ಹಳೇ ವೈಷಮ್ಯ: ವ್ಯಕ್ತಿಕೊಲೆ

ಸುದ್ದಿ360 ದಾವಣಗೆರೆ.ಫೆ.28: ಇಲ್ಲಿನ ಕಬ್ಬೂರು ಬಸಪ್ಪ‌ನಗರದಲ್ಲಿ ಇಬ್ಬರ ನಡುವಿನ ಜಗಳ ಒಬ್ಬನ ಕೊಲೆಯಾಗುವ ಮೂಲಕ ಅಂತ್ಯ ಕಂಡಿದೆ. ಪ್ರಶಾಂತ (29) ಕೊಲೆಗೀಡಾದ ವ್ಯಕ್ತಿಯಾಗಿದ್ದು, ಇವರ ನಡುವಿನ ಜಗಳಕ್ಕೆ ಹಳೇ ವೈಷಮ್ಯ ಕಾರಣ ಎನ್ನಲಾಗಿದೆ. ಜಗಳದ ವೇಳೆ ಕಟ್ಟಿಗೆಯಿಂದ ದಾಳಿ ಮಾಡಿದ ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ಪ್ರಶಾಂತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಬ್ಬೂರು ಬಸಪ್ಪ ನಗರದ ಎಲವಟ್ಟಿ ರೈಸ್ ಮಿಲ್ ಬಳಿ ಪ್ರಶಾಂತ್ ಶವ ಪತ್ತೆ‌ಯಾಗಿದೆ. ಆರ್ ಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ‌ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ  ನಗರ … Read more

ದಾವಣಗೆರೆಯಲ್ಲಿ ಜೈನ ಶ್ರೀ ಸಂಕೇಶ್ವರ ಪಾರ್ಶ್ವ ರಾಜೇಂದ್ರ ದರ್ಶನ ಪಡೆದ ರಾಜ್ಯಪಾಲರು

ದಾವಣಗೆರೆ ಫೆ. 28: ದಾವಣಗೆರೆ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮಿಸಿದ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ನಗರದಲ್ಲಿರುವ ಶ್ರೀ ಶಂಕೇಶ್ವರ ಪಾರ್ಶ್ವ ರಾಜೇಂದ್ರ ಸ್ವಾಮಿ ದರ್ಶನ ಪಡೆದರು. ದೇವಸ್ಥಾನದ ಆಡಳಿತ ಮಂಡಳಿ ರಾಜ್ಯಪಾಲರಿಗೆ ಸ್ವಾಗತ ಕೋರಿದರು. ಗೌರವಾನ್ವಿತ ರಾಜ್ಯಪಾಲರು ಅವರು ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಜೈನ ದೇವಾಲಯದ ಆಡಳಿತ ಮಂಡಳಿ ವತಿಯಿಂದ ರಾಜ್ಯಪಾಲರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಾಲಯದ ಅಧ್ಯಕ್ಷರಾದ ಪೂನಂ ಚಂದ್ರ ಜಿ, ಕಾರ್ಯದರ್ಶಿಗಳಾದ ಮಹಾವೀರ್ … Read more

ಕರ್ನಾಟಕದಲ್ಲಿ ಆಮ್ ಆದ್ಮಿ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ?

ಸುದ್ದಿ360 ದಾವಣಗೆರೆ, ಫೆ. 26: ನಗರದ ರಿಂಗ್ ರಸ್ತೆಯಲ್ಲಿರುವ ಪಕ್ಷದ ಕಾರ್ಯಾಲಯದಲ್ಲಿ ಇಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು,  ಮಾರ್ಚ್ 4ರಂದು ದಾವಣಗೆರೆಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದ ಕುರಿತು ಮಾಹಿತಿ ನೀಡಿದರು. ನಂತರ ಕರ್ನಾಟಕದಲ್ಲಿ ಆಮ್ ಆದ್ಮಿ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿ ಚಂದ್ರು ಅವರು ಕೊಟ್ಟ ಉತ್ತರ ಹೀಗಿತ್ತು ನೋಡಿ. . .

ಜಿಎಂಐಟಿ ಕಾಲೇಜಿಗೆ ನಾಲ್ಕು ರ‍್ಯಾಂಕ್‌

ಐಎಸ್ ವಿಭಾಗಕ್ಕೆ 1 ಮತ್ತು ಬಿಟಿ ವಿಭಾಗಕ್ಕೆ 3 ರ‍್ಯಾಂಕ್‌ಗಳು ಸುದ್ದಿ360 ದಾವಣಗೆರೆ, ಫೆ.26: ಬೆಳಗಾವಿಯ ವಿಶ್ವೇಶ್ವರಾಯ ಟೆಕ್ನಾಲಜಿಕಲ್ ಯೂನಿವರ್ಸಿಟಿ 2022ರ ಸಾಲಿನ ಇಂಜಿನಿಯರಿಂಗ್ ವಿಭಾಗದ ರ‍್ಯಾಂಕ್‌ ಗಳನ್ನು ಬಿಡುಗಡೆ ಮಾಡಿದ್ದು, ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಇಂಜಿನಿಯರಿಂಗ್ ವಿಭಾಗದಲ್ಲಿ ನಾಲ್ಕು ರ‍್ಯಾಂಕ್‌ ಗಳನ್ನು ಪಡೆದುಕೊಂಡಿದೆ. ಇನ್ಫಾಫಾರ್ಮೆಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದಲ್ಲಿ ನಿಖಿತಾ ಎಚ್ ಬಿ ಆರನೇ ರ‍್ಯಾಂಕ್‌ ಪಡೆದಿದ್ದು, ಬಯೋಟೆಕ್ನಾಲಜಿ ಇಂಜಿನಿಯರಿಂಗ್ ವಿಭಾಗದಿಂದ ನಿವೇದಿತಾ ಬಿ ಎಂ, ಪಲ್ಲವಿ ಕೆಇ ಮತ್ತು ಭೂಮಿಕಾ … Read more

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ: ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್ ಸ್ಥಳ ಪರಿಶೀಲನೆ – ಆಕ್ರೋಶ

ಸುದ್ದಿ360 ದಾವಣಗೆರೆ, ಫೆ.26: ನಗರದ ಕುಂದುವಾಡ ಕೆರೆ ಹಾಗೂ ಟಿ. ಬಿ. ಸ್ಟೇಷನ್ ನಿಂದ ನೀರು ಪೂರೈಕೆ ಮಾಡಲಾಗುತ್ತಿದ್ದರೂ ಮೋಟಾರ್ ಹಾಳಾಗಿರುವ ಕಾರಣ ಕೆಲವೆಡೆ ಹತ್ತು ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಕುಂದುವಾಡ ಕೆರೆಯಿಂದ ನಗರಕ್ಕೆ ನೀರು ಸರಬರಾಜು ಮಾಡಲು ಬಳಕೆಯಾಗುವ ಎರಡು ಮೋಟಾರ್ ಗಳು ಹಾಳಾಗಿವೆ. ಇನ್ನು ಒಂದು ಹಾಳಾದರೆ ಮತ್ತೊಂದು ಉಪಯೋಗಕ್ಕೆ … Read more

‘Broom’ will be an alternative to state politics – ರಾಜ್ಯ ರಾಜಕಾರಣಕ್ಕೆ ಪರ್ಯಾಯವಾಗಲಿರುವ ಪೊರಕೆ ರಾಜಕೀಯ ಶುದ್ಧಗೊಳಿಸಲಿದೆ: ಮುಖ್ಯಮಂತ್ರಿ ಚಂದ್ರು

ದಾವಣಗೆರೆಯಲ್ಲಿ ಮಾ.4ರಂದು ಆಮ್‍ ಆದ್ಮಿ ಪಕ್ಷದ ಬೃಹತ್ ಸಮಾವೇಶ ಸುದ್ದಿ360, ದಾವಣಗೆರೆ, ಫೆ. 26: ಬರುವ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಜೆಸಿಬಿ (ಜೆಡಿಎಸ್, ಕಾಂಗ್ರೆಸ್, ಬಿಜೆಪಿ) ಪಕ್ಷಗಳು ಮಾತ್ರ ಸ್ಪರ್ಧಿಸುತ್ತಿಲ್ಲ. ಆಮ್ ಆದ್ಮಿ ಪಕ್ಷ ಕೂಡ ರಾಜ್ಯದ 224 ಕ್ಷೇತ್ರಗಳಲ್ಲಿಯೂ ‘ಪೊರಕೆ’ಯೊಂದಿಗೆ ಸ್ಪರ್ಧಿಸಲಿದೆ. ಪೊರಕೆ ಕೇವಲ ಮನೆ, ಬೀದಿಗಳನ್ನಷ್ಟೇ ಶುದ್ಧ ಮಾಡುವುದಿಲ್ಲ. ರಾಜಕೀಯವನ್ನು ಶುದ್ಧಮಾಡುವ ಪಣ ತೊಟ್ಟಿದೆ ಎಂದು ಎಎಪಿ ಪಕ್ಷದ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದರು. ನಗರದ ರಿಂಗ್ ರಸ್ತೆಯಲ್ಲಿರುವ ಪಕ್ಷದ ಕಾರ್ಯಾಲಯದಲ್ಲಿ … Read more

ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಂಡವರು ಕಾಂಗ್ರೆಸ್ನವರು: ಸಿಎಂ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಫೆ. 15: ನಿಗಮದಲ್ಲಿ ಟೆಂಡರ್ ನೀಡುವಿಕೆಯಲ್ಲಿ ಎರಡು ಹಂತದ  ಪರಿಶೀಲನೆಯನ್ನು ತೆಗೆದು ಹಾಕಿ ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಂಡಿದ್ದವರು ಕಾಂಗ್ರೆಸ್ನವರು. ಡಿ.ಕೆ.ಶಿವಕುಮಾರ್ ಅವರು ನೀರಾವರಿ ಸಚಿವರಿದ್ದಾಗ ಟೆಂಡರ್ ಪರಿಶೀಲನಾ ಸಮಿತಿಯನ್ನು ತೆಗೆದುಹಾಕಿದ್ದರು. ಟಿ. ಎ. ಸಿ ಯನ್ನೂ ತೆಗೆದುಹಾಕಿದ್ದರು. ನಾವು ಬಂದ ನಂತರ ಅದನ್ನು ಪುನ: ಸ್ಥಾಪನೆ ಮಾಡಿದ್ದೇವೆ. ಹೀಗಾಗಿ ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು … Read more

ಸಂತ ಸೇವಾಲಾಲ ಮಹಾಮಠ ಪ್ರತಿಷ್ಠಾನಕ್ಕೆ 10 ಕೋಟಿ ರೂ. ಅನುದಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಾವಣಗೆರೆ (ನ್ಯಾಮತಿ), ಫೆ. 14 : ಸಂತ ಸೇವಾಲಾಲ ಮಹಾಮಠ ಪ್ರತಿಷ್ಠಾನಕ್ಕೆ 10 ಕೋಟಿ ರೂ. ಅನುದಾನ  ಬಿಡುಗಡೆ ಮಾಡಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶ್ರೀ ಸಂತ ಸೇವಾಲಾಲ್ ಅವರ 284 ನೇ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ವಿಶೇಷ ವಸತಿ ಶಾಲೆ ಸುರಗೊಂಡನಗೊಪ್ಪ ಇಡೀ ದೇಶಕ್ಕೆ ತಿಳಿಯಬೇಕು, ಸಮಗ್ರವಾಗಿ ಅಭಿವೃದ್ಧಿಯಾಗಬೇಕು. ಅದಕ್ಕಾಗಿ  ಹಕ್ಕುಪತ್ರಗಳನ್ನು ನೀಡಿರುವ ಗ್ರಾಮಗಳಲ್ಲಿ ಮನೆ ಇಲ್ಲದವರಿಗೆ ಮನೆ ಕಟ್ಟಿಕೊಳ್ಳಲು ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅಡಿಯಲ್ಲಿ ಲಿಡ್ಕರ್ ಮಾದರಿ ಕಾರ್ಯಕ್ರಮವನ್ನು ರೂಪಿಸಲಾಗುವುದು.  … Read more

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು: ಗಡಿಗುಡಾಳ್ ಮಂಜುನಾಥ್

ದಾವಣಗೆರೆ: ಸರ್ಕಾರಿ ಶಾಲೆಗೆ ಹೆಚ್ಚಿನ‌ ಮಕ್ಕಳು ಬರುವಂತಾಗಬೇಕು. ಸೌಲಭ್ಯ ಇಲ್ಲದ ಶಾಲೆಗಳ ಅಭಿವೃದ್ಧಿ ಆಗಬೇಕು ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್ ಹೇಳಿದರು. ಪಾಲಿಕೆಯ 9ನೇ ವಾರ್ಡ್ ನ  ಗುಲೀಸ್ಥನೆ ಮುಸ್ತಫಾ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಬಹುಮಾನ ವಿತರಣೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು‌. ಶಾಲೆಯ ದುರವಸ್ಥೆ ನೋಡಿ ಬೇಸರ ವ್ಯಕ್ತಪಡಿಸಿದ ಅವರು, ಶಾಲೆಯ ಮುಖ್ಯಸ್ಥರಿಗ ಕೈಲಾದಷ್ಟು ಸಹಾಯ ಮಾಡಿ ಮಕ್ಕಳಿಗೆ ಬಹುಮಾನ ವಿತರಿಸಿದರು. ಕಾಮಗಾರಿ ಪರಿಶೀಲನೆ: ಇನ್ನು ಈ ವಾರ್ಡ್ ನಲ್ಲಿ … Read more

ಜ.21, 22 ನಿರ್ಮಲ ತುಂಗಾ ಅಭಿಯಾನ – ಬೃಹತ್ ಪಾದಯಾತ್ರೆ

ಗಾಜನೂರಿನಿಂದ ಆರಂಭವಾಗುವ ಯಾತ್ರೆ ಪವಿತ್ರ ಕೂಡಲಿಯಲ್ಲಿ ಸಮಾರೋಪ ವರದಿ: ಶ್ರೀನಿವಾಸ ಮೂರ್ತಿ ಕೆ.ಎಂ. ಸುದ್ದಿ360 ಶಿವಮೊಗ್ಗ ಜ.20: ರಾಷ್ಟ್ರೀಯ ಸ್ವಾಭಿಮಾನಿ ಆಂದೋಲನ ಸಮಿತಿ, ಪರ್ಯಾವರಣ ಟ್ರಸ್ಟ್ ಹಾಗೂ ಶಿವಮೊಗ್ಗದ ವಿವಿಧ ಪರಿಸರಾಸಕ್ತರ ತಂಡಗಳ ಸಂಯುಕ್ತಾಶ್ರಯದಲ್ಲಿ ಜ.21 ಹಾಗೂ 22 ರಂದು ಗಾಜನೂರಿನಿಂದ ಶ್ರೀ ಕ್ಷೇತ್ರ ಕೂಡಲಿಯವರೆಗೆ ನಿರ್ಮಲ ತುಂಗಾ ಅಭಿಯಾನದ ಬೃಹತ್ ಪಾದಯಾತ್ರೆ ಮತ್ತು ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ಪರ್ಯಾವರಣ ಟ್ರಸ್ಟ್ ಅಧ್ಯಕ್ಷ ಪ್ರೊ. ಬಿ. ಎಂ. ಕುಮಾರಸ್ವಾಮಿ ತಿಳಿಸಿದರು. ನಗರದ ಮಥುರಾ ಪ್ಯಾರಡೈಸ್ನಲ್ಲಿ ಇಂದು ನಡೆದ … Read more

error: Content is protected !!