ಹಾರಂಗಿ: ಸಂಗೀತ ಕಾರಂಜಿ ವೇಳೆ ಕಾಡಾನೆ ಪ್ರತ್ಯಕ್ಷ – ಪ್ರವಾಸಿಗರು ದಿಕ್ಕಾಪಾಲು

ಸುದ್ದಿ360 ಮಡಿಕೇರಿ, ಜು.23: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಹಾರಂಗಿ ಉದ್ಯಾನವನದಲ್ಲಿ ಕಾಡಾನೆ ಕಾಣಿಸಿಕೊಂಡ ಪರಿಣಾಮ ಪ್ರವಾಸಿಗರು ದಿಕ್ಕಾಪಾಲಾಗಿ ಓಡಿ ಹೋದ ಘಟನೆ ಶನಿವಾರ ಸಂಜೆ ನಡೆದಿದೆ. ಉದ್ಯಾನವನದಲ್ಲಿ ಸಂಗೀತ ಕಾರಂಜಿ ನಡೆಯುವ ವೇಳೆ ಈ ಕಾಡಾನೆ ಪ್ರವೇಶಿಸಿದೆ.  ಹಾರಂಗಿ ಅಣೆಕಟ್ಟೆಗೆ ಹೊಂದಿಕೊಂಡಂತೆ ಇರುವ ಅತ್ತೂರು ಮೀಸಲು ಅರಣ್ಯ ಪ್ರದೇಶದಿಂದ ಉದ್ಯಾನವನ ಪ್ರವೇಶಿಸಿದ ಕಾಡಾನೆ ಪ್ರವಾಸಿಗರನ್ನು ಭಯಭೀತಗೊಳಿಸಿದೆ. ಜಲಾಶಯದ ಭದ್ರತಾಪಡೆಯ ಸಿಬ್ಬಂದಿಗಳು ಪ್ರವಾಸಿಗರನ್ನು ಸುರಕ್ಷಿತವಾಗಿ ಉದ್ಯಾನವನದಿಂದ ಹೊರ ಕಳುಹಿಸಿದ್ದಾರೆ. ನಂತರ ಹಾರಂಗಿ ಗ್ರಾಮದ ಕಿರು ಸೇತುವೆಯ ಬಳಿಯ … Read more

ದಾವಣಗೆರೆ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಜು.25ರಿಂದ ಮೂರು ದಿನ ಚಿತ್ರೋತ್ಸವ

ಸುದ್ದಿ360 ದಾವಣಗೆರೆ, ಜು.23: ಇಲ್ಲಿನ ವಿದ್ಯಾನಗರ ಮುಖ್ಯರಸ್ತೆಯಲ್ಲಿರುವ ದಾವಣಗೆರೆ ವಿಶ್ವವಿದ್ಯಾಲಯದ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಜು.25ರಿಂದ 27ರವರೆಗೆ ಮೂರು ದಿನಗಳ ಚಿತ್ರೋತ್ಸವ -2022 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 25ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಕಲಾ ಪ್ರದರ್ಶನದ ಉದ್ಘಾಟನಾ ಸಮಾರಂಭಕ್ಕೆ ದಾವಣಗೆರೆ ವಿವಿ ಉಪಕುಲಪತಿ ಪ್ರೊ.ಬಿ.ಡಿ. ಕುಂಬಾರ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ಕಲಾವಿದ ನಾಡೋಜ ಡಾ.ವಿ.ಟಿ. ಕಾಳೆ, ಅತಿಥಿಯಾಗಿ ಕಲಾ ನಿಕಾಯದ ಡೀನ್ ಡಾ. ವೆಂಕಟರಾವ್ ಎಂ. ಪಲಾಟೆ ಪಾಲ್ಗೊಳ್ಳುವರು.  ಮಹಾವಿದ್ಯಾಲಯದ ಸಂಯೋಜನಾಕಾರಿ … Read more

ದುಷ್ಚಟದ ಸ್ನೇಹಿತರೆಡೆ ಅಸಡ್ಡೆ ತೋರದೆ ಸನ್ನಡತೆಯತ್ತ ಕರೆತನ್ನಿ: ಸಿ.ಬಿ. ರಿಷ್ಯಂತ್

ವಿದ್ಯಾರ್ಥಿಗಳು, ಯುವಜನತೆ ಸೇರಿದಂತೆ ನಾಗರಿಕರು ತಮ್ಮ ಸುತ್ತ ಯಾವುದೇ ರೀತಿಯ ತಪ್ಪು ನಡೆದಾಗ ಅದನ್ನು ತಪ್ಪು ಎಂದು ಧೈರ್ಯವಾಗಿ ಹೇಳುವ, ಖಂಡಿಸುವ ಮತ್ತು ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಸಿ.ಬಿ. ರಿಷ್ಯಂತ್ ಸಲಹೆ ನೀಡಿದರು.

‘ಕೈರುಚಿ’ ತೋರಿಸಿದ  ಎ.ವಿ.ಕೆ. ಕಾಲೇಜು ವಿದ್ಯಾರ್ಥಿನಿಯರು

ಸುದ್ದಿ360 ದಾವಣಗೆರೆ, ಜು.23: ಪನ್ನೀರ್ ಟಿಕ್ಕಾ, ಪಾವ್ ಬಾಜಿ, ವಡಾ ಪಾವ್, ಫ್ರೂಟ್ ಸಲಾಡ್, ಗ್ರೀನ್ ಸಲಾಡ್, ಮೊಳಕೆ ಕಾಳು ಸಲಾಡ್, ಸಿಹಿ ತಿನಿಸು, ಪಾನಿಪುರಿ, ಬ್ರೆಡ್ ಟೋಸ್ಟ್, ಪಲಾವ್ ಸೇರಿ ವಿವಿಧ ರೈಸ್ ಬಾತ್, ಫುಲ್ ಮೀಲ್ಸ್, ಮಿನಿ ಮೀಲ್ಸ್ ಸೇರಿ ತರಹೇವಾರಿ ತಿನಿಸುಗಳು. . . ಇವುಗಳನ್ನೆಲ್ಲಾ ಸವಿಯುವಂತಹ ಫುಡ್ ಸ್ಟ್ರೀಟ್ ನಗರದ ಅಕ್ಕಮಹಾದೇವಿ ರಸ್ತೆಯ ಎವಿ ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ಶುಕ್ರವಾರ ಕಂಡು ಬಂತು. ಹೌದು, ಅಕ್ಷರಶಃ ಫುಡ್ ಸ್ಟ್ರೀಟ್ ಆಗಿ ಮಾರ್ಪಟ್ಟಿದ್ದ … Read more

ಜಿಟಿಟಿ ಫೌಂಡೇಶನ್ ವತಿಯಿಂದ ಜಿಎಂಐಟಿ ಪ್ಲೇಸ್ಮೆಂಟ್ ಅಧಿಕಾರಿಗೆ ಅಭಿನಂದನೆ ಮತ್ತು ಗೌರವ ಸೂಚಕ ಸನ್ಮಾನ

ಸುದ್ದಿ360, ದಾವಣಗೆರೆ, ಜು.21: ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚಿಗೆ ನಡೆದ ಕಾರ್ಯಕ್ರಮದಲ್ಲಿ ಪುಣೆ ಮೂಲದ ಗ್ಲೋಬಲ್ ಟ್ಯಾಲೆಂಟ್ ಟ್ರ್ಯಾಕ್ ಫೌಂಡೇಶನ್ ಸಂಸ್ಥೆಯ ವತಿಯಿಂದ ಜಿಎಂಐಟಿ ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ ಆರ್ ರವರಿಗೆ ಅಭಿನಂದನೆ ಮತ್ತು ಗೌರವಸೂಚಕ ಸನ್ಮಾನವನ್ನು ಏರ್ಪಡಿಸಲಾಗಿತ್ತು. ಜಿ ಟಿ ಟಿ ಫೌಂಡೇಶನ್ ಸಂಸ್ಥೆಯು ಒಂದು  ಎನ್ ಜಿ ಓ ಲಾಭರಹಿತ ಸಂಸ್ಥೆಯಾಗಿದ್ದು, ಸಮಾಜದಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ತರಬೇತಿ ನೀಡುವುದರ ಜೊತೆಗೆ ಉದ್ಯೋಗ ಕೊಡಿಸುವ ಜವಾಬ್ದಾರಿಯನ್ನೂ … Read more

ರಿಯಲ್ ಎಸ್ಟೇಟ್ ಏಜೆಂಟ್ ಅಪಹರಿಸಿ, 20 ಲಕ್ಷ ರೂ. ಪಡೆದು ಪರಾರಿ

ಸುದ್ದಿ360, ವಿಜಯನಗರ, ಜು.21: ಜಮೀನು ಖರೀದಿಸುವ ಆಮಿಷ ತೋರಿದ ದುಷ್ಕರ್ಮಿಗಳು ವಿಜಯನಗರ ಜಿಲ್ಲೆಯ ಕೊಟ್ಟೂರಿನ  ರಿಯಲ್ ಎಸ್ಟೇಟ್ ಏಜೆಂಟ್ ಟಿ. ಹಾಲೇಶ್ ಎಂಬುವರನ್ನ ಅಪಹರಿಸಿ, 20 ಲಕ್ಷ ಹಣ ಪಡೆದು ಪರಾರಿಯಾಗಿದ್ದಾರೆ. ಅಪಹರಣಕಾರರು ಶಿವಮೊಗ್ಗ ಮೂಲದವರು ಎನ್ನಲಾಗಿದೆ. ಹಾಲೇಶ್ ಅವರು ಕೆಲಸ ಮಾಡುವ ಸ್ಥಳದಿಂದ ಸೈಟ್ ನೋಡುವ ಸಲುವಾಗಿ ಇಬ್ಬರು ಕಾರಿನಲ್ಲಿ ಕೂರಿಸಿಕೊಂಡು ಹೋಗಿದ್ದಾರೆ. ನಂತರ ಅಪಹರಣಕಾರರಿಗೆ  ಇನ್ನಿಬ್ಬರು ಕಾರಿನಲ್ಲಿ ಜೊತೆಯಾಗಿದ್ದಾರೆ. ಹಾಲೇಶ್ ರನ್ನು ಹರಿಹರಕ್ಕೆ ಕರೆದುಕೊಂಡು ಹೋಗಿದ್ದು, ನಂತರ ಹಾಲೇಶ್ ಅವರಿಗೆ ಜೀವ ಬೆದರಿಕೆ ಹಾಕಿ, … Read more

ಜಿಎಂಐಟಿ ಯಲ್ಲಿ ‘ಮಲ್ಲಿಕಾ-22’: ಕ್ರೀಡೆ ಮತ್ತು ಸಾಂಸ್ಕೃತಿಕ ಉತ್ಸವ

ಸುದ್ದಿ360, ದಾವಣಗೆರೆ, ಜು.21: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇದೇ ಜು. 22 ಮತ್ತು 23 ರಂದು ಕಾಲೇಜಿನ ವಾರ್ಷಿಕ ಸಮಾರಂಭ ‘ಮಲ್ಲಿಕಾ-22’ ಕ್ರೀಡೆ ಮತ್ತು ಸಾಂಸ್ಕೃತಿಕ ಉತ್ಸವವನ್ನು ಬಹಳ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಜು. 22ರಂದು ಬೆಳಿಗ್ಗೆ 9:00 ರಿಂದ  ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ನಡೆಯಲಿದ್ದು, ಸಾಯಂಕಾಲ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಗುವುದು. ಶ್ರೀಶೈಲ ಎಜುಕೇಶನಲ್ ಟ್ರಸ್ಟ್ … Read more

25, 26 ಕ್ಕೆ ಸಿಎಂ ದೆಹಲಿ ಪ್ರವಾಸ – ಬಿಟ್ಟೂ ಬಿಡದೆ ಕಾಡುತ್ತಿರುವ ಸಂಪುಟ ವಿಸ್ತರಣೆ

ವರಿಷ್ಠರು ಪ್ರಸ್ತಾಪಿಸಿದರೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ  ಸುದ್ದಿ360, ಬೆಂಗಳೂರು:ಜು.21: ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಜು. 24 ರಂದು ನವದೆಹಲಿಗೆ ತೆರಳಿತ್ತಿದ್ದೇನೆ. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಪ್ರಸ್ತಾಪಿಸಿದರೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಮಲೋಚನೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಪ್ರಧಾನಕಾರ್ಯದರ್ಶಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ,  ವಿವಿಧ ಇಲಾಖೆಗಳ ನಿಯೋಗದೊಂದಿಗೆ ಜುಲೈ 24 ರಂದು ದೆಹಲಿ … Read more

ಆರತಕ್ಷತೆ ವೇಳೆ ವರನ ಸಾವು

ಸುದ್ದಿ360, ವಿಜಯನಗರ (ಹೊಸಪೇಟೆ) ಜು.21: ಹಸೆಮಣೆ ಏರಬೇಕಾದ ಮದುಮಗ ಮದುವೆ ಆರತಕ್ಷತೆ ನಡೆಯುತ್ತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಪಾಪಿನಾಯಕನಹಳ್ಳಿಯಲ್ಲಿ ಬುಧವಾರ ಸಂಜೆ  ನಡೆದಿದೆ. ಗ್ರಾಮದ ಹೊನ್ನೂರ ಸ್ವಾಮಿ (26) ಮೃತಪಟ್ಟ ವರನಾಗಿದ್ದಾನೆ. ಮದುವೆ ಆರತಕ್ಷತೆ ವೇಳೆ ಹೊನ್ನೂರಸ್ವಾಮಿ ಅವರಿಗೆ ಎದೆ ನೋವು ಕಾಣಿಸಿ ಕೊಂಡಿದೆ. ಇದರಿಂದ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ವೈದ್ಯರ ಸಲಹೆ ಮೇರೆಗೆ ಹೊಸಪೇಟೆ ಸರಕಾರಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುವಾಗ ದಾರಿ … Read more

ಇದೆ ವರ್ಷ ಕಬಿನಿ ಜಲಾಶಯ ಉದ್ಯಾನವನ ಕಾಮಗಾರಿ ಪ್ರಾರಂಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360,ಮೈಸೂರು, ಜುಲೈ 20: ಇದೇ ವರ್ಷ ಕಬಿನಿ ಜಲಾಶಯದ ಉದ್ಯಾನವನ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆಮಾಡಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಕಬಿನಿ ಜಲಾಶಯದ  ಉದ್ಯಾನವನವನ್ನು ಸರ್ಕಾರ ಮಾಡಬೇಕೋ ಅಥವಾ ಪಿಪಿಪಿ ಮಾದರಿಯಲ್ಲಿ ಮಾಡಬೇಕೋ ಎಂಬ ಗೊಂದಲದಲ್ಲಿದೆ.  ಗೊಂದಲ ವನ್ನು ಆದಷ್ಟು ಬೇಗನೇ ನಿವಾರಿಸಿ ಕಾಮವಾರಿಯನ್ನು ಕೈಗೊಳ್ಳಲಾಗುವುದು ಎಂದರು. ಹೆಚ್.ಡಿ.ಕೋಟೆಗೆ ವಿಶೇಷ ಕಾರ್ಯಕ್ರಮ ಹೆಚ್.ಡಿ.ಕೋಟೆ ತಾಲ್ಲೂಕು ಹಿಂದುಳಿದ ತಾಲ್ಲೂಕು ಎಂದು ನಂಜುಂಡಪ್ಪ ವರದಿಯಲ್ಲಿ ಉಲ್ಲೇಖಿಸಲಾಗಿದೆ. … Read more

error: Content is protected !!