಫೋಟೊಗಳ ವಿಸರ್ಜನೆ

ಸುದ್ದಿ360 ದಾವಣಗೆರೆ, ಆ.08:  ಯುವಾ ಬ್ರಿಗೇಡ್ ಹರಿಹರ ತಂಡ ಹರಿಹರದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಅಕ್ಕಪಕ್ಕ ಬಿದ್ದಿದ್ದ ಹಳೆಯ ದೇವರ ಫೋಟೋಗಳನ್ನು ಸಂಗ್ರಹಿಸಿ ಸೂಕ್ತರೀತಿಯಲ್ಲಿ ವಿಸರ್ಜಿಸಿದ್ದಾರೆ. ದೇವಸ್ಥಾನದ ಸುತ್ತಮುತ್ತಲು ಇಲ್ಲವೆ ಅಲ್ಲಿನ ಆಸುಪಾಸಿನ ಮರ ಇಲ್ಲವೇ ಯಾವುದಾದರೂ ಮರದ ಕೆಳಗಡೆ ಊನವಾದ ದೇವರ ಫೋಟೋಗಳು ಇಟ್ಟಿರುವುದನ್ನು ಸಾಮಾನ್ಯವಾಗಿ ಎಲ್ಲರೂ ನೋಡಿರುತ್ತೀರಿ. ಇದೂ ಸಹ ದೇವರಿಗೆ ಅಗೌರವ ತೋರಿಸಿದಂತೆಯೇ ಆಗುತ್ತದೆಯಲ್ಲದೆ. ಫೋಟೊಗೆ ಅಳವಡಿಸಲಾದ ಫ್ರೇಮ್ ಮತ್ತು ಗಾಜಿನ ಚೂರುಗಳು ಕಾಲ ಕ್ರಮೇಣ ಒಡೆದು ಸಾರ್ವಜನಿಕರಿಗೆ ಹಾನಿಯುಂಟು ಮಾಡುತ್ತದೆ. … Read more

error: Content is protected !!