‘ಅಮಿತ್ ಶಾ ಹತ್ರ ಏನು ಮಂತ್ರದಂಡ ಇಲ್ಲ – ನರೇಂದ್ರ ಮೋದಿ ಬಂದ್ರು ಇಲ್ಲಿ ಗೆಲ್ಲಲ್ಲ’

ಸುದ್ದಿ360 ದಾವಣಗೆರೆ, ಡಿ.30: ಅಮಿತ್ ಶಾ ರಾಜ್ಯಭೇಟಿ ಕುರಿತಂತೆ, ಅಮಿತ್ ಶಾ ಹತ್ರ ಏನು ಮಂತ್ರದಂಡ ಇದೆಯಾ, ಅವರು ಎಷ್ಟು ಬಾರಿ ಬಂದ್ರು ಅಷ್ಟೇ, ಅವರ ಜಾದೂ ಇಲ್ಲೆನು ನಡೆಯಲ್ಲ. ನರೇಂದ್ರ ಮೋದಿಯವರೇ ಬಂದ್ರೂ ಬಿಜೆಪಿ ಗೆಲ್ಲಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಮಧ್ಯಮದವರಿಗೆ ಪ್ರತಿಕ್ರಿಯಿಸಿದರು. ಅವರು ದಾವಣಗೆರೆಯಲ್ಲಿ ನಡೆಯುತ್ತಿರುವ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ನಗರದ ಬಾಪೂಜಿ ಕಾಲೇಜು ಗ್ರೌಂಡ್‍ನಲ್ಲಿ ಸಿದ್ಧರಾಮಯ್ಯನವರು ಹೆಲೆಕಾಪ್ಟರ್‍ನಿಂದ ಇಳಿಯುತ್ತಿದ್ದ ಹಾಗೆ ಚಾಮುಂಡೇಶ್ವರಿ ತಾಯಿ … Read more

ಚುನಾವಣಾ ಗಿಮಿಕ್ ಗೆ ಮುಂದಾಗಿರುವ ಸರ್ಕಾರದಿಂದ ಮೀಸಲಾತಿ ಗೊಂದಲ : ಸಿದ್ಧರಾಮಯ್ಯ

ಸುದ್ದಿ360 ದಾವಣಗೆರೆ, ಡಿ.30: ಮೀಸಲಾತಿಯಲ್ಲಿ ರಾಜಕೀಯ ಗಿಮಿಕ್ ಮಾಡುತ್ತಿರುವ ಬಜೆಪಿಯ ಡಬ್ಬಲ್ ಇಂಜಿನ್ ಸರ್ಕಾರ ಗೊಂದಲದಲ್ಲಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಮತವೊಲಿಕೆಯ ರಾಜಕಾರಣ ಮಾಡುತ್ತಿದೆ ಎಂದು ಮೀಸಲಾತಿ ಕುರಿತು ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆ ವಿರೋಧಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ಅವರು ದಾವಣಗೆರೆಯಲ್ಲಿ ನಡೆಯುತ್ತಿರುವ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಿಸರ್ವೇಷನ್ 50 ಪರ್ಸೆಂಟ್‍ಗಿಂತ ಹೆಚ್ಚಾಗಬಾರದು ಎಂದು 1992ರಲ್ಲಿ ಸುಪ್ರೀಂಕೋರ್ಟ್ ಬೆಂಚ್ ಬಹಳ ಸ್ಪಷ್ಟವಾಗಿ ಹೇಳಿದೆ.  ಆದರೆ ಈ ಮೊದಲು … Read more

‘ಹಳೇ ಪಿಂಚಣಿ ಸಾಧ್ಯವಿಲ್ಲ – ಕೆಲಸಕ್ಕೆ ಸೇರುವಾಗಲೇ ಇದಕ್ಕೆ ಒಪ್ಪಿದ್ದೀರಿ’

ಬೆಳಗಾವಿ ಅಧಿವೇಶನದ ಕೊನೆಯ ದಿನದಲ್ಲಿ ನಡೆದ ಚರ್ಚೆಯಲ್ಲಿ ಆಡಳಿತ ಪಕ್ಷಗಳ ಸದಸ್ಯರು ಸೇರಿದಂತೆ ಹಲವರು ಸಭಾತ್ಯಾಗ

‘ಪೌರ ಕಾರ್ಮಿಕರಲ್ಲ, ಪೌರ ನೌಕರರು’ – ರಾಜ್ಯದ 42000 ಪೌರಕಾರ್ಮಿಕ ರನ್ನು ಖಾಯಂಗೊಳಿಸಲು ಕ್ರಮ : ಸಿಎಂ

ಸುದ್ದಿ360 ಬೆಳಗಾವಿ, ಡಿ.28 : ರಾಜ್ಯದಲ್ಲಿ  11133 ಪೌರ ಕಾರ್ಮಿಕರ  ನೌಕರಿಯನ್ನು ಖಾಯಂಗೊಳಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 42 ಸಾವಿರ ಪೌರಕಾರ್ಮಿಕರಿದ್ದು, ಮುಂದಿನ ದಿನಗಳಲ್ಲಿ ಇವರೆಲ್ಲರಿಗೂ ಖಾಯಂ ನೇಮಕಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕವಾದ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು. ಪೌರಕಾರ್ಮಿಕರಿಗೆ 2000 ರೂ. ಸಂಕಷ್ಟ ಭತ್ಯೆ : ಆಯವ್ಯಯದಲ್ಲಿ ಪೌರಕಾರ್ಮಿಕರಿಗೆ 2000 ರೂ. ಸಂಕಷ್ಟ ಭತ್ಯೆಯನ್ನು ಅವರ … Read more

ಜಿಂಕೆ ಮರಿ ಓಡ್ತಾಯ್ತೆ ನೋಡ್ಲಾ ಮಗಾ. . . ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಅಕ್ರಮ ವನ್ಯಜೀವಿ ಸಾಕಾಣಿಕೆ?

ಆಡಳಿತ ಪಕ್ಷಕ್ಕೆ ನುಂಗಲಾರದ ತುತ್ತಾಯಿತೆ. . . !? ಸುದ್ದಿ360 ದಾವಣಗೆರೆ: ಇಲ್ಲಿ ಯಾರನ್ನಾದರೂ ರಾಜಕೀಯ ಕುರಿತು ಮಾತಿಗೆಳೆದರೆ, ಜಿಂಕೆ ನಿಮ್ಮ ಕಣ್ಣಮುಂದೆ ಹಾದು ಹೋಗುತ್ತದೆ. ಅಷ್ಟೇ ಅಲ್ಲ ಕೃಷ್ಣಮೃಗ, ಕಾಡು ಹಂದಿ, ನರಿ, ಮುಂಗಸಿ ಇವುಗಳೂ ಕೂಡ ನಿಮ್ಮ ಕಣ್ಣಮುಂದೆ ಬರದೇ ಇರವು. ಅರೆರೆ ರಾಜಕೀಯಕ್ಕು ಈ ವನ್ಯಜೀವಿಗಳಿಗೂ ಏನು ಸಂಬಂಧ ಅಂತೀರಾ . . .? ನಗರದ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ವನ್ಯಜೀವಿಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ಕಳೆದ ಒಂದು ವಾರದಿಂದ ದಾವಣಗೆರೆಯಲ್ಲಿ … Read more

‘ವನ್ಯಜೀವಿ ಸಾಕಾಣಿಕೆ ಲೈಸನ್ಸ್ ಬಹಿರಂಗಪಡಿಸಿ – ಅಮಾಯಕರನ್ನು ಕೈಬಿಡಲು ಆಗ್ರಹ

ಸುದ್ದಿ360  ದಾವಣಗೆರೆ ಡಿ.27: ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಶೆಡ್ಯೂಲ್ಡ್ ವನ್ಯಜೀವಿಗಳನ್ನು ಅಕ್ರಮವಾಗಿ ಸಾಕಾಣಿಕೆ ಮಾಡಲಾಗಿದ್ದ ಪ್ರಕರಣದಲ್ಲಿ ಸ್ಥಳದ ಮಾಲೀಕ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಆರೋಪಿ ನಂ.-1ನ್ನಾಗಿ ನಮೂದಿಸಲಾಗಿಲ್ಲ. ಅಲ್ಲದೆ ಇಲ್ಲಿ ಹೊಟ್ಟೆಪಾಡಿಗಾಗಿ ಕೆಲಸ ನಿರ್ವಹಿಸುತ್ತಿದ್ದ ಕೆಲಸಗಾರರನ್ನು ಆರೋಪಿಯನ್ನಾಗಿ ಮಾಡಲಾಗಿದೆ ಎಂದು ಎಂದು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತ ರಾವ್ ಜಾಧವ್‌ ಆರೋಪಿಸಿದರು. ವನ್ಯಜೀವಿಗಳು ಸಿಕ್ಕಿರುವ ರೈಸ್ ಮಿಲ್ಲು ಯಾರ ಒಡೆತನದಲ್ಲಿ ಇದೆ ಎಂಬುದನ್ನು ಎಸ್‍ಎಸ್‍ ಮಲ್ಲಿಕಾರ್ಜುನ್ ಅವರು  ಹೇಳಲಿ. ವನ್ಯಜೀವಿಗಳ ಸಾಕಾಣಿಕೆಗೆ ಅಧಿಕೃತ ಲೈಸನ್ಸ್ … Read more

ಜನಸಾಮಾನ್ಯರ ಆರ್ಥಿಕತೆಗೆ ತೊಂದರೆಯಾಗದಂತೆ ಕೋವಿಡ್ ಮುಂಜಾಗ್ರತಾ ಕ್ರಮಗಳ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಳಗಾವಿ, ಡಿ. 26 :  ಕೋವಿಡ್ ನಿಂದಾಗಿ ಜನರ ಆರ್ಥಿಕತೆಗೆ ಯಾವುದೇ  ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಹಂತಹಂತವಾಗಿ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಬಗ್ಗೆ ಪ್ರತಿಕ್ರಿಯೆ ನೀಡಿ, ಸಚಿವಸಂಪುಟದಲ್ಲಿ ಈ ಬರ್ಗೆ ಚರ್ಚಿಸಲಾಗಿದ್ದು, ಜನರಲ್ಲಿ  ಜಾಗೃತಿ ಮೂಡಿಸುವುದು, ಬೂಸ್ಟರ್ ಡೋಸ್ ಹೆಚ್ಚಿಸುವುದು, ಐಎಲ್ಐ ಮತ್ತು ಸಾರಿ ಪರೀಕ್ಷೆಗಳನ್ನು ಹೆಚ್ಚಿಸುವುದು, ಮಾಸ್ಕ್ ಗಳ ಧಾರಣೆ, ಒಳಾಂಗಣಗಳಲ್ಲಿ ಮಾಸ್ಕ್ … Read more

ಓಪಿಎಸ್: ಹೈಕಮಾಂಡ್‍ನೊಂದಿಗೆ ಚರ್ಚೆ – ಸಿದ್ಧರಾಮಯ್ಯ

ಸುದ್ದಿ360  ದಾವಣಗೆರೆ ಡಿ.25: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಪಕ್ಷದ ಹೈಕಮಾಂಡ್‍ನೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ. ಹೊಸ ಪಿಂಚಣಿ ಯೋಜನೆ (ಎನ್ ಪಿ ಎಸ್) ರದ್ದುಗೊಳಿಸಿ  ಓಪಿಎಸ್ ಜಾರಿಗೊಳಿಸುವಂತೆ ಆಗ್ರಹಿಸಿ ಸರ್ಕಾರಿ ನೌಕರರು ರಾಜಧಾನಿಯ ಸ್ವಾತಂತ್ರ್ಯ  ಉದ್ಯಾನವನದಲ್ಲಿ ಹಮ್ಮಿಕೊಂಡಿರುವ ಅನಿರ್ಧಿಷ್ಟಾವಧಿ ಧರಣಿ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಧರಣಿ ನಿರತರ ಅಹವಾಲು ಸ್ವೀಕರಿಸಿ ಮಾತನಾಡಿದರು. ನಾನ್ನ ಅಧಿಕಾರಾವಧಿಯಲ್ಲಿ  ಓಪಿಎಸ್ ಜಾರಿ ಮಾಡಲು ಸಾಧ್ಯವಿಲ್ಲ ಎಂದು ನಾನು … Read more

ಮಹಾರಾಷ್ಟ್ರ ಮುಖ್ಯಮಂತ್ರಿಗಳು ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚಿಸುವ ಕೆಲಸ ಮಾಡಬಾರದು: ಸಿಎಂ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360, ಬೆಂಗಳೂರು, ನ. 22: ರಾಜ್ಯ ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚಿಸುವ ಕೆಲಸವನ್ನು ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿಗಳು ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಹಾರಾಷ್ಟ್ರದ ಕನ್ನಡ ಶಾಲೆಗಳಿಗೆ ವಿಶೇಷ ಅನುದಾನಗಡಿ ಅಭಿವೃದ್ಧಿ ಪ್ರಾಧಿಕಾರವು ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕೆನ್ನುವ ತೀರ್ಮಾನ ಮಾಡಲಾಗಿದೆ. ಏಕೀಕರಣ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಹಾಗೂ ಗೋವಾ ವಿಮೋಚನೆಗೆ ಕೆಲಸ ಮಾಡಿದ ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ದಾಖಲೆಗಳನ್ನು ತರಿಸಿ … Read more

ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿದ ಖ್ಯಾತಿ ನೆಹರು  ಅವರದ್ದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ನವೆಂಬರ್ 14: ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿರುವ ಖ್ಯಾತಿ ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರಿಗೆ ಸಲ್ಲುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು  ಭಾರತದ ಪ್ರಥಮ ಪ್ರಧಾನಿ ಪಂಡಿತ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನ ಸೌಧದ ಮುಂಭಾಗದಲ್ಲಿರುವ ಅವರ  ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಮಕ್ಕಳನ್ನು ಅತ್ಯಂತ ಪ್ರೀತಿ ಮತ್ತು ವಾತ್ಸಲ್ಯದಿಂದ ಕಾಣುತ್ತಿದ್ದ ನಮ್ಮ ರಾಷ್ಟ್ರದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ … Read more

error: Content is protected !!