ಸಣ್ಣ ವಿಚಾರವೆಂದು ನಿರ್ಲಕ್ಷಿಸದೆ ಸೂಕ್ತ ಕ್ರಮ: ಎಡಿಜಿಪಿ ಅಲೋಕ್ ಕುಮಾರ್ ಸೂಚನೆ
ಸುದ್ದಿ360, ದಾವಣಗೆರೆ, ಜು.07: ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಉತ್ತಮ ನಿರ್ವಹಣೆ ನಡೆಯುತ್ತಿದ್ದು, ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಎರಡೂ ಜಿಲ್ಲೆಗಳ ಕಾರ್ಯ ನಿರ್ವಹಣೆಯನ್ನು ಪ್ರಶಂಸಿಸಿದರು. ಇದು ಔಪಚಾರಿಕ ಭೇಟಿಯಾಗಿದ್ದು, ಇಂದಿನ ಸಭೆಯಲ್ಲಿ ಕೆಲವು ಸಲಹೆ ಸೂಚನೆಗಳನ್ನು ನೀಡಲಾಗಿದ್ದು, ಇಲಾಖೆಯಲ್ಲಿ ಉತ್ತಮ ಕೆಲಸ ಮಾಡಿದವರಿಗೆ ಗುರುತಿಸಿ ರಿವಾರ್ಡ್ ನೀಡುವ ಮೂಲಕ ಕರ್ತವ್ಯದಕ್ಷತೆ ಹೆಚ್ಚುವಂತೆ ಮೋಟಿವೇಟ್ ಮಾಡುವ ನಿಟ್ಟಿನಲ್ಲಿ ಇಂದು ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು. … Read more