ದುರಾಡಳಿತ ತಡೆಯಲು ವಾಚ್ಮನ್ ಗಳಾಗಲು ಸಿದ್ಧ: ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್

ಆರೋಪಗಳಿಗೆ ಸಮರ್ಪಕ ಉತ್ತರ ನೀಡದ ಆಡಳಿತ ಪಕ್ಷ : ಎ. ನಾಗರಾಜ್ ಸುದ್ದಿ360, ದಾವಣಗೆರೆ, ಜು.16:  ವಾರ್ಡ್ ನ ಸಮಸ್ಯೆಗಳಿಗೆ ಧ್ವನಿಯಾಗಿ ನಿಲ್ಲುವುದು ತಪ್ಪಾ? ನಮ್ಮನ್ನು ಆರಿಸಿ ಕಳಿಸಿದವರ ಒಳಿತಿಗಾಗಿ ನಾವು ವಾಚ್ ಮನ್ ಆಗಿಯೂ ಕೆಲಸ ಮಾಡುತ್ತೇವೆ. ಭ್ರಾಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿಗೆ ತಡೆಯೊಡ್ಡಲು ನಾವು ಕಾವಲುಗಾರರೇ ಹೌದು ಎಂದು ಮಹಾನಗರ ಪಾಲಿಕೆ ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್ ಗುಡುಗಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಪಕ್ಷದವರು ಮಹಾನಗರ ಪಾಲಿಕೆ ಆಡಳಿತದ ವಿರುದ್ಧ ಮಾಡಿರುವ ಆರೋಪಗಳು ಸುಳ್ಳು … Read more

ಶ್ರೀ ವಾಣಿ ಲ್ಯಾಂಡ್ ಲಿಂಕ್ಸ್ ಕಚೇರಿಯಲ್ಲಿ ಎಸ್ ಟಿ ವೀರೇಶ್ ಜನ್ಮದಿನಾಚರಣೆ

ಸುದ್ದಿ360, ದಾವಣಗೆರೆ, ಜು.14: ನಗರದ ಕೆ. ಬಿ.‌ ಬಡಾವಣೆಯ ಒಂದನೇ ಮುಖ್ಯ‌ ರಸ್ತೆಯ ಶ್ರೀ ವಾಣಿ ಲ್ಯಾಂಡ್ ಲಿಂಕ್ಸ್ ಕಚೇರಿಯಲ್ಲಿ ಮಹಾನಗರ ಪಾಲಿಕೆಯ ಮಾಜಿ‌ ಮೇಯರ್ ಹಾಗೂ ಹಾಲಿ‌ ಸದಸ್ಯ ಎಸ್. ಟಿ. ವೀರೇಶ್ ಅವರ 48ನೇ ವರ್ಷದ ಹುಟ್ಟುಹಬ್ಬವನ್ನು ಕೇಕ್‌ ಕತ್ತರಿಸುವ ಮೂಲಕ ಆಚರಿಸಲಾಯಿತು. ಈ ವೇಳೆ ಶ್ರೀ ವಾಣಿ ಲ್ಯಾಂಡ್ ಲಿಂಕ್ಸ್ ನ ಮಾಲೀಕರಾದ ನಾಗಭೂಷಣ್ ವಾಣಿ, ಡೈಮಂಡ್ ಮಂಜುನಾಥ್, ಎಸ್. ರವೀಂದ್ರ ಮೊಯ್ಲಿ, ಬಿಜೆಪಿ ಯುವ ಮುಖಂಡ ಶ್ರೀನಿವಾಸ್,  ನಾಗರಾಜ್ ಬ್ರಷ್ ಮ್ಯಾನ್, … Read more

ಕಾಂಗ್ರೆಸ್ನಿಂದ ಕ್ಷುಲ್ಲಕ ರಾಜಕಾರಣ: ಮೇಯರ್ ಜಯಮ್ಮ ಗೋಪಿನಾಯ್ಕ ಹೇಳಿಕೆ

ಸುದ್ದಿ360, ದಾವಣಗೆರೆ, ಜು.14: ಕಾಂಗ್ರೆಸ್ ನವರು ಕ್ಷುಲ್ಲಕ ರಾಜಕಾರಣದಲ್ಲಿ ತಲ್ಲೀನರಾಗಿದ್ದಾರೆ. ನಾನು ಕಛೇರಿಗೆ ಬರುತ್ತೇನೊ ಇಲ್ಲವೊ ಎಂಬುದನ್ನು ತಿಳಿಯಲು ಸಿಸಿ ಕ್ಯಾಮೆರಾ ಫೂಟೇಜ್ ಪರಿಶೀಲಿಸಲಿ, ಇಲ್ಲವೇ ನಾನು ಕಛೇರಿಗೆ ಬಂದು ಹೋಗುವುದನ್ನು ಗಮನಿಸಲು ಯಾರಾನ್ನಾದರು ನೇಮಕ ಮಾಡಿಕೊಳ್ಳಲಿ ಎಂದು ವಿರೋಧ ಪಕ್ಷದವರ ಆರೋಪಕ್ಕೆ ಮಹನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ ಕಟುವಾಗಿ ಪ್ರತಿಕ್ರಿಯಿಸಿದರು. ಪಾಲಿಕೆ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಪ್ರತಿಪಕ್ಷ ನಾಯಕ ಹಾಗೂ ಸದಸ್ಯರ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಸಾಮಾನ್ಯ ಕುಟುಂಬದ ದಲಿತ ಮಹಿಳೆಯೊಬ್ಬಳು ಮೇಯರ್ ಸ್ಥಾನ … Read more

ನಿದ್ದೆ ಮಾಡುವ  ಸಿಂಹವನ್ನೇ ನಂಬಿಕೊಂಡ ಸಂಸ್ಕೃತಿಯವರು ವಿರೋಧ ಪಕ್ಷದವರು :ಸಿಎಂ

ಸುದ್ದಿ360 ಉಡುಪಿ, ಜು.13: ಪ್ರಧಾನಿ ನರೇಂದ್ರ ಮೋದಿ ಕ್ರಿಯಾಶೀಲವಾಗಿದ್ದಾರೆ. ಅದಕ್ಕೆ ತಕ್ಕ ಹಾಗೆ ನಮ್ಮ ದೇಶದ ಲಾಂಛನವಾಗಿರುವ ಸಿಂಹ ಸಶಕ್ತ ಹಾಗೂ ಘರ್ಜನಾ ರೂಪದಲ್ಲಿ ಇರಬೇಕು. ಆ ರೀತಿಯಲ್ಲಿ ಸಿಂಹ ಲಾಂಛನ ಇದೆ. ಆದರೆ ವಿರೋಧ ಪಕ್ಷದವರು ನಿದ್ದೆ ಮಾಡಿಕೊಂಡೇ ಇರುವ ಸಿಂಹವನ್ನು ನಂಬಿಕೊಂಡಿರುವ ಸಂಸ್ಕೃತಿಯವರು. ಇದು ಉಡುಪಿಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸಿಂಹ ಲಾಂಛನ ವಿಚಾರವಾಗಿ ನೀಡಿದ ಪ್ರತಿಕ್ರಿಯೆ. ಸಿಂಹದ ಲಾಂಛ ಉಗ್ರವಾಗಿದೆ, ವ್ಯಗ್ರವಾಗಿದೆ ಎಂಬುದು ನೋಡುವವರ ದೃಷ್ಟಿಕೋನವಾಗಿದೆ. ಕಾಂಗ್ರೆಸ್ … Read more

ಅಶೋಕ ಲಾಂಛನವನ್ನೊಮ್ಮೆ ಮ್ಯೂಸಿಯಂನಲ್ಲಿ ನೋಡಲಿ – ಆರೋಪಗಳು ಯಾರನ್ನೂ ಬಿಟ್ಟಿಲ್ಲ : ಜಗ್ಗೇಶ್

ಆರಾಧಿಸುವವರು 98% ಇದ್ರೆ, ವಿರೋಧಿಸುವವರು 2% ಏನ್ ಮಾಡೋಕಾಗುತ್ತೆ. . . ಸುದ್ದಿ360 ತುಮಕೂರು ಜು.13: ಅಶೋಕ ಲಾಂಛನದ ಮೂಲ ಇವರುಗಳು ಮ್ಯೂಸಿಯಂನಲ್ಲಿ ನೋಡಲಿ. ಸುಖಾಸುಮ್ಮನೆ ಮೋದಿ ವಿರುದ್ದ ಮಾತಾಡುತ್ತಾರೆ ಎಂದು ರಾಜ್ಯಸಭಾ ಸದಸ್ಯ ಜಗ್ಗೇಶ್ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಸಿದ್ದಗಂಗಾ ಮಠಕ್ಕೆ ಬುಧವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಷ್ಟ್ರೀಯ ಲಾಂಛನ ತಿರುಚಿದ್ದಾರೆ ಎಂಬ ಆರೋಪ ವಿಚಾರವಾಗಿ ಅವರು, ಮ್ಯೂಸಿಯಂನಲ್ಲಿ ಇರುವ ಹಾಗೆ ಯಥಾವತ್ ಸಿಂಹ ಲಾಂಛನವನ್ನು ಸೆಂಟ್ರಲ್ ವಿಸ್ತಾದಲ್ಲಿ ಮಾಡಲಾಗಿದೆ. ಇಷ್ಟು ವರ್ಷ … Read more

2023ರಲ್ಲಿ 135 ಕ್ಕೂ ಹೆಚ್ಚು ಸ್ಥಾನ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ

ದಾವಣಗೆರೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಸುದ್ದಿ360 ದಾವಣಗೆರೆ, ಜು.12:  2023ರಲ್ಲಿ ನೂರಕ್ಕೆ  ನೂರರಷ್ಟು ಕಾಂಗ್ರೆಸ್ ಸರ್ಕಾರ ಬರುತ್ತದೆ. 135 ಕ್ಕೂ ಹೆಚ್ಚು ಸ್ಥಾನಗಳನ್ನ ಕಾಂಗ್ರೆಸ್ ಗೆಲ್ಲುತ್ತದೆ. ಈಗ ಚುನಾವಣೆ ಮಾಡಿದರೂ ನಾವು ಚುನಾವಣೆಗೆ ಸಿದ್ಧರಿದ್ದೇವೆ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯ ನಾಯಕರಿಗೆ ಈಗಾಗಲೇ ಭಯ ಶುರುವಾಗಿದೆ. ವಿಶೇಷವಾಗಿ ಸಚಿವ ಸ್ಥಾನ ಕಳೆದುಕೊಂಡಿರುವ ಕೆಎಸ್ ಈಶ್ವರಪ್ಪ ಅವರಿಗೆ ಭಯ ಶುರುವಾಗಿದೆ‌. ಇದೇ ಕಾರಣಕ್ಕೆ ಅವರು ಅಮೃತ ಮಹೋತ್ಸವದ ಬಗ್ಗೆ … Read more

ಮೀಸಲಾತಿ: ಜಿಲ್ಲಾಡಳಿತ ಕಚೇರಿ ಮುತ್ತಿಗೆಗೆ ಮುಂದಾದ ಎಸ್ಸಿ-ಎಸ್ಟಿ ಸಂಘಟನೆಗಳು

ಅರ್ಧಗಂಟೆಗೂ ಹೆಚ್ಚು ಕಾಲ ಜಿಲ್ಲಾಡಳಿತ ಭವನ ಮುಖ್ಯ ದ್ವಾರದ ಎದುರು ಪಿಬಿ ರಸ್ತೆ ತಡೆ ಸುದ್ದಿ360, ದಾವಣಗೆರೆ ಜು.11: ಕರ್ನಾಟಕ ಸ್ವಾಭಿಮಾನಿ ಎಸ್ಸಿ-ಎಸ್ಟಿ ಸಂಘಟನೆಗಳ ಒಕ್ಕೂಟ ಮತ್ತು ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಸದಸ್ಯರು, ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೆ ಆಗ್ರಹಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ಮುಂದಾದ ಘಟನೆ ಸೋಮವಾರ ನಗರದಲ್ಲಿ ಜರುಗಿತು. ಮುನ್ನೆಚ್ಚರಿಕೆ ಕ್ರಮವಾಗಿ ಪಿಬಿ ರಸ್ತೆಗೆ ಹೊಂದಿಕೊಂಡಿರುವ ಜಿಲ್ಲಾಡಳಿತ ಭವನದ ಮುಖ್ಯದ್ವಾರದ ಕಮಾನು ಬಳಿಯೇ ಪೊಲೀಸರು ಬ್ಯಾರಿಕೇಡ್ … Read more

ಸಿದ್ದರಾಮಯ್ಯ ಅಮೃತ ಮಹೋತ್ಸವ – ದಾವಣಗೆರೆಯಲ್ಲಿ ಸ್ಥಳ ವೀಕ್ಷಿಸಿದ‌ ಕಾಂಗ್ರೆಸ್ ಮುಖಂಡರು

ಶಾಮನೂರು ಶಿವಶಂಕರಪ್ಪ ಅವರ ಒಡೆತನದ 50 ಎಕರೆ ಸ್ಥಳದಲ್ಲಿ ಕಾರ್ಯಕ್ರಮ ಸುದ್ದಿ360, ದಾವಣಗೆರೆ, ಜು.9: ಈಗಾಗಲೇ ಭಾರೀ ಪ್ರಚಾರ ಗಿಟ್ಟಿಸಿರುವ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ವರ್ಷದ ಜನ್ಮ ದಿನದ ಅಮೃತ ಮಹೋತ್ಸವ ಆಗಸ್ಟ್ 3ರಂದು ಬೆಳಿಗ್ಗೆ 11ಕ್ಕೆ ದಾವಣಗೆರೆ ನಗರದಲ್ಲಿ ಏರ್ಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ಧರಾಮಯ್ಯ  ಆಪ್ತರ ತಂಡ ಶನಿವಾರ ದಾವಣಗೆರೆಗೆ ದೌಡಾಯಿಸಿ ಪರಿಶೀಲನೆಯಲ್ಲಿ ತೊಡಗಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿ 48ರ ದಾವಣಗೆರೆ- ಹರಿಹರ  ರಸ್ತೆಯ ಬಳಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಒಡೆತನದ … Read more

ಶಾಲಾಮಕ್ಕಳಿಗೆ ಶೂ, ಸಾಕ್ಸ್  ಹಂಚಿಕೆಗೆ 132 ಕೋಟಿ ರೂ.ಗಳ ಅನುಮೋದನೆ: ಸಿಎಂ

ಸುದ್ದಿ360, ಬೆಂಗಳೂರು, ಜು. 08: ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್  ಹಂಚಿಕೆಗೆ 132 ಕೋಟಿ ರೂ.ಗಳನ್ನು ಒದಗಿಸಿ ಅನುಮೋದನೆ ನೀಡಲಾಗಿದೆ ಎಂದು  ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸಮವಸ್ತ್ರದ ವಿಚಾರದಲ್ಲಿ ಸರ್ಕಾರ ಈಗಾಗಲೇ ಸಮವಸ್ತ್ರಕ್ಕೆ ಅನುಮೋದನೆ ನೀಡಿದೆ. ಸಮವಸ್ತ್ರ ತಯಾರಾಗಲು ಸ್ವಲ್ಪ ಸಮಯ ಹಿಡಿಯುತ್ತದೆ. ನಂತರ ವಿತರಣೆಯಾಗಲಿದೆ. ಈ ವಿಷಯದಲ್ಲಿ ಯಾವುದೇ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದರು. ಆಗ ಭಿಕ್ಷೆ ಬೇಡಿರುವ ಹಣ ಎಲ್ಲಿ? ಕೆಪಿಸಿಸಿ ಅಧ್ಯಕ್ಷ  … Read more

ದಾವಣಗೆರೆ ಮಹಾನಗರ ಪಾಲಿಕೆ ಆಡಳಿತ ವೈಫಲ್ಯ – ಪಾಲಿಕೆಗೆ ಬೀಗ ಜಡಿಯಲು ಮುಂದಾದ ಕಾಂಗ್ರೆಸ್

ಸುದ್ದಿ360, ದಾವಣಗೆರೆ, ಜು.08: ಮಹಾನಗರ ಪಾಲಿಕೆ ಆಡಳಿತ ನಡೆಸುವಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ, ಬಿಜೆಪಿ ನಗರದ ಕುಂದುಕೊರತೆಗಳನ್ನು ನಿವಾರಿಸುವಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ  ಎಂದು ಆರೋಪಿಸಿ  ಕಾಂಗ್ರೆಸ್ ಕಾರ್ಯಕರ್ತರು ಪಾಲಿಕೆ ಎದುರು ಪ್ರತಿಭಟನೆಗಿಳಿದರು. ಬಿಜೆಪಿಯ ಆಡಳಿತದಿಂದ ರೋಸಿ ಹೋಗಿದ್ದ ಕಾಗ್ರೆಸ್ ಕಾರ್ಯಕರ್ತರು ಈ ವೇಳೆ ಪಾಲಿಕೆ  ಮುಖ್ಯದ್ವಾರಕ್ಕೆ ಬೀಗ ಜಡಿಯಲು ಮುಂದಾಗಿ, ಪೊಲೀಸರು ಇದನ್ನು ತಡೆದಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಮಹಾನಗರಪಾಲಿಕೆ ವಿಪಕ್ಷ ನಾಯಕ ಜಿ.ಎಸ್. ಗಡಿಗುಡಾಳ್ ಮಂಜುನಾಥ್, ನಗರದಾದ್ಯಂತ ಸಮಸ್ಯೆಗಳು ಉಲ್ಬಣಗೊಂಡಿವೆ. 5 ತಿಂಗಳಾದರೂ ಸಾಮಾನ್ಯಸಭೆ … Read more

error: Content is protected !!