ದಸರಾ: ಸರೋದ್‍ ದಿಗ್ಗಜರ ಬಳಿ ಅಧಿಕಾರಿ ಕೇಳಿದ್ದ ಕಮಿಷನ್ ಎಷ್ಟು. . .!?

dussehra-commission-asked-by-the-official-from-the-sarod-giant pt-taranath

ಸುದ್ದಿ360 ಅ.15: ವಿಶ್ವ ವಿಖ್ಯಾತ ದಸರಾ (Dussehra) ಮಹೋತ್ಸವದಲ್ಲಿ ಖ್ಯಾತ ಸರೋದ್ (sarodh) ವಾದಕ ಪಂ. ರಾಜೀವ್ ತಾರಾನಾಥ್ (Pt. Rajeev Taranath) ಅವರಿಗೆ ಕಾರ್ಯಕ್ರಮ ನೀಡಲು ದಸರಾ ಅಧಿಕಾರಿಗಳು ಕಮಿಷನ್ (commission) ಕೇಳಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಸರೋದ್‍ ವಾದಕ ಪಂ. ರಾಜೀವ ತಾರಾನಾಥ್‍ ಅವರನ್ನು ದಸರಾ ಸಾಂಸ್ಕೃತಿಕ  ಕಾರ್ಯಕ್ರಮದಲ್ಲಿ ಸಂಗೀತ ಕಚೇರಿ  ನೀಡುವಂತೆ  ಆಹ್ವಾನಿಸಿರುವ ದಸರಾ ಅಧಿಕಾರಿಗಳು ಕಮಿಷನ್‍ ಬೇಡಿಕೆ ಇಟ್ಟಿರುವುದಾಗಿ ಆಂದೋಲನ ಪತ್ರಿಕೆ ವರದಿ ಮಾಡಿದೆ. ಕಾರ್ಯಕ್ರಮ ನೀಡುವಂತೆ ಪಂ. … Read more

ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ: ಫೋಕ್ಸೊ ಕೇಸ್ ದಾಖಲು – ಷಡ್ಯಂತ್ರ?

ಸುದ್ದಿ360 ಚಿತ್ರದುರ್ಗ, ಆ.27: ಚಿತ್ರದುರ್ಗದ ಪ್ರತಿಷ್ಠಿತ ಮುರುಘಾ ಮಠದ ಪೀಠಾಧಿಪತಿ ಶ್ರೀ ಮುರುಘಾ ಶರಣರು ಸೇರಿದಂತೆ ಐದು ಜನರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಫೋಕ್ಸೋ ಕಾಯಿದೆ ಅಡಿಯಲ್ಲಿ ದೂರು ದಾಖಲಾಗಿದ್ದು, ಮೈಸೂರು ಒಡನಾಡಿ ಸಂಸ್ಥೆ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ದೂರು ದಾಖಲಿಸಿದೆ. ಮಠವೇ ನಡೆಸುತ್ತಿರುವ ಪ್ರೌಢಶಾಲೆಯ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪವಿದ್ದು, … Read more

ರಂಗಭೂಮಿ ಡಿಪ್ಲೊಮಾಗೆ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ ಜು.25: ಮೈಸೂರಿನ ನಟನ ರಂಗಶಾಲೆಯು ಒಂದು ವರ್ಷದ ಅಭಿನಯ ಮತ್ತು ರಂಗ ತರಬೇತಿ ‘ರಂಗಭೂಮಿ ಡಿಪ್ಲೊಮಾ’ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಆ.7ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಮೈಸೂರಿನ ರಾಮಕೃಷ್ಣ ನಗರದ ಕೆ ಬ್ಲಾಕ್‌ನಲ್ಲಿರುವ ನಟನ ರಂಗಶಾಲೆಯಲ್ಲಿ ಪ್ರವೇಶ ಪ್ರಕ್ರಿಯೆ ಮತ್ತು ಸಂದರ್ಶನ ನಡೆಯಲಿದೆ. ಹಿರಿಯ ರಂಗ ಹಾಗೂ ಚಿತ್ರ ಕಲಾವಿದ ಮಂಡ್ಯ ರಮೇಶ್ ನೇತೃತ್ವದ ನಟನ ರಂಗಶಾಲೆ, ಮೈಸೂರು ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಸಂಸ್ಥೆಯಾಗಿದೆ. ಡಿಪ್ಲೊಮಾ ಪ್ರವೇಶಕ್ಕೆ 16ರಿಂದ 30 ವರ್ಷದೊಳಗಿನ … Read more

ಇದೆ ವರ್ಷ ಕಬಿನಿ ಜಲಾಶಯ ಉದ್ಯಾನವನ ಕಾಮಗಾರಿ ಪ್ರಾರಂಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360,ಮೈಸೂರು, ಜುಲೈ 20: ಇದೇ ವರ್ಷ ಕಬಿನಿ ಜಲಾಶಯದ ಉದ್ಯಾನವನ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆಮಾಡಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಕಬಿನಿ ಜಲಾಶಯದ  ಉದ್ಯಾನವನವನ್ನು ಸರ್ಕಾರ ಮಾಡಬೇಕೋ ಅಥವಾ ಪಿಪಿಪಿ ಮಾದರಿಯಲ್ಲಿ ಮಾಡಬೇಕೋ ಎಂಬ ಗೊಂದಲದಲ್ಲಿದೆ.  ಗೊಂದಲ ವನ್ನು ಆದಷ್ಟು ಬೇಗನೇ ನಿವಾರಿಸಿ ಕಾಮವಾರಿಯನ್ನು ಕೈಗೊಳ್ಳಲಾಗುವುದು ಎಂದರು. ಹೆಚ್.ಡಿ.ಕೋಟೆಗೆ ವಿಶೇಷ ಕಾರ್ಯಕ್ರಮ ಹೆಚ್.ಡಿ.ಕೋಟೆ ತಾಲ್ಲೂಕು ಹಿಂದುಳಿದ ತಾಲ್ಲೂಕು ಎಂದು ನಂಜುಂಡಪ್ಪ ವರದಿಯಲ್ಲಿ ಉಲ್ಲೇಖಿಸಲಾಗಿದೆ. … Read more

ನಿಗಮ ಮಂಡಳಿ: ಹೊಸಬರಿಗೆ ಅವಕಾಶ

ಸುದ್ದಿ360 ಮೈಸೂರು, ಜು.12: ನಿಗಮ ಮಂಡಳಿಗಳಿಗೆ ಹೊಸಬರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನಿಗಮ ಮಂಡಳಿಗಳ ಕೋರ್ ಕಮಿಟಿಯಲ್ಲಿ  ಒಂದೂವರೆ ವರ್ಷ ಮೇಲ್ಪಟ್ಟವರನ್ನು ತೆಗೆದು ಹೊಸಬರಿಗೆ ಅವಕಾಶ ನೀಡಬೇಕು ಎನ್ನುವ ತೀರ್ಮಾನ ಆರು ತಿಂಗಳ ಹಿಂದೆಯೇ ಆಗಿದೆ. ಈ ನಿಟ್ಟಿನಲ್ಲಿ ಬೇರೆಯವರಿಗೂ ಅವಕಾಶ ಒದಗಿಸುವ ಕಾರ್ಯ ನಡೆಯುತ್ತಿದೆ ಎಂದಿದ್ದಾರೆ.

ಅಮರನಾಥ: ಶಿವಮೊಗ್ಗದ 16 ಮಹಿಳೆಯರು ಸೇಫ್

ಸುದ್ದಿ360, ಶಿವಮೊಗ್ಗ, ಜು.09: ಶಿವಮೊಗ್ಗದಿಂದ ಅಮರನಾಥ ಯಾತ್ರೆ ಕೈಗೊಂಡಿದ್ದ 16 ಮಹಿಳೆಯರು ಸುರಕ್ಷಿತವಾಗಿದ್ದು, ಇವರು ಈಗ ಹೆಲಿಪ್ಯಾಡ್ ಬಳಿ ತಂಗಿದ್ದು, ಶೀಘ್ರದಲ್ಲಿಯೇ ಶಿವಮೊಗ್ಗಕ್ಕೆ ಹಿಂತಿರುಗಲಿದ್ದಾರೆ. ಮೈಸೂರಿನಿಂದ ಯಾತ್ರೆ ಕೈಗೊಂಡಿದ್ದ ವಕೀಲರ ತಂಡ ಕೂಡ ಸುರಕ್ಷಿತವಾಗಿದೆ. ಬೀದರ್ ನಿಂದ ತೆರಳಿದ್ದ ಯುವಕರ ತಂಡ ಸಂಬಂಧಿಕರಿಗೆ ಮಾಹಿತಿ ರವಾನಿಸಿದ್ದು ಸುರಕ್ಷಿತವಾಗಿರುವುದಾಗಿ ತಿಳಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಇಂಡಿಯನ್ ಟಿಬೆಟ್ ಫೋರ್ಸ್ ಸೇರಿದಂತೆ  ಎಲ್ಲ ಘಟಕಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಸಹಾಯವಾಣಿಯ ವಿವರ: ಎನ್.ಡಿ.ಆರ್.ಎಫ್: 011-23438252, 011-23438253 ಕಶ್ಮೀರ್ ಡಿವಿಷನಲ್ … Read more

ಶ್ರೀ ಚಾಮುಂಡೇಶ್ವರಿಗೆ ಆಷಾಡ ಶುಕ್ರವಾರದ ನಿಮಿತ್ತ ವಿಶೇಷ ಅಲಂಕಾರ

ಸುದ್ದಿ360, ಮೈಸೂರು ಜು.08: ನಾಡದೇವತೆ ಮಹಿಷಾಸುರ ಮರ್ದಿನಿ ಚಾಮುಂಡೇಶ್ವರಿ ಅಮ್ಮನವರಿಗೆ ಆಷಾಡ ಮಾಸದ ಎರಡನೇ ಶುಕ್ರವಾರವಾದ ನಿಮಿತ್ತ  ವಿಶೇಷ ಅಲಂಕಾರ ಮಾಡಲಾಗಿದೆ. ಚಿತ್ರ ವರದಿ: ಮಹೇಶ್ ಕುಮಾರ್ ಆರ್.

ಯೋಗದಿಂದ ವ್ಯಕ್ತಿ, ಸಮಾಜ, ರಾಷ್ಟ್ರ, ವಿಶ್ವಕ್ಕೆ ಶಾಂತಿ: ಮೋದಿ

ಸುದ್ದಿ 360 ಮೈಸೂರು, ಜೂ.21:  ಸಾಂಸ್ಕೃತಿಕ ರಾಜಧಾನಿ, ಆಧ್ಯಾತ್ಮ ಮತ್ತು ಯೋಗ ಸಾಧಕರ ನೆಲೆಬೀಡು ಮೈಸೂರಿನಲ್ಲಿ 8ನೇ ವಿಶ್ವ ಯೋಗ ದಿನಾಚರಣೆ ನಡೆಯುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿ ನಮಿಸಿದ ಪ್ರಧಾನಿ ನರೇಂದ್ರ ಮೋದಿಯವರು, ದೇಶ ಮತ್ತು ವಿಶ್ವದ ಎಲ್ಲ ಸಹೃದಯರಿಗೂ 8ನೇ ವಿಶ್ವ ಯೋಗ ದಿನಾಚರಣೆ ಶುಭಾಶಯಗಳನ್ನು ಕೋರಿದರು. 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯೋಗ ಭೂಮಿ ಮೈಸೂರಿನಲ್ಲಿ ಕಂಡ ಯೋಗದ ಬೆಳಕು ಇಂದು ವಿಶ್ವದ ಎಲ್ಲೆಡೆ ಪಸರಿಸಿದೆ. ವಿಶ್ವಕ್ಕೆ ಆರೋಗ್ಯದ ಮಹತ್ವವನ್ನು ತಿಳಿಸುತ್ತಿದೆ. … Read more

ಕಿಕ್ ಬಾಕ್ಸಿಂಗ್‌: ದಾವಣಗೆರೆಗೆ 3 ಚಿನ್ನ, 4 ಬೆಳ್ಳಿ, 3 ಕಂಚು

ಜಿಲ್ಲೆಗೆ ಕೀರ್ತಿ ತಂದ ಕ್ರೀಡಾಪಟುಗಳಿಗೆ ಅಭಿನಂದನೆಗಳ ಮಹಾಪೂರ ಸುದ್ದಿ360 ದಾವಣಗೆರೆ, ಜೂ16:  ಮೈಸೂರಿನಲ್ಲಿ ಜೂ.೧೧, ೧೨ರಂದು ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ನಡೆದ ೨ನೇ ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ನಗರದ ಈಗಲ್ ಫಿಟ್ನೆಸ್ ಕೇಂದ್ರದ ವಿದ್ಯಾರ್ಥಿಗಳು 3 ಚಿನ್ನ, 4 ಬೆಳ್ಳಿ ಹಾಗೂ 3 ಕಂಚಿನ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕಿಕ್ ಲೈಟ್ ಇವೆಂಟ್‌ನ 7-9 ವರ್ಷದ ವಿಭಾಗದಲ್ಲಿ ಯು. ಅದಿತ್ಯ ಮತ್ತು ಎ.ಬಿ. ಅಧಿತಿ ಹಾಗೂ 11-13 ವರ್ಷದ … Read more

error: Content is protected !!