ತೆಲುಗು ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ವಿರುದ್ಧ ಎಫ್ಐಆರ್!

 ಸುದ್ದಿ360 ಸಿನೆಮಾ: ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಅತಿ ಹೆಚ್ಚು ಫ್ಯಾನ್ ಫಾಲೋಯಿಂಗ್ ಹೊಂದಿರುವ ನಟ ಪವನ್ ಕಲ್ಯಾಣ್ ವಿರುದ್ಧ ಹೈದರಾಬಾದ್ ಪೊಲೀಸರು ಪ್ರಕರಣ ಒಂದನ್ನು ದಾಖಲಿಸಿದ್ದಾರೆ. ಹಾಗಂತ ಪವನ್ ಏನು ಅಪರಾಧ ಮಾಡಿಲ್ಲ. ಆದರೆ ಕಾರಿನ ಮೇಲೆ ಸ್ಟಂಟ್ ಮಾಡಿದ್ದಕ್ಕಾಗಿ ಪವನ್ ಕಲ್ಯಾಣ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಅಪಾಯಕಾರಿ ಸ್ಟಂಟ್ಗಳನ್ನು ಮಾಡಬೇಡಿ ಎಂದು ಯುವಜನತೆಗೆ, ಸಮಾಜಕ್ಕೆ ತಿಳಿ ಹೇಳುವ ಸ್ಥಾನದಲ್ಲಿರುವ ಒಬ್ಬ ಸ್ಟಾರ್ ಸೆಲೆಬ್ರಿಟಿ ಆಗಿದ್ದುಕೊಂಡು ಪವನ್ ಕಲ್ಯಾಣ್ ಈ ರೀತಿ ಮಾಡಿರುವುದು ಬೇಜವಾಬ್ದಾರಿತನ ಎಂದು … Read more

ನ.13ರಂದು ದಾವಣಗೆರೆ ಜಿಲ್ಲಾ ಸಿಪಿಐ ಸರ್ವ ಸದಸ್ಯರ ಸಭೆ

ಸುದ್ದಿ360 ದಾವಣಗೆರೆ ನ.12: ಭಾರತ ಕಮ್ಯುನಿಸ್ಟ್ ಪಕ್ಷದ ದಾವಣಗೆರೆ ಜಿಲ್ಲಾ ಸರ್ವ ಸದಸ್ಯರ ಸಭೆಯು ನವೆಂಬರ್ 13ರ ಭಾನುವಾರ ನಡೆಯಲಿದೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ. ಆವರಗೆರೆ ಚಂದ್ರು ತಿಳಿಸಿದ್ದಾರೆ. ದಾವಣಗೆರೆ ಈರುಳ್ಳಿ ಮಾರ್ಕೆಟ್ ರಸ್ತೆಯಲ್ಲಿರುವ ಶೇಖರಪ್ಪ ನಗರದ ಕಾಂ. ಹೆಚ್ ಅಡಿವೆಪ್ಪ ಸಮುದಾಯ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಆರಂಭವಾಗುವ ಸಿಪಿಐ ಸರ್ವ ಸದಸ್ಯರ ಸಭೆಯನ್ನು ಸಿಪಿಐ ರಾಜ್ಯ ಕಾರ್ಯದರ್ಶಿ ಕಾಂ. ಸಾತಿ ಸುಂದರೇಶ್ ಉದ್ಘಾಟಿಸಲಿದ್ದಾರೆ. ಪಕ್ಷದ ದಾವಣಗೆರೆ ಜಿಲ್ಲಾ ಮಂಡಳಿ ಉಸ್ತುವಾರಿಗಳಾದ ಕಾಂ. … Read more

ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಅಜಯ್ ದ್ವಿತೀಯ

ಸುದ್ದಿ360 ಶಿವಮೊಗ್ಗ ನ. 12: ಶಿವಮೊಗ್ಗದ ಆಕ್ಸ್ ಫರ್ಡ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಹಾಗೂ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣದಲ್ಲಿ  ಕರಾಟೆ ತರಬೇತಿ ದಾರರಾದ  ಸನ್ ಸೈ  ಶ್ರೇಯಸ್ ರವರ ವಿದ್ಯಾರ್ಥಿ ಯಾದ  ಅಜಯ್ ಮಂಗಳೂರಿನ ಕಟೀಲಿನಲ್ಲಿ ನಡೆಯುತ್ತಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ 60 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು  ಪಡೆದಿದ್ದಾರೆ. ವಿಜೇತ ಕ್ರೀಡಾಪಟುವಿಗೆ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ್ ಅಭಿನಂದಿಸಿದ್ದಾರೆ.

ಅಯೊಧ್ಯೆಗೆ ಸೀತೆಯ ದೊಡ್ಡ ನಮಸ್ಕಾರ !?

ಹೆಣ್ಣಿನ ಕ್ರಿಯಾಶೀಲತೆ ಸಹಿಸದ ಗಂಡಿನಿಂದ ದೌರ್ಜನ್ಯ: ಬಂಡಾಯ ಸಾಹಿತಿ ಡಾ. ಕಾಳೇಗೌಡ ಅಭಿಮತ

ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಸಿಂಗ್ ನೇಮಕ

ಸುದ್ದಿ360 ಶಿವಮೊಗ್ಗ,ನ.11: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಸಿಂಗ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕಮಾಡಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ದೀಪಕ್ ಸಿಂಗ್ ಅವರು ತಕ್ಷಣ ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್‌ನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ.

ನಮ್ಮ ದಾವಣಗೆರೆಯ ಫಲಪುಷ್ಪ ಪ್ರದರ್ಶನದಲ್ಲಿ ಕರ್ನಾಟಕ ರತ್ನ ಪುನೀತನ ಮೆರುಗು

ಕಣ್ಮನ ಸೆಳೆದ ಫಲಪುಷ್ಪ ಪ್ರದರ್ಶನ ಸುದ್ದಿ360 ದಾವಣಗೆರೆ ನ.12: ಏಷ್ಯಾದಲ್ಲಿಯೇ ದೊಡ್ಡ ಗಾಜಿನಮನೆ ಎಂಬ ಖ್ಯಾತಿ ಹೊಂದಿರುವ ಬೆಣ್ಣೆನಗರಿಯ ಗಾಜಿನ ಮನೆಯಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ವೀಕ್ಷಕರ ಕಣ್ಮನ ಸೆಳೆಯುತ್ತಿದೆ. ನಗರದ ಹೊರ ವಲಯ ಗಾಜಿನಮನೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ತೋಟಗಾರಿಕೆ ಸಂಘದ ಸಂಯುಕ್ತಾಶ್ರಯದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆಗೊಂಡಿದ್ದು,  ಇದೇ ನವೆಂಬರ್ 10 ರಿಂದ 4 ದಿನಗಳ ಕಾಲ ನಡೆಯುತ್ತಿದೆ. ವಿಶೇಷವಾಗಿ ಇಲ್ಲಿ ಅಪ್ಪುವಿನ ತೀಮ್ ನೋಡುಗರನ್ನು ಪುನೀತನನ್ನಾಗಿ ಮಾಡಿದೆ. … Read more

ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಬೆಂಗಳೂರು ನವೆಂಬರ್ 11 : ರಾಜ್ಯದ ಬಹುನಿರೀಕ್ಷಿತ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ವಿಶೇಷ ರೈಲಿಗೆ ಹಸಿರು ನಿಶಾನೆ ತೋರುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಇಂದು ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡಿದರು. ಎಂಟು ದಿನಗಳ ಕಾಶಿ ದರ್ಶನದ ಈ ರೈಲು ವಾರಣಾಸಿ, ಪ್ರಯಾಗ್ ರಾಜ್, ಅಯೋಧ್ಯಾ ಮುಂತಾದ ಪವಿತ್ರ ಸ್ಥಳಗಳಿಗೆ ಯಾತ್ರಿಕರನ್ನು ಕರೆದೊಯ್ಯುತ್ತದೆ. ಮುಜರಾಯಿ ಇಲಾಖೆ ಭಾರತ ಸರ್ಕಾರದ ಸಹಯೋಗದಲ್ಲಿ ಈ ಕಾಶಿ ದರ್ಶನ ಯಾತ್ರೆ ಆಯೋಜಿಸಲಾಗಿದೆ. ಈ ಯಾತ್ರೆಗೆ … Read more

ಅ.28ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಸುದ್ದಿ360 ದಾವಣಗೆರೆ ಅ.27: ಸ್ಪೈರ್‌ ಕ್ಲಿನಿಕ್, ಆಲ್‌ವೇಸ್ ಬೆಸ್ಟ್ ಕೇರ್ ಹಾಸ್ಪಿಟಲ್, ಸಿಟಿ ಸೆಂಟ್ರಲ್ ಆಸ್ಪತ್ರೆ ಇವರ ಸಂಯುಕ್ತಶ್ರಾಯದಲ್ಲಿ ಅ.28ರಂದು ಹದಡಿ ರಸ್ತೆಯಲ್ಲಿರುವ ಆಲ್‌ವೇಸ್ ಬೆಸ್ಟ್ ಕೇರ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಶಿಬಿರದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲಿದ್ದು, ಉಸಿರಾಟದ ತೊಂದರೆ, ಹೃದಯ, ಮೂಳೆ, ಕೀಲು ರೋಗದ ತಪಾಸಣೆ ಮಾಡಲಾಗುವುದು ಹಾಗೂ ಉಚಿತವಾಗಿ ಔಷಧಿ, ಇಸಿಜಿ, ಇಕೋ ಮತ್ತು ಮೂಳೆ ಸಾಂಧ್ರತೆಯ ಪರೀಕ್ಷೆ ಮಾಡಲಾಗುವುದು. ಸಾರ್ವಜನಿಕರು ಹೆಸರು ನೋಂದಾಯಿಸಲು ಸಂಜೀವ ರೆಡ್ಡಿ: 9900906390, … Read more

ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕಿತ್ತೂರಿನ ರಾಣಿ ಚೆನ್ನಮ್ಮ ಸ್ಮರಣೆ

ಶೌರ್ಯ ಮತ್ತು ಸಾಹಸಕ್ಕೆ ಮತ್ತೊಂದು ಹೆಸರೇ ವೀರಾಗ್ರಣಿ ಕಿತ್ತೂರಿನ ರಾಣಿ ಚೆನ್ನಮ್ಮಜಿ.-ಬಿ ವಾಮದೇವಪ್ಪ, ಅಧ್ಯಕ್ಷರು, ಜಿಲ್ಲಾ ಕಸಾಪ, ದಾವಣಗೆರೆ ಕರ್ನಾಟಕದ ಕನ್ನಡತಿ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿ ಅವರ ವಿರುದ್ಧ ಹೋರಾಟ ಮಾಡಿ ಜಯಗಳಿಸಿದ ಕಿತ್ತೂರಿನ ರಾಣಿ ವೀರಾಗ್ರಣಿ ಎಂದೇ ಪ್ರಸಿದ್ಧರಾದ ಕಿತ್ತೂರಿನ ರಾಣಿ ಚನ್ನಮ್ಮಜಿಯವರ ವಿಜಯೋತ್ಸವದ ಸಂದರ್ಭವನ್ನು ಪ್ರತಿಯೊಬ್ಬರೂ ಸ್ಮರಿಸಲೇಬೇಕು ಎಂದು ಅವರ ಜಯಂತೋತ್ಸವದ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಬಿ. ವಾಮದೇವಪ್ಪ ಅವರು ಅತ್ಯಂತ ಗೌರವ ಭಾವನೆಯಿಂದ ಚನ್ನಮ್ಮಾಜಿ ಅವರ ಗುಣಗಾನ … Read more

ಪಿ. ರಾಜಕುಮಾರ್ ನಿಧನಕ್ಕೆ‌ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಂತಾಪ

ಸುದ್ದಿ360 ದಾವಣಗೆರೆ ಅ.23 : ಮಾಜಿ ಸಿಎಂ ಸಿದ್ದರಾಮಯ್ಯರ ಆಪ್ತರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಪಿ. ರಾಜಕುಮಾರ್ ಅವರ ನಿಧನಕ್ಕೆ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್‌. ಎಸ್. ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್. ಬಿ. ಮಂಜಪ್ಪ, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್ ಸೇರಿದಂತೆ ಪಾಲಿಕೆ ಸದಸ್ಯರು ಸಂತಾಪ ಸೂಚಿಸಿದ್ದಾರೆ‌. ಕುರುಬರ ಸಂಘದ ನಿರ್ದೇಶಕರಾಗಿದ್ದ ಪಿ. ರಾಜಕುಮಾರ್ ಅವರು ತಡರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ … Read more

error: Content is protected !!