ಟ್ರೈನರ್‍ಗಳಿಂದ ಅರ್ಜಿ ಆಹ್ವಾನ

ಸುದ್ದಿ360 ಶಿವಮೊಗ್ಗ, ಸೆ.15: ಯುವ ಸಬಲೀಕರಣ ಇಲಾಖೆ ವತಿಯಿಂದ ನಿರ್ವಹಣೆ ಮಾಡುತ್ತಿರುವ ಶಿವಮೊಗ್ಗ ಜಿಲ್ಲಾ ಕ್ರೀಡಾ ಶಾಲೆ/ವಸತಿ ನಿಲಯಗಳಲ್ಲಿನ ಕ್ರೀಡಾಪಟುಗಳಿಗೆ ಹಾಕಿ, ಕುಸ್ತಿ ಮತ್ತು ವಾಲಿಬಾಲ್ ಕ್ರೀಡೆಗಳಲ್ಲಿ ತರಬೇತಿ ನೀಡಲು ನುರಿತ ಟ್ರೈನರ್‍ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ ಹಾಕಿ, ಕುಸ್ತಿ ಮತ್ತು ವಾಲಿಬಾಲ್ ಕ್ರೀಡೆಯಲ್ಲಿ ಎನ್‍ಐಎಸ್ ಸರ್ಟಿಫಿಕೇಟ್ ಕೋರ್ಸ್ ಅಥವಾ ಸರ್ಕಾರದಿಂದ ಅಂಗೀಕೃತ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಈ ಕ್ರೀಡೆಗಳಲ್ಲಿ ಅಂತರಾಷ್ಟ್ರ, ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಪದಕ ವಿಜೇತರಾದವರು ಅರ್ಜಿ ಸಲ್ಲಿಸಬಹುದು. ಕನಿಷ್ಟ 21 … Read more

ನೆಹರೂ ಒಳಾಂಗಣ ಕ್ರೀಡಾಂಗಣದ ವಿಷಯದಲ್ಲಿ ಕ್ರೀಡಾಧಿಕಾರಿಗಳ ಧೋರಣೆ ಖಂಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ

ಸುದ್ದಿ360 ಶಿವಮೊಗ್ಗ, ಸೆ. 14: ಶಿವಮೊಗ್ಗ ನಗರದಲ್ಲಿರುವ ನೆಹರೂ ಒಳಾಂಗಣ ಕ್ರೀಡಾಂಗಣವನ್ನು ಇಲಾಖಾ ಕ್ರೀಡಾ ಚಟುವಟಿಕೆಗಳಿಗೆ ನೀಡಲು ನಿರಾಕರಿಸುತ್ತಿರುವ ಕ್ರೀಡಾಧಿಕಾರಿಯ ಧೋರಣೆಯನ್ನು ಖಂಡಿಸಿ ನೆಹರೂ ಒಳಾಂಗಣ ಕ್ರೀಡಾಂಗಣವನ್ನು ಎಲ್ಲ ಕ್ರೀಡಾ ಚಟುವಟಿಕೆಗಳಿಗೆ ನೀಡಲು ಅನುವು ಮಾಡಿಕೊಡಬೇಕು ಎಂದು ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಸ್ಮಾರ್ಟ್ ಸಿಟಿ ಅಡಿಯಲ್ಲಿ 4ಶಟಲ್ ಕೋರ್ಟ್ ಗಳಿಗೆ ಸಿಂಥೆಟಿಕ್ ಹಾಕಲಾಗುತ್ತಿದೆ ಎಂಬ ವಿಷಯವನ್ನೇ ನೆಪವಾಗಿಟ್ಟುಕೊಂಡು ಕ್ರೀಡಾಧಿಕಾರಿಯವರು ಬಹು ಬಳಕೆಗಾಗಿ ಸ್ಥಾಪಿಸಲ್ಪಟ್ಟ ನೆಹರು ಒಳಾಂಗಣ … Read more

ಪತ್ನಿಯ ಕತ್ತು ಕುಯ್ದು ಆತ್ಮಹತ್ಯೆಗೆ ಯತ್ನಿಸಿದ ಪತಿ

ಸುದ್ದಿ360 ಶಿವಮೊಗ್ಗ, ಸೆ.07: ಗಂಡ ಹೆಂಡತಿಯ ನಡುವಿನ ಜಗಳದಿಂದಾಗಿ ಹೆಂಡತಿ ರಕ್ತದಮಡುವಿನಲ್ಲಿ ಕೊನೆಯುಸಿರೆಳೆದರೆ, ಪತಿ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದಿರುವ ಘಟನೆ ಶಿವಮೊಗ್ಗ ನಗರದಲ್ಲಿ ವರದಿಯಾಗಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಗರದ ಪ್ರಿಯಾಂಕ ಲೇ ಔಟ್ ನಲ್ಲಿನ ಮನೆಯೊಂದರಲ್ಲಿನ ಅಡುಗೆ ಮನೆಯ ರಕ್ತದ ಮಡುವಿನಲ್ಲಿ ಪತ್ನಿ ಪತ್ತೆಯಾಗಿದ್ದಾಳೆ. ಮೃತ ಮಹಿಳೆಯನ್ನ ಮಂಜುಳ (30) ಎಂದು ಗುರುತಿಸಲಾಗಿದೆ.ಪತಿ ದಿನೇಶ್ ಮೆಸ್ಕಾಂ ಉದ್ಯೋಗಿ ಎನ್ನಲಾಗಿದ್ದು, ಆತ ಸಹ ಕೈಕೊಯ್ದುಕೊಂಡಿದ್ದಾನೆ. ಆತನಿಗೆ ನಾರಾಯಣ ಹೃದಯಾಲಯಕ್ಕೆ ದಾಖ ಲಿಸಲಾಗಿದೆ. … Read more

ಸೋತಾಗ ಮೇಲೆತ್ತುವ ಕೈಗಳು ನೀವಾಗಿ : ಜಿ.ಎಸ್.ನಾರಾಯಣರಾವ್

ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಭೀಮಸೇನರಾವ್ ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯ, ಸ್ನಾತಕೋತ್ತರ ಕಾನೂನು ಅಧ್ಯಯನ ಕೇಂದ್ರ ಹಾಗೂ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ವತಿಯಿಂದ ನೆಹರು ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಎರಡು ದಿನಗಳ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಅಂತರ ಕಾಲೇಜುಗಳ ಮಹಿಳಾ ಥ್ರೋ ಬಾಲ್ ಮತ್ತು ಟೆನಿಕಾಯ್ಟ್ ಪಂದ್ಯಾವಳಿ

ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ – ಪೊಲೀಸ್ ಗೌರಗಳೊಂದಿಗೆ ಅಂತ್ಯಕ್ರಿಯೆ

ಸುದ್ದಿ360 ಬೆಂಗಳೂರು, ಆ.12: ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂಗೀತ ಪರಂಪರೆಯ ಮನೆತನದಿಂದ ಬಂದ ಸುಬ್ಬಣ್ಣ ಅವರು ಸುಗಮ ಸಂಗೀತ  ಹಾಗೂ ಚಲನ ಚಿತ್ರ ಹಿನ್ನಲೆ ಗಾಯಕರಾಗಿ ತಮ್ಮದೇ ಛಾಪು ಮೂಡಿಸಿದ್ದರು. ಅವರ ‘ಕಾಡು ಕುದುರೆ ಓಡಿ ಬಂದಿತ್ತಾ’ ಗೀತೆಯು ಇಂದಿಗೂ ಅಭಿಮಾನಿಗಳು ಗುನುಗುನಿಸುವ ಹಾಡು. ಇದಕ್ಕಾಗಿ ಭಾರತ ಸರ್ಕಾರದ ರಜತ ಕಮಲ ಪ್ರಶಸ್ತಿಗೂ ಭಾಜನರಾದರು. ಸಂತ ಶಿಶುನಾಳ ಶರೀಫರ ಗೀತೆಗಳಿಗೆ ದನಿಯಾಗಿ ಅವುಗಳನ್ನು … Read more

ಬಿಗ್ ಶಾಕಿಂಗ್ – ಪ್ರಸಿದ್ಧ ಗಾಯಕ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ

ಸುದ್ದಿ360 ಬೆಂಗಳೂರು, ಆ.11: ತಮ್ಮ ಮೋಹಕ ಕಂಠದಿಂದ ನಾಡಿನಾದ್ಯಂತ ಜನಪ್ರಿಯರೂ, ಕರ್ನಾಟಕ ಸುಗಮ ಸಂಗೀತದ ಪ್ರಸಿದ್ಧ ಗಾಯಕರೂ ಆಗಿದ್ದ ಶಿವಮೊಗ್ಗ ಸುಬ್ಬಣ (83) ಅವರು ಹೃದಯಾಘಾತದಿಂದ ಗುರುವಾರ ರಾತ್ರಿ ಇಹಲೋಕ ತ್ಯಜಿಸಿದರು. ಕಾಡು ಕುದುರೆ ಓಡಿಬಂದಿತ್ತಾ… ಕೋಡಗನ ಕೋಳಿ ನುಂಗಿತ್ತಾ… ಬಿದ್ದಿಯಬ್ಬೇ ಮುದುಕಿ ಬಿದ್ದೀಯಬ್ಬೇ.. ಹಾಡುಗಳ ಮೂಲಕ ಮನೆಮಾತಾಗಿದ್ದ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ ಇನ್ನಿಲ್ಲ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಗಾಯನಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಕನ್ನಡಿಗರು ಎಂಬ ಖ್ಯಾತಿ ಹೊಂದಿದ್ದರು. … Read more

ಬೇಡಿಕೆಗಳ ಈಡೇರಿಕೆಗಾಗಿ ತೀವ್ರ ಹೋರಾಟದ ಅಗತ್ಯವಿದೆ : ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಎಂ ಸಿ ಡೋಂಗ್ರೆ

ಸುದ್ದಿ360 ಶಿವಮೊಗ್ಗ, ಜು.25: ಬೆಲೆ ಏರಿಕೆ ನಿಯಂತ್ರಿಸಲಾಗದೆ ಜನಸಾಮಾನ್ಯರ ಬದುಕು ದುಸ್ತರವಾಗಿಸಿರುವ ಸರ್ಕಾರಗಳ ಮುಂದೆ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ತೀವ್ರ ಹೋರಾಟದ ಅಗತ್ಯವಿದೆ. ಮತ್ತು ಅದಕ್ಕಾಗಿ ರೂಪರೇಷೆ ಸಿದ್ದಪಡಿಸಿಕೊಳ್ಳಬೇಕೆಂದು ಎಐಟಿಯುಸಿ ರಾಜ್ಯ ಸಮಿತಿ ಉಪಾಧ್ಯಕ್ಷರಾದ ಎಂ ಸಿ ಡೋಂಗ್ರೆ ಹೇಳಿದರು. ಶಿವಮೊಗ್ಗ ನಗರದ ಭೋವಿಭವನದಲ್ಲಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಶನ್(ಎಐಟಿಯುಸಿ ಸಂಯೋಜಿತ) ರಾಜ್ಯ ಸಮಿತಿ ಆಯೋಜಿಸಿದ್ದ ಬಿಸಿಯೂಟ ತಯಾರಕ ಮಹಿಳೆಯರಿಗಿರುವ ಸಮಸ್ಯೆಗಳು ಸವಾಲುಗಳು ಮತ್ತು ಪರಿಹಾರ ಕುರಿತು ಏರ್ಪಡಿಸಿದ್ದ ರಾಜ್ಯಮಟ್ಟದ ಸಂಘಟನಾ ಸಮಾವೇಶ ಉದ್ಘಾಟಿಸಿ ಅವರು … Read more

ಹಂದಿ ಅಣ್ಣಿ ಹತ್ಯೆ ಆರೋಪಿಗಳು ಶಿವಮೊಗ್ಗ ಪೊಲೀಸರ ವಶಕ್ಕೆ

ಸುದ್ದಿ360, ಶಿವಮೊಗ್ಗ, ಜು.20: ಶಿವಮೊಗ್ಗದ ರೌಡಿ ಹಂದಿ ಅಣ್ಣಿ ಅಲಿಯಾಸ್ ಅಣ್ಣಪ್ಪನ ಕೊಲೆ ಮಾಡಿ ನಿನ್ನೆ ತಡರಾತ್ರಿ ಚಿಕ್ಕಮಗಳೂರು ಜಿಲ್ಲಾ ರಕ್ಷಣಾಧಿಕಾರಿಗಳ ಎದುರು ಶರಣಾಗಿದ್ದ 8 ಆರೋಪಿಗಳನ್ನು ಕಳೆದ ರಾತ್ರಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಕರೆ ತರಲಾಗಿದೆ. ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ತೆರಳಿದ್ದ ಪೊಲೀಸರ ತಂಡ ಆರೋಪಿಗಳಾದ ಕಾರ್ತಿಕ್(32), ನಿತಿನ್(29), ಮಧುಸೂಧನ್(32), ಫಾರುಖ್(40), ಆಂಜನೇಯ(26), ಮದನ್(25), ಮಧು (27), ಚಂದನ್(22) ಅವರುಗಳನ್ನು ಹೆಚ್ಚುವರಿ ತನಿಖೆಗಾಗಿ ಕರೆ ತರಲಾಗಿದ್ದು, ಜಯನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿಚಾರಣೆ ನಡೆಯಲಿದೆ. ಈಗಾಗಲೇ ಮ್ಯಾಜಿಸ್ಟ್ರೇಟ್ … Read more

ರೌಡಿ ಶೀಟರ್ ಹಂದಿ ಅಣ್ಣಿ ಭೀಕರ ಹತ್ಯೆ

ಸುದ್ದಿ360, ಶಿವಮೊಗ್ಗ ಜು.14:  ರೌಡಿ ಶೀಟರ್ ಹಂದಿ ಅಣ್ಣಿಯ ಭೀಕರ ಕೊಲೆ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ವಿನೋಬನಗರದ ಪೊಲೀಸ್ ಚೌಕಿ ಬಳಿ ಈ ಘಟನೆ ನಡೆದಿದೆ. ಕಾರಿನಲ್ಲಿ ಬಂದ ನಾಲ್ಕೈದು ಜನ ದುಷ್ಕರ್ಮಿಗಳ ಗುಂಪು ಏಕಾಏಕಿ ಅಣ್ಣಿಯ ಮೇಲೆ ಎರಗಿದೆ. ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಗುಂಪು ಕೃತ್ಯವನ್ನು ಎಸಗಿ ಕಾಲ್ಗಿತ್ತಿದೆ. ದಾಳಿಗೊಳಗಾದ ಅಣ್ಣಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಭೂಕುಸಿತ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ನಿರ್ಭಂಧ: ಬದಲಿ ಸಂಚಾರ ವ್ಯವಸ್ಥೆ

ಸುದ್ದಿ360, ಶಿವಮೊಗ್ಗ ಜು.10: ಭಾರಿ ಮಳೆಯಿಂದಾಗಿ ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಸ್ಥಳದಲ್ಲಿ ಭೂ ಕುಸಿತದ ಮಣ್ಣು ಮತ್ತು ಮರಮಟ್ಟುಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ವಾಹನಗಳ ಸಂಚಾರವನ್ನು ಜುಲೈ 12ರ ಮುಂಜಾನೆ 8ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ಆ ಬಳಿಕ ಜುಲೈ 30ರವರೆಗೆ ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು. … Read more

error: Content is protected !!