ರಾಜಕೀಯ ಕಾರಣಕ್ಕೆ ಕೊಲೆಗಳಾಗುತ್ತಿರುವುದು ನಮ್ಮ ದೌರ್ಬಾಗ್ಯ: ಸಚಿವ ಜೆ.ಸಿ. ಮಾಧುಸ್ವಾಮಿ

ಚುನಾವಣಾ ವರ್ಷವಾದ್ದರಿಂದ ಪ್ರಚೋದನೆಗಳು ಹೆಚ್ಚಾಗಿವೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಲಿದೆ ಎಂದು ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ಸುದ್ದಿ360, ದಾವಣಗೆರೆ ಜು.30: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿಲ್ಲ. ಕೆಲವೇ ಘಟನೆ ಹೊರತುಪಡಿಸಿದರೆ, ಕಾಂಗ್ರೆಸ್ ಕಾಲದಲ್ಲಿ ನಡೆದಷ್ಟು ಪ್ರತಿಭಟನೆ, ಹೋರಾಟ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿಲ್ಲ ಎಂದು ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೊಲೆಗಳಾಗಿದ್ದಕ್ಕೆ … Read more

ಯುವ ಮೋರ್ಚಾ ಕಾರ್ಯಕರ್ತರು ರಾಜೀನಾಮೆ ಕೊಟ್ಟ ತಕ್ಷಣ ಬಿಜೆಪಿ ಮುಳುಗಿಹೋಗಲ್ಲ- ಯಾರೂ ರಾಜೀನಾಮೆ ನೀಡಿಲ್ಲ : ಸಂಸದ ಸಿದ್ದೇಶ್ವರ

ಸುದ್ದಿ360, ದಾವಣಗೆರೆ ಜು.30: ಯುವ ಮೋರ್ಚಾ ಕಾರ್ಯಕರ್ತರು ಯಾರೂ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ರಾಜೀನಾಮೆ ಕೊಡುವ ಮುನ್ನ ನಮ್ಮ ಜಿಲ್ಲಾಧ್ಯಕ್ಷರು, ಶಾಸಕರು ನಮ್ಮ ಬಳಿ ಮಾತನಾಡಬೇಕು. ಅವರು ಪಕ್ಷಕ್ಕೆ ಇದುವರೆಗೂ ರಾಜೀನಾಮೆ ಸಲ್ಲಿಸಿಲ್ಲ. ಕೆಲವರು ಟಿವಿಯಲ್ಲಿ ಬರಬೇಕೆಂದು ರಾಜೀನಾಮೆ ಕೊಟ್ಟಿದ್ದೇವೆಂದು ಹೇಳಿರಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಸಾಲು ಸಾಲು ರಾಜೀನಾಮೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ … Read more

ದಾವಣಗೆರೆಯಲ್ಲಿ ಸಿದ್ಧರಾಮೋತ್ಸವ ಮಾಡೋದರಿಂದ ಗೆಲ್ಲೋಕೆ ಸಾಧ್ಯಾನಾ? – ಉತ್ಸವದಲ್ಲಿ ಜನ ಸೇರೋದು ಕಾಮನ್

ಬರೋಬ್ಬರಿ 11 ಲಕ್ಷ ಜನ ಸೇರಿದ್ದ ಹಾವೇರಿಯಲ್ಲೇ ನಾವು ಸೋತಿದ್ವಿ : ಸಚಿವ ಮಾಧುಸ್ವಾಮಿ ಸುದ್ದಿ360, ದಾವಣಗೆರೆ ಜು.30: ಉತ್ಸವಗಳಲ್ಲಿ ಜನ ಸೇರಿಸೋದು ಎಲ್ಲಾ ಕಾಮನ್. ರಾಜಕೀಯದಲ್ಲಿ ಎರಡ್ಮೂರು ಲಕ್ಷ ಜನ ಸೇರಿಸಿ ಬಿಟ್ಟರೆ ಏನೋ ಮಹತ್ವದ್ದು ಆಗಿ ಬಿಡುತ್ತದೆ ಅನ್ನೋ ಕಾಲ ಈಗ ಇಲ್ಲ ಎಂದು ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿಯವರು ಸಿದ್ದರಾಮಯ್ಯ ಅಮೃತ ಮಹೋತ್ಸವ ಕುರಿತು ಪ್ರತಿಕ್ರಿಯಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೆಲ್ಲ ಯಡಿಯೂರಪ್ಪನವರ ಜೊತೆ ಕೆಜೆಪಿಗೆ … Read more

ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜು.29: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ಧರಾಮಯ್ಯ ಅವರ ಕಾಲದಲ್ಲಿ 32 ಸರಣಿ ಕೊಲೆಗಳಾಗಿದ್ದವು. ಆಗ ಅವರು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಎಲ್ಲಾ ವಿಷಯಗಳಲ್ಲಿ ರಾಜಕಾರಣವನ್ನು ಮಾಡಬಾರದು. ಅವರ ಹೇಳಿಕೆಗೆ ಹೆಚ್ಚಿನ ಮಹತ್ವವಿಲ್ಲ ಎಂದರು. ಶಾಸಕ ತನ್ವೀರ್ ಸೇಠ್ ಮೇಲೆ ಎಸ್‍ಡಿಪಿಐ ಹಾಗೂ ಪಿಎಫ್‍ಐ ಸಂಘಟನೆಯ ಸುಮಾರು 200 ಜನರನ್ನು ದಾಳಿ ನಡೆಸಿದ … Read more

ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ರದ್ದು

ಪ್ರವೀಣ್ ಹತ್ಯೆ ಘಟನೆ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳನ್ನ ಆತ್ಮಸಾಕ್ಷಿಯಾಗಿ ರದ್ದು ಮಾಡಲಾಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ360 ಬೆಂಗಳೂರು, ಜು. 28: ಭಾರತೀಯ ಜನತಾ ಪಕ್ಷದ ಯುವ ಮುಖಂಡ  ಪ್ರವೀಣ್ ಹತ್ಯೆ ಆದ ನಂತರ ಜನ ಹಾಗೂ ಕಾರ್ಯಕರ್ತರು ವ್ಯಕ್ತಪಡಿಸಿರುವ ಆಕ್ರೋಶದ ಹಿನ್ನೆಲೆಯಲ್ಲಿ ಬ್ಯಾಂಕ್ವೆಟ್ ಹಾಲಿನಲ್ಲಿ ಮತ್ತು ಪಕ್ಷದ ವತಿಯಿಂದ  ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮಗಳನ್ನು ಆತ್ಮಸಾಕ್ಷಿಯಾಗಿ ನಿರ್ಣಯ ಕೈಗೊಂಡು ರದ್ದು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರಕ್ಕೆ … Read more

ಪ್ರವೀಣ್ ಹತ್ಯೆ ಪ್ರಕರಣ – ದುಷ್ಕರ್ಮಿಗಳ ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜು. 27 : ಸಮಾಜದಲ್ಲಿ ಹಿಂಸೆ, ಕ್ಷೋಭೆ ಉಂಟು ಮಾಡುವಂತಹ ದುಷ್ಕೃತ್ಯವನ್ನು ಎಸಗಿರುವ ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಆರ್ ಟಿ ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿ, ಮಂಗಳೂರಿನಲ್ಲಿ ನಿನ್ನೆ ನಡೆದ ಪ್ರವೀಣ್ ಹತ್ಯೆ ವಿಚಾರವಾಗಿ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ.  ಅಪರಾಧಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಆದೇಶ ನೀಡಲಾಗಿದೆ. ಕೇರಳ ರಾಜ್ಯದ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿರಲಾಗಿದೆ. ಮಂಗಳೂರು ಹಾಗೂ ಕಾಸರಗೋಡು … Read more

ದಾವಣಗೆರೆ ಜಿಲ್ಲಾ ಕಾಂಗ್ರೆಸ್‍ನಿಂದ ಕಾರ್ಗಿಲ್ ವಿಜಯ ದಿವಸ್ – ಕೇಂದ್ರ ಸರ್ಕಾರ ಸೈನಿಕರನ್ನು ಗೌರವದಿಂದ ಕಾಣಲಿ: ದಿನೇಶ್ ಕೆ.ಶೆಟ್ಟಿ

ಸುದ್ದಿ360, ದಾವಣಗೆರೆ ಜು.26: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಕಾರ್ಗಿಲ್ ವಿಜಯ ದಿವಸ್‍ನ್ನು ದಾವಣಗೆರೆ ನಗರದ ಹರಳೆಣ್ಣೆ ಕೊಟ್ರಬಸಪ್ಪ (ರಾಂ ಅಂಡ್ ಕೋ) ವೃತ್ತದಲ್ಲಿ ಮಂಗಳವಾರ ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಮಾತನಾಡಿ ಇಡೀ ದೇಶ ಇಂದು ಕಾರ್ಗಿಲ್ ವಿಜಯ ದಿವಸವನ್ನು ಆಚರಿಸುತ್ತಿದೆ. ದೇಶಕ್ಕಾಗಿ ಹುತಾತ್ಮರಾದ ಎಲ್ಲ ಭಾರತೀಯ ಸೈನಿಕರಿಗೂ … Read more

ಪ್ರವೀಣ್ ಕೊಲೆ ಹಿನ್ನೆಲೆಯಲ್ಲಿ ಬಂದ್ ಗೆ ಕರೆ: ಬಸ್ ಗೆ ಕಲ್ಲು – ಸಂಚಾರ ಸ್ಥಗಿತ

ಸುದ್ದಿ360 ದಕ್ಷಿಣ ಕನ್ನಡ, ಜು.27: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆ ಹಿನ್ನೆಲೆಯಲ್ಲಿ ಸಂಘಪರಿವಾರ ಸಂಘಟನೆಗಳು ಪುತ್ತೂರು, ಸುಳ್ಯ ಕಡಬ, ತಾಲ್ಲೂಕುಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವಾಹನ ಸಂಚಾರ ನಿಲ್ಲಿಸಿ ಬಂದ್ ಗೆ ಕರೆ ಕೊಡಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರಿ ಬಸ್ ಒಂದಕ್ಕೆ ಪುತ್ತೂರಿನ ಬೊಳುವಾರು ಬಳಿ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಪರಿಣಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಈ ಪ್ರದೇಶಗಳಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಬಸ್ ಸೌಕರ್ಯವಿಲ್ಲದೆ  ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ನೌಕರರು … Read more

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆ – ಮೃತದೇಹ ಮೆರವಣಿಗೆ

ಸುದ್ದಿ360 ದಕ್ಷಿಣ ಕನ್ನಡ, ಜು.27: ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಎಂಬುವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಮಂಗಳವಾರ ರಾತ್ರಿ 9 ಗಂಟೆಗೆ ಈ ಘಟನೆ ನಡೆದಿದ್ದು,  ತಲವಾರಿನೊಂದಿಗೆ  ಬೈಕ್ ನಲ್ಲಿ ಬಂದ ತಂಡ ಪ್ರವೀಣ್ ತಲೆಗೆ ತಲವಾರ್ ಬೀಸಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಕ್ಷಯ ಕೋಳಿ ಅಂಗಡಿ ನಡೆಸುತ್ತಿದ್ದ ಪ್ರವೀಣ್, ಬಜರಂಗದಳ ಸೇರಿದಂತೆ ಸಂಘಪರಿವಾರದ ಹಿಂದೂ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಮೃತದೇಹ … Read more

ರಾಹುಲ್ ಬಂಧನಕ್ಕೆ ಯುವ ಕಾಂಗ್ರೆಸ್ ಖಂಡನೆ

ಸುದ್ದಿ360 ದಾವಣಗೆರೆ, ಜು.26: ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಪೊಲೀಸರು ಬಂಧಿಸಿರುವ ಕ್ರಮದ ವಿರುದ್ಧ ನಗರದ ಜಯದೇವ ವೃತ್ತದಲ್ಲಿ ಮಂಗಳವಾರ ಸಂಜೆ ಯುವ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತನಾಡಿದ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಎಚ್.ಜೆ. ಮೈನುದ್ದೀನ್, ಬೆಲೆ ಏರಿಕೆ, ಇಡಿ ದುರ್ಬಳಕೆ ಖಂಡಿಸಿ ಸಂಸತ್ ಭವನದ ಎದುರು ಮೌನ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿಯವರನ್ನು ದೆಹಲಿ ಪೊಲೀಸರು ಬಂಧಿಸುವ ಮೂಲಕ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡಿದ್ದಾರೆ. ಇಂದು … Read more

error: Content is protected !!