ಕರ್ನಾಟಕ ಸ್ಟೇಟ್ ಓಪನ್ ರ್ಯಾಪಿಡ್ ಚೆಸ್ ಟೂರ್ನಮೆಂಟ್- ಸೌಜನ್ಯಗೆ ದ್ವಿತೀಯ ಸ್ಥಾನ

ಸುದ್ದಿ360, ದಾವಣಗೆರೆ ಸೆ.12: ಇಂದು ಕಣ್ಣೂರು ಸ್ಪೋರ್ಟ್ಸ್ ಅಕಾಡೆಮಿ ರಾಣೇಬೆನ್ನೂರ ನಲ್ಲಿ ಏರ್ಪಡಿಸಲಾಗಿದ್ಧ ಕರ್ನಾಟಕ ಸ್ಟೇಟ್ ಓಪನ್ ರ್ಯಾಪಿಡ್ ಚೆಸ್ ಟೂರ್ನಮೆಂಟ್ ಪಂದ್ಯಾವಳಿಯಲ್ಲಿ ಸೌಜನ್ಯ ವೈ ಎಮ್ ದ್ವಿತೀಯ ಸ್ಥಾನ  ಪಡೆದಿದ್ದಾರೆ. 12 ವರ್ಷದ ಒಳಗಿನ ವಯೋಮಿತಿಯಲ್ಲಿ ದ್ವಿತೀಯ ಸ್ಥಾನಕ್ಕೆ ಭಾಜನರಾಗಿರುವ  ದಾವಣಗೆರೆಯ ವೈ ಎಮ್. ಸೌಜನ್ಯಗೆ ಕರ್ನಾಟಕ ಜಿಲ್ಲಾ ಚೆಸ್ ಅಸೋಸಿಯೇಷನ್ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ ಅಭಿನಂಸಿದ್ದಾರೆ.

ನಾರಾಯಣ ಗುರುವಿಗೆ ಸಿಎಂ ಅಪಮಾನ – ಶೀಘ್ರದಲ್ಲೇ ಬೆಂಗಳೂರು ಪಾದಯಾತ್ರೆ

ಸುದ್ದಿ360 ದಾವಣಗೆರೆ, ಸೆ.11: ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಸರಕಾರದಿಂದ ನಿರಂತರವಾಗಿ ಅಪಮಾನ ಆಗುತ್ತಿದೆ. ಇದನ್ನು ಖಂಡಿಸಿ, ಮುಂದಿನ 10 ದಿನಗಳ ಒಳಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸುವ ಚಿಂತನೆ ಇದೆ ಎಂದು ಚಿತ್ತಾಪುರ ತಾಲೂಕು ಕರದಾಳದ ಬ್ರಹ್ಮಶ್ರೀ ನಾರಾಯಣ ಗುರುಗಳ ಶಕ್ತಿ ಪೀಠದ ಡಾ. ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳಿದರು. ಜಿಲ್ಲಾ ವರದಿಗಾರರ ಕೂಟದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಸಬೇಕಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತಿಯನ್ನು ಮಂಗಳೂರಿಗೆ ಸ್ಥಳಾಂತರಿಸುವ ಮೂಲಕ … Read more

ಆಧ್ಯಾತ್ಮದೆಡೆ ಸಾಗಲು ಯೋಗವೇ ಮಾರ್ಗ: ಡಾ. ವಿದ್ಯಾ ಹಿರೇಮಠ

ನೋಬೆಲ್ ವರ್ಲ್ಡ್ ರೆಕಾರ್ಡ್ ಯೋಗಾಸನ ಪ್ರಶಸ್ತಿ ಪ್ರದಾನ ಸಮಾರಂಭ ಸುದ್ದಿ360 ದಾವಣಗೆರೆ, ಸೆ.10: ವ್ಯಕ್ತಿಯು ಮಾನಸಿಕ, ಸಾಮಾಜಿಕ ಹಾಗೂ ಆಧ್ಯಾತ್ಮಿಕ ಕ್ಷೇಮವನ್ನು ಪಡೆಯಲು ಯೋಗಾಭ್ಯಾಸ ಸೂಕ್ತ ಸಾಧನವಾಗಿದೆ ಎಂದು ಮಂಗಳೂರಿನ ಯೆನಾಪೋಯಾ ಪ್ರಕೃತಿ ಚಿಕಿತ್ಸಾ ಯೋಗ ಕಾಲೇಜಿನ ಉಪನ್ಯಾಸಕಿ ಡಾ. ವಿದ್ಯಾ ಹಿರೇಮಠ ಅಭಿಪ್ರಾಯಪಟ್ಟರು. ನಗರದ ಅರುಣ ಚಿತ್ರಮಂದಿರ ಬಳಿ ಇರುವ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಸಮುದಾಯ ಭವನದಲ್ಲಿ ಶನಿವಾರ ಸಪ್ತರಿಷಿ ಯೋಗಾಸನ ಸ್ಪೋರ್ಟ್ಸ್ ಅಕಾಡೆಮಿ ಹಮ್ಮಿಕೊಂಡಿದ್ದ ನೋಬೆಲ್ ವರ್ಲ್ಡ್ ರೆಕಾರ್ಡ್ ಯೋಗಾಸನ ಪ್ರಶಸ್ತಿ … Read more

ಸಿದ್ಧರಾಮೋತ್ಸವ ಬಳಿಕ ಬೆಣ್ಣೆನಗರಿಯಲ್ಲಿ ಮತ್ತೊಂದು ಬೃಹತ್ ಸಮಾವೇಶ

ಎಸ್‌ಎಸ್‌ಎಂ 55  ಅದ್ದೂರಿ ಕಾರ್ಯಕ್ರಮಕ್ಕೆ ಭೂಮಿಪೂಜೆ ಸುದ್ದಿ360 ದಾವಣಗೆರೆ, ಸೆ.09: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನರವರ 55ನೇ ಜನ್ಮದಿನಾಚರಣೆ ಇದೇ ತಿಂಗಳ 22 ರಂದು ನಡೆಯಲಿದ್ದು, ಜನ್ಮದಿನಾಚರಣೆ ಅಂಗವಾಗಿ ನಗರದ ಎಸ್‌ಎಸ್ ಲೇಔಟ್ ಬಿ ಬ್ಲಾಕ್‌ನಲ್ಲಿರುವ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಷನ್ (ಎಂಬಿಎ ಕಾಲೇಜು) ಮೈದಾನದಲ್ಲಿ ಶುಕ್ರವಾರ ಎಸ್‌ಎಸ್‌ಎಂ 55ನೇ ಜನ್ಮದಿನ ಸಮಾರಂಭದ ವೇದಿಕೆ ನಿರ್ಮಾಣಕ್ಕೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು. ಎಸ್‌ಎಸ್‌ಎಂ ಅಭಿಮಾನಿ ಬಳಗ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಬೆಣ್ಣೆನಗರಿಯಲ್ಲಿ ಯಶಸ್ವಿಯಾಗಿ ಮತ್ತು ಅದ್ದೂರಿಯಾಗಿ … Read more

4ನೇ ದಿನಕ್ಕೆ ಕಾಲಿಟ್ಟ ಸಿ ಮತ್ತು ಡಿ ಗ್ರೂಪ್ ಹೊರಗುತ್ತಿಗೆ ನೌಕರರ ಮುಷ್ಕರ – ಜಿಲ್ಲಾಧಿಕಾರಿಗಳಿಗೆ ಮನವಿ

ಸುದ್ದಿ360 ದಾವಣಗೆರೆ, ಸೆ.09: ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ಸಿ ಮತ್ತು ಡಿ ಗ್ರೂಪ್ ಹೊರಗುತ್ತಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಎಐಯುಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಸಿದರು. ನಗರದ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಯುಬಿಡಿಟಿ ಕಾಲೇಜಿನಿಂದ ಕಾಲ್ನಡಿಗೆಯಲ್ಲಿ ಹೊರಟ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿಗಳ ಕಚೇರಿ ತಲುಪಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ತಮ್ಮ ಬೇಡಿಕೆಗಳ ಈಡೆರಿಸುವಂತೆ ಘೋಷಣೆಗಳನ್ನು ಕೂಗಿದರು. ಕಾಲೇಜಿನಲ್ಲಿ … Read more

ಹೊರ ರಾಜ್ಯಕ್ಕೆ ಟ್ರ್ಯಾಕ್ಟರ್ ಬಿಡಿ ಭಾಗಗಳ ಅಕ್ರಮ ಮಾರಾಟ – ತಡೆದ ದಾವಣಗೆರೆ ಪೊಲೀಸರು

ಸುದ್ದಿ360 ದಾವಣಗೆರೆ, ಸೆ.07: ಯಾವುದೇ ದಾಖಲೆ ಹೊಂದಿರದೇ ಆರ್‌ಟಿಒ ದಿಂದ ಪರವಾನಿಗೆ ಪಡೆಯದೇ ದಾವಣಗೆರೆಯಿಂದ ಪಂಜಾಬ್‌ಗೆ ಅಕ್ರಮವಾಗಿ ಟ್ರಾಕ್ಟರ್ ಬಿಡಿ ಭಾಗಗಳನ್ನು ಮಾರಾಟವಾಗುತ್ತಿದ್ದುದನ್ನು ಜಿಲ್ಲಾ ಪೊಲೀಸರು ಪತ್ತೆಹಚ್ಚಿ ವಿಚಾರಣೆ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ಕಛೇರಿಯ ಡಿಸಿಆರ್‌ಬಿ ಘಟಕದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಬಿ. ಎಸ್. ಬಸವರಾಜ್ ಮತ್ತು ಅಧಿಕಾರಿ, ಸಿಬ್ಬಂದಿಗಳು ದಾವಣಗೆರೆ ನಗರದ ರೈತರ ಸಂಘದ ಕಾಂಪೌಂಡ್, ಬಿಲಾಲ್ ಕಾಂಪೌಂಡ್ ಬಳಿ ಇರುವ ಗ್ಯಾರೇಜುಗಳನ್ನು ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿ ಹಳೇಯ ಟ್ರಾಕ್ಟರ್‌ಗಳನ್ನು … Read more

ಆ್ಯಂಥೆ ಪರೀಕ್ಷೆ ನೋಂದಣಿಗೆ ಚಾಲನೆ – ಇಬ್ಬರಿಗೆ ನಾಸಾಗೆ ಭೇಟಿ ನೀಡುವ ಅವಕಾಶ !

ಸುದ್ದಿ360 ದಾವಣಗೆರೆ, ಸೆ. 06: ನಗರದ ಅಕ್ಕಮಹಾದೇವಿ ರಸ್ತೆಯ ಎವಿಕೆ ಕಾಲೇಜು ಎದುರಿರುವ ಆಕಾಶ್ ಬೈಜೂಸ್ ಶಾಖೆಯಲ್ಲಿ ಮಂಗಳವಾರ ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಪರೀಕ್ಷೆ-2022ರ ದಿನಾಂಕಗಳನ್ನು ಘೋಷಿಸಿ, ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆಗೆ ಇಂದು ಚಾಲನೆ ನೀಡಲಾಯಿತು. ಆಕಾಶ್ ಬೈಜೂಸ್ ಸಂಸ್ಥೆ ಉಪ ನಿರ್ದೇಶಕ ಸುಧೀರ್ ಕುಮಾರ್ ಮಾತನಾಡಿ, ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಎಕ್ಸಾಮ್ (ಆ್ಯಂಥೆ) ರಾಷ್ಟ್ರಮಟ್ಟದ ಪ್ರತಿಭಾನ್ವೇಷಣೆ ಪರೀಕ್ಷೆಯಾಗಿದೆ. ಇದು ಆನ್‌ಲೈನ್ ಮತ್ತು ಆಫ್‌ಲೈನ್ ಮಾದರಿಯಲ್ಲಿ ನಡೆಯಲಿದ್ದು, ನ.5ರಿಂದ ನ.13ರವರೆಗೆ ಬೆಳಗ್ಗೆ 10ರಿಂದ ಸಂಜೆ … Read more

ವೈದ್ಯಕೀಯ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ

ಸುದ್ದಿ360 ಶಿವಮೊಗ್ಗ, ಸೆ. 06: 2022-23ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣಕ್ಕಾಗಿ ನೀಟ್ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದ ಮಾಜಿ ಸೈನಿಕರು ಮತ್ತು ಮಾಜಿ ಸೈನಿಕರ ಅವಲಂಬಿತರ ಮಕ್ಕಳು ಕೇಂದ್ರೀಯ ಸೈನಿಕ ಮಂಡಳಿ ಮುಖಾಂತರ ವಿತರಿಸಲಾಗುವ ಸೀಟುಗಳನ್ನು ಪಡೆಯಲಿಚ್ಚಿಸುವವರು, ನೀಟ್ ಅರ್ಹತಾ ಪರೀಕ್ಷೆಯ ಫಲಿತಾಂಶದ 20 ದಿನಗಳೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರಿಂದ ಮಾಜಿ ಸೈನಿಕ ಅರ್ಹತಾ ಪ್ರಮಾಣ ಪತ್ರವನ್ನು ಪಡೆದು, ಇಲಾಖೆಯ ನಿರ್ದೇಶನಾಲಯದಿಂದ ಮೇಲು ರುಜು ಪಡೆದ ನಂತರ … Read more

ಮಳೆ ಯಾವ ಪಕ್ಷವನ್ನೂ ನೋಡಿ ಬರೋಲ್ಲ – ಪ್ರವಾಹದ ವಿಚಾರದಲ್ಲಿ ರಾಜಕೀಯ ಬೇಡ: ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು, ಸೆ.06: ಮಳೆ ಪ್ರವಾಹದ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮಳೆ, ಪ್ರವಾಹದ ವಿಷಯದಲ್ಲಿ ರಾಜಕೀಯವಾಗುತ್ತಿರುವುದು ದುರ್ದೈವದ ಸಂಗತಿ. ಮಳೆ ತಂದಿರುವ ಸಂಕಷ್ಟದ ಸಂದರ್ಭದಲ್ಲಿ ಎಲ್ಲರೂ ಯುದ್ಧೋಪಾದಿಯಲ್ಲಿ  ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಮಳೆ ಯಾವ ಪಕ್ಷವನ್ನೂ ನೋಡಿ ಬರುವುದಿಲ್ಲ. ಇಡೀ ರಾಜ್ಯದಲ್ಲಿ ಎಲ್ಲ ಕೆರೆಗಳೂ ತುಂಬಿದ್ದು, ದಾಖಲೆಯ ಮಳೆಯಾಗಿದೆ. ಚಿಕ್ಕಬಳ್ಳಾಪುರ ಹಾಗೂ ದೊಡ್ಡಬಳ್ಳಾಪುರದಲ್ಲಿ ಹೆಚ್ಚು ಮಳೆಯಾಗಿದೆ. ಬೆಂಗಳೂರಿನಲ್ಲಿ ಕೆರೆಗಳೆಲ್ಲಾ ತುಂಬಿ ಹರಿಯುತ್ತಿದೆ. ಜಲಪ್ರವಾಹದ … Read more

ಬೆಂಗಳೂರಿನ ಮಳೆ ಅವಘಡಕ್ಕೆ ಎಲ್ಲ ಪಕ್ಷದವರೂ ಪಾಲುದಾರರೇ . . . ದಾವಣಗೆರೆಯಲ್ಲಿ ಬಿ.ಸಿ. ಪಾಟೀಲ್ ಹೇಳಿಕೆ

ಸುದ್ದಿ360 ದಾವಣಗೆರೆ, ಸೆ. 06: ಬೆಂಗಳೂರಿನಲ್ಲಿ ಆಗಿರುವ ಮಳೆ ಅವಘಡಕ್ಕೆ ಯಾರನ್ನು ದೂಷಿಸುವುದು ಸರಿಯಲ್ಲ.  ಅವರು ಇವರೆನ್ನದೆ ಎಲ್ಲರೂ ಪ್ರಾಕೃತಿಕ ವಿಕೋಪಕ್ಕೆ ಕಾರಣರಾಗಿದ್ದಾರೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ಹೇಳಿದರು. ದಾವಣಗೆರೆಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರಿನಲ್ಲಿ ಆಗಿರುವ ಮಳೆ ಅವಘಡಕ್ಕೆ ಯಾವುದೇ ಪಕ್ಷವನ್ನು ದೂಷಿಸುವಂತಹದ್ದಲ್ಲ. ಕೆಲವು ಸಂದರ್ಭಗಳಲ್ಲಿ ಸರಿಯಾದ ರೀತಿಯಲ್ಲಿ ಕಾಲುವೆ ವ್ಯವಸ್ಥೆಯನ್ನು ಮಾಡಿರದೇ ಇರುವುದು. ಟೌನ್ ಪ್ಲಾನಿಂಗ್ ಸಂದರ್ಭದಲ್ಲಿ ಬೇಕಾಬಿಟ್ಟಿ ಒಪ್ಪಿಗೆ ಕೊಟ್ಟಿರುವುದು ಸೇರಿದಂತೆ. ಬೆಂಗಳೂರು ಸಂಪೂರ್ಣ … Read more

error: Content is protected !!