ಡಾ.ಬಿ.ಆರ್ ಅಂಬೇಡ್ಕರ್ ರವರ 132ನೇ ಜಯಂತಿ ಸರಳ ಆಚರಣೆ
ದಾವಣಗೆರೆ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಏಪ್ರಿಲ್ 14 ರಂದು ಬೆಳಿಗ್ಗೆ 10.30 ಗಂಟೆಗೆ ಡಾ. ಬಿ.ಆರ್ ಅಂಬೇಡ್ಕರ್ ರವರ 132ನೇ ಜಯಂತಿ ಆಚರಣೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುತ್ತದೆ. ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಆಚರಣೆಯನ್ನು ಸರಳವಾಗಿ ಆಚರಿಸಲು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ