ಶಿವಮೊಗ್ಗ ನಗರದಲ್ಲಿ ವಿಶೇಷ ಕಾರ್ಯಾಚರಣೆ – ಮಾರಕಾಸ್ತ್ರಗಳು ಪೊಲೀಸರ ವಶ

ಪೊಲೀಸರು ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದಿರುವ ಮಾರಕಾಸ್ತ್ರಗಳು.

ಪ್ರವೀಣ್ ಹತ್ಯೆ ಪ್ರಕರಣ – ದುಷ್ಕರ್ಮಿಗಳ ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜು. 27 : ಸಮಾಜದಲ್ಲಿ ಹಿಂಸೆ, ಕ್ಷೋಭೆ ಉಂಟು ಮಾಡುವಂತಹ ದುಷ್ಕೃತ್ಯವನ್ನು ಎಸಗಿರುವ ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಆರ್ ಟಿ ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿ, ಮಂಗಳೂರಿನಲ್ಲಿ ನಿನ್ನೆ ನಡೆದ ಪ್ರವೀಣ್ ಹತ್ಯೆ ವಿಚಾರವಾಗಿ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ.  ಅಪರಾಧಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಆದೇಶ ನೀಡಲಾಗಿದೆ. ಕೇರಳ ರಾಜ್ಯದ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿರಲಾಗಿದೆ. ಮಂಗಳೂರು ಹಾಗೂ ಕಾಸರಗೋಡು … Read more

ದಾವಣಗೆರೆ ಜಿಲ್ಲಾ ಕಾಂಗ್ರೆಸ್‍ನಿಂದ ಕಾರ್ಗಿಲ್ ವಿಜಯ ದಿವಸ್ – ಕೇಂದ್ರ ಸರ್ಕಾರ ಸೈನಿಕರನ್ನು ಗೌರವದಿಂದ ಕಾಣಲಿ: ದಿನೇಶ್ ಕೆ.ಶೆಟ್ಟಿ

ಸುದ್ದಿ360, ದಾವಣಗೆರೆ ಜು.26: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಕಾರ್ಗಿಲ್ ವಿಜಯ ದಿವಸ್‍ನ್ನು ದಾವಣಗೆರೆ ನಗರದ ಹರಳೆಣ್ಣೆ ಕೊಟ್ರಬಸಪ್ಪ (ರಾಂ ಅಂಡ್ ಕೋ) ವೃತ್ತದಲ್ಲಿ ಮಂಗಳವಾರ ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಮಾತನಾಡಿ ಇಡೀ ದೇಶ ಇಂದು ಕಾರ್ಗಿಲ್ ವಿಜಯ ದಿವಸವನ್ನು ಆಚರಿಸುತ್ತಿದೆ. ದೇಶಕ್ಕಾಗಿ ಹುತಾತ್ಮರಾದ ಎಲ್ಲ ಭಾರತೀಯ ಸೈನಿಕರಿಗೂ … Read more

ರಂಗಭೂಮಿ ಡಿಪ್ಲೊಮಾಗೆ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ ಜು.25: ಮೈಸೂರಿನ ನಟನ ರಂಗಶಾಲೆಯು ಒಂದು ವರ್ಷದ ಅಭಿನಯ ಮತ್ತು ರಂಗ ತರಬೇತಿ ‘ರಂಗಭೂಮಿ ಡಿಪ್ಲೊಮಾ’ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಆ.7ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಮೈಸೂರಿನ ರಾಮಕೃಷ್ಣ ನಗರದ ಕೆ ಬ್ಲಾಕ್‌ನಲ್ಲಿರುವ ನಟನ ರಂಗಶಾಲೆಯಲ್ಲಿ ಪ್ರವೇಶ ಪ್ರಕ್ರಿಯೆ ಮತ್ತು ಸಂದರ್ಶನ ನಡೆಯಲಿದೆ. ಹಿರಿಯ ರಂಗ ಹಾಗೂ ಚಿತ್ರ ಕಲಾವಿದ ಮಂಡ್ಯ ರಮೇಶ್ ನೇತೃತ್ವದ ನಟನ ರಂಗಶಾಲೆ, ಮೈಸೂರು ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಸಂಸ್ಥೆಯಾಗಿದೆ. ಡಿಪ್ಲೊಮಾ ಪ್ರವೇಶಕ್ಕೆ 16ರಿಂದ 30 ವರ್ಷದೊಳಗಿನ … Read more

ಎಸಿಬಿ ಎಸ್ಪಿಯಾಗಿ ರಾಜೀವ್ ನೇಮಕ

ಸುದ್ದಿ360 ದಾವಣಗೆರೆ, ಜು.23: ಕಾರವಾರ ಜಿಲ್ಲೆಯ ಲೋಕಾಯುಕ್ತ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಾಜೀವ್ ದಾವಣಗೆರೆ ಪೂರ್ವವಲಯದ ಎಸಿಬಿ ಎಸ್ಪಿಯಾಗಿ ನೂತನವಾಗಿ ನೇಮಕವಾಗಿದ್ದಾರೆ. ಮೈಸೂರಿನಲ್ಲಿ ಡಿಎಸ್ಪಿ ಟ್ರೈನಿಂಗ್ ಮುಗಿಸಿ, ಉಡುಪಿಯಲ್ಲಿ ಪ್ರೋಭೇಷನರಿಯಾಗಿ ಕೆಲಸ ಮಾಡಿದ್ದರು. ಇನ್ನು ಮಡಿಕೇರಿ, ಕೊಪ್ಪಳ ಡಿಎಸ್ಪಿ, ಬೆಳಗಾವಿಯಲ್ಲಿ ಡಿಸಿಆರ್‌ಇಸೆಲ್‌ನಲ್ಲಿ ಎಎಸ್ಪಿ, ಕೋಲಾರ ಎಎಸ್ಪಿಯಾಗಿ ಕೆಲಸ ನಿರ್ವಹಿಸಿದ್ದರು. ನಂತರ ದಾವಣಗೆರೆಯಲ್ಲಿ ಎಎಸ್ಪಿಯಾಗಿ ಕೆಲಸ ಮಾಡಿ, ಐಪಿಎಸ್‌ಗೆ ಪದನ್ನೋತಿ ಹೊಂದಿದ್ದರು.

ಬಿ.ಎಸ್.ಯಡಿಯೂರಪ್ಪ ಚುನಾವಣಾ ರಾಜಕೀಯ ನಿವೃತ್ತಿ? –  ಬಿ.ವೈ. ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧೆ. . .

ಸುದ್ದಿ360, ಶಿವಮೊಗ್ಗ, ಜು.22: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಬಿ.ವೈ. ವಿಜಯೇಂದ್ರ ಸ್ಪರ್ಧೆ ಮಾಡಲಿದ್ದು, ಜನರು ಆಶೀರ್ವಾದ ಮಾಡಬೇಕು ಎಂದು ಮಾಜಿ ಮುಖ್ಯಮೂರ್ತಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಇದು ರಾಜಕೀಯ ವಲಯದಲ್ಲಿ ದೊಡ್ಡ ಸಂಚಲನವನ್ನು ಮೂಡಿಸಿದ್ದು, ಇದರ ಜೊತೆಗೆ ಯಡಿಯೂರಪ್ಪನವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ಸುಳಿವು ಎಂದೇ ವಿಶ್ಲೇಷಿಸಲಾಗುತ್ತಿದೆ. ಶಿಕಾರಿಪುರ ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ನಡೆದ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿರುವ ಯಡಿಯೂರಪ್ಪನವರು, ಸಂಸದ ಬಿ.ವೈ. ರಾಘವೇಂದ್ರ ಅವರೊಂದಿಗೆ ವಿಜಯೇಂದ್ರ ಅವರು ಕೂಡ ತಾಲೂಕಿನಾದ್ಯಂತ … Read more

ರಾಷ್ಟ್ರಪತಿ ದ್ರೌಪದಿ ಮುರ್ಮು ಆಡಳಿತದಲ್ಲಿ ದೇಶ ಅಭಿವೃದ್ಧಿಯ ಉತ್ತುಂಗಕ್ಕೆ ಏರಲಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜುಲೈ 21: ಮುಂಬರುವ ದಿನಗಳಲ್ಲಿ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ  ಕರ್ನಾಟಕದ ಜೊತೆಗೆ ಅನ್ಯೋನ್ಯ ಸಂಬಂಧವನ್ನು ಹೊಂದಿ, ಅವರ ಆಡಳಿತ ಕಾಲದಲ್ಲಿ ದೇಶ ಅಭಿವೃದ್ಧಿಯ ಉತ್ತುಂಗಕ್ಕೇರಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.  ಅವರು ಇಂದು ಬಿಜೆಪಿ ಕಚೇರಿಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ರಾಷ್ಟ್ರಪತಿ ಚುನಾವಣೆಯಂದು ಪ್ರಜಾಪ್ರಭುತ್ವ ಗೆದ್ದಿದೆ. ಭಾರತದ ಅತ್ಯಂತ ಉನ್ನತವಾದ ಸ್ಥಾನ ರಾಷ್ಟ್ರಪತಿ ಸ್ಥಾನ. ಆ ಸ್ಥಾನಕ್ಕೆ ಹಿಂದುಳಿದ ಪ್ರದೇಶದಿಂದ ಬಂದ ಒಬ್ಬ ಮಹಿಳೆ ಅತ್ಯುನ್ನತ ಹುದ್ದೆಗೇರುವುದು ಪ್ರಜಾಪ್ರಭುತ್ವದ ಶಕ್ತಿ. … Read more

25, 26 ಕ್ಕೆ ಸಿಎಂ ದೆಹಲಿ ಪ್ರವಾಸ – ಬಿಟ್ಟೂ ಬಿಡದೆ ಕಾಡುತ್ತಿರುವ ಸಂಪುಟ ವಿಸ್ತರಣೆ

ವರಿಷ್ಠರು ಪ್ರಸ್ತಾಪಿಸಿದರೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ  ಸುದ್ದಿ360, ಬೆಂಗಳೂರು:ಜು.21: ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಜು. 24 ರಂದು ನವದೆಹಲಿಗೆ ತೆರಳಿತ್ತಿದ್ದೇನೆ. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಪ್ರಸ್ತಾಪಿಸಿದರೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಮಲೋಚನೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಪ್ರಧಾನಕಾರ್ಯದರ್ಶಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ,  ವಿವಿಧ ಇಲಾಖೆಗಳ ನಿಯೋಗದೊಂದಿಗೆ ಜುಲೈ 24 ರಂದು ದೆಹಲಿ … Read more

ಕಬಿನಿ ಜಲಾಶಯ ಕ್ಕೆ ಮುಖ್ಯಮಂತ್ರಿ ಬಾಗಿನ

ಸುದ್ದಿ360 ಮೈಸೂರು,ಜುಲೈ 20: ಇಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಕಬಿನಿ ಜಲಾಶಯದ ಬಳಿ ಆಯೋಜಿಸಿರುವ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿಯವರ ಪತ್ನಿ ಚೆನ್ನಮ್ಮ, ಜಲ ಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ್ ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್ ಟಿ ಸೋಮಶೇಖರ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.

ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಹುಮಾತದೊಂದಿಗೆ ಗೆಲುವು ನಿಶ್ಚಿತ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜು.18: ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಆಯ್ಕೆಯನ್ನು ಹಲವಾರು ಪಕ್ಷಗಳು ಬೆಂಬಲಿಸಿರುವುದರಿಂದ 2/3  ಬಹುಮತದೊಂದಿಗೆ ಗೆಲ್ಲುವುದು ನಿಶ್ಚಿತ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಷ್ಟ್ರಪತಿ ಚುನಾವಣೆಯಲ್ಲಿ ಇದ್ದ ಹಿಂದಿನ  ದಾಖಲೆಯನ್ನ ಮುರಿಯುವ ಎಲ್ಲಾ ಸಾಧ್ಯತೆಗಳಿವೆ.  ದ್ರೌಪದಿ ಮುರ್ಮು ಅವರು ಮಾನವೀಯ ಗುಣಗಳನ್ನು ಹೊಂದಿದ್ದು, ಅತ್ಯುನ್ನತ ಸ್ಥಾನ ಕ್ಕೇರುವುದು ಭಾರತದ ಪ್ರಜಾಪ್ರಭುತ್ವ ಹಾಗೂ ಭವಿಷ್ಯಕ್ಕೆ ಒಳ್ಳೆಯದಾಗಲಿದೆ ಎಂಬ ನಿರೀಕ್ಷೆ ನಮ್ಮದು ಎಂದರು. ದೇಶಾದ್ಯಂತ ರಾಷ್ಟ್ರಪತಿ … Read more

error: Content is protected !!