ಯುವ ಮೋರ್ಚಾ ಕಾರ್ಯಕರ್ತರು ರಾಜೀನಾಮೆ ಕೊಟ್ಟ ತಕ್ಷಣ ಬಿಜೆಪಿ ಮುಳುಗಿಹೋಗಲ್ಲ- ಯಾರೂ ರಾಜೀನಾಮೆ ನೀಡಿಲ್ಲ : ಸಂಸದ ಸಿದ್ದೇಶ್ವರ

ಸುದ್ದಿ360, ದಾವಣಗೆರೆ ಜು.30: ಯುವ ಮೋರ್ಚಾ ಕಾರ್ಯಕರ್ತರು ಯಾರೂ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ರಾಜೀನಾಮೆ ಕೊಡುವ ಮುನ್ನ ನಮ್ಮ ಜಿಲ್ಲಾಧ್ಯಕ್ಷರು, ಶಾಸಕರು ನಮ್ಮ ಬಳಿ ಮಾತನಾಡಬೇಕು. ಅವರು ಪಕ್ಷಕ್ಕೆ ಇದುವರೆಗೂ ರಾಜೀನಾಮೆ ಸಲ್ಲಿಸಿಲ್ಲ. ಕೆಲವರು ಟಿವಿಯಲ್ಲಿ ಬರಬೇಕೆಂದು ರಾಜೀನಾಮೆ ಕೊಟ್ಟಿದ್ದೇವೆಂದು ಹೇಳಿರಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಸಾಲು ಸಾಲು ರಾಜೀನಾಮೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ … Read more

ಪ್ರವೀಣ್ ನೆಟ್ಟಾರು ಹತ್ಯೆ- ಸಾಮೂಹಿಕ ರಾಜೀನಾಮೆಗೆ ಮುಂದಾದ ದಾವಣಗೆರೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು

ಸುದ್ದಿ360 ದಾವಣಗೆರೆ ಜು.27: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು‌‌ ಕೊಲೆ ಖಂಡಿಸಿ, ದಾವಣಗೆರೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ. ಹಾಗೂ ಹತ್ಯೆ ಕಾರಣರಾದವರನ್ನು ಕೂಡಲೇ ಬಂಧಿಸಿ ಉಗ್ರಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಆರ್. ಎಲ್. ಶಿವಪ್ರಕಾಶ್‌‌ ಅವರು, ಜಿಲ್ಲಾಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಹಿಂದೆ ನಡೆದಂತ ಬಿಜೆಪಿ ಕಾರ್ಯಕರ್ತರ … Read more

ಪ್ರವೀಣ್ ಕೊಲೆ ಹಿನ್ನೆಲೆಯಲ್ಲಿ ಬಂದ್ ಗೆ ಕರೆ: ಬಸ್ ಗೆ ಕಲ್ಲು – ಸಂಚಾರ ಸ್ಥಗಿತ

ಸುದ್ದಿ360 ದಕ್ಷಿಣ ಕನ್ನಡ, ಜು.27: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆ ಹಿನ್ನೆಲೆಯಲ್ಲಿ ಸಂಘಪರಿವಾರ ಸಂಘಟನೆಗಳು ಪುತ್ತೂರು, ಸುಳ್ಯ ಕಡಬ, ತಾಲ್ಲೂಕುಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವಾಹನ ಸಂಚಾರ ನಿಲ್ಲಿಸಿ ಬಂದ್ ಗೆ ಕರೆ ಕೊಡಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರಿ ಬಸ್ ಒಂದಕ್ಕೆ ಪುತ್ತೂರಿನ ಬೊಳುವಾರು ಬಳಿ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಪರಿಣಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಈ ಪ್ರದೇಶಗಳಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಬಸ್ ಸೌಕರ್ಯವಿಲ್ಲದೆ  ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ನೌಕರರು … Read more

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆ – ಮೃತದೇಹ ಮೆರವಣಿಗೆ

ಸುದ್ದಿ360 ದಕ್ಷಿಣ ಕನ್ನಡ, ಜು.27: ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಎಂಬುವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಮಂಗಳವಾರ ರಾತ್ರಿ 9 ಗಂಟೆಗೆ ಈ ಘಟನೆ ನಡೆದಿದ್ದು,  ತಲವಾರಿನೊಂದಿಗೆ  ಬೈಕ್ ನಲ್ಲಿ ಬಂದ ತಂಡ ಪ್ರವೀಣ್ ತಲೆಗೆ ತಲವಾರ್ ಬೀಸಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಕ್ಷಯ ಕೋಳಿ ಅಂಗಡಿ ನಡೆಸುತ್ತಿದ್ದ ಪ್ರವೀಣ್, ಬಜರಂಗದಳ ಸೇರಿದಂತೆ ಸಂಘಪರಿವಾರದ ಹಿಂದೂ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಮೃತದೇಹ … Read more

error: Content is protected !!