ಸಾರವರ್ಧಿತ ಅಕ್ಕಿಯಿಂದ  ದೇಹಕ್ಕೆ ಅಗತ್ಯ ಪೌಷ್ಠಿಕಾಂಶ ಲಭ್ಯ

ಸುದ್ದಿ360 ದಾವಣಗೆರೆ ಜೂ.21:  ಸಾರವರ್ಧಿತ ಅಕ್ಕಿ ಹೆಚ್ಚು ಪೋಷಾಕಾಂಶಗಳನ್ನು ಒಳಗೊಂಡಿದ್ದು, ಇದರ ಸೇವನೆಯಿಂದ ಸಾರ್ವಜನಿಕರ ಆರೋಗ್ಯಕ್ಕೆ ಯಾವುದೇ ಹಾನಿ ಆಗುವುದಿಲ್ಲ. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಕೇಂದ್ರ ಸರಕಾರ ಸಾರವರ್ಧಿತ ಅಕ್ಕಿಯನ್ನು ವಿತರಿಸುತ್ತಲಿದೆ ಎಂದು ಅಪರ ಜಿಲ್ಲದಿಕಾರಿ ಪಿ.ಎನ್. ಲೋಕೇಶ್ ಹೇಳಿದರು. ನಗರದ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಮಂಗಳವಾರ ಕೇಂದ್ರ ಸರಕಾರದ ಸೂಚನೆ ಮೇರೆಗೆ, ಪಾಥ್ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಾರವರ್ಧಿತ ಅಕ್ಕಿ ಕುರಿತು ಅರಿವು ಮೂಡಿಸುವ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, … Read more

ದಾವಣಗೆರೆಯಲ್ಲಿ ಮೈನವಿರೇಳಿಸಿದ ಜಲಯೋಗ ಪ್ರದರ್ಶನ

ಸುದ್ದಿ360 ದಾವಣಗೆರೆ ಜೂ.21: 8ನೇ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ನಗರದ ಆಫಿಸರ್ಸ್‍ ಕ್ಲಬ್‍ ಈಜುಕೊಳ ಇಂದು ಕಳೆಗಟ್ಟಿತ್ತು. ಯೋಗಪಟುಗಳ ವಿವಿಧ ಭಂಗಿಗಳು ನೋಡುಗರ  ಮೈನವಿರೇಳಿಸುವಂತಿದ್ದವು. 26 ಜನ ಯೋಗಪಟುಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಏಳು ವರ್ಷದ ಬಾಲಕಿ ಮಿಥಿಲಾ ಗಿರೀಶ್  ಹಾಗೂ 82 ವರ್ಷದ ವೃದ್ಧೆ ಇಂದಿರಾ ಸೇರಿದಂತೆ ಯೋಗಪಟುಗಳ ತಂಡ ನೀಡಿದ ಜಲ ಯೋಗ ಪ್ರದರ್ಶನ ವೀಕ್ಷಿಸುವ ಯೋಗಾಯೋಗ ನೋಡಗರದ್ದಾಗಿತ್ತು. ಇಂತಹ ಒಂದು ಅವಿಸ್ಮರಣೀಯ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಆಯುಷ್ ಇಲಾಖೆ ಹಾಗೂ ಜಿಲ್ಲಾ ಯೋಗ … Read more

ಚನ್ನಗಿರಿಯಲ್ಲಿ ಬಸ್‍ ಏಜೆಂಟ್‍ನ ಬರ್ಬರ ಕೊಲೆ

ಸುದ್ದಿ360 ದಾವಣಗೆರೆ ಜೂ.21: ಪ್ರತ್ಯಕ್ಷದರ್ಶಿಗಳು ದಿಗ್ಭ್ರಮೆಯಾಗುವಂತಹ ಲೈವ್‍ ಮಾರ್ಡರ್‍  ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಖಾಸಗಿ ಬಸ್ ಏಜೆಂಟ್ ನನ್ನು ಚಾಕುವಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಚನ್ನಗಿರಿ ಪಟ್ಟಣದ ಕೈಮರ ಎಂಬಲ್ಲಿನ ತರಳಬಾಳು ವೃತ್ತದಲ್ಲಿ ನಡೆದಿರುವ  ಈ ಘಟನೆಯಲ್ಲಿ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಜಾಕೀರ್ ಹತ್ಯೆಗೀಡಾದ ಏಜೆಂಟ್ ಎಂದು ಗುರುತಿಸಲಾಗಿದೆ. ಶಿವಮೊಗ್ಗ- ದಾವಣಗೆರೆ-ಭದ್ರಾವತಿ- ಚನ್ನಗಿರಿ ಪಟ್ಟಣಕ್ಕೆ ಹೋಗುವ ವೃತ್ತ ಇದಾಗಿದ್ದು, ಎಂದಿನಂತೆ ನಲ್ಲೂರಿನಿಂದ ಚನ್ನಗಿರಿಗೆ ಜಾಕೀರ್ ಬಂದಿದ್ದಾರೆ. … Read more

ಜೂ.23 ದಾವಣಗೆರೆಯಲ್ಲಿ ಉದ್ಯೋಗ ಮೇಳ

ಸುದ್ದಿ360 ದಾವಣಗೆರೆ, ಜೂ.20: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ಹಾಗೂ ಎಮ್.ಎಸ್.ಬಿ. ಕಲಾ ಮತ್ತು ವಾಣಿಜ್ಯ ಕಾಲೇಜು, ದಾವಣಗೆರೆ. ಇವರ ಸಂಯುಕ್ತಾಶ್ರಯದಲ್ಲಿ ಜೂ.23 ರಂದು ಬೆಳಗ್ಗೆ 10 ಗಂಟೆಗೆ, ಎಮ್.ಎಸ್.ಬಿ. ಕಲಾ ಮತ್ತು ವಾಣಿಜ್ಯ ಕಾಲೇಜು, ಎ.ವಿ.ಕೆ. ಕಾಲೇಜು ರಸ್ತೆ, ದಾವಣಗೆರೆ ಇಲ್ಲಿ “ಉದ್ಯೋಗ ಮೇಳ” ವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ, ಡಿಪ್ಲೊಮಾ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ/ಬಿ.ಬಿ.ಎಂ, ಬಿ.ಸಿ.ಎ ಹಾಗೂ ಸ್ನಾತಕೋತ್ತರ … Read more

ಉನ್ನತೀಕರಿಸಿದ ಐಟಿಐ ಲೋಕಾರ್ಪಣೆ – ದಾವಣಗೆರೆಯಲ್ಲಿ ವಿವಿಧ ಹೊಸ ಕೋರ್ಸ್‍ಗಳು

ಸುದ್ದಿ360 ದಾವಣಗೆರೆ, ಜೂ.20: ನಗರದ ಹದಡಿ ರಸ್ತೆಯಲ್ಲಿರುವ ಸರಕಾರಿ ಐಟಿಐ ಕಾಲೇಜಿನಲ್ಲಿ ಕಾಲೇಜು ಉನ್ನತೀಕರಣದ ಶಿಲಾಫಲಕವನ್ನು ಶಾಸಕ ಎಸ್.ಎ. ರವೀಂದ್ರನಾಥ ಸೋಮವಾರ ಅನಾವರಣಗೊಳಿಸಿದರು. ಭಾರತ ಸ್ವಾತಂತ್ರ‍್ಯೋತ್ಸವ ಅಮೃತ ಮಹೊತ್ಸವದ ಅಂಗವಾಗಿ ರಾಜ್ಯಾದ್ಯಂತ ತಾಂತ್ರಿಕ ಕೇಂದ್ರಗಳನ್ನಾಗಿ ಉನ್ನತೀಕರಿಸಿರುವ 150 ಐಟಿಐಗಳ ಲೋಕಾರ್ಪಣೆ ಅಂಗವಾಗಿ ನಗರದ ಐಟಿಐ ಕಾಲೇಜಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಟಾಟಾ ಟೆಕ್ನಾಲಜೀಸ್ ಲಿಮಿಟೆಡ್ ಮತ್ತು ಇತರೇ 20 ಉದ್ಯಮ ಪಾಲುದಾರರ ಸಹಯೋಗದೊಂದಿಗೆ ಕರ್ನಾಟಕ ಸರಕಾರ, ರಾಜ್ಯದ 150 ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರಗಳನ್ನು ತಾಂತ್ರಿಕ ಕೇಂದ್ರಗಳನ್ನಾಗಿ ಪರಿವರ್ತಿಸಿದ್ದು, … Read more

ಭೂ-ಕಬಳಿಕೆ ಹುನ್ನಾರ : ದೌರ್ಜನ್ಯ ತಡೆಯಲು ಹಕ್ಕಿಪಿಕ್ಕಿ ಬುಡಕಟ್ಟಿನವರ ಮನವಿ

ಸುದ್ದಿ360 ದಾವಣಗೆರೆ, ಜೂ.20: ಕಳೆದ ಎರಡು ತಿಂಗಳಿAದ ನಮ್ಮದೇ ಜಮೀನಿನಲ್ಲಿ ನಾವು ಉಳುಮೆ ಮಾಡಲು ಆಗುತ್ತಿಲ್ಲ. ವಿನಾ ಕಾರಣ ಜಯಂತಿನಗರದ ಜನ ಜಮೀನಿಗೆ ಬಂದು ದೌರ್ಜನ್ಯ ನಡೆಸುತ್ತಿದ್ದಾರೆ. ಸುಮಾರು 60 ವರ್ಷಗಳಿಂದ ಉಳುಮೆ ಮಾಡುತ್ತಾ ಬಂದಿರುವ ಹಕ್ಕಿಪಿಕ್ಕಿ ಸಮುದಾಯದ ರೈತರ ಜಮೀನನ್ನು ಕಬಳಿಸಲು ಕೆಲ ಪ್ರಭಾವಿ ವ್ಯಕ್ತಿಗಳು ಹುನ್ನಾರ ನಡೆಸಿದ್ದಾರೆ ಎಂದು ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಯುವ ಸಂಘಟನೆ ಅಧ್ಯಕ್ಷ ಆರ್. ಪುನೀತ್ಕುಮಾರ್ ಆರೋಪಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚನ್ನಗಿರಿ ತಾಲೂಕು ನಲ್ಲೂರು ಬಳಿಯ … Read more

ಮಹಾನಗರ ಪಾಲಿಕೆ ಆಡಳಿತ ವೈಫಲ್ಯ : ಸೂಪರ್‍ ಸೀಡ್‍ಗೆ ಪ್ರತಿಪಕ್ಷ ಕಾಂಗ್ರೆಸ್‍ ಒತ್ತಾಯ

ಸುದ್ದಿ360 ದಾವಣಗೆರೆ, ಜೂ.20:  ಮಹಾನಗರ ಪಾಲಿಕೆಯ ನೂತನ ಮೇಯರ್ ಅಧಿಕಾರ ವಹಿಸಿಕೊಂಡು 4 ತಿಂಗಳು ಕಳೆದರೂ ಇದುವರೆಗೂ ಸಾಮಾನ್ಯ ಸಭೆ ನಡೆಸಿಲ್ಲ. ವಾರ್ಡ್‍ಗಳ ಸಮಸ್ಯೆಗಳ ಚರ್ಚೆಗೆ ಅವಕಾಶ ಕಲ್ಪಿಸಿಲ್ಲ. ಮಹಾನಗರ ಪಾಲಿಕೆ ಆರ್ಥಿಕವಾಗಿ ದಿವಾಳಿಯಾಗಿದೆ ಅಲ್ಲದೆ, ಟೆಂಡರ್ ಕರೆಯಲು ಕೂಡ ಪಾಲಿಕೆ ಬಳಿ ಹಣವಿಲ್ಲ. ಹೀಗಾಗಿ ಮಹಾನಗರ ಪಾಲಿಕೆಯನ್ನು ಸೂಪರ್‌ಸೀಡ್ ಮಾಡಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ಆಗ್ರಹಿಸಿದೆ. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಪಾಲಿಕೆ ಪ್ರತಿಪಕ್ಷ ನಾಯಕ ಜಿ.ಎಸ್. ಮಂಜುನಾಥ್ ಗಡಿಗುಡಾಳ್, ಮಹಾನಗರ ಪಾಲಿಕೆಗಳಲ್ಲಿ … Read more

ಪುಲ್ವಾಮಾ ದಾಳಿ ರಾಜಕೀಯ ಪ್ರೇರಿತ – ಕೆಪಿಸಿಸಿ ವಕ್ತಾರ ಡಿ.ಬಸವರಾಜ್ ಆರೋಪ

ಪ್ರಧಾನಿಯ ರಾಜ್ಯ ಪ್ರವಾಸ ಅಧಿಕಾರದ ಕುರ್ಚಿಗಾಗಿ – ಯೋಗ ನೆಪಮಾತ್ರ . . ? ಸುದ್ದಿ360 ದಾವಣಗೆರೆ, ಜೂ.20: ೨೦೧೯ರಲ್ಲಿ ನಡೆದ ಪುಲ್ವಾಮಾ ದಾಳಿ ಒಂದು ರಾಜಕೀಯ ಪ್ರೇರಿತ. ಇಲ್ಲವೆಂದಾದರೆ ದಾಳಿಯ ಬಗ್ಗೆ ಗುಪ್ತಚರ ಇಲಾಖೆಯ ಮಾಹಿತಿ ನೀಡಿರಲಿಲ್ಲವೇ, ನೀಡಿದ್ದರೂ ಅದನ್ನು ಹಗುರವಾಗಿ ಪರಿಗಣಿಸಿದ್ದು ಏಕೆ ..? ಇಂದೂ ಸಹ ಅಧಿಕಾರದ ಕುರ್ಚಿಗಾಗಿ ಯೋಗ ದಿನಾಚರಣೆ ನೆಪದಲ್ಲಿ ಪ್ರಧಾನಿಯವರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ್ ಕಿಡಿಕಾರಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Read more

ಪ್ರಧಾನಿಗಳೇ ರೈತರ ಸಂಕಷ್ಟ ಗಮನಿಸಿ: ದಾವಣಗೆರೆಯಲ್ಲಿ ರೈತರ ಕೂಗು

ಸುದ್ದಿ360 ದಾವಣಗೆರೆ, ಜೂ.20: ಕೃಷಿ ಉತ್ಪನ್ನಗಳ ಉತ್ಪಾದನಾ ವೆಚ್ಚ, ಕನಿಷ್ಠ ಬೆಂಬಲ ಬೆಲೆಯಿಂದ ಮಾರುಕಟ್ಟೆಯಲ್ಲಿ ಅನುಭವಿಸಿರುವ ನಷ್ಟಗಳ ವಿವರವನ್ನು ರಾಜ್ಯ ಪ್ರವಾಸದಲ್ಲಿರುವ ಪ್ರದಾನಿ ಮೋದಿಯವರ ಗಮನ ಸೆಳೆಯುವ ಉದ್ದೇಶದಿಂದ ರೈತರು ಇಂದು ರೈತ  ಉತ್ಪನ್ನಗಳೊಂದಿಗೆ ಮೆರವಣಿಗೆ ನಡೆಸಿ  ಉಪವಿಭಾಗಾಧಿಕಾರಿಗಳ ಮೂಲಕ ಪ್ರಧಾನಿಯವರಿಗೆ ಮನವಿ ಸಲ್ಲಿಸುತ್ತಿರುವುದಾಗಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ತೇಜಸ್ವಿ ವಿ. ಪಟೇಲ್‍ ತಿಳಿಸಿದರು. ನಗರದಲ್ಲಿ ಸೋಮವಾರ ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಕೃಷಿ ಉತ್ಪನ್ನಗಳನ್ನು ತಳ್ಳುವ … Read more

ಯೋಗಾಭ್ಯಾಸದಲ್ಲಿ ಹರಿಹರ ಶಾಸಕ ಎಸ್‍ ರಾಮಪ್ಪ

ಸುದ್ದಿ360 ಹರಿಹರ, ಜೂ.20: ಹರಿಹರದ ಹರಿಹರೇಶ್ವರ ದೇವಸ್ಥಾನದಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೂರ್ವಬಾವಿ ಯೋಗ ತರಬೇತಿ ನಡೆಯುತ್ತಿದ್ದು, ಹರಿಹರದ ಶಾಸಕ ಎಸ್ ರಾಮಪ್ಪ ಅವರು ಸೋಮವಾರ ಯೋಗ ಅಭ್ಯಾಸದಲ್ಲಿ ಪಾಲ್ಗೊಂಡರು.

error: Content is protected !!