ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಂಡವರು ಕಾಂಗ್ರೆಸ್ನವರು: ಸಿಎಂ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಫೆ. 15: ನಿಗಮದಲ್ಲಿ ಟೆಂಡರ್ ನೀಡುವಿಕೆಯಲ್ಲಿ ಎರಡು ಹಂತದ  ಪರಿಶೀಲನೆಯನ್ನು ತೆಗೆದು ಹಾಕಿ ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಂಡಿದ್ದವರು ಕಾಂಗ್ರೆಸ್ನವರು. ಡಿ.ಕೆ.ಶಿವಕುಮಾರ್ ಅವರು ನೀರಾವರಿ ಸಚಿವರಿದ್ದಾಗ ಟೆಂಡರ್ ಪರಿಶೀಲನಾ ಸಮಿತಿಯನ್ನು ತೆಗೆದುಹಾಕಿದ್ದರು. ಟಿ. ಎ. ಸಿ ಯನ್ನೂ ತೆಗೆದುಹಾಕಿದ್ದರು. ನಾವು ಬಂದ ನಂತರ ಅದನ್ನು ಪುನ: ಸ್ಥಾಪನೆ ಮಾಡಿದ್ದೇವೆ. ಹೀಗಾಗಿ ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು … Read more

ದಾವಣಗೆರೆ ಎಐಸಿಸಿ ವೀಕ್ಷಕರಾಗಿ ಪ್ರಣಿತಿ ಸುಶೀಲ್‌ ಕುಮಾರ್‌ ಶಿಂಧೆ ನೇಮಕ

ಸುದ್ದಿ360 ದಾವಣಗೆರೆ, ಜ.10:  ಬರಲಿರುವವಿಧಾನಸಭೆ ಚುನಾವಣೆಗೆ ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಐಸಿಸಿ ವೀಕ್ಷಕರಾಗಿ ಪ್ರಣಿತಿ ಸುಶೀಲ್‌ ಕುಮಾರ್‌ ಶಿಂಧೆ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಟಿಕೆಟ್ ಹಂಚಿಕೆಯಿಂದ ಹಿಡಿದು ಚುನಾವಣೆ ಗೆಲ್ಲುವವರೆಗೂ ಎಲ್ಲಾ ಪ್ರಕ್ರಿಯೆಗಳಲ್ಲಿ ಇವರು ಸಕ್ರಿಯವಾಗಿ ಭಾಗವಹಿಸಲಿದ್ದಾರೆ. ಪ್ರಣಿತಿಸುಶೀಲ್ ಕುಮಾರ್ ಶಿಂಧೆ ಅವರು ಮಹಾರಾಷ್ಟ್ರದಲ್ಲಿ ಮೂರು ಬಾರಿ ಶಾಸಕರಾಗಿದ್ದರು. ಕೇಂದ್ರ ಮಾಜಿ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರ ಪುತ್ರಿಯಾಗಿದ್ದಾರೆ.

‘ಧರ್ಮಕ್ಕಾಗಿ ನಾವಲ್ಲ – ನಮಗಾಗಿ ಧರ್ಮ’ ಧರ್ಮಗಳ ನಡುವಿನ ಗೋಡೆ ಕೆಡವುವುದು ಎಲ್ಲರ ಕರ್ತವ್ಯ

ದಾವಣಗೆರಯಲ್ಲಿ ನಡೆದ ಸರ್ವಧರ್ಮ ಸಾಮೂಹಿಕ ವಿವಾಹದಲ್ಲಿ ಸಿದ್ಧರಾಮಯ್ಯ ಸುದ್ದಿ360 ದಾವಣಗೆರೆ, ಡಿ.30: ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್ ಸೇರಿದಂತೆ ನಮ್ಮ ರಾಷ್ಟ್ರಕವಿ ಕುವೆಂಪುರವರು ಈ ನೆಲವನ್ನು ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬುದನ್ನು ಸಾರಿ ಸಾರಿ ಹೇಳಿದ್ದಾರೆ. ಇಂತಹ ಮಹಾನುಭಾವರ ಪುತ್ಥಳಿಗಳನ್ನು ನಿರ್ಮಿಸಿ ಪೂಜೆ ಮಾಡಿದರೆ ಸಾಲದು, ಅವರ ತತ್ವಗಳನ್ನು ಮೈಗೂಡಿಸಿಕೊಳ್ಳುವ ಮೂಲಕ  ಎಲ್ಲರೂ ಮನುಷ್ಯರಂತೆ ಬದುಕುವ ವಾತಾವರಣ ಸೃಷ್ಟಿಸಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ಅವರು ಇಂದು ನಗರದ ವೀರಮದಕರಿ ನಾಯಕ ವೃತ್ತದಲ್ಲಿ … Read more

ಡಿ ಬಸವರಾಜ್‍ರಿಂದ  ಟಿಕೆಟ್‍ಗಾಗಿ ಮನವಿ

ಸುದ್ದಿ360 ದಾವಣಗೆರೆ, ಡಿ.30: ಇಂದು ದಾವಣಗೆರೆ ನಗರಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರಿಗೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ವಕ್ತಾರರಾದ ಡಿ ಬಸವರಾಜ್ ರವರು ಮಾಯಕೊಂಡ ವಿಧಾನಸಭಾ ಕ್ಷೇತ್ರಕ್ಕೆ ತಮಗೆ ಕಾಂಗ್ರೆಸ್ ಪಕ್ಷದ  ಟಿಕೆಟ್ ನೀಡಬೇಕೆಂದು ಮನವಿ ಮಾಡಿದರು. ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿ ನಿಷ್ಠೆಯಿಂದ ಪ್ರಮಾಣಿಕತೆಯಿಂದ ಸೇವೆ ಸಲ್ಲಿಸಿದ್ದು ಭೋವಿ ಸಮಾಜಕ್ಕೆ ಸೇರಿರುವ ತಮಗೆ ಕಾಂಗ್ರೆಸ್ ಟಿಕೆಟ್ ನೀಡುವ ಮೂಲಕ ಸಾಮಾಜಿಕ ನ್ಯಾಯ … Read more

ಸಿದ್ದರಾಮಯ್ಯ ಅಮೃತ ಮಹೋತ್ಸವ – ದಾವಣಗೆರೆಯಲ್ಲಿ ಸ್ಥಳ ವೀಕ್ಷಿಸಿದ‌ ಕಾಂಗ್ರೆಸ್ ಮುಖಂಡರು

ಶಾಮನೂರು ಶಿವಶಂಕರಪ್ಪ ಅವರ ಒಡೆತನದ 50 ಎಕರೆ ಸ್ಥಳದಲ್ಲಿ ಕಾರ್ಯಕ್ರಮ ಸುದ್ದಿ360, ದಾವಣಗೆರೆ, ಜು.9: ಈಗಾಗಲೇ ಭಾರೀ ಪ್ರಚಾರ ಗಿಟ್ಟಿಸಿರುವ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ವರ್ಷದ ಜನ್ಮ ದಿನದ ಅಮೃತ ಮಹೋತ್ಸವ ಆಗಸ್ಟ್ 3ರಂದು ಬೆಳಿಗ್ಗೆ 11ಕ್ಕೆ ದಾವಣಗೆರೆ ನಗರದಲ್ಲಿ ಏರ್ಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ಧರಾಮಯ್ಯ  ಆಪ್ತರ ತಂಡ ಶನಿವಾರ ದಾವಣಗೆರೆಗೆ ದೌಡಾಯಿಸಿ ಪರಿಶೀಲನೆಯಲ್ಲಿ ತೊಡಗಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿ 48ರ ದಾವಣಗೆರೆ- ಹರಿಹರ  ರಸ್ತೆಯ ಬಳಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಒಡೆತನದ … Read more

ಗುಂಡಿಕ್ಕಿ ಎಂದವನ ಬಂಧಿಸಿ: ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಆಗ್ರಹ

ಸುದ್ದಿ360 ದಾವಣಗೆರೆ, ಜು.02:  ಇತ್ತೀಚೆಗೆ ಸುದ್ದಿ ವಾಹಿನಿಯೊಂದರ ಫೋನ್ ಇನ್ ಕಾರ್ಯಕ್ರಮವೊಂದರಲ್ಲಿ ಕರೆ ಮಾಡಿದ ವ್ಯಕ್ತಿ, ‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಬೇಕು’ ಎಂದು ಹೇಳಿಕೆ ನೀಡಿದ್ದಾನೆ. ಈತನನ್ನು ಕೂಡಲೆ ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಆಗ್ರಹಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಾವಣಗೆರೆಯ ವೀರಪ್ಪ ಎಂಬ ವ್ಯಕ್ತಿ ಈ ರೀತಿಯಾಗಿ ಮಾತನಾಡಿದ್ದು, ಒಂದು ಕೋಮಿನ ವಿರುದ್ಧ ಕೀಳಾಗಿ ಹೇಳಿಕೆ ನೀಡಿದ್ದಾನೆ. ಈ … Read more

ಪುಲ್ವಾಮಾ ದಾಳಿ ರಾಜಕೀಯ ಪ್ರೇರಿತ – ಕೆಪಿಸಿಸಿ ವಕ್ತಾರ ಡಿ.ಬಸವರಾಜ್ ಆರೋಪ

ಪ್ರಧಾನಿಯ ರಾಜ್ಯ ಪ್ರವಾಸ ಅಧಿಕಾರದ ಕುರ್ಚಿಗಾಗಿ – ಯೋಗ ನೆಪಮಾತ್ರ . . ? ಸುದ್ದಿ360 ದಾವಣಗೆರೆ, ಜೂ.20: ೨೦೧೯ರಲ್ಲಿ ನಡೆದ ಪುಲ್ವಾಮಾ ದಾಳಿ ಒಂದು ರಾಜಕೀಯ ಪ್ರೇರಿತ. ಇಲ್ಲವೆಂದಾದರೆ ದಾಳಿಯ ಬಗ್ಗೆ ಗುಪ್ತಚರ ಇಲಾಖೆಯ ಮಾಹಿತಿ ನೀಡಿರಲಿಲ್ಲವೇ, ನೀಡಿದ್ದರೂ ಅದನ್ನು ಹಗುರವಾಗಿ ಪರಿಗಣಿಸಿದ್ದು ಏಕೆ ..? ಇಂದೂ ಸಹ ಅಧಿಕಾರದ ಕುರ್ಚಿಗಾಗಿ ಯೋಗ ದಿನಾಚರಣೆ ನೆಪದಲ್ಲಿ ಪ್ರಧಾನಿಯವರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ್ ಕಿಡಿಕಾರಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Read more

error: Content is protected !!