ಕೆರೆಗಳಿಗೆ  ಸ್ಲೂಯೀಸ್ ಗೇಟ್ ಅಳವಡಿಸಲು ತೀರ್ಮಾನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.01: ಕೆರೆಗಳ  ಒತ್ತುವರಿ ತೆರವುಗೊಳಿಸಿ  ಬೊಮ್ಮನಹಳ್ಳಿ, ಮಹದೇವಪುರ, ಕೆ.ಆರ್.ಪುರಂ ಅಥವಾ ಎತ್ತರದ ಪ್ರದೇಶದಲ್ಲಿ ಅತಿ ಹೆಚ್ಚು ಕೆರೆಗಳಿದ್ದು, ಒಂದಕ್ಕೊಂದು  ಹೊಂದಿಕೊಂಡಿರುವ ಕೆರೆಗಳಿಗೆ  ಸ್ಲೂಯೀಸ್ ಗೇಟ್ ಗಳನ್ನು ಅಳವಡಿಸಲು  ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಗರದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ನಂತರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಮಳೆ ನೀರು ಚರಂಡಿಗಳ ನಿರ್ವಹಣೆಗೆ  ಕೈಪಿಡಿ ತೆರೆವುಗೊಳಿಸುವ ಕಾರ್ಯ ನಿರಂತರವಾಗಿ ಆಗಬೇಕು.  ತಗ್ಗು ಪ್ರದೇಶದಲ್ಲಿ ನೀರು … Read more

ಆಡಳಿತ ಪಕ್ಷ ಮತ್ತು ಪ್ರತಿಪಕ್ಷದ ವಿರುದ್ಧ ಎಸ್ ಡಿ ಪಿ ಐ ಆರೋಪ

ಸುದ್ದಿ360 ದಾವಣಗೆರೆ, ಆ.27: ನಾ ಖಾವೂಂಗಾ ನಾ ಖಾನೇ ದೂಂಗಾ ಎನ್ನುವ ಪ್ರಧಾನ ಮಂತ್ರಿ ಮೋದಿಯವರು, ಕರ್ನಾಟಕದಲ್ಲಿನ ಕಮೀಷನ್ ದಂಧೆಗೆ ಪರೋಕ್ಷವಾಗಿ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಎಸ್ ಡಿ ಪಿಐ ರಾಜ್ಯ ಅಧ್ಯಕ್ಷ ಅಬ್ದುಲ್ ಮಜೀದ್ ಆರೋಪಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗುತ್ತಿಗೆದಾರರು ಪ್ರಧಾನಿಯವರಲ್ಲಿ ತಮ್ಮ ಅಳಲನ್ನು ತೋಡಿಕೊಂಡರೂ ಸ್ಪಂದಿಸದ ಪ್ರಧಾನಿಯವರ ಕುಮ್ಮಕ್ಕು 40 ಪರ್ಸೆಂಟ್ ಗಿಂತಲೂ ಹೆಚ್ಚುತ್ತಿರುವ ಕಮೀಷನ್ ವ್ಯವಹಾರಕ್ಕೆ ಕುಮ್ಮಕ್ಕು ಇರುವುದಾಗಿ ಆರೋಪಿಸುವ ಸ್ಥಿತಿ ಬಂದೊದಗಿದೆ ಎಂದು ಅವರು ಹೇಳಿದರು. ಸರ್ಕಾರಿ ಉದ್ಯೋಗಗಳಲ್ಲಿನ … Read more

ಸಮಗ್ರ ಕ್ಯಾನ್ಸರ್ ಚಿಕಿತ್ಸೆ ಈಗ ದಾವಣಗೆರೆಯಲ್ಲಿಯೇ ಲಭ್ಯ

ಸುದ್ದಿ360 ದಾವಣಗೆರೆ, ಆ.27: ವಿಶ್ವದಲ್ಲೇ ಅತ್ಯುತ್ತಮವಾಗಿರುವ ರೆಡಿಯೋಥೆರಪಿ ಚಿಕಿತ್ಸೆ ಈಗ ಮಧ್ಯ ಕರ್ನಾಟಕದಲ್ಲಿ ಲಭ್ಯವಿರುವುದಾಗಿ  ದಾವಣಗೆರೆಯ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆಯ ಕನ್ಸಲ್ಟಂಟ್ ಹೆಡ್ ಡಾ. ಜಗದೀಶ ತುಬಚಿ ಹೇಳಿದರು. ನಗರ ಹೊರವಲಯದ ಬಾಡಾ ಕ್ರಾಸ್ ಬಳಿ ಇರುವ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ನೂತನ ಯಂತ್ರ ಹಾಗೂ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳ ಕುರಿತು ಮಾಹಿತಿ ನೀಡಿದ ಅವರು, ಈ ಮೊದಲು ಕ್ಯಾನ್ಸರ್ ರೆಡಿಯೋಥೆರಪಿ ಚಿಕಿತ್ಸೆ ಪಡೆಯಲು ರಾಜ್ಯದ ಜನ ಬೆಂಗಳೂರು, ಚೆನ್ನೈ, ಹೈದರಾಬಾದ್‌ಗೆ ಹೋಗಬೇಕಿತ್ತು. … Read more

ವಿ.ಡಿ. ಸಾವರ್ಕರ್ ವಿವಾದ – ಡಾ. ಎಂ.ಬಿ. ಪಾಟೀಲ ಹೇಳಿದ್ದೇನು ?

ಕಾಂಗ್ರೆಸ್ ನಿಂದ ಕನ್ನಡ ಹೋರಾಟಗಾರರ ರಥಯಾತ್ರೆ ಸುದ್ದಿ360 ವಿಜಯಪುರ, ಆ.25: ಬಿಜೆಪಿಯಿಂದ ವಿ.ಡಿ.ಸಾವರ್ಕರ್ ರಥಯಾತ್ರೆಗೆ ಪ್ರತ್ಯುತ್ತರವಾಗಿ ಕನ್ನಡ ನಾಡಿನ ಹೋರಾಟಗಾರರ ರಥಯಾತ್ರೆಗೆ ಕಾಂಗ್ರೆಸ್ ಸಿದ್ದವಾಗಿದೆ. ವೀರ ರಾಣಿ ಕಿತ್ತೂರ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಹಲಗಲಿಯ ಬೇಡರು, ಸುರಪುರ ನಾಯಕರು….ಹೀಗೆ ಅನೇಕ ಹೋರಾಟಗಾರರನ್ನು ಗೌರವಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸುವುದಾಗಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಾ.ಎಂ.ಬಿ‌. ಪಾಟೀಲ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿರುವ ಪಾಟೀಲರು, ಬಿಜೆಪಿಗೆ ಕನ್ನಡದ ಹೋರಾಟಗಾರರು ಬೇಡವಾ? ಅವರ ಫೋಟೋ ತೆಗೆದುಕೊಂಡು ರಥ ಯಾತ್ರೆ ಮಾಡಲಿ, ಹಲಗಲಿಯ … Read more

ಪುಸ್ತಕ ಮಾರಾಟ ಅಭಿಯಾನ

ಸುದ್ದಿ360 ದಾವಣಗೆರೆ, ಆ.23: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 02 ರಿಂದ ಆ.29 ರವರಗೆ ನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಅಂಗವಾಗಿ ಅಮೃತ ಪುಸ್ತಕ ಮಾರಾಟ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನವನ್ನು ಆ.25 ರಂದು ಬೆಳಗ್ಗೆ 10 ಗಂಟೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆ ಹಾಗೂ ಮಧ್ಯಾಹ್ನ 12 ಗಂಟೆಗೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಎಲ್ಲಾ ಪುಸ್ತಕಗಳನ್ನು ಶೇ.50% ರ ರಿಯಾಯಿತಿ ದರದಲ್ಲಿ ಮಾರಾಟ … Read more

ಇದೀಗ ಪ್ರತಿ ಕನ್ನಡಿಗರಿಗೂ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ  ಸದಸ್ಯರಾಗುವ ಅವಕಾಶ

ಸುದ್ದಿ360 ದಾವಣಗೆರೆ, ಆ.22: ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ಆಜೀವ ಸದಸ್ಯತ್ವ ಪಡೆಯಲು, ರೂಪಾಯಿ 250-00 ಆನ್ಲೈನ್ ಮೂಲಕವೇ  ಪಾವತಿಸಿ ಸದಸ್ಯತ್ವ ಪಡೆಯುವ ಸದಾವಕಾಶವನ್ನು 18 ವರ್ಷ ತುಂಬಿದ ಪ್ರತಿಯೊಬ್ಬ ಕನ್ನಡಿಗರಿಗೂ ಕಲ್ಪಿಸಿ ಕೊಟ್ಟಿದೆ ಎಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಬಿ ವಾಮದೇವಪ್ಪ ಅವರು  ತಮ್ಮ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ಮಾಡುವ ಸದುದ್ದೇಶದಿಂದಲೂ, ವಿಶ್ವದಾದ್ಯಂತ ಕನ್ನಡವನ್ನು ಒಗ್ಗೂಡಿಸಲು ಹೊರರಾಜ್ಯ, ಕೇಂದ್ರಾಡಳಿತ ಪ್ರದೇಶ ಮತ್ತು ಹೊರದೇಶ ಘಟಕಗಳನ್ನು ಸ್ಥಾಪಿಸುವ … Read more

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ – ಸಂಪೂರ್ಣ ತನಿಖೆಗೆ ಸಿಎಂ ಆದೇಶ

ಸುದ್ದಿ360 ಬೆಂಗಳೂರು, ಆ.19: ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಒಡ್ಡಿರುವ  ವಿಷಯವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ ಹಾಗೂ ಸಂಪೂರ್ಣ ತನಿಖೆ ಮಾಡಿಸುವುದಾಗಿ  ಭರವಸೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಶುಕ್ರವಾರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರೊಂದಿಗೆ ನೇರವಾಗಿ ಮಾತನಾಡಿದ್ದು, ಅವರಿಗೆ  ಅಥವಾ  ಸಿಬ್ಬಂದಿಗೆ ಬೆದರಿಕೆ ಕರೆಗಳು ಬಂದಿದ್ದರೆ ವಿವರಗಳನ್ನು  ನೀಡಲು ತಿಳಿಸಿದ್ದೇನೆ ಎಂದರು. ಅದರ ಜೊತೆಗೆ ಡಿಜಿ ಅವರನ್ನು … Read more

ಮುಖ್ಯಮಂತ್ರಿಗಳು ನಾಳೆ ದಾವಣಗೆರೆಗೆ ಬರುತ್ತಿಲ್ಲ. .

shimoga-riots-were-the-result-of-the-governments-appeasement-policy-basavaraj-bommai

ಶಿಗ್ಗಾವಿ, ಸವಣೂರಿನಲ್ಲಿ ವಕೀಲರ ಸಂಘಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಿಎಂ ಶಂಕುಸ್ಥಾಪನೆ ಸುದ್ದಿ360 ಬೆಂಗಳೂರು, ಆ. 20: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಭಾನುವಾರ) ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಶಿಕ್ಷಣ ಸೇವೆಯಲ್ಲಿ 75 ಸಾರ್ಥಕ ವಸಂತಗಳನ್ನು ಕಳೆದು ಲಕ್ಷಾಂತರ ವಿದ್ಯಾರ್ಥಿಗಳ ಬಾಳು ಹಸನು ಮಾಡುತ್ತಾ ಬಂದಿರುವ ಸಂತ ಪೌಲರ ಶಾಲೆಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಮುಖ್ಯಮಂತ್ರಿಗಳ ಹಾವೇರಿ ಹಾಗೂ … Read more

ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ – ಪೊಲೀಸ್ ಗೌರಗಳೊಂದಿಗೆ ಅಂತ್ಯಕ್ರಿಯೆ

ಸುದ್ದಿ360 ಬೆಂಗಳೂರು, ಆ.12: ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂಗೀತ ಪರಂಪರೆಯ ಮನೆತನದಿಂದ ಬಂದ ಸುಬ್ಬಣ್ಣ ಅವರು ಸುಗಮ ಸಂಗೀತ  ಹಾಗೂ ಚಲನ ಚಿತ್ರ ಹಿನ್ನಲೆ ಗಾಯಕರಾಗಿ ತಮ್ಮದೇ ಛಾಪು ಮೂಡಿಸಿದ್ದರು. ಅವರ ‘ಕಾಡು ಕುದುರೆ ಓಡಿ ಬಂದಿತ್ತಾ’ ಗೀತೆಯು ಇಂದಿಗೂ ಅಭಿಮಾನಿಗಳು ಗುನುಗುನಿಸುವ ಹಾಡು. ಇದಕ್ಕಾಗಿ ಭಾರತ ಸರ್ಕಾರದ ರಜತ ಕಮಲ ಪ್ರಶಸ್ತಿಗೂ ಭಾಜನರಾದರು. ಸಂತ ಶಿಶುನಾಳ ಶರೀಫರ ಗೀತೆಗಳಿಗೆ ದನಿಯಾಗಿ ಅವುಗಳನ್ನು … Read more

ಹರ್ ಘರ್ ತಿರಂಗ: ರಾಜ್ಯದಲ್ಲಿ 1 ಕೋಟಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ

ಸುದ್ದಿ360 ಬೆಂಗಳೂರು, ಆ.08: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ‘ಹರ್ ಘರ್ ತಿರಂಗ’ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಈ ಅಭಿಯಾನದ ಸಿದ್ಧತೆಯನ್ನು ಪರಿಶೀಲಿಸಿ ಮಾತನಾಡಿದರು.  ಈ ಕಾರ್ಯಕ್ರಮವನ್ನು ಕೇವಲ ಕಾಟಾಚಾರಕ್ಕೆ ಮಾಡದೆ, ದೇಶದ ಮೇಲಿನ ಅಭಿಮಾನ ಪ್ರೀತಿಯಿಂದ ಆಯೋಜಿಸಬೇಕು. ಇದನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂಬ ತುಡಿತದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ರಾಜ್ಯದಲ್ಲಿ ಸುಮಾರು 1 ಕೋಟಿಗೂ ಹೆಚ್ಚು … Read more

error: Content is protected !!