ಜು. 17 ಬಂಜಾರ ವಧುವರರ ಅನ್ವೇಷಣೆ – ಬಂಜಾರ ಸಾಂಸ್ಕೃತಿಕ ಉತ್ಸವ

ಸುದ್ದಿ360 ದಾವಣಗೆರೆ.ಜು.01: ಬೆಂಗಳೂರಿನ ವಸಂತನಗರದಲ್ಲಿರುವ ಬಂಜಾರ ಭವನದಲ್ಲಿ ಜು.17ರಂದು ರಾಜ್ಯ ಮಟ್ಟದ ಬಂಜಾರ ವಧುವರರ ಅನ್ವೇಷಣೆ ಮತ್ತು ಬಂಜಾರ ಸಾಂಸ್ಕೃತಿಕ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಬಂಜಾರ ಲಂಬಾಣಿ ಜನಸೇವಾ ಸಂಘದ ರಾಜ್ಯಾಧ್ಯಕ್ಷ ಎ.ಆರ್. ಹನುಮಂತ ನಾಯ್ಕ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಬಂಜಾರ ಲಂಬಾಣಿ ಸಮುದಾಯದ ಜನಸಂಖ್ಯೆ ಹೆಚ್ಚಾಗಿದೆ. ಈ ಜಿಲ್ಲೆಗಳೂ ಸೇರಿ, ಶಿವಮೊಗ್ಗ, ತುಮಕೂರು, ಹಾಸನ, ಬಿಜಾಪುರ ಜಿಲ್ಲೆಗಳ ಸಮುದಾಯದ ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ … Read more

ಭಕ್ಷ್ಯಪ್ರಿಯರಿಗೆ ವಿದ್ಯಾರ್ಥಿಗಳ ಕೈರುಚಿ . . .

ಸುದ್ದಿ360 ದಾವಣಗೆರೆ.ಜು.01: ಗೋಬಿ ಮಂಚೂರಿ, ರೈಸ್ ಬಾತ್, ಗರಿ ಗರಿ ಪಕೋಡ, ಬಿಸಿ ಬಿಸಿ ಚಪಾತಿ, ರಸಗುಲ್ಲ. . . ಹೋ ಬಾಯಲ್ಲಿ ನೀರೂರುತ್ತಿದೆಯಾ. . ?  ಶುಕ್ರವಾರ ಬೆಳಗ್ಗೆ ನಗರದ ಶಾಮನೂರು ರಸ್ತೆಯ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಇಂಥದ್ದೇ ಇನ್ನೂ ತರಹೇವಾರಿ ಖಾದ್ಯಗಳು ರುಚಿ ರುಚಿಯಾಗಿ ಸವಿಯಲು ಸಿದ್ಧವಿದ್ದವು. ಹಾಗಂತ ಇದು ಯಾವುದೋ ಸಮಾರಂಭದ ಅಡುಗೆಯಾಗಿರದೆ, ನಗರದ ಸಿದ್ದವೀರಪ್ಪ ಬಡಾವಣೆಯ ಭದ್ರಾ ಪದವಿ ಹಾಗೂ ಸ್ನಾತಕೋತ್ತರ ಕಾಲೇಜಿನ ವಿದ್ಯಾರ್ಥಿಗಳು ತಾವು ಸ್ವತಃ ಸೌಟು ಹಿಡಿದು … Read more

ದೇಶದಲ್ಲಿ ಹೆಚ್ಚುತ್ತಿರುವ ಜಿಹಾದಿ ಮನಸ್ಥಿತಿ: ಕಾಂಗ್ರೆಸ್ಸಿಗರ ಮೌನವೇಕೆ ?

ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಪ್ರಶ್ನೆ ಸುದ್ದಿ360 ದಾವಣಗೆರೆ.ಜು.01: ಬಿಜೆಪಿ ಹೆಚ್ಚು ಹೆಚ್ಚು ಜನಪ್ರಿಯತೆ ಗಳಿಸುತ್ತಿರುವುದನ್ನು ಸಹಿಸದ ಕಾಂಗ್ರೆಸ್ ಅಗ್ನಿಪಥ್ ಯೋಜನೆ ವಿರೋಧಿಸಿ ಬೀದಿಗಿಳಿಯುತ್ತದೆ. ಆದರೆ ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ನುಗ್ಗಿ ಹಾಡ ಹಗಲೇ ಒಬ್ಬ ಸಾಮಾನ್ಯ ವ್ಯಕ್ತಿಯ ಕತ್ತು ಸೀಳಿ ಕೊಲೆ ಮಾಡಿದರೆ ಪ್ರತಿಭಟಿಸುವ ಗೋಜಿಗೆ ಹೋಗುವುದಿಲ್ಲ. ಇದು ಕಾಂಗ್ರೆಸಿಗರ ಅಲ್ಪಸಂಖ್ಯಾತ ತುಷ್ಟೀಕರಣಕ್ಕೆ ಸಾಕ್ಷಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜಸ್ಥಾನದ ಉದಯಪುರದಲ್ಲಿ ಜಿಹಾದಿ ಮನಸ್ಥಿತಿಯ ಕೆಲವರು … Read more

ಹರಿಹರ ಕನಕ ಗುರುಪೀಠದಲ್ಲಿ ಯುಪಿಎಸ್ ಸಿ, ಕೆಪಿಎಸ್ ಸಿ ತರಬೇತಿ ಕೇಂದ್ರ

ಜು.3-ಎಸ್.ಟಿ. ಮೀಸಲಾತಿಯ ಹಕ್ಕೋತ್ತಾಯದ ನಡೆಯ ಚಿಂತನ-ಮಂಥನ ಸಭೆ ಸುದ್ದಿ360 ದಾವಣಗೆರೆ.ಜು.01: ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ  ಕುರುಬ ಸಮುದಾಯವನ್ನು  ಬಲಪಡಿಸಲು ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ  ಗುರುಪೀಠಗಳು ನಿರಂತರವಾಗಿ   ಶ್ರಮಿಸುತ್ತಿದ್ದು, ಈ ನಿಟ್ಟಿನಲ್ಲಿ ಹರಿಹರದ ಕನಕಗುರುಪೀಠದಲ್ಲಿ ಯು.ಪಿ.ಎಸ್.ಸಿ., ಕೆ.ಪಿ.ಎಸ್.ಸಿ. ತರಬೇತಿ ಕೇಂದ್ರದ ಉದ್ಘಾಟನೆ ಹಾಗೂ ಕುರುಬರ ಎಸ್.ಟಿ. ಮೀಸಲಾತಿಯ ಮುಂದಿನ ಹಕ್ಕೋತ್ತಾಯದ ನಡೆಯ ಚಿಂತನ-ಮಂಥನ ಸಭೆಯು ಜು.3ರಂದು ಹರಿಹರ ತಾಲ್ಲೂಕಿನ ಬೆಳ್ಳೂಡಿಯ ಕನಕ ಗುರುಪೀಠದಲ್ಲಿ ನಡೆಯಲಿದೆ ಎಂದು ಹಾಲುಮತ ಮಹಾಸಭಾ ರಾಜ್ಯ ಸಂಚಾಲಕ ರಾಜು ಮೌರ್ಯ ತಿಳಿಸಿದರು. ಶುಕ್ರವಾರ … Read more

ಎಚ್ ಆರ್ ಬಸವರಾಜಪ್ಪಗೂ ರೈತಸಂಘಕ್ಕೂ ಸಂಬಂಧವಿಲ್ಲ

ಸುದ್ದಿಗೋಷ್ಠಿಯಲ್ಲಿ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ ಹೇಳಿಕೆ ಸುದ್ದಿ360 ದಾವಣಗೆರೆ.ಜು.01: ರಾಜ್ಯ ರೈತ ಸಂಘಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಅವರೇ ಅಧ್ಯಕ್ಷರು, ಸ್ವಯಂಘೋಷಿತ ಅಧ್ಯಕ್ಷರಾಗಿರುವ ಎಚ್ ಆರ್ ಬಸವರಾಜಪ್ಪರಿಗೂ ರೈತ ಸಂಘಕ್ಕೂ ಯಾವುದೇ ಸಂಬಂಧವಿಲ್ಲ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, 2016ರಲ್ಲಿ ಎಚ್ ಆರ್ ಬಸವರಾಜಪ್ಪ ಭ್ರಷ್ಟಾಚಾರ ಮತ್ತು ಅವ್ಯವಹಾರ ನಡೆಸಿದ್ದಾರೆ ಎಂದು ಶಿವಮೊಗ್ಗ ಜಿಲ್ಲೆಯ ರೈತಸಂಘ ರಾಜ್ಯ ಸಂಘಕ್ಕೆ ಸಲ್ಲಿಸಿದ ದೂರಿನ … Read more

ಉಪ್ಪಾರ ಅಭಿವೃದ್ದಿ ನಿಗಮ-ಸಾಲ, ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ.ಜು.01: ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮದಿಂದ 2022-23ನೇ ಸಾಲಿಗೆ ಈ ಕೆಳಕಂಡ ಯೋಜನೆಗಳ ಅನುಷ್ಠಾನಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1ರ 53(ಎ) ರಿಂದ 5(ವಿ) ವರೆಗಿನ ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ದಿಗಾಗಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗಕ್ಕಾಗಿ ನೇರಸಾಲ ಯೋಜನೆ, 2022-23ನೇ ಸಾಲಿನ ಅರಿವು ಶೈಕ್ಷಣಿಕ ಸಾಲ(ನವೀಕರಣ)(2019-20ನೇ ಸಾಲಿನ 4ನೇ ಕಂತು ಹಾಗೂ 2020-21ನೇ ಸಾಲಿನ 3 ಕಂತು) ಯೋಜನೆಯನ್ನು ಜಾರಿಗೊಳಿಸಿದ್ದು, ಯೋಜನೆಯನ್ನು ಜಾರಿಗೊಳಿಸಿದ್ದು, … Read more

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ.ಜು.01: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ (ನವೀಕರಣ)ಯೋಜನೆಗಳ ಅನುಷ್ಠಾನಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1ರ 6(ಎ) ರಿಂದ 6(ಎಕೆ) ವರೆಗಿದ ಬೆಸ್ತ, ಕೋಳಿ, ಕಬ್ಬಲಿಗ ಇತ್ಯಾದಿ ಜಾತಿ/ಉಪಜಾತಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಜುಲೈ.14 ಕೊನೆಯ ದಿನಾಂಕವಾಗಿದ್ದು, ಅರ್ಜಿಗಳನ್ನು ಸುವಿಧಾ ತಂತ್ರಾಂಶದ Suvida.karnataka.gov. ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಜಶರಣ ಅಂಬಿಗರ ಚೌಡಯ್ಯ, … Read more

ಸುಶ್ರುತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನ ಕೇಂದ್ರ ಉದ್ಘಾಟನೆ

ಶಿಷ್ಯೋಪನಯನ ಸಂಸ್ಕಾರ – ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಗೈದಿರುವ ಸಾಧಕರಿಗೆ ಸನ್ಮಾನ ಸುದ್ದಿ360 ದಾವಣಗೆರೆ. ಜೂ.30: ಸುಶ್ರುತ ಆರೋಗ್ಯ ಪ್ರತಿಷ್ಠಾನದಿಂದ ನಗರದ ಲೋಕಿಕೆರೆ ರಸ್ತೆಯ ಶ್ರೀರಾಮ ನಗರದ ಶ್ರೀದೇವಿ ರೈಸ್ ಮಿಲ್ ಹತ್ತಿರ ನೂತನವಾಗಿ ನಿರ್ಮಿಸಿರುವ ಸುಶ್ರುತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನ ಕೇಂದ್ರದ ಉದ್ಘಾಟನೆ, ಮತ್ತು 2021-22ನೇ ಸಾಲಿನ ವಿದ್ಯಾರ್ಥಿಗಳಿಗೆ ಶಿಷ್ಯೋಪನಯನ ಸಂಸ್ಕಾರ ಹಾಗೂ ವಿಶ್ವ ವೈದ್ಯರ ದಿನಾಚರಣೆ ಪ್ರಯುಕ್ತ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಗೈದಿರುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜು.1ರಂದು ಬೆಳಗ್ಗೆ 10 … Read more

ಕನ್ನಯ್ಯಲಾಲ್ ಹತ್ಯೆ; ಹಂತಕರನ್ನು ಗುಂಡಿಕ್ಕಿ ಕೊಲ್ಲಬೇಕು: ಶ್ರೀನಿವಾಸ್ ದಾಸಕರಿಯಪ್ಪ

ಸುದ್ದಿ360 ದಾವಣಗೆರೆ, ಜೂ.30: ರಾಜಸ್ತಾನದ ಉದಯಪುರದಲ್ಲಿ ಕನ್ನಯ್ಯ ಲಾಲ್ ಹೆಸರಿನ ವ್ಯಕ್ತಿಯನ್ನು ಕೊಂದು ಹಾಕಿದ ಹಂತಕರನ್ನು ಗುಂಡಿಟ್ಟಿ ಕೊಲ್ಲಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ ಹೇಳಿದ್ದಾರೆ. ನಗರದ ಜಯದೇವ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು. ರಾಜಸ್ತಾನದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಇಲ್ಲವೇ ಗುಂಡಿಟ್ಟು ಕೊಲ್ಲಬೇಕು. ತಪ್ಪಿದಲ್ಲಿ ದೇಶದಲ್ಲಿ ಹಿಂದೂಗಳ ಶಕ್ತಿ ಏನೆಂಬುದನ್ನು ತೋರಿಸಬೇಕಾಗುತ್ತದೆ ಎಂದು … Read more

ಕನ್ನಯ್ಯ ಲಾಲ್ ಹತ್ಯೆಗೆ ಎಸ್ ಯು ಸಿ ಐ(ಸಿ) ಖಂಡನೆ

ಸುದ್ದಿ360 ದಾವಣಗೆರೆ, ಜೂ.30:  ಉದಯಪುರದಲ್ಲಿ ಕನ್ಹಯ್ಯ ಲಾಲ್ ಹೆಸರಿನ ವ್ಯಕ್ತಿಯನ್ನು ಇಸ್ಲಾಮಿಕ್ ಕೋಮುವಾದಿಗಳು ಘೋರವಾಗಿ ಹತ್ಯೆ ಮಾಡಿದ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಎಸ್ ಯುಸಿಐ (ಸಿ) ಪಕ್ಷವು ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಎಸ್ ಯು ಸಿ ಐ (ಸಿ) ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಕೈದಾಳೆ ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಕೊಲೆಯಾದ ವ್ಯಕ್ತಿಯು ಪ್ರವಾದಿ ಮುಹಮ್ಮದರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದ. ಇದಕ್ಕೆ ಪ್ರತೀಕಾರವಾಗಿ ಆತನನ್ನು … Read more

error: Content is protected !!