ಭರವಸೆ ಈಡೇರಿಸಿ ಇಲ್ಲ ಅಧಿಕಾರ ಬಿಟ್ಟು ತೊಲಗಿ: ಬಿಎಸ್‍ವೈ

‘ಅಧಿವೇಶನದ ಒಳಗೂ- ಹೊರಗೂ ಹೋರಾಟ’ ಸುದ್ದಿ360, ದಾವಣಗೆರೆ: ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿ ಜಾರಿಗೆ ಒತ್ತಾಯಿಸಿ ಜುಲೈ 4ರಿಂದ ಆರಂಭಗೊಳ್ಳಲಿರುವ ಅಧಿವೇಶನದಲ್ಲಿ ನಮ್ಮ ಶಾಸಕರು ಸದನದ ಒಳಗೆ ಹೋರಾಟ ನಡೆಸಲಿದ್ದಾರೆ. ಮತ್ತು ಸದನದ ಹೊರಗೆ ಸ್ವತಃ ನಾನೇ ಧರಣಿ ಆರಂಭಿಸಲಿರುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ನಗರದ ಅಭಿನವ ರೇಣುಕಾ ಮಂದಿರದಲ್ಲಿ ಗುರುವಾರ ನಡೆದ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಸದನದ ಒಳಗೂ, ಹೊರಗೂ ಸರಕಾರದ ಮೂಗು ಹಿಡಿದು ಉಸಿರು ಗಟ್ಟುವಂತೆ … Read more

ಹೆಣ್ಣುಮಕ್ಕಳು ಸ್ವಾವಲಂಬನೆಯತ್ತ ಹೆಜ್ಜೆ ಹಾಕಲಿ: ಜಿಲ್ಲಾ ಕ ಸಾ ಪ ಅಧ್ಯಕ್ಷ ಬಿ .ವಾಮದೇವಪ್ಪ ಸಲಹೆ

ಸುದ್ದಿ360 ದಾವಣಗೆರೆ: ಹೆಣ್ಣುಮಕ್ಕಳು ವಿದ್ಯಾಭ್ಯಾಸದ ನಂತರದಲ್ಲಿ ಸರ್ಕಾರಿ ಉದ್ಯೋಗ ಸಿಗಲಿಲ್ಲವೆಂದು ಕೈಕಟ್ಟಿ ಕೂರದೆ ಸ್ವ–ಉದ್ಯೋಗ ಕೈಗೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗುವತ್ತ ಹೆಜ್ಜೆ ಹಾಕಲಿ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಬಿ.ವಾಮದೇವಪ್ಪ ಸಲಹೆ ನೀಡಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಆವರಣದಲ್ಲಿ ಶನಿವಾರ ನಡೆದ ಪಠ್ಯಪೂರಕ ಚಟುವಟಿಕೆ ಸಮಾರೋಪ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ  ಭಾಗವಹಿಸಿ ಮಾತನಾಡಿದರು. ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿಯರು ಯಾರಿಗೂ ಕಡಿಮೆ ಇಲ್ಲ ಎಂಬಂತೆ ಉತ್ತಮ ಸಾಧನೆ ತೋರಿರುವುದು … Read more

‘ಮಾವನವರ ಮಾತು ನನಗೆ ಆಶೀರ್ವಾದ’ ಎನ್ನುತ್ತಲೇ ಸವಾಲು ಸ್ವೀಕರಿಸಲು ಸಿದ್ಧ ಎಂದಿರುವ ಸಂಸದ ಜಿ.ಎಂ. ಸಿದ್ದೇಶ‍್ವರ

ಸುದ್ದಿ360 ದಾವಣಗೆರೆ: `ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸಿದ್ದೇಶ್ವರ ಸೋಲುವುದನ್ನು ನೋಡುತ್ತೇನೆ’ ಎಂದು ಹೇಳಿರುವ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಮಾತಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಅವರು “ಹಿರಿಯರು ಹಾಗೂ ನಮ್ಮ ಮಾವನವರಾಗಿರುವ ಶಾಮನೂರು ಶಿವಶಂಕರಪ್ಪ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರು ಏನೇ ಹೇಳಿರಲಿ, ಅವರ ಮಾತುಗಳು ನನಗೆ ಆಶೀರ್ವಾದ ಇದ್ದಂತೆ” ಎಂದಿದ್ದಾರೆ. ನಗರದ ಜಿಎಂಐಟಿ ಅತಿಥಿಗೃಹದಲ್ಲಿ ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ನಿಂತರೆ ಫಂಡ್ ಕೊಡುವುದಾಗಿ ಹಿರಿಯರಾಗಿರುವ … Read more

ದ್ವೇಷದ ತೀರ್ಮಾನ ತೆಗೆದುಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪವಾಗಿದೆ: ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಬೆಂಗಳೂರು: ರಾಜ್ಯದಲ್ಲಿ ‌ಮುಂಗಾರು ವೈಫಲ್ಯವಾಗಿ ಹಲವಾರು ಗ್ರಾಮದಲ್ಲಿ ಕುಡಿಯುವ ನಿರಿನ ಹಾಹಾಕಾರ ಉಂಟಾಗಿದೆ, ಅಂತರ ಜಲ ಕುಸಿದಿದೆ. ರೈತರ ಪಾಲಿಗೆ ಮುಂಗಾರು ವೈಫಲ್ಯ ಬಹಳ ದೊಡ್ಡ ಹೊಡೆತ ಕೊಟ್ಟಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವ ಬದಲು, ದ್ವೇಷದ ತೀರ್ಮಾನಗಳನ್ನು ತೆಗೆದುಕೊಂಡು ಸಂಕಷ್ಟದಲ್ಲಿರುವ ಕರ್ನಾಟಕದ ಜನರಿಗೆ ಈ ಸರ್ಕಾರ ಶಾಪವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಟ್ಚೀಟ್ ಮಾಡಿರುವ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ … Read more

ದಾವಣಗೆರೆ: ಜೂ.4ರಂದು ಮಾಧ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ-ಬಿರುದು-ಸಮ್ಮಾನ

ದಾವಣಗೆರೆ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜೂನ್. 4 ರಂದು ಬೆಳಿಗ್ಗೆ 10. 45ಕ್ಕೆ ನಗರದ ದೇವರಾಜು ಅರಸು ಬಡಾವಣೆಯಲ್ಲಿನ ಶಿವಧ್ಯಾನ ಮಂದಿರದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ 2022 ನೇ ಸಾಲಿನ ಮಾಧ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ, ವಿವಿಧ ಪ್ರಶಸ್ತಿಗಳ ಪುರಸ್ಕೃತ ಪತ್ರಕರ್ತರಿಗೆ ಗೌರವಾರ್ಪಣೆ, ಮಹಿಳಾ ಪತ್ರಕರ್ತರಿಗೆ ಸನ್ಮಾನ ಹಾಗೂ ಪತ್ರಕರ್ತರಿಗೆ ಧನಸಹಾಯ ವಿತರಣಾ ಕಾರ್ಯಕ್ರಮ ಜರುಗಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಇ.ಎಂ ಮಂಜುನಾಥ್ ತಿಳಿಸಿದರು. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ … Read more

ಕರ್ನಾಟಕ ನಂ.1 ರಾಜ್ಯವಾಗಿಸುವ ಗುರಿ: ಸಚಿವ ಸರ್ಬಾನಂದ್ ಸೋನೋವಾಲ

ಸುದ್ದಿ360 ದಾವಣಗೆರೆ ಏ. 25:  ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ ಬಿಜೆಪಿಯ ಉದ್ದೇಶ. ರಾಜ್ಯದಲ್ಲಿ ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತಂದು ಕರ್ನಾಟಕವನ್ನು ದೇಶದ ನಂ.1 ರಾಜ್ಯವನ್ನಾಗಿಸುವ ಗುರಿ ನಮ್ಮದಾಗಿದೆ ಎಂದು ಕೇಂದ್ರ ಬಂದರು ಮತ್ತು ಆಯುಷ್ ಸಚಿವ ಸರ್ಬಾನಂದ್ ಸೋನೋವಾಲ ಹೇಳಿದರು. ನಗರದ ಜಿಎಂಐಟಿ ಅತಿಥಿಗೃಹದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 9 ವರ್ಷಗಳ ಹಿಂದೆ ಭಾರತ ವಿಶ್ವದ ಅತಿ ದೊಡ್ಡ ಆರ್ಥಿಕತೆ ದೇಶಗಳ ಪೈಕಿ 11ನೇ ಸ್ಥಾನದಲ್ಲಿತ್ತು. ಪ್ರಧಾನಿ ಮೋದಿ ಆಡಳಿತದ ಅವಧಿಯಲ್ಲಿ ದೇಶ ಆರ್ಥಿಕವಾಗಿ ಪ್ರಗತಿ … Read more

ದಾವಣಗೆರೆ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಡಾ. ಕೆ ಅರುಣ್ ಅಧಿಕಾರ ಸ್ವೀಕಾರ

ಸುದ್ದಿ360 ದಾವಣಗೆರೆ, ಏ. 24: ದಾವಣಗೆರೆ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಡಾ. ಕೆ ಅರುಣ್ ಐಪಿಎಸ್ ರವರು  ಇಂದು ಅಧಿಕಾರ ವಹಿಸಿಕೊಂಡರು. ನೂತನ ಅಧಿಕಾರಿ ಡಾ. ಅರುಣ್ ಅವರು  ಈ ಮೊದಲು ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಯ ರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, ಕಲಬುರಗಿಯ ಪೊಲೀಸ್ ತರಬೇತಿ ಶಾಲೆಯ ಪ್ರಾಚಾರ್ಯರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಮೊದಲು ಜಿಲ್ಲೆಯ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಿ.ಬಿ. ರಿಷ್ಯಂತ್‍ ಅವರು ಚುನಾವಣೆ ಮಾರ್ಗಸೂಚಿಯನ್ವಯ ವರ್ಗಾವಣೆ ಹೊಂದಿದ್ದಾರೆ. ಸಿ. ಬಿ. ರಿಷ್ಯಂತ್‍ ಅವರ … Read more

ರಾಜ್ಯಕ್ಕೆ ಪ್ರಧಾನಿ ಸೇರಿದಂತೆ ತಾರಾ ಪ್ರಚಾರಕರ ಆಗಮನ: ಸಿಎಂ ಬೊಮ್ಮಾಯಿ

ಸುದ್ದಿ360, ದಾವಣಗೆರೆ, ಏ. 24:  ರಾಜ್ಯಕ್ಕೆ  ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಸೃತಿ ಇರಾನಿ, ಸೇರಿದಂತೆ ಹಲವು ನಾಯಕರು  ತಾರಾ ಪ್ರಚಾರಕರಾಗಿ  ಆಗಮಿಸುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದಾವಣಗೆರೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಭಾವನೆಗಳ ಜೊತೆ ಬಿಜೆಪಿ ಆಟವಾಡುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ, ‘ಡಿಕೆಶಿ ಹೇಳುವುದು ಒಂದು ಮಾಡೋದು ಒಂದು, ಲಿಂಗಾಯತ ವಿವಾದಗಳನ್ನು ತೆಗೆದಿದ್ದೇ ಅವರು. ದೇವರು ಯಾರಿಗೆ ಆಶೀರ್ವಾದ ಮಾಡ್ತಾರೆ ಎಂದು ಕಾದು ನೋಡೋಣ.’ … Read more

ಸವದಿ, ಶೆಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿಗೆ ಪ್ಲಸ್ – ಸಿಎಂ ಬೊಮ್ಮಾಯಿ

ಸುದ್ದಿ360 ದಾವಣಗೆರೆ, ಏ. 24: ಕಳೆದ ಬಾರಿಗಿಂತ ಈ ಬಾರಿ ನಮಗೆ ಮತಗಳು ಹೆಚ್ಚಾಗಲಿವೆ. ಸವದಿ, ಶೆಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿ ಗೆ ಪ್ಲಸ್ ಆಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜಗದೀಶ್‍ ಶೆಟ್ಟರ್, ಲಕ್ಷ್ಮಣ ಸವದಿಯವರು ಎಲ್ಲಾ ಪದವಿ ಬಿಜೆಪಿಯಿಂದ ಪಡೆದು ನಂತರ ಕಾಂಗ್ರೇಸ್ ಗೆ ಹೋಗಿದ್ದಾರೆ. ಜನರು ಅವರನ್ನು ಒಪ್ಪುವುದಿಲ್ಲ.  – ಬಸವರಾಜ ಬೊಮ್ಮಾಯಿ ದಾವಣಗೆರೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಮಿತ್ರರಿಗೆ ನಾನು ಧನ್ಯವಾದ ಹೇಳಲು ಇಷ್ಟ ಪಡುತ್ತೇನೆ.  ಸವದಿ, … Read more

ಮತದಾನ ಮಾಡದೆ ವ್ಯವಸ್ಥೆಯ ದೂಷಣೆ ಸರಿಯಲ್ಲ: ಸುರೇಶ್ ಹಿಟ್ನಾಳ್

ದಾವಣಗೆರೆ : ಸ್ವೀಪ್ ಸಮಿತಿಯಿಂದ ಬೋಟಿಂಗ್ ಮೂಲಕ ಮತದಾನ ಜಾಗೃತಿ ಅಭಿಯಾನ ಸುದ್ದಿ360 ದಾವಣಗೆರೆ,ಏ.23: ಮತದಾನದ ಜವಾಬ್ದಾರಿಯಿಂದ ನುಣುಚಿಕೊಂಡು ಆಶೋತ್ತರಗಳನ್ನು ಈಡೇರಿಸದವರನ್ನು ದೂಷಿಸುವುದು ತರವಲ್ಲ, ಪ್ರತಿಯೊಬ್ಬರು ತಮ್ಮ ಹಕ್ಕನ್ನು ಚಲಾಯಿಸಿ ಪ್ರಶ್ನಿಸುವ ಹಕ್ಕನ್ನು ಪಡೆಯಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್ ಹಿಟ್ನಾಳ್ ಹೇಳಿದರು. ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಚನ್ನಗಿರಿ ತಾಲ್ಲೂಕಿನ ಶಾಂತಿಸಾಗರದಲ್ಲಿ ಮತದಾನ ಜಾಗೃತಿ ಅಭಿಯಾನ ಭಾಗವಾಗಿ ಭಾನುವಾರ ಆಯೋಜಿಸಿದ್ದ ಸಾಹಸ ಜಲ ಕ್ರೀಡೆಯಲ್ಲಿ ಭಾಗವಹಿಸಿ, … Read more

error: Content is protected !!