ಕುವೆಂಪು ಕನ್ನಡ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ದ್ವಜಾರೋಹಣ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ

ಸುದ್ದಿ360 ದಾವಣಗೆರೆ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿನೂತನ ಮಹಿಳಾ ಸಮಾಜ (ರಿ.) ವಿನಾಯಕ ಬಡಾವಣೆ ದಾವಣಗೆರೆ. ಇವರ ಸಂಯುಕ್ತಾಶ್ರಯದಲ್ಲಿ ಆ.15ರ ಮಂಗಳವಾರ ಬೆಳಗ್ಗೆ8.30ಕ್ಕೆ ಕುವೆಂಪು ಕನ್ನಡ ಭವನದ ಮುಂಭಾಗದಲ್ಲಿ ಜಿಲ್ಲಾ ಕ ಸಾ ಪ ಅಧ್ಯಕ್ಷರಾದ ಬಿ ವಾಮದೇವಪ್ಪ ನವರು  ದ್ವಜಾರೋಹಣ ಮಾಡಿ ಧ್ವಜ  ವಂದನೆ ಸ್ವೀಕರಿಸುವರು. ಬೆಳಗ್ಗೆ 11 ಗಂಟೆಗೆ ಕುವೆಂಪು ಕನ್ನಡ ಭವನದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿನೂತನ ಮಹಿಳಾ … Read more

ಶೋಷಿತ ಸಮುದಾಯಗಳ ಧ್ವನಿ – ಕ್ರಾಂತಿಕಾರಿ ಹಾಡುಗಾರ ಗದ್ದರ್ ಅವರಿಗೆ ನುಡಿನಮನ

gaddar-nudinamana-shivamogga-suddi360

ಸುದ್ದಿ360 ಶಿವಮೊಗ್ಗ: ಕ್ರಾಂತಿಗೀತೆ, ಲಾವಣಿಗಳ ಮೂಲಕ ಶೋಷಿತ ಸಮುದಾಯಗಳ ಪ್ರತಿಭಟನೆಯ ಧ್ವನಿಯಾಗಿದ್ದ ಕ್ರಾಂತಿಕಾರಿ ಹಾಡುಗಾರ ಗದ್ದರ್ ಭಾನುವಾರ ಹೈದರಾಬಾದ್‍ನಲ್ಲಿ ವಿಧಿವಶರಾಗಿದ್ದಾರೆ. ಗದ್ದರ್ ಅಭಿಮಾನಿಗಳು ಅಗಲಿದ ಚೇತನಕ್ಕೆ ಗೌರವಪೂರ್ವಕವಾಗಿ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಆ.9ರ ಬುಧವಾರದಂದು ಸಂಜೆ 5 ಗಂಟೆಗೆ ನಗರದ ಮೀಡಿಯಾಹೌಸ್‍ನಲ್ಲಿ ನುಡಿನಮನ ಕಾರ್ಯಕ್ರಮ ನಡೆಯಲಿದ್ದು, ಸಮಾನ ಮನಸ್ಕ ಗೆಳೆಯರು ನುಡಿನಮನ ಸಭೆಗೆ ಆಗಮಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್‍ ಸಂಖ್ಯೆ 8073502892 ಸಂಪರ್ಕಿಸಬಹುದಾಗಿದೆ. ಅವಿನಾಭಾವ ನಂಟು: ಗದ್ಧರ್  ಅವರು  ತಮ್ಮ ಕ್ರಾಂತಿಕಾರಿ ವಿಶಿಷ್ಠ ಲಾವಣಿಗಳ … Read more

ಕಾಂಗ್ರೆಸ್ ಸರ್ಕಾರದಿಂದ ದಲಿತರಿಗೆ ದ್ರೋಹ – ಬೆಲೆ ಏರಿಕೆ ‘ಕೈ’ ಸರ್ಕಾರದ ಆರನೇ ಗ್ಯಾಂಟಿ: ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದು ಕಾಂಗ್ರೆಸ್ ‌ಸರ್ಕಾರದ ದುಬಾರಿ ದುನಿಯಾ. ಈ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಟ್ಚೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ  ವಿದ್ಯುತ್ ದರ ಏರಿಕೆ, ಟೊಮೆಟೊ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ, ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ,  ಹೊಟೆಲ್ ಗಳಲ್ಲಿ ತಿಂಡಿಗಳ ಬೆಲೆ ಏರಿಕೆ, … Read more

‘ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ನಾ ಕಂಡಂತೆ’ – ಸಾಮಾಜಿಕ ಹೋರಾಟಗಾರ ಮಂಜುನಾಥ್ ಕೈದಾಳೆಯವರ ಮಾತುಗಳಲ್ಲಿ. . .

ನಾ ಕಂಡಂತಹ ಜಿಲ್ಲಾಧಿಕಾರಿ  ಅಧಿಕಾರ ವಹಿಸಿಕೊಂಡ ಮೊದಲನೆಯ ಕೆಲಸ ಜಗಳೂರು ತಾಲೂಕಿನ ಕಡುಬಡತನದ ಒಂದು ಅಂಗವಿಕಲ ಕುಟುಂಬದ ಮನೆಗೆ ಬೇಟಿ ನೀಡಿ ಅವರಿಗೆ ಮಾಸಾಷನ ಪತ್ರ ನೀಡಿದ್ದು ಪತ್ರಿಕೆಯಲ್ಲಿ ಸಣ್ಣದಾಗಿ ವರದಿಯಾಯಿತು. ನಾನು ಕೂತುಹಲ ಮತ್ತು ಇಷ್ಟು ದಿವಸ ಈ ಕುಟುಂಬಕ್ಕೆ ಅಂಗವಿಕಲ ಮಾಸಾಶನ  ಸಿಗುತ್ತಿರಲಿಲ್ಲವೇ ಎನ್ನುವ ಪ್ರಶ್ನೆಯು ಮೂಡಿತು. ಆಗ ಮಾಹಿತಿಗಾಗಿ ಜಗಳೂರಿನ ನನಗೆ ಪರಿಚಯ ವಿರುವವರನ್ನು  ವಿಚಾರಿಸಿದಾಗ ತಿಳಿದದ್ದು ತುಂಬಾ ಬೇಸರವಾಯಿತು. ಅಲ್ಲಿಯವರೆಗೂ ಆ ಕುಟುಂಬಕ್ಕೆ ಆ ಸೌಲಭ್ಯವೇ ದೊರಕಿಲ್ಲ ಎನ್ನುವುದು ಬೇಸರ ಮೂಡಿಸಿತು. … Read more

ಅಧಿಕಾರಿಗಳ ಆಂಗ್ಲ ದರ್ಬಾರ್ : ‘ಎಚ್ಚೆತ್ತುಕೊಳ್ಳದಿದ್ದರೆ ಕರವೇಯಿಂದ ಘೇರಾವ್‍ ಎಚ್ಚರ’

ಸುದ್ದಿ360 ದಾವಣಗೆರೆ : ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮೊನ್ನೆ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಅಧಿಕಾರಿಗಳ ಆಂಗ್ಲ ದರ್ಬಾರ್ ನಿಂದ ಕೂಡಿತ್ತು ಎಂಬುದಾಗಿ ಆರೋಪಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಇದನ್ನು ತೀವ್ರವಾಗಿ ಖಂಡಿಸಿದ್ದು, ಮುಂದುವರೆದಲ್ಲಿ ಇಂತಹ ಸಭೆಗಳ ಮೇಲೆ ಕರವೇ ದಾಳಿ ನಡೆಸಿ ಅಧಿಕಾರಿಗಳಿಗೆ ಘೇರಾವ್ ಮಾಡಲಾಗುವುದು ಎಂದು ವೇದಿಕೆ ಜಿಲ್ಲಾಧ್ಯಕ್ಷರಾದ ಎಂ.ಎಸ್.ರಾಮೇಗೌಡ ಎಚ್ಚರಿಸಿದ್ದಾರೆ. ಸಭೆಯಲ್ಲಿ ದಾವಣಗೆರೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಭಾಗವಹಿಸಿದ್ದ  ಗುಂಜನ್ ಕೃಷ್ಣರವರು ಜಿಲ್ಲೆಯ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಆಂಗ್ಲ ಭಾಷೆಯಲ್ಲೆ … Read more

ಜು.19ರಿಂದ ಗೃಹಲಕ್ಷ್ಮೀಗೆ ಅರ್ಜಿ ಆರಂಭ:  ಅರ್ಜಿ ಸಲ್ಲಿಕೆ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು…

gruhalakshmi-karnataka-suddi360

ಸುದ್ದಿ360 ಬೆಂಗಳೂರು: ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ (gruha lakshmi) ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ 19 ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ (Minister of Women and Child Welfare) ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ ಮನೆ ಯಜಮಾನಿಗೆ ಈ ಯೋಜನೆಯ ಹಣ ದೊರೆಯಲಿದ್ದು, ಯಾವುದೇ ಕಡೆಯ ದಿನಾಂಕ … Read more

‘ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಮಹಿಳಾ ಶಕ್ತಿ ಮುಂದಾಗಬೇಕು’

NFIW ಮಹಿಳಾ ಸಂಘಟನಾ ಸಭೆಯಲ್ಲಿ ಸಿಪಿಐ ಮುಖಂಡ ಕಾಂ. ಆನಂದರಾಜ್ ಸುದ್ದಿ360 (suddi360) ದಾವಣಗೆರೆ (davangere news):  ಎಲ್ಲಾ ಹೋರಾಟಗಳ ಪೈಕಿ ಮಹಿಳಾ ಶಕ್ತಿಯ ಹೋರಾಟ ಬಹಳ ಮಹತ್ವ ಪಡೆದುಕೊಂಡಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ( ಜಿಲ್ಲಾ ಮುಖಂಡರಾದ ಕಾಂ. ಆನಂದರಾಜ(anandaraj) ರವರು ಹೇಳಿದರು. ಅವರಿಂದು ದಾವಣಗೆರೆ ಅಶೋಕ ರಸ್ತೆಯಲ್ಲಿರುವ ಕಾಂ ಪಂಪಾಪತಿ ಭವನದಲ್ಲಿ NFIW ಅಖಿಲ ಭಾರತ ಮಹಿಳಾ ಒಕ್ಕೂಟದ ಜಿಲ್ಲಾ ಸಂಘಟನಾ ಸಭೆ ಉದ್ಘಾಟಿಸಿ ಮಾತನಾಡುತ್ತ ಮಹಿಳೆಯರ ಹೋರಾಟಕ್ಕೆ ಯಾವುದೇ ಸರ್ಕಾರಗಳು ಮಣಿಯುತ್ತವೆ … Read more

ಕರ್ನಾಟಕ ರಾಜ್ಯ  ಹಿಂದುಳಿದ ವರ್ಗದ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾಗಿ ಮಲ್ಲಿಕಾರ್ಜುನ್ ಕಬ್ಬೂರು, ಕಾರ್ಯಾಧ್ಯಕ್ಷರಾಗಿ ರಾಜು ನದಾಫ್ ಅವಿರೋಧ ಅಯ್ಕೆ

mallikarjun-kabbur-as-state-president-raju-nadaf-as-working-president

ಸುದ್ದಿ360 ಬೆಂಗಳೂರು: ಕರ್ನಾಟಕ ರಾಜ್ಯ   ಹಿಂದುಳಿದ ವರ್ಗದ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾಗಿ ದಾವಣಗೆರೆಯ ಮಲ್ಲಿಕಾರ್ಜುನ್ ಕಬ್ಬೂರು ಹಾಗೂ ಕಾರ್ಯಾಧ್ಯಕ್ಷರಾಗಿ ಬೆಳಗಾವಿಯ ರಾಜು ನದಾಫ್ ಅವಿರೋಧ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ವರ್ತಾ ಇಲಾಖೆಯ ಸಭಾಂಗಣದಲ್ಲಿ ಇಂದು (ಬುಧವಾರ) ನಡೆದ ಹಿಂದುಳಿದ ವರ್ಗಗಳ ಜಿಲ್ಲಾ ಮತ್ತು ಪ್ರಾದೇಶಿಕ  ಪತ್ರಿಕೆ ಸಂಪಾದಕರ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ರಾಮನಗರದ ಮತ್ತಿಕೆರೆ ಜಯರಾಮ್  ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಂಡ್ಯದ ಶಿವಪ್ರಕಾಶ್ ಎಂ.ಎಸ್. ಆಯ್ಕೆಯಾಗಿದ್ದಾರೆ. ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ್ ಕಬ್ಬೂರು ಮಾತನಾಡಿ, ಅಧ್ಯಕ್ಷ ಹುದ್ದೆ … Read more

ಕರ್ನಾಟಕದಲ್ಲಿ ಜಂಗಲ್ ರಾಜ್ಯ – ದಪ್ಪ ಚರ್ಮದ ಸರ್ಕಾರ : ಬಸವರಾಜ ಬೊಮ್ಮಾಯಿ

BJP protests against the state government - suddi360

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿ ಸುದ್ದಿ360 ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು. ವಿಧಾನಸೌಧದಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿಯವರು, ಕರ್ನಾಟಕದಲ್ಲಿ ಜಂಗಲ್ ರಾಜ್ಯ ಶುರುವಾಗಿದೆ. ಸಾಮಾನ್ಯರು ಭಯ … Read more

ದಾವಣಗೆರೆ: ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ಪೊಲೀಸ್‍ ದಾಳಿ

prostitution-davangere-police-raided-place

ಸುದ್ದಿ360, ದಾವಣಗೆರೆ: ಹಣದ ಆಮಿಷ ಒಡ್ಡಿ ಹೆಣ್ಣುಮಕ್ಕಳನ್ನು ಕರೆಯಿಸಿಕೊಂಡು ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಪಿಜೆ ಬಡಾವಣೆಯ 3ನೇ ಮೇನ್‍ ನಲ್ಲಿರುವ 2ನೇ ಮಹಡಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದರ ಖಚಿತ ಮಾಹಿತಿ ಮೇರೆಗೆ ಜು.10ರ ಸೋಮವಾರ ಸಂಜೆ ಹೆಚ್ಚುವರಿ ಪೊಲೀಸ್‍ ಅಧೀಕ್ಷಕರ ಹಾಗೂ ಉಪವಿಭಾಗ ಪೊಲೀಸ್‍ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾನಗರ ಪಿಐ ರವರು ಮಹಿಳಾ ಪೊಲೀಸ್‍ ಠಾಣೆಯ ಪಿ.ಎಸ್.ಐ ಮತ್ತು ಬಡಾವಣೆ ಪಿಎಸ್ಐ ಹಾಗೂ ಸಿಬ್ಬಂದಿಯವರನ್ನೊಳಗೊಂಡ ತಂಡ ಸ್ಥಳದ ಮೇಲೆ … Read more

error: Content is protected !!