ಆ.6: ಕಲಾಕುಂಚ ಕೇರಳ ಶಾಖೆಯಿಂದ ‘ವನಸುಮ’ , ‘ಕಾವ್ಯ ಮೃಷ್ಟಾನ್ನ’ ಕವನ ಸಂಕಲನ ಲೋಕಾರ್ಪಣೆ

ಸುದ್ದಿ360 ದಾವಣಗೆರೆ, ಆ.4: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಕೇರಳ ಶಾಖೆಯ ಆಶ್ರಯದಲ್ಲಿ ಆಗಸ್ಟ್ 6 ರಂದು ಸಂಜೆ 5 ಗಂಟೆಗೆ ಕೇರಳ ಜಿಲ್ಲೆಯ, ಕಾಸರಗೋಡು ಜಿಲ್ಲೆಯ ಉಪ್ಪಳದ ಶ್ರೀಕ್ಷೇತ್ರ ಕೊಂಡವೂಡಿನಲ್ಲಿ ಕವಯತ್ರಿ ಲಕ್ಷ್ಮೀದೇವಿ ವಿ.ಭಟ್‌ ವಿರಚಿತ “ವನಸುಮ” ಹಾಗೂ “ಕಾವ್ಯ ಮೃಷ್ಟಾನ್ನ” ಕವನ ಸಂಕಲನಗಳ ಲೋಕಾರ್ಪಣೆ ಮತ್ತು ಗೀತಾಭಿಯಾನದ ಉದ್ಘಾಟನೆ ನಡೆಯಲಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ. ಕೊಂಡವೂರಿನ ಶ್ರೀಮಠದ ಯೋಗಾನಂದ ಸರಸ್ವತಿ ಸ್ವಾಮೀಜಿಯವರು ದೀಪ ಪ್ರಜ್ವಲನಗೊಳಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಿ … Read more

ಕಲಾಕುಂಚ: ವಿಶ್ವ ಪರಿಸರ ದಿನಾಚರಣೆ – ಉಚಿತ ಚಿತ್ರ ಬರೆಯುವ ಸ್ಪರ್ಧೆ ಫಲಿತಾಂಶ

ಸುದ್ದಿ360 ದಾವಣಗೆರೆ, ಜೂನ್ 18: ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದ ಉಚಿತ ಚಿತ್ರ ಬರೆಯುವ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಇದರ  ಫಲಿತಾಂಶ ಪ್ರಕಟಿಸಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ  ತಿಳಿಸಿದ್ದಾರೆ. ರಾಜ್ಯ ಮಟ್ಟದ ಈ ಉಚಿತ ಚಿತ್ರ ಬರೆಯುವ ಸ್ಪರ್ಧೆಗೆ ಕರ್ನಾಟಕ ವಿವಿಧ ಜಿಲ್ಲೆಗಳೂ ಸೇರಿದಂತೆ ನೆರೆ ರಾಜ್ಯಗಳಿಂದಲೂ ಸ್ಪರ್ಧಿಗಳು ಪಾಲ್ಗೊಂಡಿದ್ದರು. ಸುಮಾರು ಒಂದು ಸಾವಿರದ ಎಂಟುನೂರ ಆರವತ್ತಮೂರು ಚಿತ್ರಗಳು ಬಂದಿದ್ದವು ಎಂದು ಗಣೇಶ್‍ ಶೆಣೈ … Read more

ಯಕ್ಷರಂಗದಿಂದ ಯಕ್ಷಗಾನ ತರಬೇತಿ ಶಿಬಿರ

ಸುದ್ದಿ360 ದಾವಣಗೆರೆ, ಜೂನ್ 18: ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಯಕ್ಷರಂಗ-ಯಕ್ಷಗಾನ ಸಂಸ್ಥೆಯ ಆಶ್ರಯದಲ್ಲಿ ನಿರಂತರ ಯಕ್ಷಗಾನ ತರಬೇತಿ ಶಿಬಿರ ಹಮ್ಮಿಕೊಂಡಿದೆ. ತರಬೇತಿಯು ನಗರದ ಕೆ.ಬಿ. ಬಡಾವಣೆ, ಕುವೆಂಪು ರಸ್ತೆಯಲ್ಲಿರುವ (ಲಾಯರ್ ರಸ್ತೆ), ಕಲಾಕುಂಚ ಕಛೇರಿಯ ಸಭಾಂಗಣದಲ್ಲಿ ಪ್ರತೀ ಭಾನುವಾರ ಬೆಳಿಗ್ಗೆ 6-30 ರಿಂದ 9-00 ಗಂಟೆಯವರೆಗೆ ನಡೆಯಲಿದ್ದು, ಈ ಶಿಬಿರವನ್ನು ಖ್ಯಾತ ವೃತ್ತಿನಿರತ ಯಕ್ಷಗಾನ ಕಲಾವಿದ ಹಟ್ಟಿಯಂಗಡಿ ಆನಂದಶೆಟ್ಟಿಯವರು ನಡೆಸಿಕೊಡಲಿದ್ದಾರೆ ಎಂದು ಸಂಸ್ಥೆಗಳ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ. ಯಾವುದೇ ವಯಸ್ಸಿನ … Read more

error: Content is protected !!