ಪಿಎಸ್ಐ ಅಕ್ರಮ ಪ್ರಕರಣ: ಎಡಿಜಿಪಿ ಅಮೃತ್ ಪೌಲ್ ಸಿಐಡಿ ಕಸ್ಟಡಿಗೆ

ಸುದ್ದಿ360 ಬೆಂಗಳೂರು ಜು.4: ಪಿಎಸ್ಐ ಅಕ್ರಮ ಪ್ರಕರಣದಲ್ಲಿ ಓ ಎಂಆರ್ ಶೀಟ್ ಗಳನ್ನು ತಿದ್ದಿರುವ ಆರೋಪ  ಎದುರಿಸುತ್ತಿರುವ ಎಡಿಜಿಪಿ ಅಮೃತ್ ಪೌಲ್ ರನ್ನು 10 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ, 1ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಪಿಎಸ್ಐ ಅಕ್ರಮ ಪ್ರಕರಣದಲ್ಲಿ ಅಮೃತ್ ಪೌಲ್ ರನ್ನು ನಾಲ್ಕು ದಿನಗಳ ಕಾಲ ವಿಚಾರಣೆಗೊಳಪಡಿಸಿದ್ದ ಸಿಐಡಿ ಅಧಿಕಾರಿಗಳು ಇಂದು ಅವರನ್ನು ಬಂಧಿಸಲಾಗಿತ್ತು.

ಗುಂಡಿಕ್ಕಿ ಎಂದವನ ಬಂಧಿಸಿ: ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಆಗ್ರಹ

ಸುದ್ದಿ360 ದಾವಣಗೆರೆ, ಜು.02:  ಇತ್ತೀಚೆಗೆ ಸುದ್ದಿ ವಾಹಿನಿಯೊಂದರ ಫೋನ್ ಇನ್ ಕಾರ್ಯಕ್ರಮವೊಂದರಲ್ಲಿ ಕರೆ ಮಾಡಿದ ವ್ಯಕ್ತಿ, ‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಬೇಕು’ ಎಂದು ಹೇಳಿಕೆ ನೀಡಿದ್ದಾನೆ. ಈತನನ್ನು ಕೂಡಲೆ ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಆಗ್ರಹಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಾವಣಗೆರೆಯ ವೀರಪ್ಪ ಎಂಬ ವ್ಯಕ್ತಿ ಈ ರೀತಿಯಾಗಿ ಮಾತನಾಡಿದ್ದು, ಒಂದು ಕೋಮಿನ ವಿರುದ್ಧ ಕೀಳಾಗಿ ಹೇಳಿಕೆ ನೀಡಿದ್ದಾನೆ. ಈ … Read more

ದೇಶದಲ್ಲಿ ಹೆಚ್ಚುತ್ತಿರುವ ಜಿಹಾದಿ ಮನಸ್ಥಿತಿ: ಕಾಂಗ್ರೆಸ್ಸಿಗರ ಮೌನವೇಕೆ ?

ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಪ್ರಶ್ನೆ ಸುದ್ದಿ360 ದಾವಣಗೆರೆ.ಜು.01: ಬಿಜೆಪಿ ಹೆಚ್ಚು ಹೆಚ್ಚು ಜನಪ್ರಿಯತೆ ಗಳಿಸುತ್ತಿರುವುದನ್ನು ಸಹಿಸದ ಕಾಂಗ್ರೆಸ್ ಅಗ್ನಿಪಥ್ ಯೋಜನೆ ವಿರೋಧಿಸಿ ಬೀದಿಗಿಳಿಯುತ್ತದೆ. ಆದರೆ ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ನುಗ್ಗಿ ಹಾಡ ಹಗಲೇ ಒಬ್ಬ ಸಾಮಾನ್ಯ ವ್ಯಕ್ತಿಯ ಕತ್ತು ಸೀಳಿ ಕೊಲೆ ಮಾಡಿದರೆ ಪ್ರತಿಭಟಿಸುವ ಗೋಜಿಗೆ ಹೋಗುವುದಿಲ್ಲ. ಇದು ಕಾಂಗ್ರೆಸಿಗರ ಅಲ್ಪಸಂಖ್ಯಾತ ತುಷ್ಟೀಕರಣಕ್ಕೆ ಸಾಕ್ಷಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜಸ್ಥಾನದ ಉದಯಪುರದಲ್ಲಿ ಜಿಹಾದಿ ಮನಸ್ಥಿತಿಯ ಕೆಲವರು … Read more

ಕನ್ನಯ್ಯಲಾಲ್ ಹತ್ಯೆ; ಹಂತಕರನ್ನು ಗುಂಡಿಕ್ಕಿ ಕೊಲ್ಲಬೇಕು: ಶ್ರೀನಿವಾಸ್ ದಾಸಕರಿಯಪ್ಪ

ಸುದ್ದಿ360 ದಾವಣಗೆರೆ, ಜೂ.30: ರಾಜಸ್ತಾನದ ಉದಯಪುರದಲ್ಲಿ ಕನ್ನಯ್ಯ ಲಾಲ್ ಹೆಸರಿನ ವ್ಯಕ್ತಿಯನ್ನು ಕೊಂದು ಹಾಕಿದ ಹಂತಕರನ್ನು ಗುಂಡಿಟ್ಟಿ ಕೊಲ್ಲಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ ಹೇಳಿದ್ದಾರೆ. ನಗರದ ಜಯದೇವ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು. ರಾಜಸ್ತಾನದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಇಲ್ಲವೇ ಗುಂಡಿಟ್ಟು ಕೊಲ್ಲಬೇಕು. ತಪ್ಪಿದಲ್ಲಿ ದೇಶದಲ್ಲಿ ಹಿಂದೂಗಳ ಶಕ್ತಿ ಏನೆಂಬುದನ್ನು ತೋರಿಸಬೇಕಾಗುತ್ತದೆ ಎಂದು … Read more

ಡಿ.ಕೆ.ಸಹೋದರರ ಆಪ್ತ ಇಕ್ಬಾಲ್ ಹುಸೇನ್‌ಗೆ ಇಡಿ ನೋಟಿಸ್‍

ಸುದ್ದಿ360, ರಾಮನಗರ, ಜೂ.24: ಅಕ್ರಮ ಹಣ ವರ್ಗಾವಣೆ ಸಂಬಂಧ ’ಕಾಂಗ್ರೆಸ್ ಮುಖಂಡರೂ ಆದ ಡಿ.ಕೆ.ಸಹೋದರರ ಆಪ್ತ ಇಕ್ಬಾಲ್ ಹುಸೇನ್‌ಗೆ ಗುರುವಾರ ಸಂಜೆ ಇ-ಮೇಲ್‍ ಮೂಲಕ ಇಡಿ ನೋಟಿಸ್ ನೀಡಿದೆ. ಸೋಮವಾರ ಖುದ್ದು ಕಚೇರಿಗೆ ಆಗಮಿಸುವಂತೆ ಸೂಚನೆ ನೀಡಿದೆ. ನೋಟಿಸ್ ಪಡೆದ ಕೂಡಲೇ ದೆಹಲಿಗೆ ಹೋಗಿರುವ ಇಕ್ಬಾಲ್ ಹಿರಿಯ ನಾಯಕರ ಬೇಟಿಯ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ. ಇರುವ ಮೂರು ದಿನದಲ್ಲಿ ಎಲ್ಲ ದಾಖಲೆಗಳ ಸಂಗ್ರಹ ಕಷ್ಟವಾಗುತ್ತದೆ ಎಂದು ಮೇಲ್ ಕಳುಹಿಸಿ ದೆಹಲಿಗೆ ಬಂದಿದ್ದೆನೆ. ವಿಮಾನ ಇಳಿಯುವ ಮುನ್ನವೇ ಮೇಲ್ ರಿಜಿಕ್ಟ್ … Read more

ಮಹಾರಾಷ್ಟ್ರದಲ್ಲಿ ಶಿವಸೇನೆ ಬಂಡಾಯ ನಾಯಕ ಏಕನಾಥ ಶಿಂಧೆಗೆ ಬಿಜೆಪಿ ಬೆಂ’ಬಲ’

ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಸರಕಾರ ಉರುಳುವುದು ನಿಶ್ಚಿತ ಸುದ್ದಿ 360 ಮುಂಬೈ, ಜೂ.24: ಕಳೆದ ಎರಡು ದಿನಗಳಿಂದ ರಾಜಕೀಯ ಚದುರಂಗದಾಟಕ್ಕೆ ಸಾಕ್ಷಿಯಾಗಿರುವ ಮಹಾರಾಷ್ಟ್ರದಲ್ಲಿ ಬಂಡಾಯದ ಬಾವುಟ ಹಾರಿಸುವ ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ನಿರೀಕ್ಷೆಯಂತೆ ಬಿಜೆಪಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಪರಿಣಾಮ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಅಘಾಡಿ ಮೈತ್ರಿ ಸರಕಾರ ಪತನವಾಗುವುದು ಖಚಿತ ಎನ್ನಲಾಗಿದೆ. ಈಗಾಗಲೇ ತಮ್ಮ ತೆಕ್ಕೆಯಲ್ಲಿ 42 ಬಂಡಾಯ ಶಾಸಕರನ್ನು ಹಿಡಿದಿಟ್ಟುಕೊಂಡಿರುವ ಏಕನಾಥ್ ಶಿಂಧೆ ಬಣ ನಂಬರ್ ಗೇಮ್ನಲ್ಲಿ … Read more

ಮಹಾನಗರ ಪಾಲಿಕೆ ಆಡಳಿತ ವೈಫಲ್ಯ : ಸೂಪರ್‍ ಸೀಡ್‍ಗೆ ಪ್ರತಿಪಕ್ಷ ಕಾಂಗ್ರೆಸ್‍ ಒತ್ತಾಯ

ಸುದ್ದಿ360 ದಾವಣಗೆರೆ, ಜೂ.20:  ಮಹಾನಗರ ಪಾಲಿಕೆಯ ನೂತನ ಮೇಯರ್ ಅಧಿಕಾರ ವಹಿಸಿಕೊಂಡು 4 ತಿಂಗಳು ಕಳೆದರೂ ಇದುವರೆಗೂ ಸಾಮಾನ್ಯ ಸಭೆ ನಡೆಸಿಲ್ಲ. ವಾರ್ಡ್‍ಗಳ ಸಮಸ್ಯೆಗಳ ಚರ್ಚೆಗೆ ಅವಕಾಶ ಕಲ್ಪಿಸಿಲ್ಲ. ಮಹಾನಗರ ಪಾಲಿಕೆ ಆರ್ಥಿಕವಾಗಿ ದಿವಾಳಿಯಾಗಿದೆ ಅಲ್ಲದೆ, ಟೆಂಡರ್ ಕರೆಯಲು ಕೂಡ ಪಾಲಿಕೆ ಬಳಿ ಹಣವಿಲ್ಲ. ಹೀಗಾಗಿ ಮಹಾನಗರ ಪಾಲಿಕೆಯನ್ನು ಸೂಪರ್‌ಸೀಡ್ ಮಾಡಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ಆಗ್ರಹಿಸಿದೆ. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಪಾಲಿಕೆ ಪ್ರತಿಪಕ್ಷ ನಾಯಕ ಜಿ.ಎಸ್. ಮಂಜುನಾಥ್ ಗಡಿಗುಡಾಳ್, ಮಹಾನಗರ ಪಾಲಿಕೆಗಳಲ್ಲಿ … Read more

ಅಗ್ನಿಪಥ ವಿರೋಧದ ಹಿಂದೆ ರಾಜಕೀಯ ಕೈವಾಡ: ಗೋವಿಂದ ಕಾರಜೋಳ

ಸುದ್ದಿ360 ಬಾಗಲಕೋಟೆ, ಜೂ.19: ಅಗ್ನಿಪಥ ಯೋಜನೆಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯ ಹಿಂದೆ ರಾಜಕೀಯ ಕೈವಾಡ ಇರುವುದು ಕಾಣಿಸುತ್ತಿದೆ. ರಾಜ್ಯ ಮತ್ತು ದೇಶದಲ್ಲಿ ಈ ಹಿಂಸಾಚಾರದ ಹಿಂದೆ ಯಾರಿದ್ದಾರೆಂದು ಗೊತ್ತಿದೆ. ಈ ಬಗ್ಗೆ ತನಿಖೆಯಾಗಲಿದೆ. ತಪ್ಪಿತಸ್ಥರಿಗೆ ಖಂಡಿತವಾಗಿ ಶಿಕ್ಷೆಯಾಗುತ್ತೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆಯ ಗಲಗಲಿ ಗ್ರಾಮದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಅಗ್ನಿಪಥ ಯೋಜನೆ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರ ಸ್ಪಷ್ಡವಾಗಿ ಹೇಳಿವೆ. ಅಗ್ನಿಪಥ ಯೋಜನೆಯಿಂದ ಅನ್ಯಾಯವಾಗುವಂತಹ ಪ್ರಶ್ನೆಯೇ ಇಲ್ಲ. ಇದರಿಂದ … Read more

ಕಾಂಗ್ರೆಸ್ನಿಂದ ಬೆಂಕಿಗೆ ತುಪ್ಪ ಹಾಕುವ ಕೆಲಸ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು, ಜೂ.19:  ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸವನ್ನು ಇಡೀ ದೇಶದಲ್ಲಿ ಮಾಡುತ್ತಿದೆ ಎನ್ನುವುದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ,   ಅಗ್ನಿಪಥ್ ಒಂದು ವಿನೂತನ ಕಾರ್ಯಕ್ರಮ. ಇಡೀ ಜಗತ್ತಿನಲ್ಲಿ ಯುವಕರಿಗೆ ಮಿಲಿಟರಿ ತರಬೇತಿ ನೀಡುವ ವ್ಯವಸ್ಥೆ ಇದೆ. 17 – 21 ವರ್ಷ ಉತ್ತಮ ತರಬೇತಿ ಪಡೆದರೆ, ಬೇರೆ ಅವಕಾಶಗಳು ಸಿಗುತ್ತವೆ. ಮಿಲಿಟರಿ ಹಾಗೂ ಅರೆಮಿಲಿಟರಿ ಪಡೆಗಳಲ್ಲಿ … Read more

ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿ ಸರ್ಕಾರದಿಂದ ದ್ವೇಶದ ರಾಜಕಾರಣ

ಕಾಂಗ್ರೆಸ್‌ನಿಂದ ಪ್ರತಿಭಟನೆ – ರಾಷ್ಟ್ರಪತಿಗಳಿಗೆ ಮನವಿ ಸುದ್ದಿ360 ದಾವಣಗೆರೆ, ಜೂ.17: ಕೇಂದ್ರ ಬಿಜೆಪಿ ಸರಕಾರ ಇ.ಡಿ.ಯನ್ನು ದುರ್ಭಳಕೆ ಮಾಡಿಕೊಳ್ಳುತ್ತಿದ್ದು, ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಸೂಕ್ತ ಮಾರ್ಗದರ್ಶನ ನೀಡುವಂತೆ ಆಗ್ರಹಿಸಿ, ಕೆಪಿಸಿಸಿ ಜಿಲ್ಲಾ ಘಟಕ ಹಾಗೂ ಪಕ್ಷದ ಎಲ್ಲಾ ವಿಭಾಗಗಳ ವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿತು. ನಂತರ ಪ್ರತಿಭಟನಾಕಾರರು ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ನಗರದ ಕೆಇಬಿ ವೃತ್ತದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಅಲ್ಲಿಂದ … Read more

error: Content is protected !!