ದೇಶ ಅಧೋಗತಿಗೆ ಬಂದಿರುವುದೇ ಕಾಂಗ್ರೆಸ್ಸಿನಿಂದ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜು.08: ಕಾಂಗ್ರೆಸ್ ನವರು ಮಹಾತ್ಮಾಗಾಂಧಿ ಅವರ ಹೆಸರನ್ನು ಬಹಳಷ್ಟು ದುರುಪಯೋಗಪಡಿಸಿಕೊಂಡಿದ್ದಾರೆ. ಈ ದೇಶ ಅಧೋಗತಿಗೆ ಬಂದಿರುವುದೇ ಕಾಂಗ್ರೆಸ್ಸಿನಿಂದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಗುರುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅವರ ಕಾಲದಲ್ಲಿ ಪಿ.ಎಸ್.ಐ ಪ್ರಕರಣದಲ್ಲಿ ಡಿಐಜಿ ಒಬ್ಬರು ಭಾಗಿಯಾಗಿದ್ದರು. ಕಾಂಗ್ರೆಸ್ ಏನೂ ಮಾಡಲಿಲ್ಲ. ಎಫ್.ಐ.ಆರ್ ನಲ್ಲಿ  ಹೆಸರು ಬಂದರೂ ಕೂಡ ಅವರ ವಿಚಾರಣೆ, ಬಂಧನ, ಅಮಾನತು ಯಾವುದನ್ನೂ ಮಾಡಲಿಲ್ಲ. ಈಗ ನಾನು ಬಂದ ನಂತರ ಕಾನೂನು ಕ್ರಮ ಜರುಗಿಸಿದ್ದೇನೆ. ಇವರು ಜನರ … Read more

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅನುಭವ ಇಡೀ ದೇಶಕ್ಕೆ ಲಾಭ ತಂದುಕೊಡಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜು.08: ಡಾ. ಡಿ. ವೀರೇಂದ್ರ ಹೆಗ್ಗಡೆಯವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಕನ್ನಡ ನಾಡಿನ ಸಮಗ್ರ ಜನತೆಗೆ ಬಹಳ ಸಂತಸವುಂಟಾಗಿದ್ದು, ಅವರ ಅಗಾಧವಾದ ಅನುಭವ ಇಡೀ ದೇಶಕ್ಕೆ ಲಾಭವನ್ನು ತಂದುಕೊಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಶ್ರೀಯುತರು ನಾಲ್ಕೈದು ದಶಕಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮಾತ್ರವಲ್ಲ, ರಾಜ್ಯದಾದ್ಯಂತ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಮಾಡಿದ್ದಾರೆ.  ಅವರ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮ ಬಹಳ ಯಶಸ್ವಿಯಾಗಿದೆ. ಶುದ್ಧ ಕುಡಿಯುವ ನೀರಿನ ಘಟಕ, ಕೆರೆಗಳ ನಿರ್ಮಾಣ, … Read more

ಸಿದ್ದರಾಮಯ್ಯರ ಅವಧಿಯಲ್ಲಿ ಪೊಲೀಸ್ ನೇಮಕಾತಿ ಹಗರಣಗಳಾದಾಗ ನೀವು ರಾಜಿನಾಮೆ ನೀಡಿದ್ರಾ ?

ವಿರೋಧ ಪಕ್ಷದ ನಾಯಕರಿಗೆ  ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನೆ ಸುದ್ದಿ360,ಬೆಂಗಳೂರು, ಜುಲೈ 06 : ವಿರೋಧಪಕ್ಷದ ನಾಯಕರಾದ ಸಿದ್ಧರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ನೇಮಕಾತಿ ಹಗರಣಗಳು ನಡೆದಿವೆ. ಅಂತಹ ಸಂದರ್ಭದಲ್ಲಿ ಅವರು ರಾಜಿನಾಮೆಯನ್ನು ನೀಡಿದ್ದರೆ? ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು. ಅವರು ಮಂಗಳವಾರ ಕಾವೇರಿ ನೀರಾವರಿ ನಿಗಮ ನಿಯಮಿತದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಿಎಸ್ ಐ ನೇಮಕಾತಿ ಪರೀಕ್ಷಾ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿರೋಧಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕು … Read more

ಸಚಿವ ಸಂಪುಟ ವಿಸ್ತರಣೆ ? ನಾನು ಹೇಳುವವರೆಗೆ ಏನೂ ಇಲ್ಲ . . .

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ 360 ನವದೆಹಲಿ, ಜೂನ್ 23: ನಾನು ಪ್ರತಿ ಬಾರಿ ದೆಹಲಿಗೆ ಭೇಟಿ ನೀಡುವ ಸಂದರ್ಭದಲ್ಲಿ ಸಚಿವ ಸಂಪುಟ ಕುರಿತಾದ ಸುದ್ಧಿಗಳು ಮಾಧ್ಯಮಗಳಲ್ಲಿ ಬಂದಿರುತ್ತದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಾನಾಗಿ ಅಧಿಕೃತವಾಗಿ ಹೇಳುವವರೆಗೆ ಏನೂ ಇರುವುದಿಲ್ಲ. ಪಕ್ಷದ ವರಿಷ್ಠರನ್ನು ಭೇಟಿಯಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ರಾಷ್ಟ್ರಪತಿ ಚುನಾವಣೆ ಪ್ರಯುಕ್ತ ವರಿಷ್ಠರ ಸೂಚನೆ ಮೇರೆಗೆ ನವದೆಹಲಿ ತಲುಪಿರುವ ಅವರು, ಸಚಿವ ಸಂಪುಟ ಕುರಿತಾದ ಮಾದ್ಯಮದವರ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ವರಿಷ್ಠರ ಸೂಚನೆ ಮೇರೆಗೆ ದೆಹಲಿ ಪ್ರವಾಸ : ಸಿಎಂ ಬಸವರಾಜ ಬೊಮ್ಮಾಯಿ

ಸುದ್ದಿ 360 ನವದೆಹಲಿ, ಜೂನ್ 23: ಭಾರತದ ರಾಷ್ಟ್ರಪತಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಎಲ್ಲಾ ಮುಖ್ಯಮಂತ್ರಿಗಳು ಹಾಜರಿದ್ದು ನಾಮಪಾತ್ರಕ್ಕೆ ಸೂಚಕರಾಗಿ ಸಹಿಹಾಕಲು ಹಾಗೂ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಎಲ್ಲರೂ ಹಾಜರಿರಬೇಕೆಂದು ವರಿಷ್ಠರ ಸೂಚನೆ ಮೇರೆಗೆ ದೆಹಲಿಗೆ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ದೇಶ-ನಾಡು ಕಟ್ಟಿದವರ ಗೌರವ ಕಾಪಾಡಲು ಸಿದ್ದ: ಮುಖ್ಯಮಂತ್ರಿ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜೂ.19:  ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾತನಾಡಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಸ್ವಾಮೀಜಿ ಗಳು ನೀಡಿರುವ ಮನವಿಯನ್ನು ತರಿಸಿಕೊಂಡು ಏನೆಲ್ಲಾ ಬದಲಾವಣೆ ಮಾಡಬೇಕೋ ಅದನ್ನು ಮುಕ್ತ ಮನಸ್ಸಿನಿಂದ ಕೈಗೊಳ್ಳಲಾಗುವುದು. ಇದನ್ನು ಪ್ರತಿಷ್ಠೆ ಎಂದು ಪರಿಗಣಿಸಿಲ್ಲ. ಪಠ್ಯದ ಕುರಿತು ಆಕ್ಷೇಪವಿದ್ದರೆ, ಅದನ್ನು ನಿವಾರಿಸಲು ಸಿದ್ಧರಿದ್ದೇವೆ. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಭಾರತ ಹಾಗೂ ಕರ್ನಾಟಕ ಕಟ್ಟಲು ಶ್ರಮಿಸಿರುವ ಹಿರಿಯರು, ರಾಜಮಹಾರಾಜರು, ಸಾಹಿತಿಗಳು, ಕಲಾಕಾರರು, ಜ್ಞಾನಪೀಠ ವಿಜೇತರ ಬಗ್ಗೆ ಅಪಾರ ಗೌರವವಿದೆ. ಯಾವುದೇ … Read more

ಕಾಂಗ್ರೆಸ್ನಿಂದ ಬೆಂಕಿಗೆ ತುಪ್ಪ ಹಾಕುವ ಕೆಲಸ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು, ಜೂ.19:  ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸವನ್ನು ಇಡೀ ದೇಶದಲ್ಲಿ ಮಾಡುತ್ತಿದೆ ಎನ್ನುವುದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ,   ಅಗ್ನಿಪಥ್ ಒಂದು ವಿನೂತನ ಕಾರ್ಯಕ್ರಮ. ಇಡೀ ಜಗತ್ತಿನಲ್ಲಿ ಯುವಕರಿಗೆ ಮಿಲಿಟರಿ ತರಬೇತಿ ನೀಡುವ ವ್ಯವಸ್ಥೆ ಇದೆ. 17 – 21 ವರ್ಷ ಉತ್ತಮ ತರಬೇತಿ ಪಡೆದರೆ, ಬೇರೆ ಅವಕಾಶಗಳು ಸಿಗುತ್ತವೆ. ಮಿಲಿಟರಿ ಹಾಗೂ ಅರೆಮಿಲಿಟರಿ ಪಡೆಗಳಲ್ಲಿ … Read more

ಅಗ್ನಿಪಥ ವಯೋಮಿತಿ 23 ಕ್ಕೆ ಏರಿಕೆ: ಜನರ ಅಗತ್ಯಗಳಿಗೆ ಸ್ಪಂದಿರುವ ಮೋದಿ ಸರ್ಕಾರ ಸಿಎಂ ಬೊಮ್ಮಾಯಿ

ಬೆಂಗಳೂರು, ಜೂನ್ 16: ಅಗ್ನಿಪಥ ಯೋಜನೆಯಡಿ ವಯೋಮಿತಿಯನ್ನು 21 ರಿಂದ 23 ಕ್ಕೆ ಏರಿಸುವ ಮೂಲಕ ಮೋದಿ ಸರ್ಕಾರವು ಜನರ ಅಗತ್ಯಗಳಿಗೆ ಸ್ಪಂದಿಸುವ ಸರ್ಕಾರ ಎಂದು ನಿರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ರಕ್ಷಣಾ ಪಡೆಗಳಿಗೆ ನೇಮಕಾತಿ ನಡೆದಿರಲಿಲ್ಲ. ಮೊದಲ ವರ್ಷದ ನೇಮಕಾತಿಯಲ್ಲಿ ವಯೋಮಿತಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೆಚ್ಚಿಸಿದ್ದಾರೆ. ಈ ನಿರ್ಧಾರದಿಂದ ದೊಡ್ಡ ಸಂಖ್ಯೆಯಲ್ಲಿ ಯುವ ಜನರಿಗೆ ಪ್ರಯೋಜನವಾಗಲಿದೆ. ತಾಯ್ನಾಡಿನ ಸೇವೆಯ ಪಥದಲ್ಲಿ ಯಶಸ್ವಿಯಾಗಿ ನಡೆದು ತಮ್ಮ ಉಜ್ವಲ ಭವಿಷ್ಯವನ್ನು … Read more

ಪಠ್ಯಪುಸ್ತಕ ಸಲಹೆಗೆ ಸರ್ಕಾರ ಮುಕ್ತವಾಗಿದೆ: ಸಿಎಂ ಬೊಮ್ಮಾಯಿ

ಸುದ್ದಿ360 ದಾವಣಗೆರೆ ಜೂ.16: ಈ ಹಿಂದಿನ ಪಠ್ಯಪುಸ್ತಕದ ಬಗ್ಗೆಯೂ ಆಕ್ಷೇಪಣೆಗಳಿವೆ.  ಯಾವುದನ್ನು ಸರಿಪಡಿಸಬೇಕು ಎಂಬುದರ ಬಗ್ಗೆ ಸಲಹೆಗೆ ಮುಕ್ತ ಅವಕಾಶವಿದೆ. ರಾಜ್ಯದ ಜನರ ಸಲಹೆ ಸೂಚನೆ ಪಡೆದು ವೆಬ್ ಸೈಟ್ ನಲ್ಲಿ ಹಾಕಲಾಗುವುದು. ಒಟ್ಟಾರೆ ಎಲ್ಲಾ ಆಕ್ಷೇಪಣೆಗಳಿಗೆ ಸಲಹೆ ಪಡೆದ ನಂತರ ಪಠ್ಯ ಪರಿಷ್ಕರಣೆ ಅಂತಿಮ ರೂಪ ಪಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದಾವಣಗೆರೆಯ ಜಿಎಂಐಟಿ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಪ್ಪಳ್ಳಿಯಿಂದ ಬೆಂಗಳೂರಿಗೆ ಪ್ರಗತಿಪರರು ಪಾದಯಾತ್ರೆ ಮಾಡುತ್ತಿರುವ  ಕುರಿತ ಮಾಧ್ಯಮದವರ ಪ್ರಶ್ನೆಗೆ … Read more

ಜೂನ್ 16: ದಾವಣಗೆರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ದಾವಣಗೆರೆ, ಜೂನ್ 14: ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇವರು ಜೂನ್ 16 ರಂದು ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್ 16 ರ ಬೆಳಿಗ್ಗೆ 9,30ಕ್ಕೆ ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು 10,20 ಕ್ಕೆ ದಾವಣಗೆರೆ ಜಿ.ಎಂ.ಐ.ಟಿ.ಹೆಲಿಪ್ಯಾಡ್ ತಲುಪಲಿದ್ದಾರೆ. ಮಧ್ಯಾಹ್ನ 2.30 ರಿಂದ 4 ಗಂಟೆವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಜೆ 4 ಗಂಟೆಗೆ ಜಿ.ಎಂ.ಐ.ಟಿ ಹೆಲಿಪ್ಯಾಡ್ ನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

error: Content is protected !!