ಬಿಜೆಪಿಯವರಿಗೆ ಅಭಿವೃದ್ಧಿಯ ಇಚ್ಛಾಶಕ್ತಿ ಇಲ್ಲ – ಎಸ್ ಎಸ್ ಮಲ್ಲಿಕಾರ್ಜುನ್ ಆರೋಪ

ಸುದ್ದಿ360, ದಾವಣಗೆರೆ, ಜು.18:  ಯಾವುದೇ ಕಾಮಗಾರಿಗಳು ಪರಿಪೂರ್ಣಗೊಳ್ಳಲು ಕ್ರಮಬದ್ಧವಾದ ಯೋಜನೆ ಇರಬೇಕು. ಆದರೆ ಬಿಜೆಪಿ ಜನಪ್ರತಿನಿಗಳಿಗೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಇಚ್ಛಾಶಕ್ತಿ ಇಲ್ಲ ಎಂದು ನಗರದಲ್ಲಿನ ಕಾಮಗಾರಿಗಳ ಬಗ್ಗೆ ಎಸ್ ಎಸ್ ಮಲ್ಲಿಕಾರ್ಜುನ್  ಆರೋಪಿಸಿದರು. ನಗರದ ಹೊರವಲಯದ ಪೂನ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿನ ಜಮೀನಿನಲ್ಲಿ ಸೋಮವಾರ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಾರಂಭದ ವೇದಿಕೆ ನಿರ್ಮಾಣ ಕಾರ್ಯಕ್ರಮಕ್ಕೆ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ಕುಂದವಾಡ ಕೆರೆ ಏರಿ ಅಭಿವೃದ್ಧಿ ಕುಂಟುತ್ತಾ ಸಾಗಿದ್ದು, ನಗರದೆಲ್ಲೆಡೆ ಕಳಪೆ ಕಾಮಗಾರಿಗಳು … Read more

ದಾವಣಗೆರೆ ಜಿಲ್ಲೆಯಲ್ಲಿ ಕನ್ನಡ ತೇರಿನ ಯಶಸ್ವೀ ಸಂಚಾರ – ಚಿತ್ರದುರ್ಗಕ್ಕೆ ಮುಂದುವರೆದ ಸಂಚಾರ

ಸುದ್ದಿ360, ದಾವಣಗೆರೆ, ಜು.18: ಸ್ವರಾಜ್ಯಕ್ಕೆ 75 ರ ಸಂಭ್ರಮಕ್ಕಾಗಿ ಯುವಾಬ್ರಿಗೇಡ್ ಆಯೋಜಿಸಿರುವ ಕನ್ನಡ ತೇರು ಭಾನುವಾರದಂದು ದಾವಣಗೆರೆ ಜಿಲ್ಲೆಯ ವಿವಿಧ ಭಾಗದಲ್ಲಿ ಸಂಚರಿಸಿತು. ಹೆಬ್ಬಾಳು ಗ್ರಾಮದಲ್ಲಿ ಬೆಳಗ್ಗೆ ಶ್ರೀ ವಿರಕ್ತಮಠದ ಶ್ರೀ ಮಹಾಂತ ರುದ್ರೇಶ್ವರ ಮಹಾಸ್ವಾಮಿಗಳಿಂದ ಕನ್ನಡತೇರಿನ ಪೂಜೆ ಹಾಗೂ ಸ್ವಾಗತದೊಂದಿಗೆ ಪ್ರಾರಂಭವಾದ ಕನ್ನಡ ತೇರು, ಗ್ರಾಮದ ವಿದ್ಯಾರ್ಥಿಗಳು, ಯುವಕರು ಹಾಗೂ ಗ್ರಾಮಸ್ಥರಿಗೆ ಸ್ವಾತಂತ್ರ್ಯ ಹೋರಾಟಗಾರರ, ದೇಶಕ್ಕಾಗಿ ತಮ್ಮ ಜೀವನವನ್ನೇ  ಮುಡಿಪಾಗಿಟ್ಟ ವೀರಯೋಧರ ಕುರಿತಾದ ಸಾಕ್ಟ್ಯಚಿತ್ರವನ್ನು ಪ್ರದರ್ಶಿಸಲಾಯಿತು. ನಂತರ ಸಂತೇಬೆನ್ನೂರು ಗ್ರಾಮಸ್ಥರು ಕಹಳೆ ಸದ್ದಿನೊಂದಿಗೆ ಕನ್ನಡ ತೇರಿಗೆ … Read more

ದಾವಣಗೆರೆಯಲ್ಲಿ ಯುವಾಬ್ರಿಗೇಡ್ ನಿಂದ ಕನ್ನಡ ತೇರಿನ ಯಶಸ್ವಿ ನಗರ ಸಂಚಾರ

ಸುದ್ದಿ360, ದಾವಣಗೆರೆ, ಜು.16: ಸ್ವರಾಜ್ಯಕ್ಕೆ 75 ರ ಸಂಭ್ರಮಕ್ಕಾಗಿ ಯುವಾಬ್ರಿಗೇಡ್ ಆಯೋಜಿಸಿರುವ ಸ್ವರಾಜ್ಯಕ್ಕೆ ಮುಕ್ಕಾಲು ನೂರು ಸಂಭ್ರಮಕ್ಕೆ ಕನ್ನಡ ತೇರು ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಸಂಚಾಲಕ ಕೆ.ಎಸ್. ಗಜೇಂದ್ರ  ಶನಿವಾರ ಬೆಳಿಗ್ಗೆ 8 ಗಂಟೆಗೆ  ನಗರ ದೇವತೆ ಶ್ರೀ ದುರ್ಗಾಂಬಿಕ ದೇವಸ್ಥಾನ ಸನ್ನಿಧಿಯಲ್ಲಿ ತೇರಿಗೆ ಪೂಜೆ ಸಲ್ಲಿಸಿ ನಗರ ಸಂಚಾರಕ್ಕೆ ಚಾಲನೆ ನೀಡಿದರು. ತದನಂತರ ನಗರ ಮಟ್ಟದ ಶಾಲಾ ಕಾಲೇಜುಗಳಿಗೆ ತೆರಳಿ ಮಕ್ಕಳಿಗೆ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಮಾಹಿತಿ ನೀಡಿ,   ಎಲ್ಇಡಿ ಟಿವಿ ಮೂಲಕ 13 ನಿಮಿಷದ ಸಾಕ್ಷ್ಯ … Read more

ಮಳೆಯನ್ನು ಲೆಕ್ಕಿಸದೆ ಸಾಗಿದ ಡ್ರಗ್ಸ್ ವಿರುದ್ಧದ ಬೃಹತ್ ಕಾಲ್ನಡಿಗೆ ಜಾಥಾ

ಸುದ್ದಿ360 ದಾವಣಗೆರೆ, ಜು.16: ದೊಡ್ಡ ಸಾಮಾಜಿಕ ಪಿಡುಗಾಗಿ ಬೆಳೆಯುತ್ತ ಯುವಜನರನ್ನು ಬಲಿ ತೆಗೆದುಕೊಳ್ಳುತ್ತಿರುವ ಡ್ರಗ್ಸ್ ವಿರುದ್ಧ ಬೃಹತ್ ಕಾಲ್ನಡಿಗೆ ಜಾಥಾ ಬೆಣ್ಣೆನಗರಿಯಲ್ಲಿ ಶನಿವಾರ ಜರುಗಿತು. ವಿಜಯ ಕರ್ನಾಟಕ ದಿನಪತ್ರಿಕೆ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಮಾದಕ ವಸ್ತುಗಳ ವಿರುದ್ಧದ ಬೃಹತ್ ಕಾಲ್ನಡಿಗೆ ಜಾಥಾಕ್ಕೆ ನಗರದ  ಗುಂಡಿ ಚೌಲ್ಟ್ರಿ ವೃತ್ತದಲ್ಲಿ ಡಿಸಿ ಶಿವಾನಂದ ಕಾಪಾಶಿ ‘ಮಾದಕ ವಸ್ತುಗಳ ವಿರುದ್ಧದ ಹೋರಾಟಕ್ಕೆ ಪೊಲೀಸರಿಗೆ ಸಹಕಾರ ನೀಡಿ’ ಎಂಬ ಘೋಷವಾಕ್ಯದ ಪ್ಲೇ ಕಾರ್ಡ್‌ನ್ನು ವಿದ್ಯಾರ್ಥಿಗಳಿಗೆ ನೀಡುವ ಮೂಲಕ ಕಾಲ್ನಡಿಗೆ ಜಾಥಾಗೆ … Read more

ಸನ್ಮಾನ ಎನ್ನುವುದು ಶಿಕ್ಷಕರಿಗೆ  ದೊಡ್ಡ ಬಹುಮಾನ: ಮುಖ್ಯಶಿಕ್ಷಕ ದೇವೇಂದ್ರಪ್ಪ ಅಭಿಮತ

ಸುದ್ದಿ360, ದಾವಣಗೆರೆ, ಜು.16: ಶಿಕ್ಷಕನಾದವನಿಗೆ ಸಮಾಜ ಅವನ ಸೇವೆಯನ್ನು ಗುರುತಿಸಿ ಸನ್ಮಾನಿಸಿದರೆ ಅದರಷ್ಟು ಹೆಮ್ಮೆ ತರುವ ವಿಚಾರ ಇನ್ನೊಂದಿಲ್ಲ. ಸನ್ಮಾನ ಎಂಬುದು ಶಿಕ್ಷಕರ ಪಾಲಿಗೆ ದೊಡ್ಡ ಬಹುಮಾನದಂತೆ ಎಂದು ಶಾಮನೂರು ಸರ್ಕಾರಿ ಸಂಯುಕ್ತ ಪ್ರೌಢಶಾಲೆ ಮುಖ್ಯಶಿಕ್ಷಕ ದೇವೇಂದ್ರಪ್ಪ ಹೇಳಿದರು. ದಾವಣಗೆರೆ ಜಿಲ್ಲಾ ಸಂಸ್ಕಾರ ಭಾರತಿ ವತಿಯಿಂದ ಗುರುಪೂರ್ಣಿಮೆ ಅಂಗವಾಗಿ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಶಿಕ್ಷಕರನ್ನು ಗೌರವಿಸಿದರೆ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪ್ರೋತ್ಸಾಹದಾಯಕವಾಗುತ್ತದೆ. ತನ್ನನ್ನು ಪ್ರೀತಿಸುವ ವ್ಯಕ್ತಿಗಳಿದ್ದಾರೆ ಎಂದರೆ ಶಿಕ್ಷಕರಿಗೆ ನವಚೈತನ್ಯ ಮೂಡುತ್ತದೆ. … Read more

ಗೊಲ್ಲರಹಳ್ಳಿಯಲ್ಲಿ ಸಂಭ್ರಮದ ಅಜ್ಜಿ ಹಬ್ಬ

ಸುದ್ದಿ360, ದಾವಣಗೆರೆ, ಜು.16: ಜಿಲ್ಲೆಯಮಾಯಕೊಂಡ ವಿಧಾನಸಭಾ ಕ್ಷೇತ್ರದ ಅಣಜಿ ಬಳಿಯ ಗೊಲ್ಲರಹಳ್ಳಿ ಗ್ರಾಮದಲ್ಲಿ ಸಂಭ್ರಮದಿಂದ ಅಜ್ಜಿ ಹಬ್ಬವನ್ನು ಆಚರಿಸಲಾಯಿತು. ಎಂದಿನಂತೆ ಆಷಾಢ ಮಾಸದ ಕೊನೆಯ ಶುಕ್ರವಾರದಂದು ಈ ಹಬ್ಬ ಆಚರಿಸಲಾಯಿತು. ಅಜ್ಜಿಹಬ್ಬ ಬಂತೆಂದರೆ, ರೈತರ ಮೊಗದಲ್ಲಿ ಒಂದು ರೀತಿಯ ಮಂದಹಾಸ. ಈ ಹಬ್ಬ ಬರುವುದರೊಳಗೆ ರೈತರು ತಮ್ಮ ಬಿತ್ತನೆ ಕಾರ್ಯಗಳನ್ನು ಮುಗಿಸಿ, ಬೆಳೆಗಳು ಸಮೃದ್ಧವಾಗಿ ಬರಲೆಂದು ದೇವಿಯನ್ನು ಆರಾಧಿಸುತ್ತಾರೆ. ಮನೆಗಳಲ್ಲಿನ ದನ-ಕರುಗಳು ಚೆನ್ನಾಗಿರಲಿ, ರೈತರ ಆರೋಗ್ಯ ವೃದ್ಧಿಯಾಗಿ ಗ್ರಾಮದಲ್ಲಿ ಶಾಂತಿ ನೆಮ್ಮದಿ ನೆಲೆಸಲೆಂದು ಹಾಗೂ ಸಣ್ಣ ಮಕ್ಕಳ … Read more

ಭ್ರಷ್ಟ ರಾಜಕಾರಣ ಕೊನೆಗಾಣಿಸಲು ಜನಚೈತನ್ಯ ಯಾತ್ರೆ : ಕೆ ಆರ್ ಎಸ್ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ

ಸುದ್ದಿ360, ದಾವಣಗೆರೆ, ಜು.16: ಕೆಆರ್ ಎಸ್ ಪಕ್ಷದಿಂದ ಎರಡನೇ ಹಂತದ ಜನ ಚೈತನ್ಯ ಯಾತ್ರೆ ಜು.15 ರಂದು ಚಿತ್ರದುರ್ಗ ಜಿಲ್ಲೆಯಿಂದ ಆರಂಭವಾಗಿದ್ದು, ಜುಲೈ ಅಂತ್ಯದವರೆಗೆ 16ಜಿಲ್ಲೆಗಳಲ್ಲಿ ಸಂಚರಿಸಿ, ಭ್ರಷ್ಟ, ಹಾಗೂ ಪರಮನೀಚ ರಾಜಕಾರಣ ಕೊನೆಗಾಣಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಪಕ್ಷ ಹಮ್ಮಿಕೊಂಡಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜನಚೈತನ್ಯ ಯಾತ್ರೆಯ ಅಂಗವಾಗಿ ಇಂದು ದಾವಣಗೆರೆಯಲ್ಲಿ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಯಾತ್ರೆಯುದ್ದಕ್ಕೂ ಬಹಿರಂಗ ಸಭೆಗಳು, ಪತ್ರಿಕಾಗೋಷ್ಠಿಗಳು, … Read more

ದುರಾಡಳಿತ ತಡೆಯಲು ವಾಚ್ಮನ್ ಗಳಾಗಲು ಸಿದ್ಧ: ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್

ಆರೋಪಗಳಿಗೆ ಸಮರ್ಪಕ ಉತ್ತರ ನೀಡದ ಆಡಳಿತ ಪಕ್ಷ : ಎ. ನಾಗರಾಜ್ ಸುದ್ದಿ360, ದಾವಣಗೆರೆ, ಜು.16:  ವಾರ್ಡ್ ನ ಸಮಸ್ಯೆಗಳಿಗೆ ಧ್ವನಿಯಾಗಿ ನಿಲ್ಲುವುದು ತಪ್ಪಾ? ನಮ್ಮನ್ನು ಆರಿಸಿ ಕಳಿಸಿದವರ ಒಳಿತಿಗಾಗಿ ನಾವು ವಾಚ್ ಮನ್ ಆಗಿಯೂ ಕೆಲಸ ಮಾಡುತ್ತೇವೆ. ಭ್ರಾಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿಗೆ ತಡೆಯೊಡ್ಡಲು ನಾವು ಕಾವಲುಗಾರರೇ ಹೌದು ಎಂದು ಮಹಾನಗರ ಪಾಲಿಕೆ ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್ ಗುಡುಗಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಪಕ್ಷದವರು ಮಹಾನಗರ ಪಾಲಿಕೆ ಆಡಳಿತದ ವಿರುದ್ಧ ಮಾಡಿರುವ ಆರೋಪಗಳು ಸುಳ್ಳು … Read more

ಮಂಗಳ ಗ್ರಹದ ಮೇಲೆ ವಸಹತು ಸ್ಥಾಪಿಸುವುದರಲ್ಲಿ ಯಾವುದೇ ಅನುಮಾನವಿಲ್ಲ!

ಬಾಹ್ಯಾಕಾಶ: ಮಕ್ಕಳ ಜ್ಞಾನದಾಹಕ್ಕೆ ನೀರೆರೆದ ಇಸ್ರೋ ಮಾಜಿ ಮುಖ್ಯಸ್ಥ ಕೆ.ಎಸ್. ಕಿರಣ್ ಕುಮಾರ್ ಸುದ್ದಿ360, ದಾವಣಗೆರೆ, ಜು.15: ಪ್ರಸಕ್ತ ಬಾಹ್ಯಾಕಾಶ ವಲಯದಲ್ಲಿ ಭಾರತ 5 ಇಲ್ಲವೇ ಆರನೇ ಸ್ಥಾನದಲ್ಲಿದೆ. ಭಾರತ ಬಾಹ್ಯಾಕಾಶ ವಲಯದಲ್ಲಿ ಮೊದಲ ಸ್ಥಾನಕ್ಕೆ ಬಂದರೆ ಮಂಗಳನ ಮೇಲೆ ನೆಲೆ ಕಾಣುವಂತಹ ಸಾಧನೆ ಮಾಡಲು ಸಾಧ್ಯ. ಇದಕ್ಕಾಗಿ ಈಗಿನ ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ವಲಯದಲ್ಲಿ ಹೆಚ್ಚಾಗಿ ತೊಡಗಿಕೊಳ್ಳಬೇಕು ಎಂದು ಇಸ್ರೋ ಮಾಜಿ ಮುಖ್ಯಸ್ಥ ಕೆ.ಎಸ್. ಕಿರಣ್ ಕುಮಾರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಲಿಂ. ಶ್ರೀ … Read more

ಜಿಎಂಐಟಿಯಲ್ಲಿ ಜು. 16 ರಂದು “ಆನ್ ಕ್ಯಾಂಪಸ್ ಎಂಪ್ಲಾಯ್ಮೆಂಟ್ ಆಫರ್ಸ್ ಸೆಲೆಬ್ರೇಶನ್ ಡೇ”

ಗ್ಲೋಬಲ್ ಟ್ಯಾಲೆಂಟ್ ಟ್ರ್ಯಾಕ್ ಫೌಂಡೇಶನ್ ಪುಣೆ ಸಂಸ್ಥೆಯ ಸಹಯೋಗದಲ್ಲಿ ಸುದ್ದಿ360, ದಾವಣಗೆರೆ, ಜು.15: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಎಂಜಿನಿಯರಿಂಗ್ ಮತ್ತು ಎಂಬಿಎ ವಿದ್ಯಾರ್ಥಿಗಳು ವಿವಿಧ ಕಂಪನಿಗಳ ಸಂದರ್ಶನ ಪ್ರಕ್ರಿಯೆಯಲ್ಲಿ ಒಟ್ಟು 783 ಜಾಬ್ ಆಫರ್ಸ್ ಸ್ವೀಕರಿಸಿದ್ದಾರೆ. ಇದರಿಂದ ಮಧ್ಯ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಜಾಬ್ ಆಫರ್ಸ್ ಸ್ವೀಕರಿಸಿದ ಕಾಲೇಜು ಎಂಬ ಕೀರ್ತಿಗೆ ಪಾತ್ರವಾಗಿದೆ. ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಇದೇ ದಿನಾಂಕ 16ನೇ ಜುಲೈ ರಂದು  ಬೆಳಗ್ಗೆ 9.30 ಕ್ಕೆ ಕಾಲೇಜಿನ … Read more

error: Content is protected !!