ದಾವಣಗೆರೆ ಜಿಲ್ಲಾ ಕಾಂಗ್ರೆಸ್‍ನಿಂದ ಕಾರ್ಗಿಲ್ ವಿಜಯ ದಿವಸ್ – ಕೇಂದ್ರ ಸರ್ಕಾರ ಸೈನಿಕರನ್ನು ಗೌರವದಿಂದ ಕಾಣಲಿ: ದಿನೇಶ್ ಕೆ.ಶೆಟ್ಟಿ

ಸುದ್ದಿ360, ದಾವಣಗೆರೆ ಜು.26: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಕಾರ್ಗಿಲ್ ವಿಜಯ ದಿವಸ್‍ನ್ನು ದಾವಣಗೆರೆ ನಗರದ ಹರಳೆಣ್ಣೆ ಕೊಟ್ರಬಸಪ್ಪ (ರಾಂ ಅಂಡ್ ಕೋ) ವೃತ್ತದಲ್ಲಿ ಮಂಗಳವಾರ ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಮಾತನಾಡಿ ಇಡೀ ದೇಶ ಇಂದು ಕಾರ್ಗಿಲ್ ವಿಜಯ ದಿವಸವನ್ನು ಆಚರಿಸುತ್ತಿದೆ. ದೇಶಕ್ಕಾಗಿ ಹುತಾತ್ಮರಾದ ಎಲ್ಲ ಭಾರತೀಯ ಸೈನಿಕರಿಗೂ … Read more

ರಾಹುಲ್ ಬಂಧನಕ್ಕೆ ಯುವ ಕಾಂಗ್ರೆಸ್ ಖಂಡನೆ

ಸುದ್ದಿ360 ದಾವಣಗೆರೆ, ಜು.26: ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಪೊಲೀಸರು ಬಂಧಿಸಿರುವ ಕ್ರಮದ ವಿರುದ್ಧ ನಗರದ ಜಯದೇವ ವೃತ್ತದಲ್ಲಿ ಮಂಗಳವಾರ ಸಂಜೆ ಯುವ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತನಾಡಿದ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಎಚ್.ಜೆ. ಮೈನುದ್ದೀನ್, ಬೆಲೆ ಏರಿಕೆ, ಇಡಿ ದುರ್ಬಳಕೆ ಖಂಡಿಸಿ ಸಂಸತ್ ಭವನದ ಎದುರು ಮೌನ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿಯವರನ್ನು ದೆಹಲಿ ಪೊಲೀಸರು ಬಂಧಿಸುವ ಮೂಲಕ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡಿದ್ದಾರೆ. ಇಂದು … Read more

‘ಶೌಚಾಲಯ ಸೌಲಭ್ಯವಿಲ್ಲದೆ ಉದ್ಘಾಟನೆಗೊಂಡಿರುವ ಸ್ಮಾರ್ಟ್ ಸಿಟಿ ಬಸ್ ಸ್ಟ್ಯಾಂಡ್ – ನಾಚಿಕೆ ಯಾರಿಗೆ ಆಗಬೇಕು?’ ಕೆ.ಎಲ್.ಹರೀಶ್ ಬಸಾಪುರ

ಶೌಚಾಲಯವಿದ್ದರೂ ಬಳಕೆಗೆ ಲಭ್ಯವಿಲ್ಲ ಹಳೆ ದಾವಣಗೆರೆಯಲ್ಲಿ ತಿಂಗಳ ಹಿಂದೆಯೇ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಬಸ್ ಸ್ಟ್ಯಾಂಡ್ ನಿರ್ಮಾಣಗೊಂಡು, ಸಾರ್ವಜನಿಕ  ಉಪಯೋಗಕ್ಕೆ ನೀಡಲಾಗಿದೆ. ಇದಾಗಿ ತಿಂಗಳು ಕಳೆಯುತ್ತಾ ಬಂದರು ಶೌಚಾಲಯ ಮಾತ್ರ ಬೀಗ ತೆರೆದಿಲ್ಲ. ಸ್ಮಾರ್ಟ್ ಸಿಟಿ ಕಾಮಗಾರಿಗಳು ಎಂದರೆ ಕಳಪೆ ಕಾಮಗಾರಿಗಳು ಹಾಗೂ ಮೂಲಭೂತ ಸೌಕರ್ಯ ಒದಗಿಸದೆ ಕಾಮಗಾರಿ ಪೂರ್ಣಗೊಳ್ಳದೆ ಉದ್ಘಾಟನೆಗೊಂಡ ಯೋಜನೆಗಳು ಎಂಬ ಸಾರ್ವಜನಿಕ ಆಕ್ರೋಶಕ್ಕೆ ಒಳಗಾಗಿರುವ ಯೋಜನೆಗಳಲ್ಲಿ ಯೋಜನಯೇ ಹಳೆ ದಾವಣಗೆರೆಯಲ್ಲಿ ನಿರ್ಮಾಣಗೊಂಡಿರುವ ನೂತನ ಬಸ್ ಸ್ಟ್ಯಾಂಡ್ ಕೂಡ ಸೇರಿದೆ ಎಂದು ಕೆ.ಎಲ್ … Read more

ಜನರ ಒತ್ತಾಸೆಗೆ ಮಣಿದು ವಿಜಯೇಂದ್ರ ಸ್ಪರ್ಧೆ ಘೋಷಿಸಿದ್ದೇನೆ – ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ: ಬಿಎಸ್ ವೈ

ಸುದ್ದಿ360, ಬೆಂಗಳೂರು, ಜು.24: ಜನರ ಒತ್ತಾಸೆಗೆ ಮಣಿದು ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ಬಿ.ವೈ ವಿಜಯೇಂದ್ರಗೆ ಬಿಟ್ಟುಕೊಡುವುದಾಗಿ ಶಿಕಾರಿಪುರದಲ್ಲಿ ನಡೆದ ಸಮಾರಂಭವೊಂದರಲ್ಲಿ ಹೇಳಿದ್ದೇನೆ. ಆದರೆ ಈ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಬಿ.ಎಸ್.ವೈ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಶನಿವಾರ ಮಾತನಾಡಿ, ಶುಕ್ರವಾರ ನಾನು ನೀಡಿದ ಹೇಳಿಕೆ ಗೊಂದಲಕ್ಕೆ ಎಡೆ ಮಾಡಿದೆ, ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ವಿಜಯೇಂದ್ರ ಸ್ಪರ್ಧೇ ಮಾಡುತ್ತಾರೆ ಎಂದು ಹೇಳಿರುವುದಾಗಿ ತಿಳಿಸಿದರು. ಇದು ನನ್ನ ಸಲಹೆ ಮಾತ್ರವಾಗಿದ್ದು ಬಜೆಪಿ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದರು. ಹಳೇ … Read more

ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಹುಮಾತದೊಂದಿಗೆ ಗೆಲುವು ನಿಶ್ಚಿತ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜು.18: ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಆಯ್ಕೆಯನ್ನು ಹಲವಾರು ಪಕ್ಷಗಳು ಬೆಂಬಲಿಸಿರುವುದರಿಂದ 2/3  ಬಹುಮತದೊಂದಿಗೆ ಗೆಲ್ಲುವುದು ನಿಶ್ಚಿತ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಷ್ಟ್ರಪತಿ ಚುನಾವಣೆಯಲ್ಲಿ ಇದ್ದ ಹಿಂದಿನ  ದಾಖಲೆಯನ್ನ ಮುರಿಯುವ ಎಲ್ಲಾ ಸಾಧ್ಯತೆಗಳಿವೆ.  ದ್ರೌಪದಿ ಮುರ್ಮು ಅವರು ಮಾನವೀಯ ಗುಣಗಳನ್ನು ಹೊಂದಿದ್ದು, ಅತ್ಯುನ್ನತ ಸ್ಥಾನ ಕ್ಕೇರುವುದು ಭಾರತದ ಪ್ರಜಾಪ್ರಭುತ್ವ ಹಾಗೂ ಭವಿಷ್ಯಕ್ಕೆ ಒಳ್ಳೆಯದಾಗಲಿದೆ ಎಂಬ ನಿರೀಕ್ಷೆ ನಮ್ಮದು ಎಂದರು. ದೇಶಾದ್ಯಂತ ರಾಷ್ಟ್ರಪತಿ … Read more

ಕಾಂಗ್ರೆಸ್ ಪಕ್ಷದಲ್ಲಿ ಪಕ್ಷ ಪೂಜೆಗೆ ಆದ್ಯತೆ, ವ್ಯಕ್ತಿ ಪೂಜೆಗಲ್ಲ: ಎಸ್ ಎಸ್ ಮಲ್ಲಿಕಾರ್ಜುನ್

ಸಿದ್ದರಾಮಯ್ಯ ಅಮೃತಮಹೋತ್ಸವ ಅಭಿಮಾನಿಗಳಿಂದಲೇ ರೂಪುಗೊಂಡಿರುವ ಕಾರ್ಯಕ್ರಮ ಸುದ್ದಿ360, ದಾವಣಗೆರೆ, ಜು.18: ಸಿದ್ದರಾಮಯ್ಯ ಅವರು ನಮ್ಮ ಬಲವಂತಕ್ಕೆ ಮಣಿದು ಅಮೃತ ಮಹೋತ್ಸವಕ್ಕೆ ಒಪ್ಪಿ  ಸಮ್ಮತಿ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಪಕ್ಷ ಪೂಜೆಗೆ ಆದ್ಯತೆ ಇದೆಯೇ ಹೊರತು ವ್ಯಕ್ತಿ ಪೂಜೆಗಲ್ಲ. ಹೀಗಾಗಿ ಸಿದ್ಧರಾಮಯ್ಯ ಅವರ ಅಮೃತ ಮಹೋತ್ಸವ ವ್ಯಕ್ತಿ ಪೂಜೆಯಲ್ಲ ಎಂದು  ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದರು. ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಾರಂಭದ ವೇದಿಕೆ ನಿರ್ಮಾಣ ಕಾರ್ಯಕ್ರಮಕ್ಕೆ ಸೋಮವಾರ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಜತೆ … Read more

ಬಿಜೆಪಿಯವರಿಗೆ ಅಭಿವೃದ್ಧಿಯ ಇಚ್ಛಾಶಕ್ತಿ ಇಲ್ಲ – ಎಸ್ ಎಸ್ ಮಲ್ಲಿಕಾರ್ಜುನ್ ಆರೋಪ

ಸುದ್ದಿ360, ದಾವಣಗೆರೆ, ಜು.18:  ಯಾವುದೇ ಕಾಮಗಾರಿಗಳು ಪರಿಪೂರ್ಣಗೊಳ್ಳಲು ಕ್ರಮಬದ್ಧವಾದ ಯೋಜನೆ ಇರಬೇಕು. ಆದರೆ ಬಿಜೆಪಿ ಜನಪ್ರತಿನಿಗಳಿಗೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಇಚ್ಛಾಶಕ್ತಿ ಇಲ್ಲ ಎಂದು ನಗರದಲ್ಲಿನ ಕಾಮಗಾರಿಗಳ ಬಗ್ಗೆ ಎಸ್ ಎಸ್ ಮಲ್ಲಿಕಾರ್ಜುನ್  ಆರೋಪಿಸಿದರು. ನಗರದ ಹೊರವಲಯದ ಪೂನ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿನ ಜಮೀನಿನಲ್ಲಿ ಸೋಮವಾರ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಾರಂಭದ ವೇದಿಕೆ ನಿರ್ಮಾಣ ಕಾರ್ಯಕ್ರಮಕ್ಕೆ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ಕುಂದವಾಡ ಕೆರೆ ಏರಿ ಅಭಿವೃದ್ಧಿ ಕುಂಟುತ್ತಾ ಸಾಗಿದ್ದು, ನಗರದೆಲ್ಲೆಡೆ ಕಳಪೆ ಕಾಮಗಾರಿಗಳು … Read more

ಭ್ರಷ್ಟ ರಾಜಕಾರಣ ಕೊನೆಗಾಣಿಸಲು ಜನಚೈತನ್ಯ ಯಾತ್ರೆ : ಕೆ ಆರ್ ಎಸ್ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ

ಸುದ್ದಿ360, ದಾವಣಗೆರೆ, ಜು.16: ಕೆಆರ್ ಎಸ್ ಪಕ್ಷದಿಂದ ಎರಡನೇ ಹಂತದ ಜನ ಚೈತನ್ಯ ಯಾತ್ರೆ ಜು.15 ರಂದು ಚಿತ್ರದುರ್ಗ ಜಿಲ್ಲೆಯಿಂದ ಆರಂಭವಾಗಿದ್ದು, ಜುಲೈ ಅಂತ್ಯದವರೆಗೆ 16ಜಿಲ್ಲೆಗಳಲ್ಲಿ ಸಂಚರಿಸಿ, ಭ್ರಷ್ಟ, ಹಾಗೂ ಪರಮನೀಚ ರಾಜಕಾರಣ ಕೊನೆಗಾಣಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಪಕ್ಷ ಹಮ್ಮಿಕೊಂಡಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜನಚೈತನ್ಯ ಯಾತ್ರೆಯ ಅಂಗವಾಗಿ ಇಂದು ದಾವಣಗೆರೆಯಲ್ಲಿ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಯಾತ್ರೆಯುದ್ದಕ್ಕೂ ಬಹಿರಂಗ ಸಭೆಗಳು, ಪತ್ರಿಕಾಗೋಷ್ಠಿಗಳು, … Read more

ದುರಾಡಳಿತ ತಡೆಯಲು ವಾಚ್ಮನ್ ಗಳಾಗಲು ಸಿದ್ಧ: ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್

ಆರೋಪಗಳಿಗೆ ಸಮರ್ಪಕ ಉತ್ತರ ನೀಡದ ಆಡಳಿತ ಪಕ್ಷ : ಎ. ನಾಗರಾಜ್ ಸುದ್ದಿ360, ದಾವಣಗೆರೆ, ಜು.16:  ವಾರ್ಡ್ ನ ಸಮಸ್ಯೆಗಳಿಗೆ ಧ್ವನಿಯಾಗಿ ನಿಲ್ಲುವುದು ತಪ್ಪಾ? ನಮ್ಮನ್ನು ಆರಿಸಿ ಕಳಿಸಿದವರ ಒಳಿತಿಗಾಗಿ ನಾವು ವಾಚ್ ಮನ್ ಆಗಿಯೂ ಕೆಲಸ ಮಾಡುತ್ತೇವೆ. ಭ್ರಾಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿಗೆ ತಡೆಯೊಡ್ಡಲು ನಾವು ಕಾವಲುಗಾರರೇ ಹೌದು ಎಂದು ಮಹಾನಗರ ಪಾಲಿಕೆ ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್ ಗುಡುಗಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಪಕ್ಷದವರು ಮಹಾನಗರ ಪಾಲಿಕೆ ಆಡಳಿತದ ವಿರುದ್ಧ ಮಾಡಿರುವ ಆರೋಪಗಳು ಸುಳ್ಳು … Read more

ಕಾಂಗ್ರೆಸ್ನಿಂದ ಕ್ಷುಲ್ಲಕ ರಾಜಕಾರಣ: ಮೇಯರ್ ಜಯಮ್ಮ ಗೋಪಿನಾಯ್ಕ ಹೇಳಿಕೆ

ಸುದ್ದಿ360, ದಾವಣಗೆರೆ, ಜು.14: ಕಾಂಗ್ರೆಸ್ ನವರು ಕ್ಷುಲ್ಲಕ ರಾಜಕಾರಣದಲ್ಲಿ ತಲ್ಲೀನರಾಗಿದ್ದಾರೆ. ನಾನು ಕಛೇರಿಗೆ ಬರುತ್ತೇನೊ ಇಲ್ಲವೊ ಎಂಬುದನ್ನು ತಿಳಿಯಲು ಸಿಸಿ ಕ್ಯಾಮೆರಾ ಫೂಟೇಜ್ ಪರಿಶೀಲಿಸಲಿ, ಇಲ್ಲವೇ ನಾನು ಕಛೇರಿಗೆ ಬಂದು ಹೋಗುವುದನ್ನು ಗಮನಿಸಲು ಯಾರಾನ್ನಾದರು ನೇಮಕ ಮಾಡಿಕೊಳ್ಳಲಿ ಎಂದು ವಿರೋಧ ಪಕ್ಷದವರ ಆರೋಪಕ್ಕೆ ಮಹನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ ಕಟುವಾಗಿ ಪ್ರತಿಕ್ರಿಯಿಸಿದರು. ಪಾಲಿಕೆ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಪ್ರತಿಪಕ್ಷ ನಾಯಕ ಹಾಗೂ ಸದಸ್ಯರ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಸಾಮಾನ್ಯ ಕುಟುಂಬದ ದಲಿತ ಮಹಿಳೆಯೊಬ್ಬಳು ಮೇಯರ್ ಸ್ಥಾನ … Read more

error: Content is protected !!