ಬೈಕ್‍ ಕಳ್ಳನ ಬಂಧನ 5 ಬೈಕ್ ವಶ

bike-thief-arrested-5-bikes-seized

ಸುದ್ದಿ360ದಾವಣಗೆರೆ: ಬೈಕ್ ಕಳವು ಮಾಡುತ್ತಿದ್ದ ಆರೋಪಿಯನ್ನು ನಗರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ನಗರದ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣದಿಂದ ಈ ಕೃತ್ಯ ಬೆಳಕಿಗೆ ಬಂದಿದ್ದು, ನಗರದ ರಾಮ ಮಂದಿರ ಪಾರ್ಕ್ ಬಳಿ ಜು.7ರಂದು ನಿಲ್ಲಿಸಿದ್ದ ಬೈಕ್ ಕಳುವಾದ ಬಗ್ಗೆ ಪವನ್ ಎಂಬುವರು ಬಡಾವಣೆ ಠಾಣೆಗೆ ದೂರು ನೀಡಿದ್ದರು. ನಗರವಾಸಿ ಶಾಹೀದ್(21)ಬಂಧಿತ ಆರೋಪಿಯಾಗಿದ್ದು, ಈತನಿಂದ 1.30 ಲಕ್ಷ ರೂ. ಮೌಲ್ಯದ ಬೈಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನುಮಾನಸ್ಪದವಾಗಿ ಓಡಾಡುತ್ತಿದ್ದ ಈತನನ್ನು ತಡೆದು ವಿಚಾರಿಸಿದಾಗ ಕಳ್ಳತನ ಒಪ್ಪಿಕೊಂಡಿದ್ದಾನೆ. … Read more

ಅಪಘಾತ – ವೈದ್ಯ ವಿದ್ಯಾರ್ಥಿ ಸಾವು – ಆರ್ಯುರ್ವೇದ ವಿದ್ಯಾರ್ಥಿಗಳ ಪ್ರತಿಭಟನೆ

davangere-ayurvedic-student-accident

ಸುದ್ದಿ360 ದಾವಣಗೆರೆ (Davangere) : ನಗರದ ಪಿ.ಬಿ. ರಸ್ತೆಯ ಬಾತಿ ಕೆರೆ ಬಳಿ ಇರುವ ಆಯುರ್ವೇದ ಕಾಲೇಜು (ayurvedic college) ಸಮೀಪ  ರಸ್ತೆ ದಾಟುತ್ತಿದ್ದ ಆಯುರ್ವೇದ ವಿದ್ಯಾರ್ಥಿಗೆ  ಹಾಲಿನ ಡೇರಿ ವಾಹನ ಡಿಕ್ಕಿ ಹೊಡೆದ ಪರಿಣಾಮ  ಗಂಭೀರವಾಗಿ ಗಾಯಗೊಂಡಿದ್ದ ಆಯುರ್ವೇದ ವಿದ್ಯಾರ್ಥಿ (ayurvedic student) ಆಸ್ಪತ್ರೆಗೆ (hospital) ಸಾಗಿಸುತ್ತಿದ್ದ ಮಾರ್ಗಮಧ್ಯೆ ಮೃತ ಪಟ್ಟಿರುವ (passed away) ಘಟನೆ ಬುಧವಾರ ಸಂಜೆ ನಡೆದಿದೆ. ಮೃತ ವಿದ್ಯಾರ್ಥಿ ಡಾ. ಮನೋಜ್‍ ಕುಮಾರ್(20) ದಾವಣಗೆರೆಯ ಎಚ್‌ಕೆಆರ್ ನಗರ ನಿವಾಸಿ ಶಿವಕುಮಾರಸ್ವಾಮಿಯವರ ಪುತ್ರ. … Read more

ಕಳವು ಪ್ರಕರಣ: 24 ಗಂಟೆಯೊಳಗೆ ಆರೋಪಿತರ ಬಂಧನ – 86,030 ರೂ ನಗದು ಜಫ್ತಿ

theft-case-arrest-accused-within-day-davangere

ಸುದ್ದಿ360 ದಾವಣಗೆರೆ: ಕಳೆದ ರಾತ್ರಿ (11-07-2023) 12-45 ಗಂಟೆ ಸುಮಾರಿಗೆ ನಗರದ ಮಂಡಕ್ಕಿ ಭಟ್ಟಿ 01 ನೇ ಕ್ರಾಸ್ ಬಾಲಾಜಿ ಟಾಕೀಸ್ ಹತ್ತಿರದ ಅನ್ವರ್ ಸಾಬ್ ರವರ ಅವಲಕ್ಕಿ ಮಿಲ್‌ನ ಬೀಗವನ್ನು ಹೊಡೆದು ಮೀಲ್‌ನಲ್ಲಿದ್ದ 86,030/- ರೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋದ  ಬಗ್ಗೆ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 24 ಗಂಟೆಯೊಳಗೆ ಪೊಲೀಸರು ಕಳುವಾದ ನಗದು ಸಮೇತ ಆರೋಪಿತರನ್ನು ಬಂಧಿಸಿದ್ದಾರೆ. ಪ್ರಕರಣದ ಪತ್ತೆಗಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಆರ್.ಬಿ . ಬಸರಗಿ … Read more

ಕಾರದ ಪುಡಿ ಎರಚಿ ದರೋಡೆ ಮಾಡಿದ್ದ ಆರೋಪಿತರ ಬಂಧನ 24 ಲಕ್ಷದ ಮಾಲು ವಶ

ಸುದ್ದಿ360 ದಾವಣಗೆರೆ, ಏ.14:  ಆಟೋ ಗ್ಲಾಸ್ ಹೊಡೆದು ಕಣ್ಣಿಗೆ ಕಾರದ ಪುಡಿ ಎರಚಿ 20 ಲಕ್ಷ ನಗದು ಹಣ ಇದ್ದ ಬ್ಯಾಗನ್ನು ದೋಚಿಕೊಂಡು ಹೋಗಿದ್ದ ಆರೋಪಿತರನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದು, ಆರೋಪಿತರಿಂದ ನಗದು ಸೇರಿದಂತೆ 24 ಲಕ್ಷದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಕುರಿತಂತೆ ಮಾ.14ರಂದು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಭದ್ರಾವತಿಯ ದೇವರಾಜ್ ರವರು ಅಡಿಕೆ ಖೇಣಿ ಪಡೆದುಕೊಂಡಿದ್ದ ರೈತರಿಗೆ ಹಣವನ್ನು ಕೊಡಲು 20 ಲಕ್ಷ ನಗದು ಹಣವನ್ನು ತನ್ನ ಸ್ನೇಹಿತನಿಂದ ಪಡೆದುಕೊಂಡು ಎನ್.ಹೆಚ್-48 ಸರ್ವೀಸ್ … Read more

ಕೊಲೆ ಆರೋಪಿಗಳಿಗೆ ನೆರವು: ಪತ್ರಕರ್ತ ಮೆಹಬೂಬ್ ಮುನವಳ್ಳಿ ಬಂಧನ

ಸುದ್ದಿ360 ದಾವಣಗೆರೆ ಮಾ.18 : ಶಿವಮೊಗ್ಗದ ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಪ್ರಕರಣದೊಂದಿಗೆ ತಳಕು ಹಾಕಿಕೊಂಡಿರುವ ಚೀಲೂರು ಬಳಿ ಬುಧವಾರ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಿಗೆ ನೆರವಾಗಿರುವ ಆರೋಪದಲ್ಲಿ ಧಾರವಾಡದ ಪತ್ರಕರ್ತರೊಬ್ಬರನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ ಖಾಸಗಿ ಸುದ್ದಿವಾಹಿನಿಯ ವರದಿಗಾರ ಮೆಹಬೂಬ್ ಮುನವಳ್ಳಿಯನ್ನು ನ್ಯಾಮತಿ ಠಣೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಹಂದಿ ಅಣ್ಣಿ ಕೊಲೆ ಪ್ರಕರಣದ ಇಬ್ಬರು  ಆರೋಪಿಗಳ ಮೇಲೆ ಬುಧವಾರ ಚೀಲೂರು ಬಳಿ ನಡೆದ ಘಟನೆಗೆ ಸಂಬಂಧಿಸಿದಂತೆ ನಾಲ್ವರು … Read more

ಹಂದಿ ಅಣ್ಣಿ ಕೊಲೆ ಪ್ರತಿಕಾರ – ಮುಖ್ಯಮಂತ್ರಿ ತವರಲ್ಲಿ ಆರೋಪಿಗಳು ಸರಂಡರ್

ಸುದ್ದಿ360 ಮಾ.16: ಜಿಲ್ಲೆಯ ನ್ಯಾಮತಿ ತಾಲೂಕು ಗೋವಿನಾಕೋವಿ  ಗ್ರಾಮದ ಹೊನ್ನಾಳಿ ಶಿವಮೊಗ್ಗ ರಸ್ತೆಯಲ್ಲಿ ನಿನ್ನೆ ಬುಧವಾರ ನಡೆದ  ರೌಡಿಶೀಟರ್‍ನ ಬರ್ಬರ ಹತ್ಯೆ ಶಿವಮೊಗ್ಗದಲ್ಲಿ ಈ ಹಿಂದೆ ಹತ್ಯೆಗೊಳಗಾಗಿದ್ದ ಹಂದಿ ಅಣ್ಣಿ ಪ್ರಕರಣದ ಪ್ರತಿಕಾರ ಎಂದು ಹೇಳಲಾಗುತ್ತಿದ್ದು, ಕೊಲೆ ಆರೋಪಿಗಳು ಹಾವೇರಿ ಜಿಲ್ಲೆ ಶಿಗ್ಗಾಂವ್ ಪೊಲೀಸರಿಗೆ ಶರಣಾಗಿದ್ದಾರೆ. ಹರಿಹರ ತಾಲೂಕು ಬಾನೊಳ್ಳಿ ಗ್ರಾಮದ ಮಧು ಮತ್ತು ಆಂಜನೇಯ ಹಂದಿ ಅಣ್ಣಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ನ್ಯಾಯಾಲಯಕ್ಕೆ ಹಾಜರಾಗಿ ವಾಪಸ್ ತಮ್ಮ ಗ್ರಾಮಕ್ಕೆ ತೆರಳುವ ವೇಳೆ ಈ ಬರ್ಬರ … Read more

ಹಳೇ ವೈಷಮ್ಯ: ವ್ಯಕ್ತಿಕೊಲೆ

ಸುದ್ದಿ360 ದಾವಣಗೆರೆ.ಫೆ.28: ಇಲ್ಲಿನ ಕಬ್ಬೂರು ಬಸಪ್ಪ‌ನಗರದಲ್ಲಿ ಇಬ್ಬರ ನಡುವಿನ ಜಗಳ ಒಬ್ಬನ ಕೊಲೆಯಾಗುವ ಮೂಲಕ ಅಂತ್ಯ ಕಂಡಿದೆ. ಪ್ರಶಾಂತ (29) ಕೊಲೆಗೀಡಾದ ವ್ಯಕ್ತಿಯಾಗಿದ್ದು, ಇವರ ನಡುವಿನ ಜಗಳಕ್ಕೆ ಹಳೇ ವೈಷಮ್ಯ ಕಾರಣ ಎನ್ನಲಾಗಿದೆ. ಜಗಳದ ವೇಳೆ ಕಟ್ಟಿಗೆಯಿಂದ ದಾಳಿ ಮಾಡಿದ ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ಪ್ರಶಾಂತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಬ್ಬೂರು ಬಸಪ್ಪ ನಗರದ ಎಲವಟ್ಟಿ ರೈಸ್ ಮಿಲ್ ಬಳಿ ಪ್ರಶಾಂತ್ ಶವ ಪತ್ತೆ‌ಯಾಗಿದೆ. ಆರ್ ಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ‌ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ  ನಗರ … Read more

ಮೂರು ಹೆಣ್ಣು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಕುಡಿದು ಪ್ರಾಣ ಬಿಟ್ಟ ತಾಯಿ

ಸುದ್ದಿ360, ಬಾಗಲಕೋಟೆ ಜ.11: ಮೂರು ಹೆಣ್ಣು ಮಕ್ಕಳಿಗೆ ವಿಷವುಣಿಸಿದ ತಾಯಿ ಕೊನೆಗೆ ತಾನೂ ವಿಷ ಕುಡಿದು ಪ್ರಾಣ ಬಿಟ್ಟಿರುವ ಧಾರುಣ ಘಟನೆ ಬಾಗಲಕೋಟೆ ತಾಲ್ಲೂಕಿನ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ. ರೇಖಾ ಬಗಲಿ(28) ತಾಯಿ, ಮಕ್ಕಳಾದ ಸನ್ನಿಧಿ(೮), ಸಮೃದ್ದಿ(5), ಶ್ರೀನಿಧಿ(3) ಹೀಗೆ ಮೃತಪಟ್ಟವರಾಗಿದ್ದಾರೆ. ರೇಖಾ ಇತ್ತೀಚೆಗೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಳು ಎಂದು ಹೇಳಲಾಗಿದ್ದು, ಮೂರು ಜನ ಹೆಣ್ಣು ಮಕ್ಕಳಿದ್ದ ಕಾರಣ ಮಕ್ಕಳ‌ ವಿದ್ಯಾಭ್ಯಾಸ , ಮದುವೆ ಬಗ್ಗೆ  ಚಿಂತಿಸಿ‌ ಮಾನಸಿಕವಾಗಿ ಬಳಲಿದ್ದಳು ಎಂಬ ಮಾಹಿತಿ ಕೇಳಿಬರುತ್ತಿದೆ. ಜ್ಯೂಸ್ ಬಾಟಲ್‌ನಲ್ಲಿ … Read more

ಇಬ್ಬರು ಮಕ್ಕಳ ಜೊತೆಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ

ಸುದ್ದಿ360 ಕಲಬುರಗಿ ಜ.6: ಜೀವನದಲ್ಲಿ ಜಿಗುಪ್ಸೆಗೊಂಡು ಇಬ್ಬರು ಮಕ್ಕಳ ಜೊತೆಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಆಳಂದ ಪಟ್ಟಣದ ಬಸ್ ಡಿಪೋ ಬಳಿ ನಡೆದ ಘಟನೆಯಲ್ಲಿ ಸಿದ್ದು ಮಹಾಮಲ್ಲಪ್ಪಾ (35), ಹಾಗೂ ಮಕ್ಕಳಾದ ಶ್ರೇಯಾ (11), ಮನೀಶ್ (12) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇಬ್ಬರು ಮಕ್ಕಳ ಮೃತದೇಹವನ್ನು ಶುಕ್ರವಾರ ಬೆಳಿಗ್ಗೆ ಅಗ್ನಿಶಾಮಕ ದಳದ ಅಧಿಕಾರಿಗಳು ಪತ್ತೆ ಹಚ್ಚಿದ್ದು,ಮೃತ ಮಕ್ಕಳ ತಂದೆಯ ಶವಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ. ಮೃತಪಟ್ಟ ತಂದೆ … Read more

error: Content is protected !!