ಜು. 17 ಬಂಜಾರ ವಧುವರರ ಅನ್ವೇಷಣೆ – ಬಂಜಾರ ಸಾಂಸ್ಕೃತಿಕ ಉತ್ಸವ

ಸುದ್ದಿ360 ದಾವಣಗೆರೆ.ಜು.01: ಬೆಂಗಳೂರಿನ ವಸಂತನಗರದಲ್ಲಿರುವ ಬಂಜಾರ ಭವನದಲ್ಲಿ ಜು.17ರಂದು ರಾಜ್ಯ ಮಟ್ಟದ ಬಂಜಾರ ವಧುವರರ ಅನ್ವೇಷಣೆ ಮತ್ತು ಬಂಜಾರ ಸಾಂಸ್ಕೃತಿಕ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಬಂಜಾರ ಲಂಬಾಣಿ ಜನಸೇವಾ ಸಂಘದ ರಾಜ್ಯಾಧ್ಯಕ್ಷ ಎ.ಆರ್. ಹನುಮಂತ ನಾಯ್ಕ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಬಂಜಾರ ಲಂಬಾಣಿ ಸಮುದಾಯದ ಜನಸಂಖ್ಯೆ ಹೆಚ್ಚಾಗಿದೆ. ಈ ಜಿಲ್ಲೆಗಳೂ ಸೇರಿ, ಶಿವಮೊಗ್ಗ, ತುಮಕೂರು, ಹಾಸನ, ಬಿಜಾಪುರ ಜಿಲ್ಲೆಗಳ ಸಮುದಾಯದ ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ … Read more

error: Content is protected !!