‘ಮಾವನವರ ಮಾತು ನನಗೆ ಆಶೀರ್ವಾದ’ ಎನ್ನುತ್ತಲೇ ಸವಾಲು ಸ್ವೀಕರಿಸಲು ಸಿದ್ಧ ಎಂದಿರುವ ಸಂಸದ ಜಿ.ಎಂ. ಸಿದ್ದೇಶ‍್ವರ

ಸುದ್ದಿ360 ದಾವಣಗೆರೆ: `ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸಿದ್ದೇಶ್ವರ ಸೋಲುವುದನ್ನು ನೋಡುತ್ತೇನೆ’ ಎಂದು ಹೇಳಿರುವ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಮಾತಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಅವರು “ಹಿರಿಯರು ಹಾಗೂ ನಮ್ಮ ಮಾವನವರಾಗಿರುವ ಶಾಮನೂರು ಶಿವಶಂಕರಪ್ಪ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರು ಏನೇ ಹೇಳಿರಲಿ, ಅವರ ಮಾತುಗಳು ನನಗೆ ಆಶೀರ್ವಾದ ಇದ್ದಂತೆ” ಎಂದಿದ್ದಾರೆ. ನಗರದ ಜಿಎಂಐಟಿ ಅತಿಥಿಗೃಹದಲ್ಲಿ ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ನಿಂತರೆ ಫಂಡ್ ಕೊಡುವುದಾಗಿ ಹಿರಿಯರಾಗಿರುವ … Read more

ದ್ವೇಷದ ತೀರ್ಮಾನ ತೆಗೆದುಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪವಾಗಿದೆ: ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಬೆಂಗಳೂರು: ರಾಜ್ಯದಲ್ಲಿ ‌ಮುಂಗಾರು ವೈಫಲ್ಯವಾಗಿ ಹಲವಾರು ಗ್ರಾಮದಲ್ಲಿ ಕುಡಿಯುವ ನಿರಿನ ಹಾಹಾಕಾರ ಉಂಟಾಗಿದೆ, ಅಂತರ ಜಲ ಕುಸಿದಿದೆ. ರೈತರ ಪಾಲಿಗೆ ಮುಂಗಾರು ವೈಫಲ್ಯ ಬಹಳ ದೊಡ್ಡ ಹೊಡೆತ ಕೊಟ್ಟಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವ ಬದಲು, ದ್ವೇಷದ ತೀರ್ಮಾನಗಳನ್ನು ತೆಗೆದುಕೊಂಡು ಸಂಕಷ್ಟದಲ್ಲಿರುವ ಕರ್ನಾಟಕದ ಜನರಿಗೆ ಈ ಸರ್ಕಾರ ಶಾಪವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಟ್ಚೀಟ್ ಮಾಡಿರುವ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ … Read more

ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಸೇರಿದಂತೆ 36 ಕೈ ಮುಖಂಡರಿಗೆ ಕೋರ್ಟ್‍ ಸಮನ್ಸ್ : ಸಿಎಂ – ಡಿಸಿಎಂ ಗೆ ಖುದ್ಧು ಹಾಜರಾಗುವಂತೆ ಕೋರ್ಟ್‍ ಸೂಚನೆ

ಸುದ್ದಿ360 ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ  ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, ಜುಲೈ 28ರಂದು ಖುದ್ದು ಹಾಜರಾಗುವಂತೆ ಸೂಚಿಸಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ 36 ಕಾಂಗ್ರೆಸ್ ಮುಖಂಡರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡರ ವಿರುದ್ಧ ಪೊಲೀಸರು ಪ್ರಕರಣ … Read more

ಕರ್ನಾಟಕ ನಂ.1 ರಾಜ್ಯವಾಗಿಸುವ ಗುರಿ: ಸಚಿವ ಸರ್ಬಾನಂದ್ ಸೋನೋವಾಲ

ಸುದ್ದಿ360 ದಾವಣಗೆರೆ ಏ. 25:  ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ ಬಿಜೆಪಿಯ ಉದ್ದೇಶ. ರಾಜ್ಯದಲ್ಲಿ ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತಂದು ಕರ್ನಾಟಕವನ್ನು ದೇಶದ ನಂ.1 ರಾಜ್ಯವನ್ನಾಗಿಸುವ ಗುರಿ ನಮ್ಮದಾಗಿದೆ ಎಂದು ಕೇಂದ್ರ ಬಂದರು ಮತ್ತು ಆಯುಷ್ ಸಚಿವ ಸರ್ಬಾನಂದ್ ಸೋನೋವಾಲ ಹೇಳಿದರು. ನಗರದ ಜಿಎಂಐಟಿ ಅತಿಥಿಗೃಹದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 9 ವರ್ಷಗಳ ಹಿಂದೆ ಭಾರತ ವಿಶ್ವದ ಅತಿ ದೊಡ್ಡ ಆರ್ಥಿಕತೆ ದೇಶಗಳ ಪೈಕಿ 11ನೇ ಸ್ಥಾನದಲ್ಲಿತ್ತು. ಪ್ರಧಾನಿ ಮೋದಿ ಆಡಳಿತದ ಅವಧಿಯಲ್ಲಿ ದೇಶ ಆರ್ಥಿಕವಾಗಿ ಪ್ರಗತಿ … Read more

ರಾಜ್ಯಕ್ಕೆ ಪ್ರಧಾನಿ ಸೇರಿದಂತೆ ತಾರಾ ಪ್ರಚಾರಕರ ಆಗಮನ: ಸಿಎಂ ಬೊಮ್ಮಾಯಿ

ಸುದ್ದಿ360, ದಾವಣಗೆರೆ, ಏ. 24:  ರಾಜ್ಯಕ್ಕೆ  ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಸೃತಿ ಇರಾನಿ, ಸೇರಿದಂತೆ ಹಲವು ನಾಯಕರು  ತಾರಾ ಪ್ರಚಾರಕರಾಗಿ  ಆಗಮಿಸುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದಾವಣಗೆರೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಭಾವನೆಗಳ ಜೊತೆ ಬಿಜೆಪಿ ಆಟವಾಡುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ, ‘ಡಿಕೆಶಿ ಹೇಳುವುದು ಒಂದು ಮಾಡೋದು ಒಂದು, ಲಿಂಗಾಯತ ವಿವಾದಗಳನ್ನು ತೆಗೆದಿದ್ದೇ ಅವರು. ದೇವರು ಯಾರಿಗೆ ಆಶೀರ್ವಾದ ಮಾಡ್ತಾರೆ ಎಂದು ಕಾದು ನೋಡೋಣ.’ … Read more

ಸವದಿ, ಶೆಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿಗೆ ಪ್ಲಸ್ – ಸಿಎಂ ಬೊಮ್ಮಾಯಿ

ಸುದ್ದಿ360 ದಾವಣಗೆರೆ, ಏ. 24: ಕಳೆದ ಬಾರಿಗಿಂತ ಈ ಬಾರಿ ನಮಗೆ ಮತಗಳು ಹೆಚ್ಚಾಗಲಿವೆ. ಸವದಿ, ಶೆಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿ ಗೆ ಪ್ಲಸ್ ಆಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜಗದೀಶ್‍ ಶೆಟ್ಟರ್, ಲಕ್ಷ್ಮಣ ಸವದಿಯವರು ಎಲ್ಲಾ ಪದವಿ ಬಿಜೆಪಿಯಿಂದ ಪಡೆದು ನಂತರ ಕಾಂಗ್ರೇಸ್ ಗೆ ಹೋಗಿದ್ದಾರೆ. ಜನರು ಅವರನ್ನು ಒಪ್ಪುವುದಿಲ್ಲ.  – ಬಸವರಾಜ ಬೊಮ್ಮಾಯಿ ದಾವಣಗೆರೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಮಿತ್ರರಿಗೆ ನಾನು ಧನ್ಯವಾದ ಹೇಳಲು ಇಷ್ಟ ಪಡುತ್ತೇನೆ.  ಸವದಿ, … Read more

33 ವರ್ಷಗಳಿಂದ ಲಿಂಗಾಯತರನ್ನು ಸಿಎಂ ಮಾಡದ ಕಾಂಗ್ರೆಸ್ನದ್ದು ಓಲೈಕೆ ರಾಜಕಾರಣ – ವೀರೇಶ್ ಹನಗವಾಡಿ

ಸುದ್ದಿ360 ದಾವಣಗೆರೆ, ಏ.23: ಕಳೆದ 33 ವರ್ಷಗಳಿಂದ ಲಿಂಗಾಯತರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸದ, ಕಾಂಗ್ರೆಸ್ ಈಗ ಓಲೈಕೆ ರಾಜಕಾರಣ ಮಾಡಲು ಮುಂದಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ವೀರಶೈವ-ಲಿಂಗಾಯತರನ್ನು ವಿಭಜಿಸಲು ಪ್ರಯತ್ನಿಸಿದ್ದನ್ನು ಜನ ಮರೆತಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್ ಹನಗವಾಡಿ ಹೇಳಿದರು. ಜಗದೀಶ್ ಶೆಟ್ಟರ್ ಶೆಟ್ಟರ್ ಆತ್ಮಾವಲೋಕನ ಮಾಡಿಕೊಳ್ಳಬೇಕು. ಬಾವುಟ ಬದಲಾದಾಕ್ಷಣ ಅವರಲ್ಲಿರುವ ಭಾವನೆಗಳು ಬದಲಾಗಲು ಸಾಧ್ಯವಿಲ್ಲ. -ಡಾ.ಎ.ಎಚ್. ಶಿವಯೋಗಿಸ್ವಾಮಿ, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ . ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ಸಮುದಾಯ ಪ್ರಜ್ಞಾವಂತ … Read more

ಮಾಯಕೊಂಡ: ಬಿಜೆಪಿ ಬಂಡಾಯ ಶಮನಕ್ಕೆ ಯತ್ನ- ವೀರೇಶ್ ಹನಗವಾಡಿ

ಸುದ್ದಿ360 ದಾವಣಗೆರೆ, ಏ. 22: ಮಾಯಕೊಂಡ ಕ್ಷೇತ್ರದಲ್ಲಿ ಆಕಾಂಕ್ಷಿಗಳು ಒಟ್ಟಾಗಿ ಬಂಡಾಯ ಅಭ್ಯರ್ಥಿಯಾಗಿ ಶಿವಪ್ರಕಾಶ್‍ ರನ್ನು ಕಣಕ್ಕಿಳಿಸಿದ್ದಾರೆ. ಅಲ್ಲಿನ ಬಂಡಾಯವನ್ನು ಶಮನಗೊಳಿಸುವ ಪ್ರಯತ್ನ ನಡೆಯುತ್ತಿದೆ. ನಾಮ ಪತ್ರ ಹಿಂಪಡೆಯಲು ಇನ್ನೂ ಒಂದು ದಿನ ಕಾಲಾವಕಾಶ ಇದ್ದು ಬಂಡಾಯ ಶಮನವಾಗುವ ವಿಶ್ವಾಸವಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್ ಹನಗವಾಡಿ ತಿಳಿಸಿದರು. ಈಗಾಗಲೇ ಬಂಡಾಯ ಎದ್ದಿರುವವರ ಜತೆ ಮಾತುಕತೆ ನಡೆಯುತ್ತಿದೆ. ಎಂದು ತಿಳಿಸಿದ ಅವರು,  ನಾಮಪತ್ರ ವಾಪಸ್ ತೆಗೆಸುತ್ತೇವೆ. ಎಲ್ಲೂ ಬಂಡಾಯವಾಗಲು ಬಿಡುವುದಿಲ್ಲ. ಮಾಡಾಳ್ ಮಲ್ಲಿಕಾರ್ಜುನ್ ಜತೆ ಮಾತುಕತೆ … Read more

ಪ್ರಶ್ನೆ ಪತ್ರಿಕೆಗಾಗಿ ಕಾದು ಕುಳಿತಿರುವ ಮತದಾರ – ಕೊಡುಗೈ ಬಿಕ್ಷುಕರ ಭರಪೂರ ಪ್ರಚಾರ

– ಕೂಡ್ಲಿ ಸೋಮಶೇಖರ್ ಚುನಾವಣೆ ಎಂದ ಮೇಲೆ ಇಲ್ಲಿ ಪಕ್ಷಗಳ ಹೈಕಮಾಂಡ್ನಿಂದ ಹಿಡಿದು ಸಾಮಾನ್ಯ ಕಾರ್ಯಕರ್ತನ ವರೆಗೆ ಮತ್ತು ಹಿರಿಯ ನಾಗರೀಕರಿಂದ ಹಿಡಿದು ಈಗಷ್ಟೇ ಮತದಾನಕ್ಕೆ ಅರ್ಹತೆ ಪಡೆದ ಯುವಪೀಳಿಗೆ ವಿವಿಧ ಬಗೆಗಳಲ್ಲಿ ಚುನಾವಣಾ ಪರೀಕ್ಷೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂದರೆ ತಪ್ಪಾಗಲಾರದು. ಮತದಾನ ಪ್ರತಿಯೊಬ್ಬ ಪ್ರಜೆಯ ಮೂಲಭೂತ ಹಕ್ಕು ಮತ್ತು ಕರ್ತವ್ಯವಾಗಿದ್ದರೂ ಸಹ ಸಾಕಷ್ಟು ಮಂದಿ ಮತದಾನದಿಂದ ದೂರವೇ ಉಳಿಯುವುದು ವಿಪರ್ಯಾಸ. ಚುನಾವಣಾ ಆಯೋಗ ಮತದಾನದ ಕುರಿತು ಜಾಗೃತಿ ಮೂಡಿಸುವಲ್ಲಿ ಸಾಕಷ್ಟು ಕೆಲಸ ಮಾಡುತ್ತಿರುವುದು ಸ್ವಾಗತಾರ್ಹ. ಮತಯಾಚನೆಗೆ ಬರುವ … Read more

ಕೆಲವೇ ಕ್ಷಣಗಳಲ್ಲಿ ಜಗದೀಶ್ ಶೆಟ್ಟರ್ ನಿವಾಸಕ್ಕೆ ಮೂವರು ನಾಯಕರ ಭೇಟಿ . . .

ರಾಜಕಾರಣದಲ್ಲಿ ತಾಳ್ಮೆ ಬೇಕು – ವೈಯ್ಟ್ ಅಂಡ್ ಸಿ ಎಂದ ಜಗದೀಶ್‍ ಶೆಟ್ಟರ್ ಸುದ್ದಿ360 ಹುಬ್ಬಳ್ಳಿ ಏ.15: ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ಕರ್ನಾಟಕ ಚುನಾವಣೆ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾತ್ರಿ 8.30ಕ್ಕೆ ತಮ್ಮ ನಿವಾಸಕ್ಕೆ ಭೇಟಿ ನೀಡಲಿದ್ದಾರೆ ತದನಂತರ ನಿರ್ಧಾರವನ್ನು ಪ್ರಕಟಿಸುವುದಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್‍ ಶೆಟ್ಟರ್  ಹೇಳಿದ್ದಾರೆ. ಈ ಕುರಿತು ಇಂದು ಸಂಜೆ ಮಾಧ್ಯಮದವರೊಂದಿಗೆ ಮಾತನಾಡಿ, ವರಿಷ್ಠರಿಂದ ಸೂಕ್ತ ಸ್ಪಂದನೆ ಬರುವ ನಿರೀಕ್ಷೆಯಲ್ಲಿ ನಾನಿದ್ದೇನೆ ಎಂದು ತಿಳಿಸಿರುವ ಅವರು, ಪಕ್ಷದಿಂದ … Read more

error: Content is protected !!