ಕಲ್ಲೇಶ್ವರ ರೈಸ್ ಮಿಲ್ ಹೆಸರು ಹೇಳಿದ್ದು ಮಾಲು ಸಮೇತ ಸಿಕ್ಕ ಆರೋಪಿಯೇ ಹೊರತು ಬಿಜೆಪಿಯಲ್ಲ: ವೀರೇಶ್ ಹನಗವಾಡಿ

ಸುದ್ದಿ360 ದಾವಣಗೆರೆ, ಜ.18: ಅಕ್ರಮ ವನ್ಯ ಜೀವಿ ಪತ್ತೆಗೆ ಸಂಬಂಧಿಸಿದಂತೆ  ಕಲ್ಲೇಶ್ವರ ರೈಸ್ ಮಿಲ್ ಹೆಸರು ಹೇಳಿದ್ದು ಮಾಲು ಸಮೇತ ಸಿಕ್ಕ ಆರೋಪಿಯೇ ಹೊರತು ಬಿಜೆಪಿಯವರಲ್ಲ ಎಂದು  ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ವೀರೇಶ್ ಹನಗವಾಡಿ ಕಟುವಾಗಿ ಹೇಳಿದರು. ಜಿಲ್ಲಾ ವರದಿಗಾರರ ಕೂಟದಲ್ಲಿ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಅಮಾಯಕರಿಗೆ ಶಿಕ್ಷೆಯಾಗಬಾರದು. ತಪ್ಪಿತಸ್ಥರಿಗೆ ಆಗಬೇಕು ಎಂಬುದು ನಮ್ಮ ಹೋರಾಟ. ಬಿಜೆಪಿಯವರಿಗೆ ಮೆದುಳಿಲ್ಲ ಎಂಬ ಮಲ್ಲಿಕಾರ್ಜುನ್ ಹೇಳಿಕೆಗೆ ಪ್ರತಿಕ್ರಿಯಿಸಿ, ಮೆದುಳು ಜಾಸ್ತಿ ಇರುವುದಕ್ಕೆ ಕೃಷ್ಮಮೃಗ, ಜಿಂಕೆ, ಮುಳ್ಳು ಹಂದಿ … Read more

ಜ.21: ಬಿಜೆಪಿಯ ಬೂತ್ ವಿಜಯ ಸಂಕಲ್ಪಅಭಿಯಾನ – ದಾವಣಗೆರೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ

ಸುದ್ದಿ360 ದಾವಣಗೆರೆ ಜ. 18: ಭಾರತೀಯ ಜನತಾ ಪಾರ್ಟಿ ಇದೇ ಜ. 21ರಿಂದ 29ರವರೆಗೆ ರಾಜ್ಯಾದ್ಯಂತ ಬೂತ್ ವಿಜಯ ಸಂಕಲ್ಪ ಅಭಿಯಾನ ಆಯೋಜಿಸಲಾಗಿದ್ದು, ಬೆಳಿಗ್ಗೆ 11. 30ಕ್ಕೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ಸಂಸದ ಜಿ. ಎಂ. ಸಿದ್ದೇಶ್ವರ, ಶಾಸಕ ಎಸ್. ಎ. ರವೀಂದ್ರನಾಥ್, ಪರಿಷತ್ ಸದಸ್ಯ ನವೀನ್,  ಜೇಷ್ಠಾ ಪಡಿಯಾಳ್, ಜಿಲ್ಲೆಯ … Read more

ಸ್ಯಾಮ್ ಸನ್ ಡಿಸ್ಟಿಲರಿಯಲ್ಲೇನು ನಂದಿನಿ ಹಾಲು ತಯಾರಿಸುತ್ತಿದ್ದರಾ!?

ದಾವಣಗೆರೆ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ ಪ್ರಶ್ನೆ ಸುದ್ದಿ360 ದಾವಣಗೆರೆ ಜ.18:  ನಾವು ಬುದ್ದಿಹೀನರೇ ಹಾಗಾಗಿಯೇ ನಾವು ವನ್ಯ  ಜೀವಿಗಳ ತಂಟೆಗೆ ಹೋಗಿಲ್ಲ. ಬುದ್ದಿವಂತರು ಅವುಗಳನ್ನು ತಮ್ಮ ಫಾರ್ಮ್ ಹೌಸ್‍ನಲ್ಲಿ ಇಟ್ಟುಕೊಂಡಿದ್ದರು. ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿಕೊಳ್ಳುವವರು ಬುದ್ದಿವಂತಿಕೆಯಿಂದ ಕೋರ್ಟ್ ನಿಂದ ನಿರೀಕ್ಷಣಾ ಜಾಮೀನಿನ ಮೊರೆ ಹೋಗಿದ್ದಾರೆ ಎಂದು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ ಕುಟುಕಿದ್ದಾರೆ. ಜಿಲ್ಲಾ ವರದಿಗಾರರ ಕೂಟದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವನ್ಯ ಜೀವಿ ಪತ್ತೆ … Read more

ನಾಳೆಯೇ ಚುನಾಣೆ ನಡೆದ್ರೂ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಶಾಮನೂರು ಶಿವಶಂಕರಪ್ಪ

ಜ.19ಕ್ಕೆ ದಾವಣಗೆರೆಯಲ್ಲಿ ಪ್ರಜಾಧ್ವನಿ ಯಾತ್ರೆ ಸುದ್ದಿ360 ದಾವಣಗೆರೆ, ಜ.17: ರಾಜ್ಯದಲ್ಲಿ ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಬಿಜೆಪಿ ದುರಾಡಳಿತದಿಂದ ರಾಜ್ಯದಲ್ಲಿ ಜನರು ಬೇಸತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಗಾಳಿ ಬೀಸತೊಡಗಿದೆ ಎಂದು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಹೇಳಿದರು. ಜ.19 ರಂದು ನಡೆಯುವ ಪ್ರಜಾಧ್ವನಿ ಬಸ್ ಯಾತ್ರೆ ಸಮಾರಂಭ ಪೂರ್ವ ಸಿದ್ಧತೆ ಸಭೆ ಬಳಿಕ  ನಗರದ ಹೈಸ್ಕೂಲ್ ಮೈದಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಆಡಳಿತದಲ್ಲಿ ಕಮಿಷನ್ ದಂಧೆ ಜಾಸ್ತಿಯಾಗಿದೆ. ದಿನಕ್ಕೊಂದು … Read more

ಟೀಕೆ ಟಿಪ್ಪಣಿಗೆ ಜಗ್ಗದೆ ಸಮಾಜಕ್ಕೆ ನ್ಯಾಯ ಒದಗಿಸಲು ಬದ್ಧ: ಸಿಎಂ ಬೊಮ್ಮಾಯಿ

ಸುದ್ದಿ360 ದಾವಣಗೆರೆ (ಹರಿಹರ) ಜ.14: ಟೀಕೆ ಮಾಡುವವರು ಮಾಡಲಿ ಅವುಗಳನ್ನೇ ಮೆಟ್ಟಿಲುಗಳನ್ನಾಗಿ ಮಾಡಿಕೊಂಡು ಸಮಾಜಕ್ಕೆ ನ್ಯಾಯ ಒದಗಿಸಲು ನಾನು ಸಿದ್ಧನಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಪಂಚಮಸಾಲಿ ಜಗದ್ಗುರು ಪೀಠ, ಹರಿಹರ ಇವರ ವತಿಯಿಂದ ಆಯೋಜಿಸಿದ್ದ ಹರಜಾತ್ರಾ 2023 ಹಾಗೂ ರೈತ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಸಮುದಾಯದಲ್ಲಿ ಹೆಚ್ಚಿರುವ ರೈತಾಪಿ ವರ್ಗಕ್ಕೆ ಶಕ್ತಿಯನ್ನು ತುಂಬಬೇಕು. ಶಕ್ತಿ ತುಂಬಲು ಸಾಮಾಜಿಕ ನ್ಯಾಯ ನೀಡಬೇಕು. ನಾವು ಈ ವಿಷಯದಲ್ಲಿ ಟೀಕೆಟಿಪ್ಪಣಿಗಳಿಗೆ ಗಮನ ನೀಡದೆ ಸಾಮಾಜಿಕ ಬದ್ಧತೆಯಿಂದ … Read more

ಜನಪರ ಬಜೆಟ್ – ರಾಜ್ಯದಲ್ಲಿ 25 ನೂತನ ಜವಳಿ ಪಾರ್ಕ್ ಸ್ಥಾಪನೆಗೆ ಪ್ರಾಶಸ್ತ್ಯ: ಸಿಎಂ

ಸುದ್ದಿ360 ದಾವಣಗೆರೆ ಜ.14: ಹಣಕಾಸು ಪರಿಸ್ಥಿತಿ ವಿಶ್ಲೇಷಣೆ ಸಂಬಂಧ ಸಭೆ ನಡೆಸಲಾಗಿದ್ದು, ಇನ್ನೂ ಹಲವು ಸುತ್ತಿನ ಸಭೆ ನಡೆಸುವ ಅಗತ್ಯವಿದೆ. ಇನ್ನೆರಡು ದಿನದಲ್ಲಿ ಬಜೆಟ್‌ಗೆ ಸಂಬಂಧಿಸಿದ ಪೂರ್ವಭಾವಿ ಸಭೆಗಳನ್ನು ಆರಂಭಿಸಲಾಗುವುದು. ಫೆಬ್ರವರಿ ಎರಡನೇ ವಾರದಲ್ಲಿ ಜನಪರ ಬಜೆಟ್ ಮಂಡನೆಯಾಗಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ನಗರದ ಜಿಎಂಐಟಿ ಹೆಲಿಪ್ಯಾಡ್‌ನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, 2022ರ ಡಿಸೆಂಬರ್‌ವರೆಗೆ ರಾಜ್ಯದಲ್ಲಿ ನಿರೀಕ್ಷೆ ಮೀರಿ ತೆರಿಗೆ ಸಂಗ್ರಹವಾಗಿದೆ. ವಾಣಿಜ್ಯ ತೆರಿಗೆ, ಅಬಕಾರಿ, ವಾಹನ ತೆರಿಗೆ, ಸ್ಟಾಂಪ್ ಡ್ಯೂಟಿ ಸಂಗ್ರಹ … Read more

ಚುನಾವಣಾ ಪ್ರೇರಿತ ಹೇಳಿಕೆಗಳಿಂದ ಕಾಂಗ್ರೆಸ್ ಜನರನ್ನು ಮರಳು ಮಾಡಲು ಹೊರಟಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ದಾವಣಗೆರೆ ಜ.14: ಚುನಾವಣೆ ಸಮೀಪಿಸುತ್ತಿದ್ದಂತೆ ಹತ್ತಾರು ಚುನಾವಣಾ ಪ್ರೇರಿತ ಹೇಳಿಕೆಗಳು ಕಾಂಗ್ರೆಸ್ಸಿಗರಿಂದ ಬರುತ್ತಲೇ ಇರುತ್ತವೆ. ಇದು ಜನರಿಗೂ ತಿಳಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹರಿಹರದ ಹರ ಜಾತ್ರೆ ಸಮಾರಂಭಕ್ಕೆ ತೆರಳುವ ಮುನ್ನ ನಗರದ ಜಿಎಂಐಟಿ ಹೆಲಿಪ್ಯಾಡ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಹತಾಶ ಮನಸ್ಥಿತಿಯಲ್ಲಿರುವ ಕಾಂಗ್ರೆಸಿಗರು, ಜನರನ್ನು ಮರುಳು ಮಾಡಲು ಹೊರಟಿದ್ದಾರೆ. ಕಾಂಗ್ರೆಸ್ನವರು ಕೇವಲ ಮಾತನಾಡುತ್ತಾರೆ. ಆದರೆ ನಮ್ಮ ಸರ್ಕಾರ ಅಭಿವೃದ್ಧಿ ಪರ ಕೆಲಸಗಳನ್ನು ಮಾಡಿ ತೋರಿಸುತ್ತಿದೆ ಎಂದರು. 200 ಯುನಿಟ್ … Read more

ಸಂಕ್ರಾಂತಿಯಂದು ಪಿಂಚಣಿ ಕ್ರಾಂತಿಗೆ ಮುಂದಾದ ಅನುದಾನಿತ ಶಾಲೆ ಕಾಲೇಜುಗಳ ನೌಕರರು

ಕುಟುಂಬ ಸಮೇತ ಕ್ರಾಂತಿಗಿಳಿದ ಪಿಂಚಣಿ ವಂಚಿತ ನೌಕರರು ಸುದ್ದಿ360 ದಾವಣಗೆರೆ ಜ.12: ನಾಡೆಲ್ಲ ಸಂಕ್ರಾಂತಿಯ ಸಡಗರಕ್ಕೆ ಸಜ್ಜಾಗುತ್ತಿದ್ದರೆ ಹತ್ತಿಪ್ಪತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತ ಬಂದಿರುವ ಅನುದಾನಿತ ಶಾಲೆ ಕಾಲೇಜುಗಳ ಪಿಂಚಣಿ ವಂಚಿತ ನೌಕರರು ತಮ್ಮ ಸೇವೆಗೆ ಜೀವನದ ಕೊನೆಯಘಟ್ಟದಲ್ಲಿ ಪಿಂಚಣಿಯ ಬೆಳ್ಳಿಗೆರೆ ಮೂಡಲಿ ಎಂಬ ಉದ್ದೇಶದಿಂದ ಕ್ರಾಂತಿಗೆ ಮುಂದಡಿ ಇಟ್ಟಿದ್ದಾರೆ. ಈ ಕುರಿತು ಇಂದು ಜಿಲ್ಲಾ ವರದಿಗಾರರ ಕೂಟದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ … Read more

ಮೆಟ್ರೋ ಕಾಮಗಾರಿ ದುರಂತ: ಅಧಿಕಾರಿ, ಗುತ್ತಿಗೆದಾರರ ಮೇಲೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು ಜ.10: ಮೆಟ್ರೊ ಕಾಮಗಾರಿ ದುರಂತಕ್ಕೆ ಕಾರಣರಾದ  ಹಿರಿಯ ಅಧಿಕಾರಿಗಳು, ಮುಖ್ಯಸ್ಥರ ಮೇಲೆ ಕ್ರಮಕೈಗೊಳ್ಳಲು ಸೂಚಿಸಿದ್ದು,  ಗುತ್ತಿಗೆದಾರ ಮೇಲೆ ಪ್ರಕರಣ ದಾಖಲಿಸುವುದರ ಜೊತೆಗೆ ಉನ್ನತ ಮಟ್ಟದ ತನಿಖೆ ಮಾಡುವಂತೆಯೂ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಪ್ರಶ್ನೆ ಇರುವುದು ಇಷ್ಟು ಅಸುರಕ್ಷಿತವಾಗಿ ಹೇಗೆ  ಕೆಲಸ ಮಾಡಿದರು ಎನ್ನುವುದನ್ನು ಪತ್ತೆ ಹಚ್ಚಿ, ಮುಂದೆ ಹೀಗಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತನಿಖೆ ಹಾಗೂ ತಾಂತ್ರಿಕ ಲೋಪದ ಏನು ಎಂಬುದರ ಬಗ್ಗೆ ಕ್ರಮ … Read more

ದಾವಣಗೆರೆ ಎಐಸಿಸಿ ವೀಕ್ಷಕರಾಗಿ ಪ್ರಣಿತಿ ಸುಶೀಲ್‌ ಕುಮಾರ್‌ ಶಿಂಧೆ ನೇಮಕ

ಸುದ್ದಿ360 ದಾವಣಗೆರೆ, ಜ.10:  ಬರಲಿರುವವಿಧಾನಸಭೆ ಚುನಾವಣೆಗೆ ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಐಸಿಸಿ ವೀಕ್ಷಕರಾಗಿ ಪ್ರಣಿತಿ ಸುಶೀಲ್‌ ಕುಮಾರ್‌ ಶಿಂಧೆ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಟಿಕೆಟ್ ಹಂಚಿಕೆಯಿಂದ ಹಿಡಿದು ಚುನಾವಣೆ ಗೆಲ್ಲುವವರೆಗೂ ಎಲ್ಲಾ ಪ್ರಕ್ರಿಯೆಗಳಲ್ಲಿ ಇವರು ಸಕ್ರಿಯವಾಗಿ ಭಾಗವಹಿಸಲಿದ್ದಾರೆ. ಪ್ರಣಿತಿಸುಶೀಲ್ ಕುಮಾರ್ ಶಿಂಧೆ ಅವರು ಮಹಾರಾಷ್ಟ್ರದಲ್ಲಿ ಮೂರು ಬಾರಿ ಶಾಸಕರಾಗಿದ್ದರು. ಕೇಂದ್ರ ಮಾಜಿ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರ ಪುತ್ರಿಯಾಗಿದ್ದಾರೆ.

error: Content is protected !!