ಚಲಿಸುತ್ತಿದ್ದ ಬೈಕ್ ಸವಾರನ ಮೇಲೆ ಮಾರಕಾಸ್ತ್ರ ಬೀಸಿ ಕೊಲೆ

ಸುದ್ದಿ360 ಬೆಳಗಾವಿ, ಆ.26: ಬೈಕ್ ಮೇಲೆ ಹೋಗುತ್ತಿದ್ದವನ ಕತ್ತು ಕತ್ತರಿಸಿ ಕೊಲೆ ಮಾಡಿರುವ ಭೀಕರ ಘಟನೆ ಶುಕ್ರವಾರ ವರದಿಯಾಗಿದೆ. ಸವದತ್ತಿ ತಾಲ್ಲೂಕಿನ ಮುನ್ನವಳ್ಳಿ ಗ್ರಾಮದ ಗದಗಯ್ಯ ಹಿರೇಮಠ (40) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಗದಗಯ್ಯ ತಮ್ಮ ಬೈಕ್ ಮೇಲೆ ಹಲಗಾ ಮಾರ್ಗವಾಗಿ ಹೊರಟಿದ್ದ ವೇಳೆ ಹಿಂಬದಿಯಿಂದ ಬೈಕ್ ಮೇಲೆ ಬಂದ  ಆರೋಪಿಗಳು ಈ ದುಶ್ಕೃತ್ಯ ಎಸಗಿದ್ದಾರೆ. ಬೈಕ್ ಚಲನೆಯಲ್ಲಿದ್ದಾಗಲೇ ಗದಗಯ್ಯನ ಕುತ್ತಿಗೆಯ ಭಾಗಕ್ಕೆ ಮಾರಕಾಸ್ತ್ರ ಬೀಸಿದ್ದು, ಕುತ್ತಿಗೆಯ ಬಹುಪಾಲು ತುಂಡರಿಸಿದೆ. ಇದರಿಂದ ಬೈಕ್ ಸಮೇತ ಬಿದ್ದ ಗದಗಯ್ಯ ಸ್ಥಳದಲ್ಲೇ … Read more

ಶಿವಮೊಗ್ಗ ನಗರದಲ್ಲಿ ಮತ್ತೊಂದು ಭೀಕರ ಕೊಲೆ

ಸುದ್ದಿ360 ಶಿವಮೊಗ್ಗ, ಆ.03: ರೌಡಿ ಶೀಟರ್ ಹಂದಿ ಅಣ್ಣಿ ಕೊಲೆ ಆಗಿ19 ದಿನಗಳು ಕಳೆದಿದ್ದು, ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಕೊಲೆ ಶಿವಮೊಗ್ಗ ಜನರನ್ನ‌ಬೆಚ್ಚಿ ಬೀಳಿಸಿದೆ. ನಗರದ ಸಾಗರ ರಸ್ತೆಯ ಬಾರೊಂದರ ಬಳಿ ಓರ್ವ ಯುವಕನನ್ನು ಬಿಯರ್ ಬಾಟಲಿಯಿಂದ ಇರಿದು, ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಸುದ್ದಿ ವರದಿಯಾಗಿದೆ. ಕೊಲೆಯಾದ ಯುವಕನನ್ನ ಪುಚ್ಚಿ ಕಿರಣ್ ಎಂದು ಗುರುತಿಸಲಾಗಿದ್ದು, ಹೊಸಮನೆ ಏರಿಯಾದ ಹುಡುಗನಾಗಿರುವ ಈತ ನಿನ್ನೆ ರಾತ್ರಿ ಕುಡಿಯಲು ತೆರಳಿದ್ದನು. ಕಿರಣ್ ಜೊತೆ ಇಬ್ವರು ಸ್ನೇಹಿತರು ತೆರಳಿದ್ದು … Read more

ಪ್ರವೀಣ್ ಹತ್ಯೆ ಪ್ರಕರಣ – ದುಷ್ಕರ್ಮಿಗಳ ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜು. 27 : ಸಮಾಜದಲ್ಲಿ ಹಿಂಸೆ, ಕ್ಷೋಭೆ ಉಂಟು ಮಾಡುವಂತಹ ದುಷ್ಕೃತ್ಯವನ್ನು ಎಸಗಿರುವ ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಆರ್ ಟಿ ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿ, ಮಂಗಳೂರಿನಲ್ಲಿ ನಿನ್ನೆ ನಡೆದ ಪ್ರವೀಣ್ ಹತ್ಯೆ ವಿಚಾರವಾಗಿ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ.  ಅಪರಾಧಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಆದೇಶ ನೀಡಲಾಗಿದೆ. ಕೇರಳ ರಾಜ್ಯದ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿರಲಾಗಿದೆ. ಮಂಗಳೂರು ಹಾಗೂ ಕಾಸರಗೋಡು … Read more

ಮಾಜಿ ಪ್ರೇಯಸಿಯ ರುಂಡ ಕಡಿದು ಪೊಲೀಸರಿಗೆ ಶರಣಾದ ಪಾಗಲ್ ಪ್ರೇಮಿ

ಸುದ್ದಿ360, ವಿಜಯನಗರ (ಹೊಸಪೇಟೆ): ಇಲ್ಲೊಬ್ಬ ಪಾಗಲ್ ಪ್ರೇಮಿ ಮಾಜಿ ಪ್ರೇಯಸಿಯ ರುಂಡ ಕಡಿದು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕನ್ನಬೋರನಯ್ಯನ ಹಟ್ಟಿಯಲ್ಲಿ ಗುರುವಾರ ನಡೆದಿದೆ. ನಿರ್ಮಲಾ( 23 ) ಭೀಕರವಾಗಿ ಹತ್ಯೆಯಾದ ಯುವತಿ ಎಂದು ಗುರುತಿಸಲಾಗಿದೆ. ಬಿಎಸ್ಸಿ ನರ್ಸಿಂಗ್ ವಿಧ್ಯಾಭ್ಯಾಸ ಮಾಡುತ್ತಿದ್ದ ನಿರ್ಮಲಾ ಪರೀಕ್ಷೆಗಾಗಿ ಓದಲು ಊರಿಗೆ ಬಂದಿದ್ದಳು.  ಬೋಜರಾಜ ಎನ್ನುವ ಪಾಗಲ್ ಪ್ರೇಮಿ ಇಂತಹ ದುಷ್ಕೃತ್ಯ ನಡೆಸಿದ್ದಾನೆ.  ಈ ಮೊದಲು ನಿರ್ಮಲಾಳನ್ನು ತನಗೆ ಮದುವೆ ಮಾಡಿಕೊಂಡುವಂತೆ ಯುವತಿಯ ಮನೆಯವರನ್ನು ಕೇಳಿದ್ದು, … Read more

ಹಂದಿ ಅಣ್ಣಿ ಹತ್ಯೆ ಆರೋಪಿಗಳು ಶಿವಮೊಗ್ಗ ಪೊಲೀಸರ ವಶಕ್ಕೆ

ಸುದ್ದಿ360, ಶಿವಮೊಗ್ಗ, ಜು.20: ಶಿವಮೊಗ್ಗದ ರೌಡಿ ಹಂದಿ ಅಣ್ಣಿ ಅಲಿಯಾಸ್ ಅಣ್ಣಪ್ಪನ ಕೊಲೆ ಮಾಡಿ ನಿನ್ನೆ ತಡರಾತ್ರಿ ಚಿಕ್ಕಮಗಳೂರು ಜಿಲ್ಲಾ ರಕ್ಷಣಾಧಿಕಾರಿಗಳ ಎದುರು ಶರಣಾಗಿದ್ದ 8 ಆರೋಪಿಗಳನ್ನು ಕಳೆದ ರಾತ್ರಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಕರೆ ತರಲಾಗಿದೆ. ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ತೆರಳಿದ್ದ ಪೊಲೀಸರ ತಂಡ ಆರೋಪಿಗಳಾದ ಕಾರ್ತಿಕ್(32), ನಿತಿನ್(29), ಮಧುಸೂಧನ್(32), ಫಾರುಖ್(40), ಆಂಜನೇಯ(26), ಮದನ್(25), ಮಧು (27), ಚಂದನ್(22) ಅವರುಗಳನ್ನು ಹೆಚ್ಚುವರಿ ತನಿಖೆಗಾಗಿ ಕರೆ ತರಲಾಗಿದ್ದು, ಜಯನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿಚಾರಣೆ ನಡೆಯಲಿದೆ. ಈಗಾಗಲೇ ಮ್ಯಾಜಿಸ್ಟ್ರೇಟ್ … Read more

ರೌಡಿ ಶೀಟರ್ ಹಂದಿ ಅಣ್ಣಿ ಭೀಕರ ಹತ್ಯೆ

ಸುದ್ದಿ360, ಶಿವಮೊಗ್ಗ ಜು.14:  ರೌಡಿ ಶೀಟರ್ ಹಂದಿ ಅಣ್ಣಿಯ ಭೀಕರ ಕೊಲೆ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ವಿನೋಬನಗರದ ಪೊಲೀಸ್ ಚೌಕಿ ಬಳಿ ಈ ಘಟನೆ ನಡೆದಿದೆ. ಕಾರಿನಲ್ಲಿ ಬಂದ ನಾಲ್ಕೈದು ಜನ ದುಷ್ಕರ್ಮಿಗಳ ಗುಂಪು ಏಕಾಏಕಿ ಅಣ್ಣಿಯ ಮೇಲೆ ಎರಗಿದೆ. ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಗುಂಪು ಕೃತ್ಯವನ್ನು ಎಸಗಿ ಕಾಲ್ಗಿತ್ತಿದೆ. ದಾಳಿಗೊಳಗಾದ ಅಣ್ಣಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

5 ದಿನಗಳ ಹಿಂದೆಯೇ ಗುರೂಜಿ ಕೊಲ್ಲುವ ಸುಳಿವು?

ಸುದ್ದಿ360 ಹುಬ್ಬಳ್ಳಿ, ಜು.06 : ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಹತ್ಯೆ ಬಗ್ಗೆ ಆರೋಪಿ 5 ದಿನಗಳ ಹಿಂದೆಯೇ ಸುಳಿವು ನೀಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆರೋಪಿ ಮಹಾಂತೇಶ ಶಿರೂರ ಜೂ.30ರಂದು ತನ್ನ ಫೇಸ್ ಬುಕ್ ಖಾತೆಯಲ್ಲಿ ಹಾಕಿರುವ ಪೋಸ್ಟ್ ಈ ಶಂಖೆಗೆ ಪುಷ್ಟಿ ನೀಡುತ್ತದೆ. ತನ್ನ ಮುಖಪುಟದಲ್ಲಿ ಭಗದ್ಗೀತೆಯ ಶ್ಲೋಕ ‘ಅಧರ್ಮ ತಾಂಡವವಾಡುತ್ತಿರುವಾ ದುಷ್ಟರನ್ನು ನಾಶ ಮಾಡಲು ಮತ್ತು ಧರ್ಮವನ್ನು ಪುನಃ ಸ್ಥಾಪಿಸಲು ನೀನು ಬರುವುದಾಗಿ ವಚನ ನೀಡಿರುವೆ ಪ್ರಭು. ಇನ್ನ ವಿಳಂಬವೇಕೆ ಪ್ರಭುವೇ? … Read more

ಕನ್ನಯ್ಯ ಲಾಲ್ ಹತ್ಯೆಗೆ ಎಸ್ ಯು ಸಿ ಐ(ಸಿ) ಖಂಡನೆ

ಸುದ್ದಿ360 ದಾವಣಗೆರೆ, ಜೂ.30:  ಉದಯಪುರದಲ್ಲಿ ಕನ್ಹಯ್ಯ ಲಾಲ್ ಹೆಸರಿನ ವ್ಯಕ್ತಿಯನ್ನು ಇಸ್ಲಾಮಿಕ್ ಕೋಮುವಾದಿಗಳು ಘೋರವಾಗಿ ಹತ್ಯೆ ಮಾಡಿದ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಎಸ್ ಯುಸಿಐ (ಸಿ) ಪಕ್ಷವು ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಎಸ್ ಯು ಸಿ ಐ (ಸಿ) ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಕೈದಾಳೆ ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಕೊಲೆಯಾದ ವ್ಯಕ್ತಿಯು ಪ್ರವಾದಿ ಮುಹಮ್ಮದರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದ. ಇದಕ್ಕೆ ಪ್ರತೀಕಾರವಾಗಿ ಆತನನ್ನು … Read more

ಚನ್ನಗಿರಿಯಲ್ಲಿ ಬಸ್‍ ಏಜೆಂಟ್‍ನ ಬರ್ಬರ ಕೊಲೆ

ಸುದ್ದಿ360 ದಾವಣಗೆರೆ ಜೂ.21: ಪ್ರತ್ಯಕ್ಷದರ್ಶಿಗಳು ದಿಗ್ಭ್ರಮೆಯಾಗುವಂತಹ ಲೈವ್‍ ಮಾರ್ಡರ್‍  ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಖಾಸಗಿ ಬಸ್ ಏಜೆಂಟ್ ನನ್ನು ಚಾಕುವಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಚನ್ನಗಿರಿ ಪಟ್ಟಣದ ಕೈಮರ ಎಂಬಲ್ಲಿನ ತರಳಬಾಳು ವೃತ್ತದಲ್ಲಿ ನಡೆದಿರುವ  ಈ ಘಟನೆಯಲ್ಲಿ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಜಾಕೀರ್ ಹತ್ಯೆಗೀಡಾದ ಏಜೆಂಟ್ ಎಂದು ಗುರುತಿಸಲಾಗಿದೆ. ಶಿವಮೊಗ್ಗ- ದಾವಣಗೆರೆ-ಭದ್ರಾವತಿ- ಚನ್ನಗಿರಿ ಪಟ್ಟಣಕ್ಕೆ ಹೋಗುವ ವೃತ್ತ ಇದಾಗಿದ್ದು, ಎಂದಿನಂತೆ ನಲ್ಲೂರಿನಿಂದ ಚನ್ನಗಿರಿಗೆ ಜಾಕೀರ್ ಬಂದಿದ್ದಾರೆ. … Read more

error: Content is protected !!