ಭೀಕರ ಅಪಘಾತ: ಬಾಲಕ ಸೇರಿ 7 ಮಂದಿ ದುರ್ಮರಣ

ಸುದ್ದಿ360, ಹೊಸಪೇಟೆ (hospet) ಅ.09: ಎರಡು ಮೈನಿಂಗ್ ಟಿಪ್ಪರ್ ಲಾರಿಗಳು ಮತ್ತು ಕ್ರ್ಯೂಸರ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ (accident) 7 ಜನರ ದುರ್ಮಣ ಹೊಂದಿದ್ದಾರೆ. ಹೊಸಪೇಟೆ ನಗರದ ಹೊರವಲಯದ ಟನಲ್ ಬಳಿ ಈ ಅಪಘಾತ ಸಂಭವಿಸಿದ್ದು, ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಕ್ರೂಸರ್‍ನಲ್ಲಿದ್ದ 7 ಜನರು ಮೃತಪಟ್ಟಿದ್ದು, ವಾಹನದಲ್ಲಿ ಸಿಲುಕಿರುವ ಶವಗಳನ್ನು ಹೊರ ತೆಗೆಯಲು ಪೊಲೀಸರ ಹರಸಾಹಸಪಟ್ಟಿದ್ದಾರೆ. ಕ್ರೂಸರ್‍ನಲ್ಲಿದ್ದವರು ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿ ಗೋಣಿಬಸವೇಶ್ವರ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುವಾಗ ದುರ್ಘಟನೆ ನಡೆದಿದೆ‌. ಕ್ರ್ಯೂಸರ್ … Read more

ಅಪಘಾತ – ವೈದ್ಯ ವಿದ್ಯಾರ್ಥಿ ಸಾವು – ಆರ್ಯುರ್ವೇದ ವಿದ್ಯಾರ್ಥಿಗಳ ಪ್ರತಿಭಟನೆ

davangere-ayurvedic-student-accident

ಸುದ್ದಿ360 ದಾವಣಗೆರೆ (Davangere) : ನಗರದ ಪಿ.ಬಿ. ರಸ್ತೆಯ ಬಾತಿ ಕೆರೆ ಬಳಿ ಇರುವ ಆಯುರ್ವೇದ ಕಾಲೇಜು (ayurvedic college) ಸಮೀಪ  ರಸ್ತೆ ದಾಟುತ್ತಿದ್ದ ಆಯುರ್ವೇದ ವಿದ್ಯಾರ್ಥಿಗೆ  ಹಾಲಿನ ಡೇರಿ ವಾಹನ ಡಿಕ್ಕಿ ಹೊಡೆದ ಪರಿಣಾಮ  ಗಂಭೀರವಾಗಿ ಗಾಯಗೊಂಡಿದ್ದ ಆಯುರ್ವೇದ ವಿದ್ಯಾರ್ಥಿ (ayurvedic student) ಆಸ್ಪತ್ರೆಗೆ (hospital) ಸಾಗಿಸುತ್ತಿದ್ದ ಮಾರ್ಗಮಧ್ಯೆ ಮೃತ ಪಟ್ಟಿರುವ (passed away) ಘಟನೆ ಬುಧವಾರ ಸಂಜೆ ನಡೆದಿದೆ. ಮೃತ ವಿದ್ಯಾರ್ಥಿ ಡಾ. ಮನೋಜ್‍ ಕುಮಾರ್(20) ದಾವಣಗೆರೆಯ ಎಚ್‌ಕೆಆರ್ ನಗರ ನಿವಾಸಿ ಶಿವಕುಮಾರಸ್ವಾಮಿಯವರ ಪುತ್ರ. … Read more

ಮೆಟ್ರೋ ಕಾಮಗಾರಿ ದುರಂತ: ಅಧಿಕಾರಿ, ಗುತ್ತಿಗೆದಾರರ ಮೇಲೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು ಜ.10: ಮೆಟ್ರೊ ಕಾಮಗಾರಿ ದುರಂತಕ್ಕೆ ಕಾರಣರಾದ  ಹಿರಿಯ ಅಧಿಕಾರಿಗಳು, ಮುಖ್ಯಸ್ಥರ ಮೇಲೆ ಕ್ರಮಕೈಗೊಳ್ಳಲು ಸೂಚಿಸಿದ್ದು,  ಗುತ್ತಿಗೆದಾರ ಮೇಲೆ ಪ್ರಕರಣ ದಾಖಲಿಸುವುದರ ಜೊತೆಗೆ ಉನ್ನತ ಮಟ್ಟದ ತನಿಖೆ ಮಾಡುವಂತೆಯೂ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಪ್ರಶ್ನೆ ಇರುವುದು ಇಷ್ಟು ಅಸುರಕ್ಷಿತವಾಗಿ ಹೇಗೆ  ಕೆಲಸ ಮಾಡಿದರು ಎನ್ನುವುದನ್ನು ಪತ್ತೆ ಹಚ್ಚಿ, ಮುಂದೆ ಹೀಗಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತನಿಖೆ ಹಾಗೂ ತಾಂತ್ರಿಕ ಲೋಪದ ಏನು ಎಂಬುದರ ಬಗ್ಗೆ ಕ್ರಮ … Read more

ಟ್ರ್ಯಾಕ್ಟರ್ ಪಲ್ಟಿ, ಸ್ಥಳದಲ್ಲೇ ಇಬ್ಬರ ಸಾವು – ಇಬ್ಬರ ಸ್ಥಿತಿ ಗಂಭೀರ

ಸುದ್ದಿ360 ಬಾಗಲಕೋಟೆ ಜ.6: ಸವದತ್ತಿ ಯಲ್ಲಮ್ಮನ ಗುಡ್ಡದ ಜಾತ್ರೆಗೆ  ಹೋಗಿ ಬರುತ್ತಿದ್ದ ವೇಳೆ ಎರಡೂ ಟ್ರ್ಯಾಕ್ಟರ್ ಚಾಲಕರು ಓವರ್ ಟೇಕ್ ಮಾಡಲು ಹೋಗಿ ಹಿಂಬದಿಯ ಟ್ರ್ಯಾಕ್ಟರ್ ಮುಂದಿನ ಟ್ರ್ಯಾಕ್ಟರ್ಗೆ ಗುದ್ದಿರುವ ಕಾರಣ ದುರಂತ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದ ಬಳಿ ಘಟನೆ ನಡೆದಿದ್ದು, ಟ್ರ್ಯಾಕ್ಟರ್ ಪಲ್ಟಿಯಾದ ಸ್ಥಳದಲ್ಲೇ ಇಬ್ಬರು ಸಾವುಗೀಡಾಗಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಗೋವಿಂದ್( 20), ಹಣಮಂತ (20) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಹನಮಂತ ಹುಣಸಿಕಟ್ಟಿ ಅವರಿಗೆ ಸೇರಿದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, … Read more

ಸರಣಿ ಅಪಘಾತದಲ್ಲಿ ಇಬ್ಬರ ದುರ್ಮರಣ – ಪತಿಯ ಜೀವ ಉಳಿಸಲು ಮದುರೈನಿಂದ ಬಂದ ಪತ್ನಿಯ ದುರಂತ ಅಂತ್ಯ

ಸುದ್ದಿ360 ದಾವಣಗೆರೆ, ಸೆ.16: ಪತಿಯ ಜೀವ ಉಳಿಸಲು ಕಾಳಜಿ ವಹಿಸಿ ಆಂಬ್ಯುಲೆನ್ಸ್ ನಲ್ಲಿ ಕೂತಿದ್ದ ಪತ್ನಿಯೇ ದುರಂತ ಅಂತ್ಯ ಕಂಡಿರುವ ದಾರುಣ ಘಟನೆ ದಾವಣಗೆರೆ ಸಮೀಪದ ಕಲ್ಪನಹಳ್ಳಿ ರಾಷ್ಟ್ರೀಯ ಹೆದ್ದಾರಿ 6 ರಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿ 6 ರಲ್ಲಿ ಕಲ್ಪನಹಳ್ಳಿ ಬಳಿ ನಡೆದ ಸರಣಿ ಅಪಘಾತದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕಿ ಸೇರಿ ಇಬ್ಬರು ಸಾವು ಕಂಡಿದ್ದಾರೆ. ಕಾರಿಗನೂರಿನ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕಿ ಜ್ಯೋತಿ(43) ಮತ್ತು … Read more

ಬೈಕಿಗೆ ಗುದ್ದಿ ಮನೆಗೆ ನುಗ್ಗಿದ ರಿಟ್ಜ್ ಕಾರು –ಬೈಕ್ ಸವಾರನಿಗೆ ಗಂಭೀರ ಗಾಯ

ಸುದ್ದಿ360 ಚಿಕ್ಕಮಗಳೂರು, ಆ.5 : ಜಿಲ್ಲೆಯ ಕೊಪ್ಪ ತಾಲೂಕಿನ  ಶಾಂತಿಪುರ ಬಳಿಯ ರಾಜ್ಯ ಹೆದ್ದಾರಿ 27ರಲ್ಲಿ ರಿಟ್ಜ್ ಕಾರೊಂದು ಬೈಕ್ ಗೆ ಗುದ್ದಿರುವುದಲ್ಲದೆ ಮುಂದುವರೆದು ಮನೆಗೆ ನುಗ್ಗಿದ ಪರಿಣಾಮ ಮನೆಯ ಮುಂಭಾಗದ ಗೋಡೆ ಕುಸಿದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಪಲ್ಸರ್ ಬೈಕ್ ಸವಾರನಿಗೆ ಕಾರು ಗುದ್ದಿದ ಪರಿಣಾಮ ಗಂಭೀರ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕಾರು ನುಗ್ಗಿದ  ರಭಸಕ್ಕೆ ಮನೆಯ ಮುಂಭಾಗದ ಗೋಡೆ ಕುಸಿದಿದ್ದು, ಮನಯಲ್ಲಿದ್ದವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇಲ್ಲಿನ ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ … Read more

ಭಾನಾಪೂರ ಬಳಿ ನಡೆದ ಅಪಘಾತದಲ್ಲಿ ತಬ್ಬಲಿಗಳಾದ ಮೂವರು ಮಕ್ಕಳು

ಸುದ್ದಿ360 ಕೊಪ್ಪಳ ಜು.25: ಕಳೆದ ವರ್ಷ ತಂದೆಯನ್ನು ಕಳೆದುಕೊಂಡಿದ್ದ ಮಕ್ಕಳು, ಶನಿವಾರ ತಡರಾತ್ರಿ ನಡೆದ ಅಪಘಾತದಲ್ಲಿ ತಾಯಿ ಪಾರವ್ವನನ್ನು ಕಳೆದುಕೊಂಡು ತಬ್ಬಲಿಗಳಾಗಿದ್ದಾರೆ. ಅಪಘಾತದಲ್ಲಿ ತಾಯಿ ಪಾರವ್ವ ಮೃತ ಪಟ್ಟರೇ, ಪುಟ್ಟರಾಜ್, ಭೂಮಿಕಾ ಹಾಗೂ ಬಸವರಾಜಗೆ ಗಾಯವಾಗಿದೆ. ಪಾರವ್ವ ಪತಿ ಬೀರಪ್ಪ ಕಳೆದ ವರ್ಷ ಅನಾರೋಗ್ಯದಿಂದ ಮೃತಪಟ್ಟಿದ್ದರು. ಪರಿಣಾಮ ಬೀರಪ್ಪ, ಪಾರವ್ವ ದಂಪತಿಗಳ ಮಕ್ಕಳಾದ ಬಸವರಾಜ್, ಪುಟ್ಟರಾಜ, ಭೂಮಿಕಾ ತಂದೆ ತಾಯಿಗಳಿಲ್ಲದೆ ಅನಾಥರಾಗಿವುದು ಎಂಥಹವರಿಗೂ ಮನ ಮಿಡಿಯುವಂತೆ ಮಾಡಿದೆ. ಅಪಘಾತದಲ್ಲಿ ಗಾಯಗೊಂಡಿರುವ  ಈ ಮಕ್ಕಳು ಸದ್ಯ ಕೊಪ್ಪಳ ಜಿಲ್ಲಾ … Read more

ಭಾನಾಪುರ ಬಳಿಯ ಅಪಘಾತದಲ್ಲಿ ಬಾಲಕ ಪುಟ್ಟರಾಜು ಆರೋಗ್ಯ ಸ್ಥಿತಿ ಗಂಭೀರ

ಸುದ್ದಿ360 ಕೊಪ್ಪಳ ಜು.24: ಕುಕನೂರು ತಾಲೂಕಿನ ಭಾನಾಪುರ ಬಳಿ ಶನಿವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತಪಟ್ಟ ಐದೂ ಜನ ಒಂದೇ ಕುಟುಂಬದವರಾಗಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 7 ವರ್ಷದ  ಪುಟ್ಟರಾಜು ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸ್ಕಾರ್ಪಿಯೊ ವಾಹನದಲ್ಲಿದ್ದ ಒಟ್ಟು ಒಂಬತ್ತು ಜನರ ಪೈಕಿ ಐದು ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಲ್ಲವಿ (28), ಪುಟ್ಟರಾಜು (7), ಚಾಲಕ ಹರ್ಷವರ್ಧನ (35) ಹಾಗೂ ಭೂಮಿಕಾ (5) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಪುಟ್ಟರಾಜು … Read more

ಭೀಕರ ರಸ್ತೆ ಅಪಘಾತ: ಐದು ಮಂದಿ ಸಾವು -ಹಿಟ್ ಆ್ಯಂಡ್ ರನ್ – ಚೆಕ್ ಪೋಸ್ಟ್, ಟೋಲ್ ಗಳ ಮೇಲೆ ನಿಗಾ

ಸುದ್ದಿ360 ಕೊಪ್ಪಳ ಜು.24: ಕುಕನೂರು ತಾಲೂಕಿನ ಭಾನಾಪುರ ಬಳಿ ಶನಿವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಕನೂರು ತಾಲೂಕಿನ ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ(62), ಮೃತರ ಸೊಸೆ ಗಿರಿಜಮ್ಮ(45), ಅಣ್ಣನ ಮಕ್ಕಳಾದ ಶಾಂತಮ್ಮ(35), ಪಾರ್ವತಮ್ಮ(32), ಸಂಬಂಧಿ ಕಸ್ತೂರಮ್ಮ(20) ಮೃತ ದುರ್ದೈವಿಗಳಾಗಿದ್ದಾರೆ. ಕೊಪ್ಪಳದಲ್ಲಿ ನಡೆದ ಕುಟುಂಬದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಕುಕನೂರು ತಾಲೂಕಿನ ಬಿನ್ನಾಳ ಗ್ರಾಮಕ್ಕೆ ವಾಪಸ್ ಹೋಗುವಾಗ ಅವಘಡ ಸಂಭವಿಸಿದೆ. ವಾಹನದಲ್ಲಿ ಒಟ್ಟು ಒಂಬತ್ತು ಪ್ರಯಾಣಿಕರು ಇದ್ದರು. ಚಾಲಕ ಹರ್ಷವರ್ಧನ, ಮಕ್ಕಳಾದ … Read more

ಟ್ಯಾಂಕರ್ ಗೆ ಬೆಂಕಿ ಇಬ್ಬರು ಸಜೀವ ದಹನ –ನಾಲ್ವರಿಗೆ ಗಾಯ

ಸುದ್ದಿ360 ಧಾರವಾಡ,ಜೂ.29: ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್‌ಗೆ ಬೆಂಕಿ ಹತ್ತಿ ಉರಿದ ಘಟನೆ ಬೈಪಾಸ್ ನ ಯರಿಕೊಪ್ಪ ಬಳಿ ಬುಧವಾರ ರಾತ್ರಿ ಸಂಭವಿಸಿದ್ದು, ಘಟನೆಯಲ್ಲಿ ಟ್ಯಾಂಕರ್ ಚಾಲಕ ಸೇರಿ ಇಬ್ಬರು ಸುಟ್ಟು ಕರಕಲಾಗಿದ್ದಾರೆ ಎನ್ನಲಾಗಿದೆ. ಬೆಳಗಾವಿಯಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಟ್ಯಾಂಕರ್ ಲಾರಿ ಎದುರಿನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಟ್ಯಾಂಕರ ಉರುಳಿ ಬಿದ್ದಿದೆ. ಆಗ ಟ್ಯಾಂಕರ್‌ನಲ್ಲಿದ್ದ ಡೀಸೆಲ್ ಸೋರಿಕೆಯಾಗಿ ಹೊತ್ತಿದ ಬೆಂಕಿ ಇಡೀ ಟ್ಯಾಂಕರ್ ಗೆ ಆವರಿಸಿದೆ. ಅಪಘಾತದಲ್ಲಿ ಇಬ್ಬರು ಸಾವನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಇನ್ನೂ … Read more

error: Content is protected !!