ಜಿಎಂಐಟಿ ಕಾಲೇಜಿನ 15 ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆ

ಸುದ್ದಿ360 ದಾವಣಗೆರೆ ನ.18:  ಇತ್ತೀಚೆಗೆ ನಡೆದ ವಿವಿಧ ಕಂಪನಿಗಳ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂಐಟಿ ಕಾಲೇಜಿನ 15 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಟೆಕ್ ಮಹೇಂದ್ರ ಕಂಪನಿಯ ವತಿಯಿಂದ ಐದು ವಿದ್ಯಾರ್ಥಿಗಳು, ಹೆಕ್ಸಾವೇರ್ ಕಂಪನಿ ವತಿಯಿಂದ ಮೂರು ವಿದ್ಯಾರ್ಥಿಗಳು ಮತ್ತು ಆಪ್ಟಂ ಸಲ್ಯೂಷನ್ ಕಂಪನಿ ವತಿಯಿಂದ ಬಯೋಟೆಕ್ನಾಲಜಿ ವಿಭಾಗದ ಏಳು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಇನ್ನೂ ಅನೇಕ ಕಂಪನಿಗಳು 2023ಕ್ಕೆ ಹೊರ ಹೋಗುವ ವಿದ್ಯಾರ್ಥಿಗಳಿಗೆ ಸರದಿಯಲ್ಲಿದ್ದು, ಎಲ್ಲಾ ಅರ್ಹ … Read more

ಮಾಜಿ ಸಿಎಂ ಸಿದ್ಧರಾಮಯ್ಯಗೆ ಯಾವ ಕ್ಷೇತ್ರವೂ ಸುರಕ್ಷಿತವಾಗಿಲ್ಲ: ಸಚಿವ ಗೋವಿಂದ ಕಾರಜೋಳ ಲೇವಡಿ

ಚಾಮುಂಡೇಶ್ವರಿ ಕ್ಷೇತ್ರದ ಜನರು ಕೈಬಿಟ್ಟಾಗ ಬಾದಾಮಿ ಜನರು ಸಿದ್ದರಾಮಯ್ಯ ಕೈ ಹಿಡಿದಿದ್ದರು. ಅವರ ಸೇವೆ ಮಾಡುವುದು ಬಿಟ್ಟು ಈಗ ಬೇರೆ ಕ್ಷೇತ್ರ ಕ್ಕೆ ಹೋಗುತ್ತಿದ್ದಾರೆ. ಕೋಲಾರದಲ್ಲಿ ಸ್ಥಿತಿ ಸರಿಯಿಲ್ಲ, ಅಲ್ಲಿ ಮುನಿಯಪ್ಪನವರನ್ನು ಕಾಂಗ್ರೆಸ್ ನವರೇ ಸೋಲಿಸಿದ್ದಾರೆ. ಈ ಸರತಿ ಎಲ್ಲರಿಗೂ ಬರಲಿದೆ ಎಂದು ಹೇಳಿದ ಅವರು, ಕಷ್ಟ ಕಾಲದಲ್ಲಿ ಕೈ ಹಿಡಿದವರನ್ನು ಮರೆಯಬಾರದು’ .

ಹಾಲಿನ ದರ ಪರಿಷ್ಕರಣೆ: ನ. 20 ರ ನಂತರ ತೀರ್ಮಾನ – ಸಿಎಂ ಬೊಮ್ಮಾಯಿ

ಸುದ್ದಿ360 ಕಲಬುರಗಿ (ಸೇಡಂ) ನ.14: ಹಾಲಿನ ದರ ಏರಿಕೆ ಬಗ್ಗೆ ಈ ತಿಂಗಳ 20ರ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ತೀರ್ಮಾನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು. ಅವರು ಇಂದು ಸೇಡಂನಲ್ಲಿ ಹಾಲಿನ ದರ ಪರಿಷ್ಕರಣೆ ಬಗ್ಗೆ ಮಾಧ್ಯಮವರಿಗೆ ಪ್ರತಿಕ್ರಿಯಿಸುತ್ತಾ, ಕಳೆದ ಹಲವಾರು ತಿಂಗಳಿನಿಂದ ಚರ್ಚೆಯಾಗುತ್ತಿದ್ದು, ಈ ತಿಂಗಳ 20ನೇ ತಾರೀಖಿನ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು … Read more

ಹರಿಪ್ರಿಯ ಮೂಗೇರಿದ ಮೂಗುತಿ

ಸುದ್ದಿ360: ಮಂತ್ರಘೋಷಗಳ ಹಿಮ್ಮೇಳದಲ್ಲಿ ಹರಿಪ್ರಿಯಾ ಮೂಗು ಚುಚ್ಚಿಸಿಕೊಳ್ಳುತ್ತಿರುವ ವೀಡಿಯೋ ಒಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ ಮಾಡಿದ್ದಾರೆ. ಸೀರೆಯುಟ್ಟು ಸೂಜಿಗೆ ಮುಖವೊಡ್ಡಿರುವ ಹರಿಪ್ರಿಯಾ ಸಂಪ್ರದಾಯಿಕ ಶೈಲಿಯಲ್ಲಿ ಮೂಗು ಚುಚ್ಚಿಸಿಕೊಂಡಿದ್ದಾರೆ. ಮೂಗು ಚುಚ್ಚುವಾಗ ಆದ ನೋವಿಗೆ ಕಣ್ಣಾಲಿಗಳು ತುಂಬಿವೆಯಾದರೂ ಮಂದಹಾಸ ಬೀರಿರುವ ಹರಿಪ್ರಿಯಾ ಖುಷಿ ಖುಷಿಯಾಗಿ ಕಾಣಿಸಿಕೊಂಡಿದ್ದಾರೆ. “ಬದುಕಲ್ಲಿ ಬದಲಾವಣೆ ನಿರಂತರವಾಗಿರುತ್ತದೆ. ತೆರೆಯ ಮೇಲೆ ಈವರೆಗೆ ಸಾಕಷ್ಟು ಬಾರಿ ಮೂಗುತಿ ಧರಿಸಿ ಕಾಣಿಸಿಕೊಂಡಿದ್ದೇನೆ. ಆದರೆ ಅದ್ಯಾವುದೂ ರಿಯಲ್ ಆಗಿರಲಿಲ್ಲ. ಈಗ ನಿಮ್ಮೆದುರು ಕಾಣುತ್ತಿರುವುದು ಮಾತ್ರ ರಿಯಲ್. ನನಗಿದು ಬಹಳ ಖುಷಿ … Read more

ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿದ ಖ್ಯಾತಿ ನೆಹರು  ಅವರದ್ದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ನವೆಂಬರ್ 14: ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿರುವ ಖ್ಯಾತಿ ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರಿಗೆ ಸಲ್ಲುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು  ಭಾರತದ ಪ್ರಥಮ ಪ್ರಧಾನಿ ಪಂಡಿತ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನ ಸೌಧದ ಮುಂಭಾಗದಲ್ಲಿರುವ ಅವರ  ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಮಕ್ಕಳನ್ನು ಅತ್ಯಂತ ಪ್ರೀತಿ ಮತ್ತು ವಾತ್ಸಲ್ಯದಿಂದ ಕಾಣುತ್ತಿದ್ದ ನಮ್ಮ ರಾಷ್ಟ್ರದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ … Read more

ಕೇಸರಿ ಕಂಡರೆ ಏಕೆ ಸಿಟ್ಟು? ಎಲ್ಲದರಲ್ಲೂ ರಾಜಕಾರಣ ಸಲ್ಲದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ನವೆಂಬರ್ 14: ಎಲ್ಲದರಲ್ಲೂ ರಾಜಕಾರಣ ಮಾಡುವುದು ಬಹಳ ಕೆಳ ಮಟ್ಟದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುತ್ತಿರುವುದನ್ನು ಕಾಂಗ್ರೆಸ್ ವಿರೋಧಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕೇಸರಿ ಬಣ್ಣ ಭಾರತದ ಧ್ವಜದಲ್ಲಿಯೇ ಇದೆ.  ಕೇಸರಿ ಕಂಡರೆ ಏಕೆ ಸಿಟ್ಟು? ಸ್ವಾಮಿ ವಿವೇಕಾನಂದರ ಹೆಸರಿನಲ್ಲಿಯೇ ಶಾಲಾ ಕೊಠಡಿಗಳನ್ನು  … Read more

ಎಪಿಸಿ ಕಪ್ ಚದುರಂಗ ಸ್ಪರ್ಧೆ ತನುಶ್ ಜೆ ಗೆ ಪ್ರಥಮ ಸ್ಥಾನ

ಸುದ್ದಿ360 ದಾವಣಗೆರೆ ನ. 13: ನಗರದ ವಿನಾಯಕ ಬಡಾವಣೆ ಯಲ್ಲಿರುವ ಆನಂದ್ ಪಿಯು ಕಾಲೇಜ್ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ಮಕ್ಕಳಿಗೆ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ಏರ್ಪಡಿಸಲಾಗಿತ್ತು  ಆನಂದ್ ಪಿಯು ಕಾಲೇಜಿನ ಅಧ್ಯಕ್ಷರಾದ ಆನಂದ್  ಚದುರಂಗ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳ ಬುದ್ಧಿವಂತಿಕೆ ಶಕ್ತಿ ಬೆಳವಣಿಗೆಗೆ ಚೆಸ್ ಸಹಕಾರಿಯಾಗಲಿದೆ. ಇದು ಬುದ್ಧಿವಂತರ ಆಟ ಅಲ್ಲ ಮಕ್ಕಳನ್ನು ಬುದ್ಧಿವಂತರನ್ನಾಗಿ ಮಾಡುವ ಆಟ ಎಂದರು. ಇದೇ ರೀತಿ ಪ್ರತಿ ವರ್ಷವೂ ಎಪಿಸಿ ಕಪ್ ಚದುರಂಗ ಸ್ಪರ್ಧೆಯನ್ನು  … Read more

ಇಂದು, ಮುಂದು ಎಂದೆಂದೂ ಜನರೇ ನಮ್ಮ ಮಾಲೀಕರು : ಗಡಿಗುಡಾಳ್ ಮಂಜುನಾಥ್

“ಮನೆಯ ಬಾಗಿಲಿಗೆ ನಿಮ್ಮ ಸೇವಕ” ವಿಶೇಷ ಅಭಿಯಾನ ಸುದ್ದಿ360 ದಾವಣಗೆರೆ, ನ.13: ಈ ಹಿಂದೆ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸ್ಥಳದಲ್ಲಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುವ ವಿನೂತನ ಕಾರ್ಯಕ್ರಮವನ್ನು ರೂಪಿಸಿ ವಾರ್ಡ್‍ ನಿವಾಸಿಗಳ ಮನಗೆದ್ದಿದ್ದ ಮಹಾನಗರ ಪಾಲಿಕೆಯ ಎಂಸಿಸಿ ಬಿ ಬ್ಲಾಕ್ ನ ಸದಸ್ಯ ಗಡಿಗುಡಾಳ್ ಮಂಜುನಾಥ್ ಈಗ ಪ್ರತಿ ಭಾನುವಾರ ಒಂದು ಮುಖ್ಯರಸ್ತೆಗೆ ಭೇಟಿ ನೀಡಿ ಅಲ್ಲಿನ ನಿವಾಸಿಗಳ ಕಷ್ಟ ಕಾರ್ಪಣ್ಯ ವಿಚಾರಿಸಲು ಮುಂದಾಗಿದ್ದಾರೆ. “ಮನೆಯ ಬಾಗಿಲಿಗೆ ನಿಮ್ಮ ಸೇವಕ” ಕಾರ್ಯಕ್ರಮ ಇಂದು ಎಂಸಿಸಿ ಬಿ … Read more

ನರಬಲಿಗಾಗಿ 2 ತಿಂಗಳ  ಮಗು ಅಪಹರಣ : ಪೊಲೀಸರ ಕಾರ್ಯಾಚರಣೆಯಿಂದ ಮಗು ರಕ್ಷಣೆ

ಸುದ್ದಿ360 ಹೊಸದಿಲ್ಲಿ ನ.13: ಮೃತಪಟ್ಟಿದ್ದ ವ್ಯಕ್ತಿಯನ್ನು ಬದುಕಿಸಲು ಎರಡು ತಿಂಗಳ ಮಗುವೊಂದನ್ನು ನರಬಲಿ ಕೊಡುವ ಪ್ರಯತ್ನ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ನಡೆದಿರುವುದು ಬೆಳಕಿಗೆ ಬ೦ದಿದೆ. ಮೂಢನಂಬಿಕೆಗೆ ಗಂಟುಬಿದ್ದ ಆರೋಪಿ ಮಹಿಳೆ ಇತ್ತೀಚಿಗೆ ಮೃತಪಟ್ಟಿದ್ದ ಅಪ್ಪನನ್ನು ಬದುಕಿಸಲು ನರಬಲಿ ಕೊಡಲು ಮುಂದಾಗಿದ್ದಳು ಎಂದು ಪೊಲೀಸರ ಕಾರ್ಯಾಚರಣೆಯಿಂದ ತಿಳಿದು ಬಂದಿದೆ.  ಸತ್ತ ಅಪ್ಪ ಮರಳಿ ಬದುಕಬೇಕೆಂದರೆ ಮಗುವೊಂದರ ನರಬಲಿಯಾಗಬೇಕು ಎಂದು ಜ್ಯೋತಿಷಿ ಹೇಳಿದ್ದರಂತೆ. ಪೊಲೀಸರ ಯಶಸ್ವೀ ಕಾರ್ಯಾಚರಣೆ ಪೊಲೀಸರ ಯಶಸ್ವೀ ಕಾರ್ಯಾಚರಣೆಯಿಂದ ಮಗುವನ್ನು ರಕ್ಷಿಸಲಾಗಿದೆ. ನರಬಲಿಗಾಗಿ ಮಗುವನ್ನು ಅಪಹರಿಸಿದ್ದ ಮಹಿಳೆಯನ್ನು … Read more

ಬಿಪಾಶ ಬಸುಗೆ ತಾಯ್ತನದ ಸಂಭ್ರಮ: ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ಬೆಡಗಿ

ಸುದ್ದಿ360 ಮುಂಬಯಿ: ಬಾಲಿವುಡ್ ಖ್ಯಾತ ನಟಿ ಬಿಪಾಶ ಬಸು ಶನಿವಾರ ಮುಂಬೈಯ ಖಾಸಗಿ ಆಸ್ಪತ್ರೆ ಒಂದರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದು, ಮಗುವಿಗೆ “ದೇವಿ ಬಸು ಸಿಂಗ್ ಗ್ರೋವರ್” ಎಂದು ಹೆಸರಿಡಲಾಗಿದೆ. ಒಂದು ಕಾಲದಲ್ಲಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದ ಬಾಲಿವುಡ್ ನಟಿ ಬಿಪಾಶ ಬಸು ಹಾಗೂ ನಟ ಕರಣ್ ಸಿಂಗ್ ಗ್ರೋವರ್ ದಂಪತಿ ಶನಿವಾರ ತಮ್ಮ ಕುಟುಂಬಕ್ಕೆ ಹೆಣ್ಣು ಮಗುವನ್ನು ಬರ ಮಾಡಿಕೊಂಡರು. ಈ ಖುಷಿ ಸಮಾಚಾರವನ್ನು ಸ್ಟಾರ್ ದಂಪತಿ … Read more

error: Content is protected !!