ಬಸವತತ್ವ ಆಚರಣೆಯಿಂದ ಸುಖ-ಶಾಂತಿ: ಬಸವಪ್ರಭು ಶ್ರೀ

ಸುದ್ದಿ360 ದಾವಣಗೆರೆ, ಆ.26: ಬಸವತತ್ವ ಆಚರಣೆಯಿಂದ  ಜಗತ್ತಿನಲ್ಲಿ ಸುಖ, ಶಾಂತಿ ನೆಲೆಸುತ್ತದೆ ಎಂದು ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಹೇಳಿದರು. ದಾವಣಗೆರೆ ವಿರಕ್ತಮಠದಲ್ಲಿ ನೆಡೆದ ಬಸವಾದಿ ಶರಣರ ವೇಷಭೂಷಣ ಸ್ಪರ್ಧೆ ಸಮಾರಂಭದ ಸಾನಿಧ್ಯವಹಿಸಿ ಮಾತನಾಡಿ, ಬಸವತತ್ವವನ್ನು ಪಾಲಿಸುವ ವ್ಯಕ್ತಿಯು ಶಾಂತಿಯುತವಾಗಿರುತ್ತಾನೆ ಕಾರಣ ಬಸವತತ್ವವು ಮಾನವೀಯತೆಯನ್ನು ಭೋದಿಸುತ್ತದೆ ಮಾನವೀಯತೆ ಇದ್ದಲ್ಲಿ ಶಾಂತಿ , ಪ್ರೇಮ , ಸಮಾನತೆಗಳು ನೆಲೆಸುತ್ತದೆ  ಹಾಗಾಗಿ ಎಲ್ಲರೂ ಬಸವತತ್ವವನ್ನು ಪಾಲಿಸುವ ಪ್ರತಿಜ್ಞೆ ಮಾಡಬೇಕು ಆಗ ಮಾತ್ರ ಜಗತ್ತಿಗೆ ಶಾಂತಿ ನೆಲೆಸುತ್ತದೆ. ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು, ಸಿದ್ದರಾಮೇಶ್ವರ, … Read more

ಬಿಜೆಪಿ ವಿರುದ್ಧ ಅಭಿಯಾನ – ಪ್ರಮೋದ್ ಮುತಾಲಿಕ್ ಎಚ್ಚರಿಕೆ

ಸುದ್ದಿ360 ಹುಬ್ಬಳ್ಳಿ, ಆ.26: ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಸಮಿತಿ ರಚನೆ ಮಾಡಿ ನಿರ್ಣಯ ತೆಗೆದುಕೊಳ್ಳಲು ತಿಳಿಸಿದೆ. ಅಗಸ್ಟ್ 29 ರಂದು ನಿರ್ಣಯ ತಿಳಿಸಲು ಸೂಚಿಸಿದೆ. ಆದರೆ ಅನುಮತಿ ನೀಡಲು ಸಮಿತಿಯ ರಚನೆ ಅವಶ್ಯಕತೆ ಇರಲಿಲ್ಲ. ಆದರೆ ವಿನಾಕಾರಣ ಕಾಲಹರಣ ಮಾಡಲು ಈ ರೀತಿಯ ನಾಟಕವನ್ನು ಪಾಲಿಕೆ ಮಾಡುತ್ತಿದೆ ಎಂದು  ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್  ಆರೋಪಿಸಿದರು. ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಬಿಜೆಪಿ ಅವಕಾಶ … Read more

15 ಸೆಕೆಂಡ್ ಗಳಲ್ಲಿ ಧರೆಗುರುಳಲಿವೆ 40 ಅಂತಸ್ತಿನ ಸೂಪರ್‌ಟೆಕ್ ಅವಳಿ ಗೋಪುರಗಳು !!!

ಧರೆಗುರುಳಲು ಕ್ಷಣಗಣನೆಯಲ್ಲಿರುವ ಸೂಪರ್‌ಟೆಕ್ ಅವಳಿ ಗೋಪುರಗಳು ಸುದ್ದಿ360 ನೋಯ್ಡ, ಆ.26: ಕುಂಬಾರನಿಗೆ ವರುಷ ದೊಣ್ಣೆಗೆ ನಿಮಿಷ ಎಂಬ ಗಾದೆ ಮಾತು ಸಾಮಾನ್ಯವಾಗಿ ಎಲ್ಲರೂ ಕೇಳಿಯೇ ಇರುತ್ತೀರಿ. ಅಂತೆಯೇ 2004ರಲ್ಲಿ ಪ್ರಾರಂಭವಾದ ಯೋಜನೆಯಿಂದ ಹಲವರ ಕನಸಿನ ಮನೆಯಾಗಬೇಕಿದ್ದ ವಸತಿ ಸಮುಚ್ಛಯ ಇದೀಗ ನೆಲಸಮಗೊಳ್ಳಲು ಕ್ಷಣಗಣನೆಯಲ್ಲಿದೆ. ಉತ್ತರ ಪ್ರದೇಶದ ನೋಯ್ಡಾದ ಸೆಕ್ಟರ್ 93ರಲ್ಲಿನ ಅಪೆಕ್ಸ್ ಮತ್ತು ಸಿಯಾನ್ ಹೆಸರಿನ ಸೂಪರ್‌ಟೆಕ್ ಅವಳಿ ಗೋಪುರಗಳ ಅಸ್ತಿತ್ವ ಆಗಸ್ಟ್ 28 ರ ಮಧ್ಯಾಹ್ನ 2.30ರ ವರೆಗೆ ಮಾತ್ರ ನಂತರದ 15 ಸೆಕೆಂಡ್ ಗಳಲ್ಲಿ … Read more

ಆ. 28: ಕರವೇಯಿಂದ ಪ್ರತಿಭಾ ಪುರಸ್ಕಾರ – ‘ಜ್ಞಾನಕಾಶಿ’ ಪ್ರಶಸ್ತಿ ಪ್ರದಾನ ಸಮಾರಂಭ

ಸುದ್ದಿ360 ದಾವಣಗೆರೆ, ಆ.25: 2021-22ರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಐಚ್ಛಿಕ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ದಾವಣಗೆರೆ ವಲಯ ಮಟ್ಟದ ಪ್ರತಿಭಾ ಪುರಸ್ಕಾರ ‘ಜ್ಞಾನಕಾಶಿ’ ಪ್ರಶಸ್ತಿ ಪ್ರದಾನ ಸಮಾರಂಭ ಆ. 28 ರಂದು ಜಿಲ್ಲಾ ಗುರುಭವನದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ. ನಾರಾಯಣ ಗೌಡ) ಬಣ ಜಿಲ್ಲಾ ಅಧ್ಯಕ್ಷ ಎಂ.ಎಸ್. ರಾಮೇಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಇಂದು ಈ ವಿಷಯ ತಿಳಿಸಿದ ಅವರು, ಕಳೆದ ಏಳು ವರ್ಷದಿಂದ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಸಲಾಗುತ್ತಿದೆ. ಈ … Read more

ಕುಹೂ… ಕುಹೂ… ದಾವಣಗೆರೆ ಕೋಗಿಲೆ – ಡಾ. ಪುನೀತ್ ರಾಜ್ ಕುಮಾರ್ ಅವಾರ್ಡ್

ಎಸ್‌ಎಸ್‌ಎಂ ಜನ್ಮದಿನ – Kannada-Hindi Karoke Singing Talent Hunt Show ಸುದ್ದಿ360 ದಾವಣಗೆರೆ, ಆ.25: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಜನ್ಮ ದಿನದ ಅಂಗವಾಗಿ ಕುಹೂ ಕುಹೂ ದಾವಣಗೆರೆ ಕೋಗಿಲೆ, ಕನ್ನಡ ಮತ್ತು ಹಿಂದಿ ಹಾಡುಗಳ ಕರೋಕೆ ಗಾಯನ ಸ್ಪರ್ಧೆ ಹಾಗೂ ಡಾ. ಪುನೀತ್‌ರಾಜ್‌ಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಂಡಿದ್ದು, ಸಮಾರಂಭದಲ್ಲಿ ನಟ ದರ್ಶನ್ ಭಾಗವಹಿಸಲಿದ್ದಾರೆ ಎಂದು ದಿನೇಶ್ ಕೆ. ಶೆಟ್ಟಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕುಹೂ ಕುಹೂ … Read more

ಪುಸ್ತಕ ಓದುವ ಸಂಸ್ಕೃತಿ ಕಣ್ಮರೆ – ಆತಂಕಕಾರಿ – ಡಾ.ಎಸ್.ಆರ್. ಅಂಜನಪ್ಪ ವಿಷಾದ

ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಅಮೃತ ಪುಸ್ತಕ ಮಾರಾಟ ಅಭಿಯಾನ ಸುದ್ದಿ360 ದಾವಣಗೆರೆ, ಆ.25: ವಿದ್ಯಾರ್ಥಿಗಳು ಮತ್ತು ಜನ ಸಾಮಾನ್ಯರು ಇತ್ತೀಚೆಗೆ ಪುಸ್ತಕಗಳಿಂದ ದೂರ ಉಳಿಯುತ್ತಿದ್ದಾರೆ. ಪುಸ್ತಕ ಓದುವ ಸಂಸ್ಕೃತಿ ದಿನೇ ದಿನೇ ಕಣ್ಮರೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಸರಕಾರಿ ಪ್ರಥಮದರ್ಜೆ ಲೀಡ್ ಕಾಲೇಜು ಪ್ರಾಂಶುಪಾಲ ಡಾ.ಎಸ್.ಆರ್. ಅಂಜನಪ್ಪ ವಿಷಾದ ವ್ಯಕ್ತಪಡಿಸಿದರು. ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನದ ಅಂಗವಾಗಿ ನಗರದ ಡೆಂಟಲ್ ಕಾಲೇಜು ರಸ್ತೆಯ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಇಂದು ಹಮ್ಮಿಕೊಂಡಿದ್ದ ಅಮೃತ ಪುಸ್ತಕ ಮಾರಾಟ ಅಭಿಯಾನ ಮತ್ತು … Read more

ವಿ.ಡಿ. ಸಾವರ್ಕರ್ ವಿವಾದ – ಡಾ. ಎಂ.ಬಿ. ಪಾಟೀಲ ಹೇಳಿದ್ದೇನು ?

ಕಾಂಗ್ರೆಸ್ ನಿಂದ ಕನ್ನಡ ಹೋರಾಟಗಾರರ ರಥಯಾತ್ರೆ ಸುದ್ದಿ360 ವಿಜಯಪುರ, ಆ.25: ಬಿಜೆಪಿಯಿಂದ ವಿ.ಡಿ.ಸಾವರ್ಕರ್ ರಥಯಾತ್ರೆಗೆ ಪ್ರತ್ಯುತ್ತರವಾಗಿ ಕನ್ನಡ ನಾಡಿನ ಹೋರಾಟಗಾರರ ರಥಯಾತ್ರೆಗೆ ಕಾಂಗ್ರೆಸ್ ಸಿದ್ದವಾಗಿದೆ. ವೀರ ರಾಣಿ ಕಿತ್ತೂರ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಹಲಗಲಿಯ ಬೇಡರು, ಸುರಪುರ ನಾಯಕರು….ಹೀಗೆ ಅನೇಕ ಹೋರಾಟಗಾರರನ್ನು ಗೌರವಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸುವುದಾಗಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಾ.ಎಂ.ಬಿ‌. ಪಾಟೀಲ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿರುವ ಪಾಟೀಲರು, ಬಿಜೆಪಿಗೆ ಕನ್ನಡದ ಹೋರಾಟಗಾರರು ಬೇಡವಾ? ಅವರ ಫೋಟೋ ತೆಗೆದುಕೊಂಡು ರಥ ಯಾತ್ರೆ ಮಾಡಲಿ, ಹಲಗಲಿಯ … Read more

ಗಣೇಶೋತ್ಸವ ಪರಿಸರ ಪೂರಕ ಹಬ್ಬವಾಗಲಿ : ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ಸುದ್ದಿ360 ದಾವಣಗೆರೆ, ಆ.24: ಗಣೇಶೋತ್ಸವವು ಸಾರ್ವಜನಿಕವಾಗಿ ಆಚರಿಸುವ ಹಬ್ಬವಾಗಿದೆ, ಶಾಂತಿ, ಸೌಹಾರ್ದತೆ ಕಾಪಾಡುವ ಜೊತೆಗೆ ಪರಿಸರ ಸ್ನೇಹಿ ಮಣ್ಣಿನ ಗಣೇಶ ಸ್ಥಾಪಿಸಿ ಹಬ್ಬವನ್ನು ಆಚರಿಸಬೇಕೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. ಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಗೌರಿ ಗಣೇಶ ಚತುರ್ಥಿ ಪ್ರಯುಕ್ತ ಆಯೋಜಿಸಲಾಗಿದ್ದ ‘ನಾಗರಿಕ ಸೌಹಾರ್ದ ಸಮನ್ವಯ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಗಣೇಶೋತ್ಸವ ಆಚರಿಸುವ ಸಂಘ-ಸಂಸ್ಥೆಗಳು ಸರ್ಕಾರದ ಸುತ್ತೋಲೆಯ ಅಂಶಗಳನ್ನು ಪಾಲಿಸುವ ಮೂಲಕ ಹಬ್ಬವನ್ನು … Read more

ನಕಲಿ ಬಂಗಾರದ ಬಿಲ್ಲೆ ನೀಡಿ 22 ಲಕ್ಷ ವಂಚನೆ: ಆರೋಪಿಯ ಬಂಧನ

ಸುದ್ದಿ360 ದಾವಣಗೆರೆ, ಆ.23: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕಲಿ ಬಂಗಾರದ ಬಿಲ್ಲೆ ಜಾಲ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಗೆ 22 ಲಕ್ಷ ವಂಚನೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಬಂಧಿಸಿದಂತೆ ಆರೋಪಿ ದುರುಗಪ್ಪ (70) ಚನ್ನಗಿರಿ ನಗರದ ಎಸ್ ಬಿಆರ್ ಕಾಲೋನಿಯ ಬಸ್ ನಿಲ್ದಾಣ ಬಳಿ ವಶಕ್ಕೆ ಪಡೆದಿದ್ದಾರೆ. ಡಿವೈಎಸ್ ಪಿ ಎಸ್.‌ಸಂತೋಷ್, ಸಿಪಿಐ ಮಹೇಶ್, ಪಿಎಸ್ ಐ ಶಿವರುದ್ರಪ್ಪ‌ ಎಸ್.ಮೇಟಿ ಹಾಗೂ ಸಿಬ್ಬಂದಿಗಳಾದ … Read more

ಜೀವನದಲ್ಲಿ ವಚನಗಳನ್ನು ಅಳವಡಿಸಿಕೊಂಡಲ್ಲಿ ವ್ಯಕ್ತಿ ವಿಶ್ವಮಾನವನಾಗುತ್ತಾನೆ: ಬಸವಪ್ರಭು ಶ್ರೀ

ಸುದ್ದಿ360 ದಾವಣಗೆರೆ, ಆ.23: ಪ್ರತಿಯೊಬ್ಬರೂ ವಚನಗಳನ್ನು ಓದಬೇಕು, ಕಲಿಯಬೇಕು ಮತ್ತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ವ್ಯಕ್ತಿ ವಿಶ್ವಮಾನವನಾಗುತ್ತಾನೆ ಎಂಬುದಾಗಿ  ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ದೊಡ್ಡಪೇಟೆಯ ಶ್ರೀ ಮುರುಘರಾಜೇಂದ್ರ ವಿರಕ್ತಮಠದಲ್ಲಿ ಇಂದು ಹಮ್ಮಿಕೊಂಡಿದ್ದ ವಚನ ಕಂಠಪಾಠ ಸ್ಪರ್ಧೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ವಚನ ಗ್ರಂಥಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ, ಆಶೀರ್ವಚನ ನೀಡಿದರು. ಸಮಾಜದಲ್ಲಿ ವೈದ್ಯರು, ಎಂಜಿನಿಯರ್, ಬುದ್ಧಿವಂತರು, ವಿದ್ಯಾವಂತರು, ವಿಜ್ಞಾನಿಗಳು ಸಿಗುತ್ತಾರೆ. ಆದರೆ ಸಾತ್ವಿಕರು ಸಿಗುವುದಿಲ್ಲ. ನಮ್ಮ … Read more

error: Content is protected !!