ದೇಶ ಅಧೋಗತಿಗೆ ಬಂದಿರುವುದೇ ಕಾಂಗ್ರೆಸ್ಸಿನಿಂದ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜು.08: ಕಾಂಗ್ರೆಸ್ ನವರು ಮಹಾತ್ಮಾಗಾಂಧಿ ಅವರ ಹೆಸರನ್ನು ಬಹಳಷ್ಟು ದುರುಪಯೋಗಪಡಿಸಿಕೊಂಡಿದ್ದಾರೆ. ಈ ದೇಶ ಅಧೋಗತಿಗೆ ಬಂದಿರುವುದೇ ಕಾಂಗ್ರೆಸ್ಸಿನಿಂದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಗುರುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅವರ ಕಾಲದಲ್ಲಿ ಪಿ.ಎಸ್.ಐ ಪ್ರಕರಣದಲ್ಲಿ ಡಿಐಜಿ ಒಬ್ಬರು ಭಾಗಿಯಾಗಿದ್ದರು. ಕಾಂಗ್ರೆಸ್ ಏನೂ ಮಾಡಲಿಲ್ಲ. ಎಫ್.ಐ.ಆರ್ ನಲ್ಲಿ  ಹೆಸರು ಬಂದರೂ ಕೂಡ ಅವರ ವಿಚಾರಣೆ, ಬಂಧನ, ಅಮಾನತು ಯಾವುದನ್ನೂ ಮಾಡಲಿಲ್ಲ. ಈಗ ನಾನು ಬಂದ ನಂತರ ಕಾನೂನು ಕ್ರಮ ಜರುಗಿಸಿದ್ದೇನೆ. ಇವರು ಜನರ … Read more

ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಎಸ್ ಯುಸಿಐ ಪ್ರತಿಭಟನೆ

ಸುಸುದ್ದಿ360, ದಾವಣಗೆರೆ, ಜು.08: ಕೇಂದ್ರ ಸರ್ಕಾರವು ಗೃಹ ಬಳಕೆಯ ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆ ನಿರ್ಧಾರ ಖಂಡಿಸಿ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಸಮಿತಿಯಿಂದ ನಗರದ ಗಾಂಧಿ ವೃತ್ತದ ಬಳಿ ಗುರುವಾರ ಪ್ರತಿಭಟಿಸಲಾಯಿತು. ಕೇಂದ್ರ ಸರ್ಕಾರ ಬೆಲೆ ಏರಿಕೆ ನೀತಿಯ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ಆಗ್ರೋಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಎಸ್.ಯು.ಸಿ.ಐ (ಸಿ) ಜಿಲ್ಲಾ ಸಂಘಟನಾ ಸಮಿತಿಯ ಕಾರ್ಯದರ್ಶಿ ಕಾಂ. ಕೈದಾಳೆ ಮಂಜುನಾಥ್ ರವರು ಮಾತನಾಡುತ್ತಾ “ಕೇಂದ್ರ ಸರ್ಕಾರ ಗೃಹ ಬಳಕೆಯ ಗ್ಯಾಸ್ ಸಿಲೆಂಡರ್ ಬೆಲೆಯನ್ನು … Read more

ಪಠ್ಯಪುಸ್ತಕ ಪರಿಷ್ಕರಣೆ ಲೋಪ ವಿರೋಧಿಸಿ ಎನ್.ಎಸ್.ಯು.ಐ ನಿಂದ ತಿರಂಗ ರ‍್ಯಾಲಿ

ಸುದ್ದಿ360,ದಾವಣಗೆರೆ,ಜು.05: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆಯ ಲೋಪದಿಂದ ರಾಜ್ಯದ ವಿದ್ಯಾರ್ಥಿಗಳ ಮೇಲೆ ಅಗಾಧ ಪರಿಣಾಮ ಬೀರಿದೆ. ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಿಂಚಿತ್ತೂ ಯೋಚನೆ ಮಾಡದ ರಾಜ್ಯ ಬಿಜೆಪಿ ಸರ್ಕಾರ ಪ್ರತಿಯೊಂದು ಹಂತದ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಎನ್.ಎಸ್‌.ಯು.ಐ ಘಟಕ ಮಂಗಳವಾರ ಜನಜಾಗೃತಿ ರ‍್ಯಾಲಿ ನಡೆಸಿತು. ಮೂರು ನೂರು ಅಡಿಗಳ ತಿರಂಗದೊಂದಿಗೆ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ರ‍್ಯಾಲಿಯಲ್ಲಿ ಭಾಗವಹಿಸಿದ್ದರು.  ನಗರದ ಎವಿಕೆ ಕಾಲೇಜು ಸಮೀಪದಿಂದ ಆರಂಭಗೊಂಡ ರ‍್ಯಾಲಿ ಬಿ.ಎಸ್.ಚನ್ನಬಸಪ್ಪ ಅಂಗಡಿಯ ಮುಂಭಾಗದಿಂದ … Read more

ಆದಾಯ ಮೀರಿದ ಆಸ್ತಿ? : ಎಸಿಬಿಯಿಂದ  ಶಾಸಕ ಜಮೀರ್ ಅಹಮ್ಮದ್ ಆಸ್ತಿ ಲೆಕ್ಕಾಚಾರ

ಸುದ್ದಿ360 ಬೆಂಗಳೂರು.ಜು.05: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಅವರ ಮನೆ ಸೇರಿದಂತೆ ಐದು ಕಡೆ ಮಂಗಳವಾರ ನಸುಕಿನಿಂದಲೇ ಎಸಿಬಿ ಶೋಧ ಕಾರ್ಯ ನಡೆಸಿದೆ. ಆದಾಯ ಮೀರಿದ ಆಸ್ತಿ ಹೊಂದಿರುವುದಾಗಿ ಎಫ್ಐಆರ್ ದಾಖಲಿಸಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ), ಜಾರಿ ನಿರ್ದೇಶನಾಲಯ ನೀಡಿರುವ ವರದಿ ಆಧರಿಸಿ ತಿನಿಖೆ ಕೈಗೊಂಡಿದೆ. ಕಂಟೋನ್ಮೆಂಟ್ ರೈಲ್ವೇ ನಿಲ್ದಾಣದ ಸಮೀಪದ ಜಮೀರ್ ಅಹಮ್ಮದ್ ಅವರ ಮನೆ, ಸಿಲ್ವರ್ ಓಕ್ ಅಪಾರ್ಟ್ ಮೆಂಟ್ ಫ್ಲ್ಯಾಟ್, ಸದಾಶಿವನಗರದಲ್ಲಿರುವ ಅತಿಥಿಗೃಹ, ಕಲಾಸಿಪಾಳ್ಯದಲ್ಲಿನ ನ್ಯಾಷನಲ್ … Read more

ನಿಷ್ಪಕ್ಷಪಾತ ತನಿಖೆಯಿಂದ ವ್ಯವಸ್ಥೆ ಸ್ವಚ್ಛಗೊಳಿಸಲು ಬದ್ಧ: ಸಿಎಂ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಹಿಂದಿನ ಸರ್ಕಾರಗಳ ಅವಧಿಯಲ್ಲಿ ಹಗರಣದ ಕೂಗು ಕೇಳಿಬಂದಿದ್ದರೂ, ಯಾವುದೇ ತನಿಖೆ ನಡೆಯಲಿಲ್ಲ ಸುದ್ದಿ360 ಬೆಂಗಳೂರು ಜು.4: ನಿಷ್ಪಕ್ಷಪಾತವಾದ  ಹಾಗೂ ನಿರ್ದಾಕ್ಷಿಣ್ಯವಾದ ತನಿಖೆಯನ್ನ ಮಾಡುವ ಮೂಲಕ ಇಡೀ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕಬ್ಬನ್ ಪಾರ್ಕ್‍ನ ಸರ್ಕಾರಿ ಮತ್ಸ್ಯಾಲಯದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಪಿಎಸ್ ಐ ನೇಮಕಾತಿ ಹಗರಣದ ತನಿಖೆ ನಡೆಸಲು ಸಿಐಡಿಯವರಿಗೆ ಮುಕ್ತವಾದ ಅವಕಾಶ ನೀಡಲಾಗಿದೆ. ಸಾಕ್ಷ್ಯ ಆಧಾರಗಳ ಮೇಲೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಎಷ್ಟೇ ದೊಡ್ಡ … Read more

ಪಿಎಸ್ಐ ಅಕ್ರಮ ಪ್ರಕರಣ: ಎಡಿಜಿಪಿ ಅಮೃತ್ ಪೌಲ್ ಸಿಐಡಿ ಕಸ್ಟಡಿಗೆ

ಸುದ್ದಿ360 ಬೆಂಗಳೂರು ಜು.4: ಪಿಎಸ್ಐ ಅಕ್ರಮ ಪ್ರಕರಣದಲ್ಲಿ ಓ ಎಂಆರ್ ಶೀಟ್ ಗಳನ್ನು ತಿದ್ದಿರುವ ಆರೋಪ  ಎದುರಿಸುತ್ತಿರುವ ಎಡಿಜಿಪಿ ಅಮೃತ್ ಪೌಲ್ ರನ್ನು 10 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ, 1ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಪಿಎಸ್ಐ ಅಕ್ರಮ ಪ್ರಕರಣದಲ್ಲಿ ಅಮೃತ್ ಪೌಲ್ ರನ್ನು ನಾಲ್ಕು ದಿನಗಳ ಕಾಲ ವಿಚಾರಣೆಗೊಳಪಡಿಸಿದ್ದ ಸಿಐಡಿ ಅಧಿಕಾರಿಗಳು ಇಂದು ಅವರನ್ನು ಬಂಧಿಸಲಾಗಿತ್ತು.

ಗುಂಡಿಕ್ಕಿ ಎಂದವನ ಬಂಧಿಸಿ: ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಆಗ್ರಹ

ಸುದ್ದಿ360 ದಾವಣಗೆರೆ, ಜು.02:  ಇತ್ತೀಚೆಗೆ ಸುದ್ದಿ ವಾಹಿನಿಯೊಂದರ ಫೋನ್ ಇನ್ ಕಾರ್ಯಕ್ರಮವೊಂದರಲ್ಲಿ ಕರೆ ಮಾಡಿದ ವ್ಯಕ್ತಿ, ‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಬೇಕು’ ಎಂದು ಹೇಳಿಕೆ ನೀಡಿದ್ದಾನೆ. ಈತನನ್ನು ಕೂಡಲೆ ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಆಗ್ರಹಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಾವಣಗೆರೆಯ ವೀರಪ್ಪ ಎಂಬ ವ್ಯಕ್ತಿ ಈ ರೀತಿಯಾಗಿ ಮಾತನಾಡಿದ್ದು, ಒಂದು ಕೋಮಿನ ವಿರುದ್ಧ ಕೀಳಾಗಿ ಹೇಳಿಕೆ ನೀಡಿದ್ದಾನೆ. ಈ … Read more

ಪೌರಕಾರ್ಮಿಕರ ಖಾಯಮಾತಿಗೆ ಸರ್ಕಾರದ ತಾತ್ವಿಕ ಒಪ್ಪಿಗೆ: ಸಿಎಂ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು.ಜು.02: ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಹಾನುಭೂತಿ ಹಾಗೂ ಮಾನವೀಯತೆಯಿಂದ ಕ್ರಮ ತೆಗೆದುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ತೆಲಂಗಾಣಕ್ಕೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂಗೊಳಿಸಲು ತಾತ್ವಿಕವಾಗಿ  ಸರ್ಕಾರ ಒಪ್ಪಿಕೊಂಡಿದೆ. ಕಾನೂನಾತ್ಮಕ ವಾಗಿ ಹಾಗೂ ತಾಂತ್ರಿಕವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಪೌರಕಾರ್ಮಿಕರ ಹಾಗೂ ಅಧಿಕಾರಿಗಳ ಜಂಟಿ ಸಮಿತಿಯನ್ನು … Read more

ದೇಶದಲ್ಲಿ ಹೆಚ್ಚುತ್ತಿರುವ ಜಿಹಾದಿ ಮನಸ್ಥಿತಿ: ಕಾಂಗ್ರೆಸ್ಸಿಗರ ಮೌನವೇಕೆ ?

ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಪ್ರಶ್ನೆ ಸುದ್ದಿ360 ದಾವಣಗೆರೆ.ಜು.01: ಬಿಜೆಪಿ ಹೆಚ್ಚು ಹೆಚ್ಚು ಜನಪ್ರಿಯತೆ ಗಳಿಸುತ್ತಿರುವುದನ್ನು ಸಹಿಸದ ಕಾಂಗ್ರೆಸ್ ಅಗ್ನಿಪಥ್ ಯೋಜನೆ ವಿರೋಧಿಸಿ ಬೀದಿಗಿಳಿಯುತ್ತದೆ. ಆದರೆ ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ನುಗ್ಗಿ ಹಾಡ ಹಗಲೇ ಒಬ್ಬ ಸಾಮಾನ್ಯ ವ್ಯಕ್ತಿಯ ಕತ್ತು ಸೀಳಿ ಕೊಲೆ ಮಾಡಿದರೆ ಪ್ರತಿಭಟಿಸುವ ಗೋಜಿಗೆ ಹೋಗುವುದಿಲ್ಲ. ಇದು ಕಾಂಗ್ರೆಸಿಗರ ಅಲ್ಪಸಂಖ್ಯಾತ ತುಷ್ಟೀಕರಣಕ್ಕೆ ಸಾಕ್ಷಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜಸ್ಥಾನದ ಉದಯಪುರದಲ್ಲಿ ಜಿಹಾದಿ ಮನಸ್ಥಿತಿಯ ಕೆಲವರು … Read more

ಕನ್ನಯ್ಯಲಾಲ್ ಹತ್ಯೆ; ಹಂತಕರನ್ನು ಗುಂಡಿಕ್ಕಿ ಕೊಲ್ಲಬೇಕು: ಶ್ರೀನಿವಾಸ್ ದಾಸಕರಿಯಪ್ಪ

ಸುದ್ದಿ360 ದಾವಣಗೆರೆ, ಜೂ.30: ರಾಜಸ್ತಾನದ ಉದಯಪುರದಲ್ಲಿ ಕನ್ನಯ್ಯ ಲಾಲ್ ಹೆಸರಿನ ವ್ಯಕ್ತಿಯನ್ನು ಕೊಂದು ಹಾಕಿದ ಹಂತಕರನ್ನು ಗುಂಡಿಟ್ಟಿ ಕೊಲ್ಲಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ ಹೇಳಿದ್ದಾರೆ. ನಗರದ ಜಯದೇವ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು. ರಾಜಸ್ತಾನದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಇಲ್ಲವೇ ಗುಂಡಿಟ್ಟು ಕೊಲ್ಲಬೇಕು. ತಪ್ಪಿದಲ್ಲಿ ದೇಶದಲ್ಲಿ ಹಿಂದೂಗಳ ಶಕ್ತಿ ಏನೆಂಬುದನ್ನು ತೋರಿಸಬೇಕಾಗುತ್ತದೆ ಎಂದು … Read more

error: Content is protected !!