ಮುಳುಗಿತೇ ಮಂಗಳೂರಿನ ಸ್ಮಾರ್ಟ್ !?
ಸುದ್ದಿ360 ಮಂಗಳೂರು, ಜೂ.30: ಸ್ಮಾರ್ಟ್ ಸಿಟಿಯಾಗಲು ದಾಪುಗಾಲು ಇಟ್ಟಿರುವ ಮಂಗಳೂರು ನಗರ ಈ ಹಿಂದಿನ ವರ್ಷಗಳಂತೆಯೇ ಜಲಾವೃತಗೊಂಡಿದೆ. ಮಳೆಗಾಲ ಪ್ರಾರಂಭವಾದರೆ ಮಂಗಳೂರು ಜಲಾವೃತಗೊಳ್ಳುವುದು ಕಳೆದ ಹಲವು ವರ್ಷಗಳಿಂದ ಸಾಮಾನ್ಯವಾಗಿಬಿಟ್ಟಿದೆ. ಬುದ್ದಿವಂತರ ಜಿಲ್ಲೆ ಮಂಗೂಳೂರಿನ ಈ ಸಮಸ್ಯೆಯನ್ನು ಬಗೆಹರಿಸುವಲ್ಲಿ ಇಚ್ಛಾಶಕ್ತಿಯ ಕೊರತೆ ಎದ್ದು ಕಾಣುತ್ತಿದೆ. ಚರಂಡಿ ವ್ಯವಸ್ಥೆಯೇ ಇಲ್ಲದ ಹೆದ್ದಾರಿಗಳು, ಅವೈಜ್ಞಾನಿಕ ಕಾಮಗಾರಿಗಳು, ಹೊಂಡದಿಂದ ಕೂಡಿದ ರಸ್ತೆಗಳು, ಮಳೆಗಾಲಕ್ಕೂ ಮುನ್ನ ನೀರು ಸರಾಗವಾಗಿ ಹರಿಯುವಂತೆ ಚರಂಡಿಗಳನ್ನು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳದ ಪಾಲಿಕೆ ಅಧಿಕಾರಿಗಳು, ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಬಿಸಾಡುವ ಸಾರ್ವಜನಿಕರು … Read more