ಭದ್ರಾ ಜಲಾಶಯ: ಜು.10ರ ರಾತ್ರಿಯಿಂದ ಕಾಲುವೆಗಳಿಗೆ ನೀರು ಬಿಡುಗಡೆ

ಸುದ್ದಿ360, ಶಿವಮೊಗ್ಗ, ಜು.9:  ಲಕ್ಕವಳ್ಳಿಯ ಭದ್ರಾ ಜಲಾಶಯದಿಂದ ನಾಳೆ (ಜು. 10) ರಾತ್ರಿಯಿಂದಲೇ ಬಲದಂಡೆ ಕಾಲುವೆಗೆ 1000 ಕ್ಯೂಸೆಕ್ ಹಾಗೂ ಎಡದಂಡೆಗೆ 150 ಕ್ಯೂಸೆಕ್ ನೀರು ಹರಿಸಲು ಕಾಡಾ ತೀರ್ಮಾನಿಸಿದೆ. ಉತ್ತಮ ಮಳೆಯಾದ ಹಿನ್ನೆಲೆ ಭದ್ರಾ ಜಲಾಶಯಕ್ಕೆ 30 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಇಂದಿನ (ಜು.09) ನೀರಿನ ಮಟ್ಟ 168.8 ತಲುಪಿದೆ. ಹೀಗಾಗಿ ಬಲದಂಡೆ ಕಾಲುವೆಗೆ 1000 ಕ್ಯೂಸೆಕ್ ಹಾಗೂ ಎಡದಂಡೆಗೆ 150 ಕ್ಯುಸೆಕ್ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭದ್ರಾ ಕಾಡಾ … Read more

ಹಾಲು ವ್ಯಾಪಾರಿಗೆ ಚಾಕು ತೋರಿಸಿ ದರೋಡೆ

ಸುದ್ದಿ360,ಶಿವಮೊಗ್ಗ ಜು.06 : ಎಂದಿನಂತೆ ನಸುಕಿನಲ್ಲಿ ಬಂದು ಹಾಲಿನ ವ್ಯಾಪಾರದಲ್ಲಿ ತೊಡಗಿಕೊಳ್ಳುತ್ತಿದ್ದ ಹಾಲು ವ್ಯಾಪಾರಿಯೋರ್ವರಿಗೆ ಚಾಕುವಿನಿಂದ ಬೆದರಿಕೆಯೊಡ್ಡಿ, ನಗದು ಮತ್ತು ಮೊಬೈಲ್ ದೋಚಿಕೊಂಡು ಹೋಗಿರುವ ಘಟನೆ ಬುಧವಾರ ಬೆಳಗ್ಗೆ 5.30ರ ಸುಮಾರಿಗೆ ನಡೆದಿದೆ. ಶಿವಮೊಗ್ಗ ನಗರದ ಕುವೆಂಪು ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕುವೆಂಪು ರಸ್ತೆಯಲ್ಲಿರುವ ಹಾಲಿನ ಬೂತ್ ನಲ್ಲಿ ಪ್ಯಾಕೆಟ್ ಹಾಲು ವ್ಯಾಪಾರ ಮಾಡುತ್ತಿದ್ದ ಹೊಸಮನೆ ಬಡಾವಣೆ ನಿವಾಸಿ ಮೋಹನ್  ದರೋಡೆಗೊಳಗಾದ ಹಾಲಿನ ವ್ಯಾಪಾರಿ ಎಂದು ಗುರುತಿಸಲಾಗಿದೆ. ವ್ಯಾಪಾರದಲ್ಲಿ ತೊಡಗಿದ್ದ ಮೋಹನ್ ನನ್ನು ಬೈಕ್ ನಲ್ಲಿ … Read more

ಜೂ.25 ಶಿವಮೊಗ್ಗದಲ್ಲಿ ಪೆಂಕಾಕ್ ಸಿಲಾತ್ (ಸಮರ ಕಲೆ) ಕ್ರೀಡಾಕೂಟ

ಸುದ್ದಿ360 ಶಿವಮೊಗ್ಗ ಜೂ.23:  ನಗರದಲ್ಲಿ ಪ್ರಪ್ರಥಮ ಬಾರಿಗೆ ನಗರದಲ್ಲಿ ದಕ್ಷಿಣ ರಾಜ್ಯಗಳ ಪೆಂಕಾಕ್ ಸಿಲಾತ್ (ಸಮರ ಕಲೆ)ಯ ಕ್ರೀಡಾಕೂಟವನ್ನು ಏರ್ಪಡಿಸಲಾಗಿದ್ದು, ಇಲ್ಲಿನ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಜೂನ್ 25 ಮತ್ತು 26 ರಂದು ನಡೆಯಲಿದೆ ಎಂದು ರಾಜ್ಯ ಪೆಂಕಾಕ್ ಸಿಲಾತ್ ಸಂಸ್ಥೆಯ ಜಿಲ್ಲಾ ಅಧ್ಯಕ್ಷ ಚಂದ್ರಕಾಂತ್ ಜಿ. ಭಟ್ಟ ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಪ್ರಸಿದ್ಧಿ ಹೊಂದಿರುವ ಈ ಕಲೆಯು  ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸೇರ್ಪಡೆಗೊಂಡಿದೆ. ಶಿವಮೊಗ್ಗದಲ್ಲಿ … Read more

ಹಿಟ್ ಅಂಡ್ ರನ್ – ಬೈಕ್‍ ಸವಾರ ಗಂಭೀರ

ಶಿವಮೊಗ್ಗ, ಜೂ.14: ನಗರದ ಬೈಪಾಸ್‍ ರಸ್ತೆಯ ಕಿಯಾ ಶೋ ರೂಂ ಎದುರಿನಲ್ಲಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ತೀವ್ರಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕೆಂಪು ಬಣ್ಣದ ಐಟೆನ್ ಕಾರೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಕಾರು ನಿಲ್ಲಿಸದೆ ಮುಂದೆ ಸಾಗಿದೆ. ಟ್ರಾಫಿಕ್ ಪೂರ್ವ ಪೊಲೀಸರು ಬೈಕ್ ಸವಾರನಿಗೆ ಆಸ್ಪತ್ರೆಗೆ ಸೇರಿಸಿ ಹಿಟ್ ಅಂಡ್ ರನ್ ಮಾಡಿದ ಕಾರು ಚಾಲಕನನ್ನು ಸಿಸಿ ಕ್ಯಾಮೇರ ದೃಶ್ಯಾವಳಿಗಳಿಂದ ಗುರುತಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

ದಾವಣಗೆರೆಗೆ ಶಿಕ್ಷಣ ಸಚಿವರ ಭೇಟಿ

ದಾವಣಗೆರೆ, ಜೂ.13:  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಜೂ. 14 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 7.30 ಕ್ಕೆ ಬೆಂಗಳೂರಿನಿಂದ ಹೊರಟು 10.30 ಕ್ಕೆ ದಾವಣಗೆರೆಗೆ ಆಗಮಿಸುವರು. ನಂತರ 10.40 ಕ್ಕೆ ದಾವಣಗೆರೆ ದಕ್ಷಿಣ ವಲಯದ ಹಳೇ ಬಿಸಲೇರಿಯ ಕುಂದೂರು ಮುರಿಗೆಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಹಸ್ತಾಂತರ ಸಮಾರಂಭದಲ್ಲಿ ಭಾಗವಹಿಸುವರು. ತದ ನಂತರ ಮಧ್ಯಾಹ್ನ 3 ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ದಾವಣಗೆರೆ-ಚಿತ್ರದುರ್ಗ ಜಿಲ್ಲೆಗಳ ಇಲಾಖಾ … Read more

error: Content is protected !!