ಜನಪರ ಬಜೆಟ್ – ರಾಜ್ಯದಲ್ಲಿ 25 ನೂತನ ಜವಳಿ ಪಾರ್ಕ್ ಸ್ಥಾಪನೆಗೆ ಪ್ರಾಶಸ್ತ್ಯ: ಸಿಎಂ

ಸುದ್ದಿ360 ದಾವಣಗೆರೆ ಜ.14: ಹಣಕಾಸು ಪರಿಸ್ಥಿತಿ ವಿಶ್ಲೇಷಣೆ ಸಂಬಂಧ ಸಭೆ ನಡೆಸಲಾಗಿದ್ದು, ಇನ್ನೂ ಹಲವು ಸುತ್ತಿನ ಸಭೆ ನಡೆಸುವ ಅಗತ್ಯವಿದೆ. ಇನ್ನೆರಡು ದಿನದಲ್ಲಿ ಬಜೆಟ್‌ಗೆ ಸಂಬಂಧಿಸಿದ ಪೂರ್ವಭಾವಿ ಸಭೆಗಳನ್ನು ಆರಂಭಿಸಲಾಗುವುದು. ಫೆಬ್ರವರಿ ಎರಡನೇ ವಾರದಲ್ಲಿ ಜನಪರ ಬಜೆಟ್ ಮಂಡನೆಯಾಗಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ನಗರದ ಜಿಎಂಐಟಿ ಹೆಲಿಪ್ಯಾಡ್‌ನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, 2022ರ ಡಿಸೆಂಬರ್‌ವರೆಗೆ ರಾಜ್ಯದಲ್ಲಿ ನಿರೀಕ್ಷೆ ಮೀರಿ ತೆರಿಗೆ ಸಂಗ್ರಹವಾಗಿದೆ. ವಾಣಿಜ್ಯ ತೆರಿಗೆ, ಅಬಕಾರಿ, ವಾಹನ ತೆರಿಗೆ, ಸ್ಟಾಂಪ್ ಡ್ಯೂಟಿ ಸಂಗ್ರಹ … Read more

ಚುನಾವಣಾ ಪ್ರೇರಿತ ಹೇಳಿಕೆಗಳಿಂದ ಕಾಂಗ್ರೆಸ್ ಜನರನ್ನು ಮರಳು ಮಾಡಲು ಹೊರಟಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ದಾವಣಗೆರೆ ಜ.14: ಚುನಾವಣೆ ಸಮೀಪಿಸುತ್ತಿದ್ದಂತೆ ಹತ್ತಾರು ಚುನಾವಣಾ ಪ್ರೇರಿತ ಹೇಳಿಕೆಗಳು ಕಾಂಗ್ರೆಸ್ಸಿಗರಿಂದ ಬರುತ್ತಲೇ ಇರುತ್ತವೆ. ಇದು ಜನರಿಗೂ ತಿಳಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹರಿಹರದ ಹರ ಜಾತ್ರೆ ಸಮಾರಂಭಕ್ಕೆ ತೆರಳುವ ಮುನ್ನ ನಗರದ ಜಿಎಂಐಟಿ ಹೆಲಿಪ್ಯಾಡ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಹತಾಶ ಮನಸ್ಥಿತಿಯಲ್ಲಿರುವ ಕಾಂಗ್ರೆಸಿಗರು, ಜನರನ್ನು ಮರುಳು ಮಾಡಲು ಹೊರಟಿದ್ದಾರೆ. ಕಾಂಗ್ರೆಸ್ನವರು ಕೇವಲ ಮಾತನಾಡುತ್ತಾರೆ. ಆದರೆ ನಮ್ಮ ಸರ್ಕಾರ ಅಭಿವೃದ್ಧಿ ಪರ ಕೆಲಸಗಳನ್ನು ಮಾಡಿ ತೋರಿಸುತ್ತಿದೆ ಎಂದರು. 200 ಯುನಿಟ್ … Read more

ಸಿದ್ದರಾಮಯ್ಯ ಹರಕೆಯ ಕುರಿಯಾಗಲಿದ್ದಾರೆ: ಎಚ್.ಡಿ.ಕೆ

ಸುದ್ದಿ360 ಕಲಬುರಗಿ ಜ.13: ಸಿದ್ಧರಾಮಯ್ಯನವರನ್ನು ಕೋಲಾರದಲ್ಲಿ ಕಣಕ್ಕಿಳಿಸುವ ಮೂಲಕ ಅವರ ಪಕ್ಷದವರೇ ಅವರನ್ನು ಹರಕೆಯ ಕುರಿಯನ್ನಾಗಿ ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಶುಕ್ರವಾರ ಅವರು ಜಿಲ್ಲೆಯ ಕಡಣಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ಧರಾಮಯ್ಯರಿಗೆ  ಕೋಲಾರ ಕ್ಷೇತ್ರ ಸೇಫ್ ಅಲ್ಲ. ಅವರಿಗೆ ಅಲ್ಲಿ  ನಿಲ್ಲುವಂತೆ ಯಾರು ಒತ್ತಡ ಹಾಕಿದ್ದಾರೆ ಎಂಬುದು ಗೊತ್ತಿಲ್ಲ. ನಾನು ಸ್ವತಃ ಕೋಲಾರದಲ್ಲಿ ಸುತ್ತಾಡಿ, ಅಲ್ಲಿಯ ಜನರ ಭಾವನೆ ಅರಿತುಕೊಂಡಿದ್ದೇನೆ. ಕೋಲಾರದಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಲಿ ಅಥವಾ ನಾಯಕರಿಗಾಗಲಿ ಮತ ಪಡೆಯುವ ಶಕ್ತಿ … Read more

ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಸ್ಪಂದನೆ – ಕ್ರೈಸ್ತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೆ. ಕೆನೆಡಿ ಶಾಂತಕುಮಾರ್

ಸುದ್ದಿ360 ದಾವಣಗೆರೆ, ಜ.13: ರಾಜ್ಯದಲ್ಲಿ ಈ ಸಾಲಿನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಸೌಲಭ್ಯಗಳಿಗಾಗಿ 147 ಪ್ರಸ್ತಾವನೆಗಳು ಸರ್ಕಾರದ ಮುಂದಿದ್ದು, ಇದಕ್ಕಾಗಿ ಕರ್ನಾಟಕ ಸರ್ಕಾರ ಶೀಘ್ರದಲ್ಲೇ 28 ಕೋಟಿ ಅನುದಾನ ಬಿಡುಗಡೆ ಮಾಡಲಿದೆ. ಚಾಲ್ತಿಯಲ್ಲಿದ್ದ ಪ್ರಸ್ತಾವನೆಗಳಿಗಾಗಿ 14 ಕೋಟಿ ಅನುದಾನವನ್ನು ಈಗಾಗಲೇ ನೀಡಲಾಗಿದ್ದು, ಅಲ್ಪ ಸಂಖ್ಯಾತರ ಸರ್ವತೋಮುಖ ಪ್ರಗತಿಗಾಗಿ ವಿವಿಧ ಇಲಾಖೆಗಳಡಿಯಲ್ಲಿ ಸೌಲಭ್ಯಗಳನ್ನು ನೀಡುತ್ತಿರುವುದಾಗಿ ಕ್ರೈಸ್ತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೆ. ಕೆನೆಡಿ ಶಾಂತಕುಮಾರ್ ತಿಳಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೆ … Read more

ಜ.15:  ಗಿನ್ನಿಸ್ ವಿಶ್ವ ದಾಖಲೆ ಯೋಗಥಾನ್‍-2022 ದಾವಣಗೆರೆಯಲ್ಲಿ 8 ಸಾವಿರ ಯೋಗಪಟುಗಳು ಭಾಗಿಯಾಗುವ ನಿರೀಕ್ಷೆ

ಸುದ್ದಿ360 ದಾವಣಗೆರೆ ಜ.13: ಯೋಗಥಾನ್ 2022ರ ಗಿನ್ನಿಸ್ ವಿಶ್ವ ದಾಖಲೆ ಕಾರ್ಯಕ್ರಮ ಜ.15ರಂದು ಬೆಳಗ್ಗೆ 6 ಗಂಟೆಗೆ  ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ದಾವಣಗೆರೆಯ ಎಂಟು ಸಾವಿರಕ್ಕೂ ಅಧಿಕ ಯೋಗಪಟುಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯೋಗವನ್ನು ಕ್ರೀಡೆಯೆಂದು ಪರಿಗಣಿಸಿ ಆದೇಶ ಹೊರಡಿಸಿದ್ದು, ಯೋಗದ ಮಹತ್ವ ಕುರಿತು ಅರಿವು ಮೂಡಿಸಲು ಮತ್ತು … Read more

ನಿರ್ದೇಶಕ – ನಟ ಗುರುಪ್ರಸಾದ್ ಬಂಧನ – ಕೋರ್ಟ್ ಗೆ ಹಾಜರು

ಸುದ್ದಿ360 ಬೆಂಗಳೂರು ಜ.13: ಚೆಕ್ ಬೌನ್ಸ್‍ ಮೊಕದ್ದಮೆಗೆ ಸಂಬಂಧಪಟ್ಟಂತೆ ಸಿನಿಮಾ ನಟ ಹಾಗೂ ನಿರ್ದೇಶಕ ಗುರುಪ್ರಸಾದ್ ಅವರನ್ನು ಗಿರಿನಗರ ಪೊಲೀಸರು ಇಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನೆಗೋಶಿಯೇಬಲ್ ಇನ್ ಸ್ಟುಮೆಂಟ್ಸ್ ಕಾಯ್ದೆಯಡಿ ಗುರುಪ್ರಸಾದ್ ವಿರುದ್ಧ ಹೂಡಲಾಗಿದ್ದ ಮೊಕದ್ದಮೆ ವಿಚಾರಣೆಗೆ ಅವರು ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ನ್ಯಾಯಾಲಯದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ತಿಳಿಸಿದ್ದಾರೆ.

ಶೀಘ್ರ ಸಿಸಿ ರಸ್ತೆ ಕಾಮಗಾರಿ ಕೈಗೊಳ್ಳದಿದ್ದರೆ ಹೋರಾಟ;
ಸಿದ್ದವೀರಪ್ಪ ಬಡಾವಣೆ ನಿವಾಸಿಗಳ ಎಚ್ಚರಿಕೆ

ಸುದ್ದಿ೩೬೦ ದಾವಣಗೆರೆ ಜ.೧೨: ಆಂಜನೇಯ ಬಡಾವಣೆಯಿಂದ ಹದಡಿ ರಸ್ತೆ ಸೀಳಿಕೊಂಡು ಶಾಮನೂರು ರಸ್ತೆಗೆ ಜೋಡಿಸುವ ಅತೀ ಪ್ರಮುಖ ರಸ್ತೆ ಉನ್ನತೀಕರಿಸಿ ಹೊಸ ಡಾಂಬರು ರಸ್ತೆ ಕಾಮಗಾರಿಗೆ ಮಂಜೂರಾತಿ ದೊರೆತು ಒಂದು ವರ್ಷವಾದರು ಇದುವರೆಗೂ ಕಾಮಗಾರಿ ಕೈಗೆತ್ತಿಕೊಳ್ಳದಿರುವ ಬಗ್ಗೆ ನಗರದ ಸಿದ್ದವೀರಪ್ಪ ಬಡಾವಣೆ ಸುತ್ತಮುತ್ತನ ನಾಗರೀಕರು ಕಿಡಿಕಾರಿದ್ದಾರೆ. ಇದು ಮುಖ್ಯ ರಸ್ತೆಯಾಗಿದ್ದು, ಜನ ಸಂಚಾರ, ಸರಕು ಸಾಗಣೆ ಮತ್ತು ಇತರೆ ಕಾರಣಗಳಿಂದ ಕಾಂಕ್ರೀಟ್ ರಸ್ತೆ ಮಾಡುವಂತೆ ಈಗಾಗಲೇ ಮಹಾಪೌರರು, ಆಯುಕ್ತರು, ಶಾಸಕರು, ಉಸ್ತುವಾರಿ ಸಚಿವರು ಹಾಗೂ ಸಂಸದರಿಗೆ ನಾಲ್ಕೈದು … Read more

ಆರ್‌ಜೆಡಿ ನಾಯಕ ಶರದ್ ಯಾದವ್ ವಿಧಿವಶ

ಸುದ್ದಿ360 ನವದೆಹಲಿ ಜ.12: ಮಾಜಿ ಕೇಂದ್ರ ಸಚಿವ ಮತ್ತು ಆರ್‌ಜೆಡಿ ನಾಯಕ ಶರದ್ ಯಾದವ್ ಅವರು ಜ. 12 ರಂದು ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಅವರ ಪುತ್ರಿ ಸುಭಾಷಿಣಿ ಶರದ್ ಯಾದವ್ ಅವರು ಟ್ವಿಟರ್ನಲ್ಲಿ “ಪಾಪಾ ನಹೀ ರಹೇ (ಪಾಪಾ ಇನ್ನಿಲ್ಲ)” ಎಂದು ತಂದೆಯ ನಿಧನ ವಾರ್ತೆಯನ್ನು ಖಚಿತಪಡಿಸಿದ್ದಾರೆ.ಮಾಜಿ ಸಚಿವ ಶರದ್ ಯಾದವ್ ಅವರ ಆರೋಗ್ಯ ಹದಗೆಟ್ಟಿದ್ದ ಕಾರಣ ಅವರನ್ನು ಗುರುಗ್ರಾಮ್ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಡಿ ದಾಳಿ: 17 ಕೋಟಿ ರೂ. ಮೌಲ್ಯದ ಆಸ್ತಿ ವಶ

ಸುದ್ದಿ360 ಮಂಗಳೂರು ಜ.12: ಮುಕ್ಕ ಗ್ರೂಪ್ ಆಫ್ ಕಂಪೆನೀಸ್ ನ ಮೊಹಮ್ಮದ್ ಹ್ಯಾರಿಸ್ ಅವರ ಹೆಸರಿನಲ್ಲಿದ್ದ 17.34 ಕೋಟಿ ರು. ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ವಶಪಡಿಸಿಕೊಂಡಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಉಲ್ಲಂಘನೆ ಆರೋಪದಲ್ಲಿ ಹ್ಯಾರಿಸ್‍ ಅವರ ಹೆಸರಿನಲ್ಲಿದ್ದ ಆಸ್ತಿಯನ್ನು ವಶಪಡಿಸಿಕೊಂಡಿರುವ  ಜಾರಿ ನಿರ್ದೇಶನಾಲಯ, ಮಂಗಳೂರಿನಲ್ಲಿರುವ ಎರಡು ಫ್ಲ್ಯಾಟ್ ಗಳು ಮತ್ತು ಒಂದು ಕೈಗಾರಿಕಾ ನಿವೇಶನ ವಶಕ್ಕೆ ಪಡೆದಿದೆ. ಹ್ಯಾರಿಸ್ ಅವರು ಫೆಮಾ  (ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ) ನಿಬಂಧನೆಗಳನ್ನು ಉಲ್ಲಂಘಿಸಿ ವಿದೇಶದಲ್ಲಿ ಸ್ಥಿರಾಸ್ತಿ, … Read more

ಪ್ರದೀಪ್ ಆತ್ಮಹತ್ಯೆ ಪ್ರಕರಣ: ನಾಲ್ವರು ಆರೋಪಿಗಳ ವಿಚಾರಣೆ

ಸುದ್ದಿ360 ರಾಮನಗರ ಜ.12: ಉದ್ಯಮಿ ಪ್ರದೀಪ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ನಾಲ್ವರನ್ನು ಪೊಲೀಸರು ವಿಚಾರಣೆ ನಡೆಸಿ, ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಮೊದಲ ಆರೋಪಿ ಗೋಪಿ ತಲೆಮರಿಸಿಕೊಂಡಿದ್ದು, ಮೊದಲ ಆರೋಪಿಯ ಹೇಳಿಕೆ ಪಡೆದ ನಂತರ ಮತ್ತೊಬ್ಬ ಆರೋಪಿಯಾಗಿರುವ ಶಾಸಕ ಅರವಿಂದ ಲಿಂಬಾವಳಿ ಅವರ ಹೇಳಿಕೆ ಪಡೆಯುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಐವರು ಆರೋಪಿಗಳಿಗೆ ಕಗ್ಗಲೀಪುರ ಠಾಣೆ ಪೊಲೀಸರು ನೋಟಿಸ್ ನೀಡಿದ್ದರು. ಇವರಲ್ಲಿ ಎರಡನೇ ಆರೋಪಿ ಸೋಮಯ್ಯ, ನಾಲ್ಕನೇ ಆರೋಪಿ ರಮೇಶ್ ರೆಡ್ಡಿ, ಐದನೇ ಆರೋಪಿ ಜಯರಾಮ್‌ ರೆಡ್ಡಿ … Read more

error: Content is protected !!