ನಿಗಮ ಮಂಡಳಿ: ಹೊಸಬರಿಗೆ ಅವಕಾಶ

ಸುದ್ದಿ360 ಮೈಸೂರು, ಜು.12: ನಿಗಮ ಮಂಡಳಿಗಳಿಗೆ ಹೊಸಬರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನಿಗಮ ಮಂಡಳಿಗಳ ಕೋರ್ ಕಮಿಟಿಯಲ್ಲಿ  ಒಂದೂವರೆ ವರ್ಷ ಮೇಲ್ಪಟ್ಟವರನ್ನು ತೆಗೆದು ಹೊಸಬರಿಗೆ ಅವಕಾಶ ನೀಡಬೇಕು ಎನ್ನುವ ತೀರ್ಮಾನ ಆರು ತಿಂಗಳ ಹಿಂದೆಯೇ ಆಗಿದೆ. ಈ ನಿಟ್ಟಿನಲ್ಲಿ ಬೇರೆಯವರಿಗೂ ಅವಕಾಶ ಒದಗಿಸುವ ಕಾರ್ಯ ನಡೆಯುತ್ತಿದೆ ಎಂದಿದ್ದಾರೆ.

ರೈತರ ಬೇಡಿಕೆಗೆ ಮುಖ್ಯಮಂತ್ರಿಯಿಂದ ಸಕಾರಾತ್ಮಕ ಸ್ಪಂದನೆಯ ಭರವಸೆ

ಸುದ್ದಿ360, ದಾವಣಗೆರೆ, ಜು.12: ಕರ್ನಾಟಕ ರಾಜ್ಯ ರೈತ ಸಂಘದವರ ನಿಯೋಗ ಸೋಮವಾರ‌ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುವ ನಿರ್ಧಾರ ಪ್ರಕಟಿಸಿದರು. ರೈತರ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಸಕಾರಾತ್ಮಕವಾಗಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ನಾರಾಯಣಗೌಡ, ಶಾಸಕ ಸಿ ಪಿ ಯೋಗೇಶ್ವರ  ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮೀಸಲಾತಿ: ಜಿಲ್ಲಾಡಳಿತ ಕಚೇರಿ ಮುತ್ತಿಗೆಗೆ ಮುಂದಾದ ಎಸ್ಸಿ-ಎಸ್ಟಿ ಸಂಘಟನೆಗಳು

ಅರ್ಧಗಂಟೆಗೂ ಹೆಚ್ಚು ಕಾಲ ಜಿಲ್ಲಾಡಳಿತ ಭವನ ಮುಖ್ಯ ದ್ವಾರದ ಎದುರು ಪಿಬಿ ರಸ್ತೆ ತಡೆ ಸುದ್ದಿ360, ದಾವಣಗೆರೆ ಜು.11: ಕರ್ನಾಟಕ ಸ್ವಾಭಿಮಾನಿ ಎಸ್ಸಿ-ಎಸ್ಟಿ ಸಂಘಟನೆಗಳ ಒಕ್ಕೂಟ ಮತ್ತು ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಸದಸ್ಯರು, ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೆ ಆಗ್ರಹಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ಮುಂದಾದ ಘಟನೆ ಸೋಮವಾರ ನಗರದಲ್ಲಿ ಜರುಗಿತು. ಮುನ್ನೆಚ್ಚರಿಕೆ ಕ್ರಮವಾಗಿ ಪಿಬಿ ರಸ್ತೆಗೆ ಹೊಂದಿಕೊಂಡಿರುವ ಜಿಲ್ಲಾಡಳಿತ ಭವನದ ಮುಖ್ಯದ್ವಾರದ ಕಮಾನು ಬಳಿಯೇ ಪೊಲೀಸರು ಬ್ಯಾರಿಕೇಡ್ … Read more

ಮಳೆ ಪೀಡಿತ  ಜಿಲ್ಲೆಗಳಿಗೆ ಸಿಎಂ ಪ್ರವಾಸ

ಸ್ಥಿತಿಗತಿ ಪರಿಶೀಲಿಸಿ ಪರಿಹಾರಕ್ಕೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ360, ಬೆಂಗಳೂರು, ಜು.11: ಅತಿವೃಷ್ಟಿ ಯಿಂದ ಹಾನಿಗೊಳಗಾದ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ನಾಳೆ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಮಲೆನಾಡು, ಕೊಡಗು, ಕರಾವಳಿ ಹಾಗೂ ಉತ್ತರ ಕನ್ನಡ ಭಾಗದಲ್ಲಿಕಳೆದ 10 ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದೆ. ಈಗಾಗಲೇ ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ಹಾಗೂ ನೇರವಾಗಿಯೂ ಮಾತನಾಡಿದ್ದು, ಮಳೆ … Read more

ಇತರ ಧರ್ಮಗಳನ್ನು ಗೌರವಿಸಿ ಸಮನ್ವಯ ಸಾಧಿಸಿದಾಗ ಮಾತ್ರ ಸಮಾಜದಲ್ಲಿ ಸಮಾನತೆ ಸಾಧ್ಯ

ಡಾ. ಎಲ್.ಶಿವಲಿಂಗಯ್ಯನವರ ‘ನುಡಿ-ನಮನ’ ಕಾರ್ಯಕ್ರಮದಲ್ಲಿ ಸಿಎಂ ಅಭಿಮತ ಸುದ್ದಿ360, ಬೆಂಗಳೂರು, ಜು.10: ಇತರ ಧರ್ಮಗಳನ್ನು ಗೌರವಿಸುವ ಮೂಲಕ ಸಮನ್ವಯ ಸಾಧಿಸಬೇಕಿದೆ. ಸಮಾಜದ ಎಲ್ಲ ವರ್ಗದ ಜನರೊಂದಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಸಮನ್ವಯ ಸಾಧಿಸಿದಾಗ ಮಾತ್ರ ಸಮಾಜದಲ್ಲಿ ಸಮಾನತೆಯ ಭಾವವನ್ನು ತರಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು  ಬೆಂಗಳೂರಿನಲ್ಲಿ ನಿವೃತ್ತ ಇಂಜಿನಿಯರ್ ಇನ್ ಚೀಫ್ ಹಾಗೂ ರಾಜ್ಯ ಸರ್ಕಾರದ ವಿಶೇಷ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ  ಡಾ. ಎಲ್.ಶಿವಲಿಂಗಯ್ಯನವರ ‘ನುಡಿ-ನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. … Read more

ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆ ವಿಸ್ತರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜು. 08: ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆಯ  ವಿಸ್ತರಣೆ ಮಾಡುವುದಾಗಿ   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು  ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ  ಆಯೋಜಿಸಿದ್ದ  ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ  ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ  ಮಾತನಾಡಿದರು. ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗನೆ  ಈ ಬಗ್ಗೆ ಘೋಷಣೆ ಮಾಡಲಾಗುವುದು. ನಿವೃತ್ತ ನೌಕರರು ನಿರಂತರವಾಗಿ  ಕ್ರಿಯಾಶೀಲರಾಗಿದ್ದು, ಉತ್ತಮ ಸಮಾಜ ನಿರ್ಮಾಣಕ್ಕೆ ಕಟಿಬದ್ಧರಾಗಿ ಕೆಲಸ ಮಾಡಬೇಕು ಎಂದರು. … Read more

ಅತಿವೃಷ್ಠಿ: ಇಂದು (ಜು.8) ಮಧ್ಯಾಹ್ನ 2.30 ಕ್ಕೆ ಅಧಿಕಾರಿಗಳೊಂದಿಗೆ ಸಿಎಂ ಸಭೆ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360, ಬೆಂಗಳೂರು, ಜು.08: ರಾಜ್ಯದಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿಇಂದು ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ 13  ಜಿಲ್ಲೆಗಳ ಉಸ್ತುವಾರಿ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಚಿವರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿ ಇ ಒ ಮತ್ತು ಇತರೆ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್  ಕರೆದಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮಧ್ಯಾಹ್ನ 2:30ಕ್ಕೆ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಿದೆ? ಎಷ್ಟು … Read more

ದೇಶ ಅಧೋಗತಿಗೆ ಬಂದಿರುವುದೇ ಕಾಂಗ್ರೆಸ್ಸಿನಿಂದ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜು.08: ಕಾಂಗ್ರೆಸ್ ನವರು ಮಹಾತ್ಮಾಗಾಂಧಿ ಅವರ ಹೆಸರನ್ನು ಬಹಳಷ್ಟು ದುರುಪಯೋಗಪಡಿಸಿಕೊಂಡಿದ್ದಾರೆ. ಈ ದೇಶ ಅಧೋಗತಿಗೆ ಬಂದಿರುವುದೇ ಕಾಂಗ್ರೆಸ್ಸಿನಿಂದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಗುರುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅವರ ಕಾಲದಲ್ಲಿ ಪಿ.ಎಸ್.ಐ ಪ್ರಕರಣದಲ್ಲಿ ಡಿಐಜಿ ಒಬ್ಬರು ಭಾಗಿಯಾಗಿದ್ದರು. ಕಾಂಗ್ರೆಸ್ ಏನೂ ಮಾಡಲಿಲ್ಲ. ಎಫ್.ಐ.ಆರ್ ನಲ್ಲಿ  ಹೆಸರು ಬಂದರೂ ಕೂಡ ಅವರ ವಿಚಾರಣೆ, ಬಂಧನ, ಅಮಾನತು ಯಾವುದನ್ನೂ ಮಾಡಲಿಲ್ಲ. ಈಗ ನಾನು ಬಂದ ನಂತರ ಕಾನೂನು ಕ್ರಮ ಜರುಗಿಸಿದ್ದೇನೆ. ಇವರು ಜನರ … Read more

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅನುಭವ ಇಡೀ ದೇಶಕ್ಕೆ ಲಾಭ ತಂದುಕೊಡಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜು.08: ಡಾ. ಡಿ. ವೀರೇಂದ್ರ ಹೆಗ್ಗಡೆಯವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಕನ್ನಡ ನಾಡಿನ ಸಮಗ್ರ ಜನತೆಗೆ ಬಹಳ ಸಂತಸವುಂಟಾಗಿದ್ದು, ಅವರ ಅಗಾಧವಾದ ಅನುಭವ ಇಡೀ ದೇಶಕ್ಕೆ ಲಾಭವನ್ನು ತಂದುಕೊಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಶ್ರೀಯುತರು ನಾಲ್ಕೈದು ದಶಕಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮಾತ್ರವಲ್ಲ, ರಾಜ್ಯದಾದ್ಯಂತ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಮಾಡಿದ್ದಾರೆ.  ಅವರ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮ ಬಹಳ ಯಶಸ್ವಿಯಾಗಿದೆ. ಶುದ್ಧ ಕುಡಿಯುವ ನೀರಿನ ಘಟಕ, ಕೆರೆಗಳ ನಿರ್ಮಾಣ, … Read more

ಭಾರಿ ಮಳೆ – ರಕ್ಷಣಾ, ಪರಿಹಾರ ಕಾರ್ಯಕ್ಕೆ ಸೂಚನೆ: ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360,ಬೆಂಗಳೂರು, ಜುಲೈ 06 : ಭಾರಿ ಮಳೆಯಿಂದ  ಹಾನಿಗೊಳಗಾದ ಪ್ರದೇಶಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ರಕ್ಷಣಾ ಹಾಗೂ ಪರಿಹಾರ  ಕಾರ್ಯಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರ 36 ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದ ನಂತರ  ಮಾಧ್ಯಮದವರೊಂದಿಗೆ ಮಾತನಾಡಿದರು. ಕರಾವಳಿ ಮತ್ತು ಕೊಡಗು ಭಾಗಗಳಲ್ಲಿ ಮನೆಗಳಿಗೆ ಹಾನಿಯುಂಟಾಗಿರುವುದರಿಂದ ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ತಂಡವನ್ನು ನಿಯೋಜಿಸಿ  … Read more

error: Content is protected !!