ಬಿಜೆಪಿ ಮುಖಂಡ ಸಿದ್ದೇಶ್‍ ಯಾದವ್‍ ಹೃದಯಾಘಾತದಿಂದ ಸಾವು

ಸುದ್ದಿ360 ಬೆಂಗಳೂರು: ಬಿಜೆಪಿ(bjp obc morcha) ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ  ಹಾಗೂ ಚಿತ್ರದುರ್ಗ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸಿದ್ದೇಶ್‍ ಯಾದವ್‍ (siddesh yadav)ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸೋಮವಾರ ಹೃದಯಾಘಾತ (heart attach) ದಿಂದ ಮೃತಪಟ್ಟಿದ್ದಾರೆ. ಹಿರಿಯೂರು ತಾಲೂಕಿನ ಸಿದ್ದೇಶ್‍ ಯಾದವ್‍  ಜಿಲ್ಲಾ ಪ್ರಭಾರಿಗಳ ಸಭೆಗೆ ಪಾಲ್ಗೊಳ್ಳಲು ಮಲ್ಲೇಶ್ವರದಲ್ಲಿರುವ ಕಚೇರಿಗೆ ಆಗಮಿಸಿದ್ದರು. ಮಧ್ಯಾಹ್ನ ಸಭೆ ಮುಗಿಸಿ ಹೊರಗೆ ಬಂದ ಸಂದರ್ಭದಲ್ಲಿ ಸಿದ್ದೇಶ್‍ ಯಾದವ್ ಕುಸಿದುಬಿದ್ದಿದ್ದು, ಅವರನ್ನು ತಕ್ಷಣ ಕೆ.ಸಿ. ಜನರಲ್‍ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ … Read more

ಜು.5 ಸಂಸದ ಜಿ.ಎಂ. ಸಿದ್ದೇಶ್ವರ್ ಜನ್ಮದಿನ ಅಭಿಮಾನಿ ಬಳಗದಿಂದ ‘ನಮ್ಮಭಿಮಾನ’

mp siddeshwar, davangere, birthday

ದಾವಣಗೆರೆ. ಜೂ.30; ಸಂಸದ ಜಿ.ಎಂ ಸಿದ್ದೇಶ್ವರ್ ಜನ್ಮದಿನದ ಪ್ರಯುಕ್ತ ಜುಲೈ 5 ರಂದು ಬೆಳಗ್ಗೆ 10.30 ಕ್ಕೆ  ನಮ್ಮಭಿಮಾನ ಅದ್ದೂರಿ ಕಾರ್ಯಕ್ರಮವನ್ನು ಅಭಿಮಾನಿಗಳ ಬಳಗದಿಂದ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೆರವೇರಿಸಲಿದ್ದಾರೆ ಎಂದು ಬಳಗದ ಮುಖಂಡ ಯಶವಂತ್ ರಾವ್ ಜಾಧವ್ ಮಾಹಿತಿ ನೀಡಿದರು. ನಗರದ ಪಿಬಿ ರಸ್ತೆಯಲ್ಲಿರುವ ವಾಣಿಹೋಂಡಾ ಶೋರೂಂ ಆವರಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಿ.ಎಂ ಸಿದ್ದೇಶ್ವರ್  ಲೋಕಸಭಾ ಸದಸ್ಯರಾಗಿ 20 ವರ್ಷವಾಗಿದೆ. ಇಷ್ಟು ಸುಧೀರ್ಘ ಅವಧಿಗೆ ಅವರು ಸಂಸದರಾಗಿದ್ದಾರೆ … Read more

ಅಮೃತಮತಿ ಚಿತ್ರ ಪ್ರದರ್ಶನ: ಜಾನಪದ ತಜ್ಞ ಡಾ. ಮಲ್ಲಿಕಾರ್ಜುನ ಕಲಮರಹಳ್ಳಿ ಹೇಳಿದ್ದೇನು?

ಸುದ್ದಿ360, ದಾವಣಗೆರೆ: ಸುಖವಿಲ್ಲದ ಭೋಗ ನೀರಲ್ಲಿ ಅಕ್ಷರ ಭರೆದಂತೆಯೇ ವ್ಯರ್ಥ. ಸುಖಕ್ಕೆ ಭೋಗದ ಪರಿಕಲ್ಪನೆ ಬೇಕಾಗಿಲ್ಲ. ಅರಮನೆಯಂತೂ ಬೇಡವೇ ಬೇಡ ಎಂಬುದನ್ನು ‘ಅಮೃತಮತಿ’ ಚಿತ್ರದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ ಎಂದು ಜಾನಪದ ತಜ್ಞ ಡಾ. ಮಲ್ಲಿಕಾರ್ಜುನ ಕಲಮರಹಳ್ಳಿ ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂದು ಬರಗೂರು ರಾಮಚಂದ್ರಪ್ಪ ನಿರ್ದೇಶನದ  `ಅಮೃತಮತಿ’ ಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು. ಜನ್ನ ಕವಿ ವಿರಚಿತ `ಯಶೋಧರ ಚರಿತ್ರೆ’ ಆಧಾರವಾಗಿಟ್ಟುಕೊಂಡು ನಿರ್ಮಿಸಿರುವ 90 ನಿಮಿಷಗಳ ಈ ಚಿತ್ರ ಪ್ರದರ್ಶನವನ್ನು … Read more

ಶಿವಾನಂದ ದಳವಾಯಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ

ಸುದ್ದಿ360 ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದಾವಣಗೆರೆ ಜಿಲ್ಲಾ ಶಾಖೆಯಿಂದ ಯಿಂದ ರಾಜ್ಯ ಸಂಘಕ್ಕೆ ಜಿಲ್ಲಾ ಔಷಧ ಉಗ್ರಾಣದ ಫಾರ್ಮಸಿ ಅಧಿಕಾರಿ ಶಿವಾನಂದ ದಳವಾಯಿ  ನೇಮಕಗೊಂಡಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಕ್ಷರಿ ಶಿವಾನಂದ ದಳವಾಯಿಯವರನ್ನು ರಾಜ್ಯ ಸಂಘಟನಾ ಕಾರ್ಯದರ್ಶಿ ಯನ್ನಾಗಿ ನೇಮಕ ಮಾಡಿ  ಆದೇಶ ಹೊರಡಿಸಿದ್ದಾರೆ ಎಂದು ದಾವಣಗೆರೆ ಜಿಲ್ಲಾ ಶಾಖೆಯ ಅಧ್ಯಕ್ಷರಾದ  ವೀರೇಶ್ ವಡೆನ್ಪೂರ್ ತಿಳಿಸಿದ್ದಾರೆ. ಈ … Read more

ರೈತರುಆತಂಕಕ್ಕೆ ಒಳಗಾಗದೇ ಬಿತ್ತನೆ ಕಾರ್ಯಕ್ಕೆ ಮುಂದಾಗಲು ಸಚಿವ ಎಸ್‍ಎಸ್‍ಎಂ ಕರೆ

ಸುದ್ದಿ360, ದಾವಣಗೆರೆ: ಮೇ ಕೊನೆ ವಾರದಲ್ಲಿ ಮುಂಗಾರು ಆರಂಭವಾಗಬೇಕಿದ್ದರೂ ಸಹ ಪ್ರಕೃತಿಯ ವೈಫರೀತ್ಯದಿಂದಾಗಿ ಮುಂಗಾರು ಜೂನ್‌ಕೊನೆಯ ವಾರದಲ್ಲಿಆರಂಭವಾಗಿದ್ದು, ಉತ್ತಮ ಮಳೆ ಬರುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ರೈತರು ಬಿತ್ತನೆ ಕಾರ್ಯವನ್ನು ಮುಂಬರುವ ದಿನಗಳಲ್ಲಿ ಚುರುಕುಗೊಳಿಸಬಹುದು ಎಂದು ತೋಟಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್‌ ತಿಳಿಸಿದ್ದಾರೆ. ಕೃಷಿ ಇಲಾಖೆ ಅಭಿಪ್ರಾಯದಂತೆ ಜುಲೈವರೆಗೂ ಬಿತ್ತನೆ ಕಾರ್ಯ ಆರಂಭಿಸಬಹುದಾಗಿದ್ದು, ರೈತರಿಗೆ ತೊಂದರೆ ಆಗದಂತೆ ಅಗತ್ಯ ಇರುವಷ್ಟು ಬಿತ್ತನೆ ಬೀಜ ಮತ್ತುರಸಗೊಬ್ಬರ ದಾಸ್ತಾನು ಇದೆ. ರೈತರ ಬೇಡಿಕೆಗೆ … Read more

ಅವೈಜ್ಞಾನಿಕ ವಿದ್ಯುತ್ ಶುಲ್ಕ ಏರಿಕೆ ಹಿಂಪಡಿಯಲಿ : ರೈಸ್ ಮಿಲ್ ಮಾಲೀಕರ, ವರ್ತಕರಿಂದ ಮನವಿ

ಸುದ್ದಿ360, ದಾವಣಗೆರೆ: ವಿದ್ಯುತ್ ಶುಲ್ಕ ಹೆಚ್ಚಿಸಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ದಾವಣಗೆರೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ, ರೈಸ್ ಮಿಲ್ ಮಾಲೀಕರ ಸಂಘ, ದಲ್ಲಾಳಿಗಳ ಸಂಘ, ಮೆಕ್ಕೆಜೋಳ ವರ್ತಕರ ಸಂಘದ ಪದಾಕಾರಿಗಳು ನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಕರ್ನಾಟಕ ವಿದ್ಯುತ್‌ಶಕ್ತಿ ನಿಯಂತ್ರಣ ಆಯೋಗ ಎಲ್ಲ ರೀತಿಯ ಗ್ರಾಹಕರ ಶುಲ್ಕ ಹೆಚ್ಚಿಸಿ ಆದೇಶಿಸಿದೆ. ಗ್ರಾಹಕರ ಕಷ್ಟ ಅರಿಯದೆ ಏಕಾಏಕಿ ಅವೈಜ್ಞಾನಿಕವಾಗಿ ಶುಲ್ಕ ಹೆಚ್ಚಿಸಲಾಗಿದೆ. ಗ್ರಾಹಕರಿಗೆ ಯಾವುದೇ ಮುನ್ಸೂಚನೆ … Read more

ಭರವಸೆ ಈಡೇರಿಸಿ ಇಲ್ಲ ಅಧಿಕಾರ ಬಿಟ್ಟು ತೊಲಗಿ: ಬಿಎಸ್‍ವೈ

‘ಅಧಿವೇಶನದ ಒಳಗೂ- ಹೊರಗೂ ಹೋರಾಟ’ ಸುದ್ದಿ360, ದಾವಣಗೆರೆ: ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿ ಜಾರಿಗೆ ಒತ್ತಾಯಿಸಿ ಜುಲೈ 4ರಿಂದ ಆರಂಭಗೊಳ್ಳಲಿರುವ ಅಧಿವೇಶನದಲ್ಲಿ ನಮ್ಮ ಶಾಸಕರು ಸದನದ ಒಳಗೆ ಹೋರಾಟ ನಡೆಸಲಿದ್ದಾರೆ. ಮತ್ತು ಸದನದ ಹೊರಗೆ ಸ್ವತಃ ನಾನೇ ಧರಣಿ ಆರಂಭಿಸಲಿರುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ನಗರದ ಅಭಿನವ ರೇಣುಕಾ ಮಂದಿರದಲ್ಲಿ ಗುರುವಾರ ನಡೆದ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಸದನದ ಒಳಗೂ, ಹೊರಗೂ ಸರಕಾರದ ಮೂಗು ಹಿಡಿದು ಉಸಿರು ಗಟ್ಟುವಂತೆ … Read more

ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಸಚಿವ ತಿಮ್ಮಾಪುರ – ‘ತಡವಾಗಬಹುದು ಆದರೆ ಕೊಟ್ಟ ಮಾತಿಗೆ ತಪ್ಪೋದಿಲ್ಲ’

ಸುದ್ದಿ360 ದಾವಣಗೆರೆ: ಬಡವರ ಅನ್ನದ ಜತೆ ಕೇಂದ್ರ ಸರ್ಕಾರ  ಆಟವಾಡುತ್ತಿದೆ ಇದು ಖಂಡನೀಯ  ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ನಡೆಯುತ್ತಿದ್ದು, ರಾಜ್ಯ ಸರಕಾರ ಹತ್ತು ಕೆಜಿ ಅಕ್ಕಿ ನೀಡಲು ಬದ್ಧವಾಗಿದೆ. ಆದರೆ, “ಕೇಂದ್ರ ಸರಕಾರ ಅಕ್ಕಿ ಪೂರೈಸದೆ ಅಸಹಕಾರ ನೀತಿ ಅನುಸರಿಸುತ್ತಿರುವ ಕಾರಣ ತಕ್ಷಣಕ್ಕೆ ಅಕ್ಕಿ ಕೊಡಲಾಗುತ್ತಿಲ್ಲ ಎಂದರು. ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ಆಹಾರ ಸಚಿವ … Read more

ದೈವಜ್ಞ ವಿದ್ಯಾ ಸಂಸ್ಥೆಯಲ್ಲಿ ಕಳೆಗಟ್ಟಿದ ವಿಶ್ವ ಯೋಗ ದಿನಾಚರಣೆ

ಸುದ್ದಿ360, ದಾವಣಗೆರೆ: ನಗರದ ದೇವರಾಜು ಅರಸು ಬಡವಾಣೆಯಲ್ಲಿರುವ ದೈವಜ್ಞ ವಿದ್ಯಾ ಸಂಸ್ಥೆಯ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಹಿರಿಯ ಶಿಕ್ಷಕಿ ಆಶಾ ಬಂಡಿಗೇರಿ ಯವರು  ಮಕ್ಕಳಿಗೆ ಯೋಗಾಭ್ಯಾಸದ ಜೊತೆ ಯೋಗದ ಮಹತ್ವವನ್ನು ವಿವರಿಸಿದರು. ಸೂರ್ಯನಮಸ್ಕಾರ, ಪ್ರಾಣಾಯಾಮ  ಹಾಗೂ ಯೋಗಾಸನ ಬಂಗಿಗಳನ್ನು ವಿದ್ಯಾರ್ಥಿಗಳಿಂದ ಮಾಡಿಸಿದರು. ಶಾಲೆಯ ಬೋಧಕ ಮತ್ತು ಬೋಧಕೇತರ ವರ್ಗದವರು ಯೋಗಾಭ್ಯಾಸದಲ್ಲಿ ತೊಡಗಿಕೊಳ್ಳುವ ಮೂಲಕ ಯೋಗದ ಮಹತ್ವವನ್ನು ಮಕ್ಕಳಿಗೆ ಮನವರಿಕೆ ಮಾಡಿದರು. ಹಾಗೆಯೇ ಪ್ರತಿ ಶನಿವಾರ ಬೆಳಿಗ್ಗೆ ಮಕ್ಕಳಿಗೆ ಯೋಗಾಸನ ತರಬೇತಿಯನ್ನು ನೀಡುವ … Read more

ಜೂ.25, 26: ಹೆಬ್ಬಾಳು ವಿರಕ್ತಮಠದಲ್ಲಿ ಸಾವಯವ ಕೃಷಿ ಅರಿವು

ಸುದ್ದಿ360 ದಾವಣಗೆರೆ: ಗೋಆಧಾರಿತ ಕೃಷಿ ಹಾಗೂ ಸಾವಯವ ಕೃಷಿ ಕುರಿತು  ಅರಿವು ಮೂಡಿಸುವ ಕಾರ್ಯಕ್ರಮವನ್ನು ಸಮೀಪದ ಹೆಬ್ಬಾಳು ವಿರಕ್ತ ಮಠದಲ್ಲಿ ಜೂ.25, 26ರಂದು ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ.ಆರ್. ಧನಂಜಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಮಹಾರಾಷ್ಟ್ರದ ಕೊಲ್ಲಾಪುರ ಸಿದ್ಧಗಿರಿ ಮಠದ ಶ್ರೀ ಅದೃಷ್ಯ ಕಾಡುಸಿದ್ಧೇಶ್ವರ ಸ್ವಾಮೀಜಿ ಹಾಗೂ ಹೆಬ್ಬಾಳು ವಿರಕ್ತ ಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು. ಜೂ.25ರಂದು ಸಂಜೆ … Read more

error: Content is protected !!