‘ಶೌಚಾಲಯ ಸೌಲಭ್ಯವಿಲ್ಲದೆ ಉದ್ಘಾಟನೆಗೊಂಡಿರುವ ಸ್ಮಾರ್ಟ್ ಸಿಟಿ ಬಸ್ ಸ್ಟ್ಯಾಂಡ್ – ನಾಚಿಕೆ ಯಾರಿಗೆ ಆಗಬೇಕು?’ ಕೆ.ಎಲ್.ಹರೀಶ್ ಬಸಾಪುರ

ಶೌಚಾಲಯವಿದ್ದರೂ ಬಳಕೆಗೆ ಲಭ್ಯವಿಲ್ಲ ಹಳೆ ದಾವಣಗೆರೆಯಲ್ಲಿ ತಿಂಗಳ ಹಿಂದೆಯೇ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಬಸ್ ಸ್ಟ್ಯಾಂಡ್ ನಿರ್ಮಾಣಗೊಂಡು, ಸಾರ್ವಜನಿಕ  ಉಪಯೋಗಕ್ಕೆ ನೀಡಲಾಗಿದೆ. ಇದಾಗಿ ತಿಂಗಳು ಕಳೆಯುತ್ತಾ ಬಂದರು ಶೌಚಾಲಯ ಮಾತ್ರ ಬೀಗ ತೆರೆದಿಲ್ಲ. ಸ್ಮಾರ್ಟ್ ಸಿಟಿ ಕಾಮಗಾರಿಗಳು ಎಂದರೆ ಕಳಪೆ ಕಾಮಗಾರಿಗಳು ಹಾಗೂ ಮೂಲಭೂತ ಸೌಕರ್ಯ ಒದಗಿಸದೆ ಕಾಮಗಾರಿ ಪೂರ್ಣಗೊಳ್ಳದೆ ಉದ್ಘಾಟನೆಗೊಂಡ ಯೋಜನೆಗಳು ಎಂಬ ಸಾರ್ವಜನಿಕ ಆಕ್ರೋಶಕ್ಕೆ ಒಳಗಾಗಿರುವ ಯೋಜನೆಗಳಲ್ಲಿ ಯೋಜನಯೇ ಹಳೆ ದಾವಣಗೆರೆಯಲ್ಲಿ ನಿರ್ಮಾಣಗೊಂಡಿರುವ ನೂತನ ಬಸ್ ಸ್ಟ್ಯಾಂಡ್ ಕೂಡ ಸೇರಿದೆ ಎಂದು ಕೆ.ಎಲ್ … Read more

ಸಚಿವ ಉಮೇಶ್ ಕತ್ತಿಯಿಂದ ಕುಟುಂಬ ರಾಜಕಾರಣ ಸಮರ್ಥನೆ

ಕುಟುಂಬ ರಾಜಕಾರಣದ ‘ಕತ್ತಿ’ ಝಳಪಿಸಿದ ಸಚಿವ ಉಮೇಶ್ ಕತ್ತಿ ಸುದ್ದಿ360 ವಿಜಯಪುರ, ಜು.25: ಪ್ರಧಾನಿ ಮೋದಿ ಹಾಗೂ ಯೋಗಿ ಇವರು ಕುಟುಂಬ ಇಲ್ಲದ ನಾಯಕರು. ನಾವೆಲ್ಲ ಕುಟುಂಬ ರಾಜಕಾರಣದಿಂದಲೇ ಬಂದವರು. ಕುಟುಂಬ ರಾಜಕಾರಣ ಇರೋದೆ ನಿಜ ಎಂದು ಅರಣ್ಯ ಹಾಗೂ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ ಪ್ರತಿಕ್ರಿಯಿಸಿದ್ದಾರೆ. ಇಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ನಾವೆಲ್ಲ ಕುಟುಂಬ ರಾಜಕಾರಣದಿಂದ ಬಂದವರು. ನನ್ನ ತಂದೆ ರಾಜಕಾರಣದಲ್ಲಿ ಇದ್ದರು, ಈಗ ನಾನೂ ಇದ್ದೇನೆ. ಯಡಿಯೂರಪ್ಪ ರಾಜಕಾರಣದಲ್ಲಿದ್ದರು, … Read more

ಜನರ ಒತ್ತಾಸೆಗೆ ಮಣಿದು ವಿಜಯೇಂದ್ರ ಸ್ಪರ್ಧೆ ಘೋಷಿಸಿದ್ದೇನೆ – ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ: ಬಿಎಸ್ ವೈ

ಸುದ್ದಿ360, ಬೆಂಗಳೂರು, ಜು.24: ಜನರ ಒತ್ತಾಸೆಗೆ ಮಣಿದು ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ಬಿ.ವೈ ವಿಜಯೇಂದ್ರಗೆ ಬಿಟ್ಟುಕೊಡುವುದಾಗಿ ಶಿಕಾರಿಪುರದಲ್ಲಿ ನಡೆದ ಸಮಾರಂಭವೊಂದರಲ್ಲಿ ಹೇಳಿದ್ದೇನೆ. ಆದರೆ ಈ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಬಿ.ಎಸ್.ವೈ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಶನಿವಾರ ಮಾತನಾಡಿ, ಶುಕ್ರವಾರ ನಾನು ನೀಡಿದ ಹೇಳಿಕೆ ಗೊಂದಲಕ್ಕೆ ಎಡೆ ಮಾಡಿದೆ, ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ವಿಜಯೇಂದ್ರ ಸ್ಪರ್ಧೇ ಮಾಡುತ್ತಾರೆ ಎಂದು ಹೇಳಿರುವುದಾಗಿ ತಿಳಿಸಿದರು. ಇದು ನನ್ನ ಸಲಹೆ ಮಾತ್ರವಾಗಿದ್ದು ಬಜೆಪಿ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದರು. ಹಳೇ … Read more

ರಾಷ್ಟ್ರಪತಿ ದ್ರೌಪದಿ ಮುರ್ಮು ಆಡಳಿತದಲ್ಲಿ ದೇಶ ಅಭಿವೃದ್ಧಿಯ ಉತ್ತುಂಗಕ್ಕೆ ಏರಲಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜುಲೈ 21: ಮುಂಬರುವ ದಿನಗಳಲ್ಲಿ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ  ಕರ್ನಾಟಕದ ಜೊತೆಗೆ ಅನ್ಯೋನ್ಯ ಸಂಬಂಧವನ್ನು ಹೊಂದಿ, ಅವರ ಆಡಳಿತ ಕಾಲದಲ್ಲಿ ದೇಶ ಅಭಿವೃದ್ಧಿಯ ಉತ್ತುಂಗಕ್ಕೇರಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.  ಅವರು ಇಂದು ಬಿಜೆಪಿ ಕಚೇರಿಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ರಾಷ್ಟ್ರಪತಿ ಚುನಾವಣೆಯಂದು ಪ್ರಜಾಪ್ರಭುತ್ವ ಗೆದ್ದಿದೆ. ಭಾರತದ ಅತ್ಯಂತ ಉನ್ನತವಾದ ಸ್ಥಾನ ರಾಷ್ಟ್ರಪತಿ ಸ್ಥಾನ. ಆ ಸ್ಥಾನಕ್ಕೆ ಹಿಂದುಳಿದ ಪ್ರದೇಶದಿಂದ ಬಂದ ಒಬ್ಬ ಮಹಿಳೆ ಅತ್ಯುನ್ನತ ಹುದ್ದೆಗೇರುವುದು ಪ್ರಜಾಪ್ರಭುತ್ವದ ಶಕ್ತಿ. … Read more

ದೇಶದ ಪ್ರತಿ ಪ್ರಜೆ “ನನ್ನ ಮತ ಮಾರಾಟಕ್ಕಿಲ್ಲ” ಎಂದು ಜನಾಂದೋಲನ ನಡೆಸಬೇಕು

ಚುನಾವಣಾ ಸುಧಾರಣಾ ಕ್ರಮಗಳ ಕುರಿತ ಸಂವಾದ ಕಾರ್ಯಕ್ರಮದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಮತ ಸುದ್ದಿ360, ದಾವಣಗೆರೆ, ಜು.19: ಚುನಾವಣೆಗಳಲ್ಲಿ ದೇಶದ ಪ್ರತಿ ಪ್ರಜೆಯೂ ನನ್ನ ಮತ ಮಾರಾಟಕ್ಕಿಲ್ಲ ಎಂದು ಮುಕ್ತ, ನಿರ್ಭೀತ, ನ್ಯಾಯಸಮ್ಮತ ಚುನಾವಣೆಗೆ ಆಗ್ರಹಿಸುವ ಜನಾಂದೋಲನ ರೂಪಿಸುವ ದಿಕ್ಕಿನಲ್ಲಿ ಆಲೋಚಿಸಬೇಕಾಗಿದೆ ಎಂದು ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದರು. ಮಂಗಳವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಚುನಾವಣಾ ಸುಧಾರಣಾ ಕ್ರಮಗಳ ಕುರಿತು ಸಂವಾದ ಕಾರ್ಯಕ್ರಮ’ ಉದ್ಘಾಟಿಸಿ ಅವರು ಮಾತನಾಡಿದರು. … Read more

ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಹುಮಾತದೊಂದಿಗೆ ಗೆಲುವು ನಿಶ್ಚಿತ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜು.18: ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಆಯ್ಕೆಯನ್ನು ಹಲವಾರು ಪಕ್ಷಗಳು ಬೆಂಬಲಿಸಿರುವುದರಿಂದ 2/3  ಬಹುಮತದೊಂದಿಗೆ ಗೆಲ್ಲುವುದು ನಿಶ್ಚಿತ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಷ್ಟ್ರಪತಿ ಚುನಾವಣೆಯಲ್ಲಿ ಇದ್ದ ಹಿಂದಿನ  ದಾಖಲೆಯನ್ನ ಮುರಿಯುವ ಎಲ್ಲಾ ಸಾಧ್ಯತೆಗಳಿವೆ.  ದ್ರೌಪದಿ ಮುರ್ಮು ಅವರು ಮಾನವೀಯ ಗುಣಗಳನ್ನು ಹೊಂದಿದ್ದು, ಅತ್ಯುನ್ನತ ಸ್ಥಾನ ಕ್ಕೇರುವುದು ಭಾರತದ ಪ್ರಜಾಪ್ರಭುತ್ವ ಹಾಗೂ ಭವಿಷ್ಯಕ್ಕೆ ಒಳ್ಳೆಯದಾಗಲಿದೆ ಎಂಬ ನಿರೀಕ್ಷೆ ನಮ್ಮದು ಎಂದರು. ದೇಶಾದ್ಯಂತ ರಾಷ್ಟ್ರಪತಿ … Read more

ಕಾಂಗ್ರೆಸ್ ಪಕ್ಷದಲ್ಲಿ ಪಕ್ಷ ಪೂಜೆಗೆ ಆದ್ಯತೆ, ವ್ಯಕ್ತಿ ಪೂಜೆಗಲ್ಲ: ಎಸ್ ಎಸ್ ಮಲ್ಲಿಕಾರ್ಜುನ್

ಸಿದ್ದರಾಮಯ್ಯ ಅಮೃತಮಹೋತ್ಸವ ಅಭಿಮಾನಿಗಳಿಂದಲೇ ರೂಪುಗೊಂಡಿರುವ ಕಾರ್ಯಕ್ರಮ ಸುದ್ದಿ360, ದಾವಣಗೆರೆ, ಜು.18: ಸಿದ್ದರಾಮಯ್ಯ ಅವರು ನಮ್ಮ ಬಲವಂತಕ್ಕೆ ಮಣಿದು ಅಮೃತ ಮಹೋತ್ಸವಕ್ಕೆ ಒಪ್ಪಿ  ಸಮ್ಮತಿ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಪಕ್ಷ ಪೂಜೆಗೆ ಆದ್ಯತೆ ಇದೆಯೇ ಹೊರತು ವ್ಯಕ್ತಿ ಪೂಜೆಗಲ್ಲ. ಹೀಗಾಗಿ ಸಿದ್ಧರಾಮಯ್ಯ ಅವರ ಅಮೃತ ಮಹೋತ್ಸವ ವ್ಯಕ್ತಿ ಪೂಜೆಯಲ್ಲ ಎಂದು  ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದರು. ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಾರಂಭದ ವೇದಿಕೆ ನಿರ್ಮಾಣ ಕಾರ್ಯಕ್ರಮಕ್ಕೆ ಸೋಮವಾರ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಜತೆ … Read more

ಬಿಜೆಪಿಯವರಿಗೆ ಅಭಿವೃದ್ಧಿಯ ಇಚ್ಛಾಶಕ್ತಿ ಇಲ್ಲ – ಎಸ್ ಎಸ್ ಮಲ್ಲಿಕಾರ್ಜುನ್ ಆರೋಪ

ಸುದ್ದಿ360, ದಾವಣಗೆರೆ, ಜು.18:  ಯಾವುದೇ ಕಾಮಗಾರಿಗಳು ಪರಿಪೂರ್ಣಗೊಳ್ಳಲು ಕ್ರಮಬದ್ಧವಾದ ಯೋಜನೆ ಇರಬೇಕು. ಆದರೆ ಬಿಜೆಪಿ ಜನಪ್ರತಿನಿಗಳಿಗೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಇಚ್ಛಾಶಕ್ತಿ ಇಲ್ಲ ಎಂದು ನಗರದಲ್ಲಿನ ಕಾಮಗಾರಿಗಳ ಬಗ್ಗೆ ಎಸ್ ಎಸ್ ಮಲ್ಲಿಕಾರ್ಜುನ್  ಆರೋಪಿಸಿದರು. ನಗರದ ಹೊರವಲಯದ ಪೂನ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿನ ಜಮೀನಿನಲ್ಲಿ ಸೋಮವಾರ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಾರಂಭದ ವೇದಿಕೆ ನಿರ್ಮಾಣ ಕಾರ್ಯಕ್ರಮಕ್ಕೆ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ಕುಂದವಾಡ ಕೆರೆ ಏರಿ ಅಭಿವೃದ್ಧಿ ಕುಂಟುತ್ತಾ ಸಾಗಿದ್ದು, ನಗರದೆಲ್ಲೆಡೆ ಕಳಪೆ ಕಾಮಗಾರಿಗಳು … Read more

ಆಹಾರ ಧಾನ್ಯಗಳ ಮೇಲಿನ ಜಿಎಸ್ ಟಿ ವಿರೋಧಿಸಿ ಕರೆದ ಬಂದ್ ಗೆ ಅಭೂತಪೂರ್ವ ಸಹಕಾರ: ಕೋಗುಂಡಿ ಬಕ್ಕೇಶಪ್ಪ

ಸುದ್ದಿ360, ದಾವಣಗೆರೆ, ಜು.16: ಕೇಂದ್ರ ಸರ್ಕಾರವು ಆಹಾರ ಧಾನ್ಯಗಳ ಮೇಲೆ ವಿಧಿಸಿರುವ 5% ಜಿ ಎಸ್ ಟಿ ವಿರೋಧಿಸಿ ನಡೆಸಿದ ಬಂದ್ ಗೆ ಅಭೂತ ಪೂರ್ವ ಸಹಕಾರ ನೀಡಿದ  ಎಲ್ಲರಿಗೂ ಜಿಲ್ಲಾ ಅಕ್ಕಿಗಿರಣಿದಾರರ ಸಂಘದ ಕಾರ್ಯದರ್ಶಿ ಕೋಗುಂಡಿ ಬಕ್ಕೇಶಪ್ಪ ಧನ್ಯವಾದ ತಿಳಿಸಿದ್ದಾರೆ. ಜೊತೆಗೆ ಇತರ ಆಹಾರ ಧಾನ್ಯಗಳ ವರ್ತಕರು ವಾಣಿಜ್ಯ ಸಂಸ್ಥೆಗಳು ಚೌಕಿಪೇಟೆ ವರ್ತಕರು ದಲಾಲರು ಮೆಕ್ಕೆಜೋಳದ ವರ್ತಕರು ನಮ್ಮೊಂದಿಗೆ ಸಹಕರಿಸುವ ಮೂಲಕ ದಾವಣಗೆರೆ ಇತಿಹಾಸದಲ್ಲೇ ಅಭೂತ ಪೂರ್ವವಾಗಿ ಬಂದ್ ಆಚರಿಸಲಾಗಿದೆ. ಮುಂದಿನ ದಿನಗಳಲ್ಲಿ ಹೋರಾಟ ಮಾಡಲು … Read more

ಭ್ರಷ್ಟ ರಾಜಕಾರಣ ಕೊನೆಗಾಣಿಸಲು ಜನಚೈತನ್ಯ ಯಾತ್ರೆ : ಕೆ ಆರ್ ಎಸ್ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ

ಸುದ್ದಿ360, ದಾವಣಗೆರೆ, ಜು.16: ಕೆಆರ್ ಎಸ್ ಪಕ್ಷದಿಂದ ಎರಡನೇ ಹಂತದ ಜನ ಚೈತನ್ಯ ಯಾತ್ರೆ ಜು.15 ರಂದು ಚಿತ್ರದುರ್ಗ ಜಿಲ್ಲೆಯಿಂದ ಆರಂಭವಾಗಿದ್ದು, ಜುಲೈ ಅಂತ್ಯದವರೆಗೆ 16ಜಿಲ್ಲೆಗಳಲ್ಲಿ ಸಂಚರಿಸಿ, ಭ್ರಷ್ಟ, ಹಾಗೂ ಪರಮನೀಚ ರಾಜಕಾರಣ ಕೊನೆಗಾಣಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಪಕ್ಷ ಹಮ್ಮಿಕೊಂಡಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜನಚೈತನ್ಯ ಯಾತ್ರೆಯ ಅಂಗವಾಗಿ ಇಂದು ದಾವಣಗೆರೆಯಲ್ಲಿ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಯಾತ್ರೆಯುದ್ದಕ್ಕೂ ಬಹಿರಂಗ ಸಭೆಗಳು, ಪತ್ರಿಕಾಗೋಷ್ಠಿಗಳು, … Read more

error: Content is protected !!