ಟ್ರ್ಯಾಕ್ಟರ್ ಪಲ್ಟಿ, ಸ್ಥಳದಲ್ಲೇ ಇಬ್ಬರ ಸಾವು – ಇಬ್ಬರ ಸ್ಥಿತಿ ಗಂಭೀರ

ಸುದ್ದಿ360 ಬಾಗಲಕೋಟೆ ಜ.6: ಸವದತ್ತಿ ಯಲ್ಲಮ್ಮನ ಗುಡ್ಡದ ಜಾತ್ರೆಗೆ  ಹೋಗಿ ಬರುತ್ತಿದ್ದ ವೇಳೆ ಎರಡೂ ಟ್ರ್ಯಾಕ್ಟರ್ ಚಾಲಕರು ಓವರ್ ಟೇಕ್ ಮಾಡಲು ಹೋಗಿ ಹಿಂಬದಿಯ ಟ್ರ್ಯಾಕ್ಟರ್ ಮುಂದಿನ ಟ್ರ್ಯಾಕ್ಟರ್ಗೆ ಗುದ್ದಿರುವ ಕಾರಣ ದುರಂತ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದ ಬಳಿ ಘಟನೆ ನಡೆದಿದ್ದು, ಟ್ರ್ಯಾಕ್ಟರ್ ಪಲ್ಟಿಯಾದ ಸ್ಥಳದಲ್ಲೇ ಇಬ್ಬರು ಸಾವುಗೀಡಾಗಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಗೋವಿಂದ್( 20), ಹಣಮಂತ (20) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಹನಮಂತ ಹುಣಸಿಕಟ್ಟಿ ಅವರಿಗೆ ಸೇರಿದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, … Read more

ಯಡಿಯೂರಪ್ಪನವರು ಕರ್ನಾಟಕದ ಸರ್ವೊಚ್ಚ ನಾಯಕರು – ಜೆಪಿ ನಡ್ಡಾ

ಸುದ್ದಿ360 ತುಮಕೂರು (ಶಿರಾ) ಜ.6:  80 ಕೋಟಿ ಜನರಿಗೆ ಉಚಿತ ರೇಷನ್ ಕೊಟ್ಟಿರುವ  ಬಿಜೆಪಿ ಸರ್ಕಾರ, ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಧ್ಯೇಯದೊಂದಿಗೆ ಕೆಲಸ ಮಾಡುತ್ತಿದೆ  ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು. ಶಿರಾ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು,  ಯಡಿಯೂರಪ್ಪನವರು ಕರ್ನಾಟಕದ ಸರ್ವೊಚ್ಚ ನಾಯಕರು. ಎನ್ ಡಿ ಎ ಸರ್ಕಾರ ಬಂದಾಗ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಸೇರಿ‌ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಕಾಂಗ್ರೆಸ್ ನದ್ದು ಜಾತಿ ಜಾತಿ ಎಂದು ಒಡೆದು … Read more

ಹಾವೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅಕ್ಷರ ಜಾತ್ರೆ – ಸಾಹಿತ್ಯಾಸಕ್ತರಿಗಾಗಿ ವಿಶೇಷ ರೈಲುಗಳು

ಸುದ್ದಿ360 ಹಾವೇರಿ ಜ.6: ಸರ್ವಜ್ಞನ ನಾಡಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಹಾವೇರಿ ನಗರ ಅಕ್ಷರಶಃ ಅಕ್ಷರ ಜಾತ್ರೆಯಲ್ಲಿ ನುಡಿ ತೇರನೆಳೆಯಲು ಸಿದ್ಧವಾಗಿದೆ.ಸಾಹಿತ್ಯಾಸಕ್ತರು ಸಾಕಷ್ಟು ಮಂದಿ ಈಗಾಗಲೇ ನಗರದಲ್ಲಿ ಬೀಡುಬಿಟ್ಟಿದ್ದು, ನುಡಿ ಜಾತ್ರೆಯ ಸಂಭ್ರಮವನ್ನು ಕಣ್ತುಂಬಿಕೊಳ್ಳಲಲು ಮನದುಂಬಿಕೊಳ್ಳಲು ಜನ ಸಾಗರ ಹಾವೇರಿಯತ್ತ ಹರಿದುಬರುತ್ತಲೇ ಇದೆ.ಪ್ರತ್ಯೇಕ ಜಿಲ್ಲೆಯಾದ ನಂತರ ಹಾವೇರಿಯಲ್ಲಿ ಇದೇ ಮೊದಲ‌ಬಾರಿಗೆ ಅಖಿಲ ಭಾರತ‌ಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿದ್ದು. ಸಾಮರಸ್ಯದ ಭಾವ – ಕನ್ನಡದ ಜೀವ … Read more

ಮಹಿಳೆಯರಿಗೆ ಉತ್ತಮ ಸಂದೇಶವಿರುವ ಚಿತ್ರ ‘ವೇದ’ ಪುರುಷರೂ ಸ್ವೀಕರಿಸಿ ಸೈ ಎಂದಿದ್ದಾರೆ – ಶಿವರಾಜ್ ಕುಮಾರ್

ಸುದ್ದಿ360 ದಾವಣಗೆರೆ,ಜ.05 : ವೇದ ಚಿತ್ರಕ್ಕೆ ರಾಜ್ಯದೆಲ್ಲೆಡೆ ಉತ್ತಮ ಯಶಸ್ಸು ದೊರೆತಿದೆ. ಮಹಿಳೆಯರಿಗೆ ಉತ್ತಮ ಸಂದೇಶ ನೀಡುವ ಚಿತ್ರ ಇದು. ಮಹಿಳೆಯರು ಮಾತ್ರವಲ್ಲದೇ ಪುರುಷರು ಈ ಚಿತ್ರದಲ್ಲಿನ ಸಂದೇಶವನ್ನು ಸ್ವೀಕರಿಸಿದ್ದಾರೆ. ಇಡೀ ಕುಟುಂಬ ಸಮೇತರಾಗಿ ಕುಳಿತು ನೋಡುವಂತಹ ಚಿತ್ರ ಇದಾಗಿದೆ. ಇವು ವೇದ ಚಿತ್ರ ಕುರಿತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೇಳಿದ ಮಾತುಗಳು. ವೇದ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಚಿತ್ರ ಸಕ್ಸಸ್ ಆದ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್, ಚಿತ್ರದ ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ … Read more

ಹರಿಹರ ನಗರದ ಬೀಡಿ ಕಾಲೋನಿ ನಿವಾಸಿಗಳಿಂದ ಹಕ್ಕುಪತ್ರಕ್ಕಾಗಿ ಪ್ರತಿಭಟನೆ

ಸುದ್ದಿ360 ದಾವಣಗೆರೆ ಜ.5: ಕಳೆದ ಹತ್ತು ವರ್ಷಗಳಿಂದ ಬೀಡಿ ಕಾಲೋನಿಯಲ್ಲಿ ವಾಸಿಸುತ್ತಿದ್ದರೂ ನಮಗೆ ಹಕ್ಕುಪತ್ರ ದೊರೆತಿಲ್ಲ. ಇದರಿಂದ ಅಗತ್ಯ ಮೂಲಭೂತ ಸೌಕರ್ಯಗಳೂ ಮರೀಚಿಕೆಯಾಗಿದ್ದು ಕೂಡಲೇ ನ್ಯಾಯ ಒದಗಿಸಿಕೊಡುವಂತೆ ಕೋರಿ ಹರಿಹರ ನಗರದ ಬೀಡಿ ಕಾಲೋನಿಯ ನಿವಾಸಿಗಳು ಜಿಲ್ಲಾಡಳಿತದ ಮುಂಭಾಗ ಇಂದು ಪ್ರತಿಭಟನೆ ನಡೆಸಿದರು. ಬಹುಜನ ಸಮಾಜ ಪಾರ್ಟಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಅಲ್ಲಿನ ನಿವಾಸಿಗಳು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರಿಗೆ ಮನವಿ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಡಿ.ಹನುಮಂತಪ್ಪ, ಹರಿಹರದ ಬೀಡಿ ಕಾಲೋನಿಯಲ್ಲಿ ಕಳೆದ … Read more

ದಾವಣಗೆರೆಯ ಯುವ ಮತದಾರರು ಎಷ್ಟು? ಕ್ಷೇತ್ರವಾರು ಮತದಾರರು ಎಷ್ಟಿದ್ದಾರೆ – ಲೇಟೆಸ್ಟ್ ಮಾಹಿತಿ

ಸುದ್ದಿ360 ದಾವಣಗೆರೆ ಜ.5: ಜಿಲ್ಲೆಯಲ್ಲಿ ಪರಿಷ್ಕೃತ ಮತದಾರರ ಪಟ್ಟಿ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 14,05,710 ಮತದಾರರಿದ್ದು, 7,05,233 ಪುರುಷರು, 7,00,357 ಮಹಿಳೆಯರು ಸೇರಿ ಒಟ್ಟು 14,05,710 ಮತದಾರರಿದ್ದಾರೆ. ಈ ಹಿಂದೆ ನ.9ರಂದು ಪ್ರಕಟಿಸಿದ್ದ ಕರಡು ಪಟ್ಟಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 13,88,343 ಮತದಾರರಿದ್ದರು, ಪರಿಷ್ಕರಣೆ ಬಳಿಕ ಅಂತಿಮ ಪಟ್ಟಿಯಲ್ಲಿ 17,276 ಮತದಾರರ ಹೆಚ್ಚಳವಾಗಿದೆ. ಏಳು ವಿಧಾನಸಭೆ ಕ್ಷೇತ್ರಗಳಲ್ಲಿ 1683 ಮತಗಟ್ಟೆಗಳಿದ್ದು, ಪ್ರತಿ ಮತಗಟ್ಟೆಗೂ ಒಬ್ಬರಂತೆ ಅಧಿಕಾರಿ (ಬಿಎಲ್‌ಒ) ಗಳನ್ನು ನೇಮಿಸಲಾಗಿದೆ. ಇವರೊಂದಿಗೆ 166 ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ … Read more

2023ರ ಜ.1ಕ್ಕೆ 18 ವರ್ಷ ತುಂಬುವವರು ಮತದಾರರ ಪಟ್ಟಿಗೆ ಸೇರ್ಪಡೆಗೆ ಅವಕಾಶ

ಸುದ್ದಿ360 ದಾವಣಗೆರೆ ಜ.5: ಚುನಾವಣಾ ಆಯೋಗದ ಆದೇಶದಂತೆ ಜಿಲ್ಲೆಯಲ್ಲಿ ಹೊಸ ಮತದಾರರ ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸಿದ್ದು, 2023ರ ಜ.1ಕ್ಕೆ 18 ವರ್ಷ ತುಂಬಿದ ಯುವಕ, ಯುವತಿಯರು ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಜಿಲ್ಲೆಯ ಎಲ್ಲ ಏಳು ವಿಧಾನಸಭೆ ಕ್ಷೇತ್ರಗಳ ಮತದಾರರ ಪರಿಷ್ಕೃತ ಅಂತಿಮ ಪಟ್ಟಿ ಸಿದ್ಧವಾಗಿದೆ. ಆದರೆ, ಈಗಲೂ ಹೊಸ ಮತದಾರರ ಹೆಸರು ಸೇರಿಸಲು ಅವಕಾಶ ಇರುವುದಾಗಿ … Read more

ನಕಲಿ ಎಪಿಕ್ ಬಗ್ಗೆ ಎಚ್ಚರ !!! ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ಸುದ್ದಿ360 ದಾವಣಗೆರೆ ಜ.5: ಮತದಾರರ ಗುರುತಿನ ಚೀಟಿಗಳನ್ನು ಚುನಾವಣಾ ಆಯೋಗದಿಂದಲೇ ಉಚಿತವಾಗಿ ಮತದಾರರ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ. ಹೀಗಾಗಿ, ಸಾರ್ವಜನಿಕರು ಯಾವುದೇ ಕಾರಣಕ್ಕೂ ಜೆರಾಕ್ಸ್ ಕೇಂದ್ರ ಅಥವಾ ಸೈಬರ್ ಸೆಂಟರ್‌ಗಳಲ್ಲಿ ಎಪಿಕ್ ಕಾರ್ಡ್ಗಳನ್ನು ಪ್ರಿಂಟ್ ಪಡೆಯಬಾರದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಜಿಲ್ಲೆಯ ಎಲ್ಲ ಏಳು ವಿಧಾನಸಭೆ ಕ್ಷೇತ್ರಗಳ ಮತದಾರರ ಪರಿಷ್ಕೃತ ಅಂತಿಮ ಪಟ್ಟಿ ಸಿದ್ಧವಾಗಿದೆ. ಆದರೆ, ಈಗಲೂ ಹೊಸ ಮತದಾರರ ಹೆಸರು ಸೇರಿಸಲು … Read more

ಯಲ್ಲಮ್ಮ ದೇವಿ ದರ್ಶನಕ್ಕೆ ಹೊರಟಿದ್ದ ಆರು ಮಂದಿ ಭೀಕರ ಅಪಘಾತದಲ್ಲಿ ಸಾವು

ಸುದ್ದಿ360 ಬೆಳಗಾವಿ, ಜ.5: ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರ ಎಂಬಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಆರು ಮಂದಿ ಮೃತಪಟ್ಟಿರುವುದಾಗಿ ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಲ್ಲಮ್ಮ ದೇವಿ ದರ್ಶನಕ್ಕೆಂದು ಪ್ರಯಾಣಿಸುತ್ತಿದ್ದ ಜೀಪ್ ಆಲದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇದರಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹುಲಕುಂದ ಗ್ರಾಮದ ನಿವಾಸಿಗಳಾದ ಹನುಮವ್ವ, ದೀಪಾ, ಸವಿತಾ, ಸುಪ್ರೀತಾ, ಮಾರುತಿ ಮತ್ತು ಇಂದ್ರವ್ವ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿರುವ ದುರ್ದೈವಿಗಳಾಗಿದ್ದಾರೆ.

‘ಮುನಿಸಿಕೊಳ್ಳದ, ತೆಗಳದ, ಜಗಳವಾಡದ ಈ ಪುಸ್ತಕ ಸ್ನೇಹ ನಿಮ್ಮನ್ನು ತಲೆ ಎತ್ತಿ ನಿಲ್ಲುವಂತೆ ಮಾಡುತ್ತದೆ’

ಪುಸ್ತಕ ಪಂಚಮಿ ಕಾರ್ಯಕಮದಲ್ಲಿ ಶಿಕ್ಷಣಾಧಿಕಾರಿ ಬಿ.ಎಂ. ದಾರುಕೇಶ್ ಸುದ್ದಿ360 ದಾವಣಗೆರೆ ಜ.5: ಎಂದಿಗೂ ಮುನಿಸಿಕೊಳ್ಳದ, ಜಗಳವಾಡದ, ತೆಗಳದ, ಬೇಸರ ಮೂಡಿಸದ ಮತ್ತು ಮುಖ್ಯವಾಗಿ ಸನ್ಮಾರ್ಗದತ್ತ ನಡೆಸುವ ಉತ್ತಮ ಸ್ನೇಹಿತನೆಂದರೆ ಶ್ರೇಷ್ಠ ಪುಸ್ತಕಗಳಾಗಿವೆ. ಅಂತಹ ಪುಸ್ತಕಗಳನ್ನು ವಿದ್ಯಾರ್ಥಿಗಳು ತಮ್ಮ ಆಪ್ತ ಸಂಗಾತಿಗಳನ್ನಾಗಿ ಮಾಡಿಕೊಂಡರೆ ಅವುಗಳ ಮಾರ್ಗದರ್ಶನ ಜೀವನದ ಕಡೆಯವರೆಗೂ ಇರುತ್ತದೆ ಎಂದು ದಾವಣಗೆರೆ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಕಾರಿ ಬಿ.ಎಂ. ದಾರುಕೇಶ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ನಗರದ ಪಿಜೆ ಬಡಾವಣೆಯ ಈಶ್ವರಮ್ಮ ಪ್ರೌಢಶಾಲೆಯಲ್ಲಿ ಡಾ.ಎಚ್.ಎಫ್ ಕಟ್ಟೀಮನಿ ಪ್ರೌಢ ಶಿಕ್ಷಣ … Read more

error: Content is protected !!