ಆರ್‌ಜೆಡಿ ನಾಯಕ ಶರದ್ ಯಾದವ್ ವಿಧಿವಶ

ಸುದ್ದಿ360 ನವದೆಹಲಿ ಜ.12: ಮಾಜಿ ಕೇಂದ್ರ ಸಚಿವ ಮತ್ತು ಆರ್‌ಜೆಡಿ ನಾಯಕ ಶರದ್ ಯಾದವ್ ಅವರು ಜ. 12 ರಂದು ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಅವರ ಪುತ್ರಿ ಸುಭಾಷಿಣಿ ಶರದ್ ಯಾದವ್ ಅವರು ಟ್ವಿಟರ್ನಲ್ಲಿ “ಪಾಪಾ ನಹೀ ರಹೇ (ಪಾಪಾ ಇನ್ನಿಲ್ಲ)” ಎಂದು ತಂದೆಯ ನಿಧನ ವಾರ್ತೆಯನ್ನು ಖಚಿತಪಡಿಸಿದ್ದಾರೆ.ಮಾಜಿ ಸಚಿವ ಶರದ್ ಯಾದವ್ ಅವರ ಆರೋಗ್ಯ ಹದಗೆಟ್ಟಿದ್ದ ಕಾರಣ ಅವರನ್ನು ಗುರುಗ್ರಾಮ್ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವರಿಷ್ಠರ ಸೂಚನೆ ಮೇರೆಗೆ ದೆಹಲಿ ಪ್ರವಾಸ : ಸಿಎಂ ಬಸವರಾಜ ಬೊಮ್ಮಾಯಿ

ಸುದ್ದಿ 360 ನವದೆಹಲಿ, ಜೂನ್ 23: ಭಾರತದ ರಾಷ್ಟ್ರಪತಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಎಲ್ಲಾ ಮುಖ್ಯಮಂತ್ರಿಗಳು ಹಾಜರಿದ್ದು ನಾಮಪಾತ್ರಕ್ಕೆ ಸೂಚಕರಾಗಿ ಸಹಿಹಾಕಲು ಹಾಗೂ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಎಲ್ಲರೂ ಹಾಜರಿರಬೇಕೆಂದು ವರಿಷ್ಠರ ಸೂಚನೆ ಮೇರೆಗೆ ದೆಹಲಿಗೆ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

error: Content is protected !!