ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಶಿವಾನಂದ ಕಾಪಶಿ

ಸುದ್ದಿ360, ದಾವಣಗೆರೆ ಜು.11: ದಾವಣಗೆರೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶಿವಾನಂದ ಕಾಪಶಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ತಕ್ಷಣದಿಂದಲೇ ಆದೇಶ ಜಾರಿಗೆ ಬರುವಂತೆ ದಾವಣಗೆರೆ ಜಿಲ್ಲಾಧಿಕಾರಿಯನ್ನಾಗಿ ಸರ್ಕಾರ ನೇಮಿಸಿದೆ. ಶಿವಾನಂದ ಕಾಪಶಿ ಅವರು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ‌ ವ್ಯವಸ್ಥಾಪಕ ನಿರ್ದೇಶಕರಾಗಿ ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ದಾವಣಗೆರೆ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಮಹಾಂತೇಶ್ ಬೀಳಗಿ ಅವರಿಗೆ ವರ್ಗಾವಣೆ ಆಗಿದ್ದು ಈವರೆಗೂ ಯಾವುದೇ ಸ್ಥಳ ತೋರಿಸಿಲ್ಲ. ಕರ್ನಾಟಕ ರಾಜ್ಯಪಾಲರ ಆದೇಶದ … Read more

ಮೀಸಲಾತಿ: ಜಿಲ್ಲಾಡಳಿತ ಕಚೇರಿ ಮುತ್ತಿಗೆಗೆ ಮುಂದಾದ ಎಸ್ಸಿ-ಎಸ್ಟಿ ಸಂಘಟನೆಗಳು

ಅರ್ಧಗಂಟೆಗೂ ಹೆಚ್ಚು ಕಾಲ ಜಿಲ್ಲಾಡಳಿತ ಭವನ ಮುಖ್ಯ ದ್ವಾರದ ಎದುರು ಪಿಬಿ ರಸ್ತೆ ತಡೆ ಸುದ್ದಿ360, ದಾವಣಗೆರೆ ಜು.11: ಕರ್ನಾಟಕ ಸ್ವಾಭಿಮಾನಿ ಎಸ್ಸಿ-ಎಸ್ಟಿ ಸಂಘಟನೆಗಳ ಒಕ್ಕೂಟ ಮತ್ತು ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಸದಸ್ಯರು, ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೆ ಆಗ್ರಹಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ಮುಂದಾದ ಘಟನೆ ಸೋಮವಾರ ನಗರದಲ್ಲಿ ಜರುಗಿತು. ಮುನ್ನೆಚ್ಚರಿಕೆ ಕ್ರಮವಾಗಿ ಪಿಬಿ ರಸ್ತೆಗೆ ಹೊಂದಿಕೊಂಡಿರುವ ಜಿಲ್ಲಾಡಳಿತ ಭವನದ ಮುಖ್ಯದ್ವಾರದ ಕಮಾನು ಬಳಿಯೇ ಪೊಲೀಸರು ಬ್ಯಾರಿಕೇಡ್ … Read more

ಪಿಂಚಣಿಗಾಗಿ ಹಿರಿಯ ಜೀವಗಳ ಪರದಾಟ – ಇದೇನು ಅಧಿಕಾರಿಗಳ ಜಾಣ ಕಿವುಡೇ ?

ಸುದ್ದಿ360, ದಾವಣಗೆರೆ ಜು.11: ಇದೇನು ನಮ್ಮ ಹಿರಿಯ ನಾಗರೀಕರು ಹೀಗೆ ತಮ್ಮ ಜೋಡು ಬಿಟ್ಟು ಸರತಿ ಸಾಲಿನಲ್ಲಿ ಕೂತಿದ್ದಾರೆ ಎಂದು ಆಶ್ಚರ್ಯ ಪಡುತ್ತಿದ್ದೀರಾ… ಇದು ದಾವಣಗೆರೆ  ನಗರದ ಗಡಿಯಾರ ಕಂಬದ ಬಳಿ ಇರುವ ಮುಖ್ಯ ಅಂಚೆ ಕಚೇರಿಯ ಮುಂಭಾಗ ಸೋಮವಾರ ಕಂಡು ಬಂದ ದೃಶ್ಯ. ಹೌದು ಸ್ವಾಮಿ ಇವರೆಲ್ಲಾ ಸಾಮಾಜಿಕ ಭದ್ರತಾ ಯೋಜನೆಯಡಿ ಪ್ರತಿ ತಿಂಗಳು ನೀಡುವ ಪಿಂಚಣಿ ಪಡೆಯಲು ಹೀಗೆ ಬೆಳಗ್ಗೆ 5 ಗಂಟೆಯಿಂದಲೇ ಕಚೇರಿ ಬಳಿ ಸಾಲು ಸಾಲಾಗಿ ನಿಂತು ಕೊನೆಗೆ ನಿಲಲು ಆಗದೆ … Read more

ಜು.17ಕ್ಕೆ ಕುರುಬರ ಸಂಸ್ಕೃತಿ ದರ್ಶನ ಮಾಲಿಕೆ – ಹದಿಮೂರು ಗ್ರಂಥಗಳ ಅನಾವರಣ

ಸುದ್ದಿ360, ದಾವಣಗೆರೆ ಜು.11: ಕುರುಬರ ಸಾಂಸ್ಕೃತಿಕ ಪರಿಷತ್ತು, ಬೆಂಗಳೂರು ಹಾಗೂ ದಾವಣಗೆರೆ ಜಿಲ್ಲಾ ಕುರುಬರ ಸಮಾಜದ ಎಲ್ಲಾ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಜು.17ರ ಸಂಜೆ 3 ಗಂಟೆಗೆ ಕುರುಬರ ಸಾಂಸ್ಕೃತಿಕ ದರ್ಶನ ಮಾಲಿಕೆ ಮತ್ತು ಹದಿಮೂರು ಗ್ರಂಥಗಳ ಅನಾವರಣ ಕಾರ್ಯಕ್ರಮ ದಾವಣಗೆರೆಯಲ್ಲಿ ಆಯೋಜಿಸಲಾಗಿದೆ ಎಂದು ಕರುಬರ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಎಚ್.ಎಂ. ರೇವಣ್ಣ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನಗರದ ವಿದ್ಯಾನಗರ ಮುಖ್ಯರಸ್ತೆಯಲ್ಲಿನ ಕುವೆಂಪು ಕನ್ನಡ ಭವನದಲ್ಲಿ ಪುರಾಣ, ಧರ್ಮ, ಕಲೆ … Read more

ಸಿದ್ಧರಾಮೋತ್ಸವ ಅಲ್ಲ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ: ಎಚ್. ಎಮ್. ರೇವಣ್ಣ

ಸುದ್ದಿ360, ದಾವಣಗೆರೆ ಜು.11: ಸಿದ್ಧರಾಮೋತ್ಸವ ಅಲ್ಲ ಇದು ಸಿದ್ಧರಾಮಯ್ಯರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ. ಅವರ ಜೀವನದಲ್ಲಿನ ಒಂದು ಸಂಭ್ರಮದ ಸನ್ನಿವೇಶ ಇದಾಗಿದೆ ಎಂದು ಕುರುಬರ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷರಾದ ಎಚ್. ಎಮ್. ರೇವಣ್ಣ ತಿಳಿಸಿದರು. ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ಧರಾಮಯ್ಯನವರು ತಮ್ಮ ರಾಜಕೀಯ ಜೀವನದಲ್ಲಿ ಕಳಂಕರವಹಿತವಾಗಿ ಉತ್ತಮ ಜೀವನ ನಡೆಸುವುದರ ಜೊತೆಗೆ, ಕಷ್ಟ-ಸುಖಗಳನ್ನು ಅನುಭವಿಸಿ, ರಾಜ್ಯದಲ್ಲಿ ಬಲಿಷ್ಟ ನಾಯಕನಾಗಿ ಬೆಳೆದು, ಐದು ವರ್ಷ ಉತ್ತಮ ಆಡಳಿತ ಕೊಟ್ಟಿದ್ದಾರೆ. ನೆಚ್ಚಿನ ನಾಯಕ 75 ವಸಂತಗಳನ್ನು ಕಳೆದಿರುವ … Read more

ಶರಣ ಸಂಸ್ಕೃತಿ: ವಿಶೇಷ ಪ್ರವಚನ ಸಮಾರೋಪ ಸಮಾರಂಭ (ಜು.11)

ಸುದ್ದಿ360, ದಾವಣಗೆರೆ, ಜು.10:  ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 65 ನೇ ಸ್ಮರಣೋತ್ಸವ, ಶರಣ ಸಂಸ್ಕೃತಿ ಉತ್ಸವ, ಶ್ರೀ ಮುರುಘೇಂದ್ರ ಶಿವಯೋಗಿಗಳವರ ಲಿಂಗೈಕ್ಯ ಶತಮಾನೋತ್ಸವ, ಡಾ. ಶಿವಮೂರ್ತಿ ಮುರುಘಾಶರಣರ ಶೂನ್ಯಪೀಠಾರೋಹಣದ ತೃತೀಯ ದಶಮಾನೋತ್ಸವದ ಅಂಗವಾಗಿ ನಗರದ ಶಿವಯೋಗಾಶ್ರಮದಲ್ಲಿ ಜು.7ರಿಂದ ಪ್ರಾರಂಭವಾದ ವಿಶೇಷ ಪ್ರವಚನ ಮಾಲೆ ಜು.11ರಂದು ಸಮಾರೋಪಗೊಳ್ಳಲಿದೆ. ವಿಶೇಷ ಪ್ರವಚನ ಸಮಾರೋಪ ಸಮಾರಂಭವು ಜು.11ರ ಸೋಮವಾರ ಸಂಜೆ 6-30 ಗಂಟೆಗೆ ಜರುಗಲಿದ್ದು, ಸಮಾರೋಪ ಸಮಾರಂಭದಲ್ಲಿ ಜನವಾಡ ಅಲ್ಲಮಪ್ರಭು ಆಶ್ರಮದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿಯವರು ವಿಶೇಷ ಪ್ರವಚನ ನೀಡಲಿದ್ದಾರೆ. … Read more

‘ನನ್ನ ಅಮ್ಮ ನಂಬರ್-1’ ಹೃದಯ ಮುಟ್ಟುವ ಟೈಟಲ್: ಲತೀಕಾ ದಿನೇಶ್ ಕೆ. ಶೆಟ್ಟಿ ಅವರ ಮನದ ಮಾತು

ಬೆಣ್ಣೆನಗರಿಯಲ್ಲಿ ಮನಮುಟ್ಟುವ  ವಿನೂತನ ರಿಯಾಲಿಟಿ ಶೋ ಸುದ್ದಿ360, ದಾವಣಗೆರೆ, ಜು.10:  ದಾವಣಗೆರೆಯಲ್ಲಿ ಪ್ರಥಮ ಬಾರಿಗೆ  ನಗರದ ಕಲಾ ಕಲ್ಪ ಆರ್ಟ್ ಅಕಾಡೆಮಿ ಹಾಗೂ ವಿ ಯೂನಿಯನ್ ಇವೆಂಟ್ ವತಿಯಿಂದ “ನನ್ನ ಅಮ್ಮ ನಂಬರ್ 1” ಎಂಬ ಮನಮುಟ್ಟುವ ರಿಯಾಲಿಟಿ ಶೋ  ಕಾರ್ಯಕ್ರಮ ಭಾನುವಾರ ಆಯೋಜಿಸಲಾಗಿತ್ತು. ನಗರದ ರಾಮ್ ಅಂಡ್ ಕೋ ಸರ್ಕಲ್ ಬಳಿ ಇರುವ ಸ್ವೆಟ್ ಪಾರ್ಕ್ ಜಿಮ್ ನಲ್ಲಿ ಆಯೋಜಿಸಲಾಗಿದ್ದ ಈ ವಿನೂತನ ಕಾರ್ಯಕ್ರಮವನ್ನು ನಗರದ ಪ್ರತಿಷ್ಟಿತ ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷರು, ಮಾಜಿ ನಗರಸಭೆ … Read more

ದಕ್ಷಿಣ ಕೇದಾರವಾಗಲಿದೆ ದೇವನಗರಿ ದಾವಣಗೆರೆ

ಸುದ್ದಿ360, ದಾವಣಗೆರೆ, ಜು.10:  ಉತ್ತರದಲ್ಲಿ ಕೇದಾರನಾಥನ ಸನ್ನಿದಾನ ಇರುವಂತೆ ದಕ್ಷಿಣದಲ್ಲೂ ಕೇದಾರನಾಥ ಮಠ ಮತ್ತು ಕೇದಾರ ಮಾದರಿಯ ಭವ್ಯ ಮಂದಿರ ನಿರ್ಮಾಣ ಮಾಡುವ ಇಚ್ಛೆಯಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಾರಂಭವಾಗಿದೆ ಎಂದು ಶ್ರೀ ಕೇದಾರ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ನುಡಿದರು. ದಾವಣಗೆರೆಯ ತ್ರಿಶೂಲ್ ಕಲಾಭವನದಲ್ಲಿ ಭಾನುವಾರ ನಡೆದ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆಯ ನಂತರ ಭಕ್ತರನ್ನುದ್ದೇಶಿಸಿ ಸಂದೇಶ ನೀಡುತ್ತಾ, ದಾವಣಗೆರೆ-ಹರಿಹರ ನಡುವೆ ಬರುವ ಶಂಶೀಪುರ ಬಳಿ ನಾವು ಬಂದು ತಂಗಲು ಗುರು ನಿವಾಸ ನಿರ್ಮಾಣ ಕಾರ್ಯ … Read more

ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ಸಂಪನ್ನ

ಸುದ್ದಿ360, ದಾವಣಗೆರೆ, ಜು.10:  ಸಾವಿರಾರು ಭಕ್ತಗಣದ ಸಮ್ಮುಖದಲ್ಲಿ ಶ್ರೀ ಕೇದಾರ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿಯವರ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ನಗರದ ತ್ರಿಶೂಲ್ ಕಲಾಭವನದಲ್ಲಿ ಭಾನುವಾರ  ಸಾಂಗವಾಗಿ ನೆರವೇರಿತು. ನೆರೆದ ಭಕ್ತಗಣ ಶ್ರೀಗಳು ನೆರವೇರಿಸಿದ ಮಹಾಪೂಜೆಯಲ್ಲಿ ಭಕ್ತಪರವಶರಾಗಿ ದೈವಾನುಗ್ರಹಕ್ಕೆ ಪಾತ್ರರಾದರು. ತಪೋಕ್ಷೇತ್ರ ಕಣ್ವಕುಪ್ಪೆ ಗವಿಮಠದ ಶ್ರೀ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿಯವರು ಪೂಜಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಬೆಳಗ್ಗೆ 9 ಗಂಟೆಗೆ ಆರಂಭವಾದ ಇಷ್ಟಲಿಂಗ ಮಹಾಪೂಜೆ ಮಧ್ಯಾಹ್ನ 1.30ರ ಸುಮಾರಿಗೆ ಸಂಪನ್ನಗೊಂಡಿತು. ಇಷ್ಟಲಿಂಗ ಪೂಜೆಯ ನಂತರ … Read more

ಜು.12ಕ್ಕೆ ನಟ ಶಿವರಾಜ್ ಕುಮಾರ್ ಹುಟ್ಟುಹಬ್ಬ ಆಚರಣೆ

ಸುದ್ದಿ360, ದಾವಣಗೆರೆ, ಜು.10:  ಅಖಿಲ ಕರ್ನಾಟಕ ಡಾ. ರಾಜ್ ಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟ, ಅಖಿಲ ಕರ್ನಾಟಕ ಡಾ. ಶಿವರಾಜ್ ಕುಮಾರ್ ಅಭಿಮಾನಿ ಸಂಘ ಮತ್ತು ಅಖಿಲ ಕರ್ನಾಟಕ ಪುನೀತ್ ರಾಜ್ ಕುಮಾರ್ ಅಭಿಮಾನಿ ಸಂಘಗಳ ವತಿಯಿಂದ  ನಟ ಶಿವರಾಜ್ ಕುಮಾರ್ ರವರ 60ನೇ ಹುಟ್ಟುಹಬ್ಬವನ್ನು ಜು. 12ರಂದು ದಾವಣಗೆರೆಯಲ್ಲಿ ಆಚರಿಸಲಾಗುತ್ತಿರುವುದಾಗಿ ಒಕ್ಕೂಟದ ಜಿಲ್ಲಾಧ್ಯಕ್ಷ ಯೋಗೇಶ್ ತಿಳಿಸಿದರು. ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ,  ಅಂದು ನಗರದ ಜಯದೇವ ವೃತ್ತದಲ್ಲಿ ಬೆಳಿಗ್ಗೆ 11.30ಕ್ಕೆ ನೆಚ್ಚಿನ ನಟ ಶಿವರಾಜ್ … Read more

error: Content is protected !!