ಶರಣ ಸಂಸ್ಕೃತಿ: ವಿಶೇಷ ಪ್ರವಚನ ಸಮಾರೋಪ ಸಮಾರಂಭ (ಜು.11)

ಸುದ್ದಿ360, ದಾವಣಗೆರೆ, ಜು.10:  ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 65 ನೇ ಸ್ಮರಣೋತ್ಸವ, ಶರಣ ಸಂಸ್ಕೃತಿ ಉತ್ಸವ, ಶ್ರೀ ಮುರುಘೇಂದ್ರ ಶಿವಯೋಗಿಗಳವರ ಲಿಂಗೈಕ್ಯ ಶತಮಾನೋತ್ಸವ, ಡಾ. ಶಿವಮೂರ್ತಿ ಮುರುಘಾಶರಣರ ಶೂನ್ಯಪೀಠಾರೋಹಣದ ತೃತೀಯ ದಶಮಾನೋತ್ಸವದ ಅಂಗವಾಗಿ ನಗರದ ಶಿವಯೋಗಾಶ್ರಮದಲ್ಲಿ ಜು.7ರಿಂದ ಪ್ರಾರಂಭವಾದ ವಿಶೇಷ ಪ್ರವಚನ ಮಾಲೆ ಜು.11ರಂದು ಸಮಾರೋಪಗೊಳ್ಳಲಿದೆ. ವಿಶೇಷ ಪ್ರವಚನ ಸಮಾರೋಪ ಸಮಾರಂಭವು ಜು.11ರ ಸೋಮವಾರ ಸಂಜೆ 6-30 ಗಂಟೆಗೆ ಜರುಗಲಿದ್ದು, ಸಮಾರೋಪ ಸಮಾರಂಭದಲ್ಲಿ ಜನವಾಡ ಅಲ್ಲಮಪ್ರಭು ಆಶ್ರಮದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿಯವರು ವಿಶೇಷ ಪ್ರವಚನ ನೀಡಲಿದ್ದಾರೆ. … Read more

ಇತರ ಧರ್ಮಗಳನ್ನು ಗೌರವಿಸಿ ಸಮನ್ವಯ ಸಾಧಿಸಿದಾಗ ಮಾತ್ರ ಸಮಾಜದಲ್ಲಿ ಸಮಾನತೆ ಸಾಧ್ಯ

ಡಾ. ಎಲ್.ಶಿವಲಿಂಗಯ್ಯನವರ ‘ನುಡಿ-ನಮನ’ ಕಾರ್ಯಕ್ರಮದಲ್ಲಿ ಸಿಎಂ ಅಭಿಮತ ಸುದ್ದಿ360, ಬೆಂಗಳೂರು, ಜು.10: ಇತರ ಧರ್ಮಗಳನ್ನು ಗೌರವಿಸುವ ಮೂಲಕ ಸಮನ್ವಯ ಸಾಧಿಸಬೇಕಿದೆ. ಸಮಾಜದ ಎಲ್ಲ ವರ್ಗದ ಜನರೊಂದಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಸಮನ್ವಯ ಸಾಧಿಸಿದಾಗ ಮಾತ್ರ ಸಮಾಜದಲ್ಲಿ ಸಮಾನತೆಯ ಭಾವವನ್ನು ತರಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು  ಬೆಂಗಳೂರಿನಲ್ಲಿ ನಿವೃತ್ತ ಇಂಜಿನಿಯರ್ ಇನ್ ಚೀಫ್ ಹಾಗೂ ರಾಜ್ಯ ಸರ್ಕಾರದ ವಿಶೇಷ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ  ಡಾ. ಎಲ್.ಶಿವಲಿಂಗಯ್ಯನವರ ‘ನುಡಿ-ನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. … Read more

‘ನನ್ನ ಅಮ್ಮ ನಂಬರ್-1’ ಹೃದಯ ಮುಟ್ಟುವ ಟೈಟಲ್: ಲತೀಕಾ ದಿನೇಶ್ ಕೆ. ಶೆಟ್ಟಿ ಅವರ ಮನದ ಮಾತು

ಬೆಣ್ಣೆನಗರಿಯಲ್ಲಿ ಮನಮುಟ್ಟುವ  ವಿನೂತನ ರಿಯಾಲಿಟಿ ಶೋ ಸುದ್ದಿ360, ದಾವಣಗೆರೆ, ಜು.10:  ದಾವಣಗೆರೆಯಲ್ಲಿ ಪ್ರಥಮ ಬಾರಿಗೆ  ನಗರದ ಕಲಾ ಕಲ್ಪ ಆರ್ಟ್ ಅಕಾಡೆಮಿ ಹಾಗೂ ವಿ ಯೂನಿಯನ್ ಇವೆಂಟ್ ವತಿಯಿಂದ “ನನ್ನ ಅಮ್ಮ ನಂಬರ್ 1” ಎಂಬ ಮನಮುಟ್ಟುವ ರಿಯಾಲಿಟಿ ಶೋ  ಕಾರ್ಯಕ್ರಮ ಭಾನುವಾರ ಆಯೋಜಿಸಲಾಗಿತ್ತು. ನಗರದ ರಾಮ್ ಅಂಡ್ ಕೋ ಸರ್ಕಲ್ ಬಳಿ ಇರುವ ಸ್ವೆಟ್ ಪಾರ್ಕ್ ಜಿಮ್ ನಲ್ಲಿ ಆಯೋಜಿಸಲಾಗಿದ್ದ ಈ ವಿನೂತನ ಕಾರ್ಯಕ್ರಮವನ್ನು ನಗರದ ಪ್ರತಿಷ್ಟಿತ ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷರು, ಮಾಜಿ ನಗರಸಭೆ … Read more

ದಕ್ಷಿಣ ಕೇದಾರವಾಗಲಿದೆ ದೇವನಗರಿ ದಾವಣಗೆರೆ

ಸುದ್ದಿ360, ದಾವಣಗೆರೆ, ಜು.10:  ಉತ್ತರದಲ್ಲಿ ಕೇದಾರನಾಥನ ಸನ್ನಿದಾನ ಇರುವಂತೆ ದಕ್ಷಿಣದಲ್ಲೂ ಕೇದಾರನಾಥ ಮಠ ಮತ್ತು ಕೇದಾರ ಮಾದರಿಯ ಭವ್ಯ ಮಂದಿರ ನಿರ್ಮಾಣ ಮಾಡುವ ಇಚ್ಛೆಯಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಾರಂಭವಾಗಿದೆ ಎಂದು ಶ್ರೀ ಕೇದಾರ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ನುಡಿದರು. ದಾವಣಗೆರೆಯ ತ್ರಿಶೂಲ್ ಕಲಾಭವನದಲ್ಲಿ ಭಾನುವಾರ ನಡೆದ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆಯ ನಂತರ ಭಕ್ತರನ್ನುದ್ದೇಶಿಸಿ ಸಂದೇಶ ನೀಡುತ್ತಾ, ದಾವಣಗೆರೆ-ಹರಿಹರ ನಡುವೆ ಬರುವ ಶಂಶೀಪುರ ಬಳಿ ನಾವು ಬಂದು ತಂಗಲು ಗುರು ನಿವಾಸ ನಿರ್ಮಾಣ ಕಾರ್ಯ … Read more

ಜು.12ಕ್ಕೆ ನಟ ಶಿವರಾಜ್ ಕುಮಾರ್ ಹುಟ್ಟುಹಬ್ಬ ಆಚರಣೆ

ಸುದ್ದಿ360, ದಾವಣಗೆರೆ, ಜು.10:  ಅಖಿಲ ಕರ್ನಾಟಕ ಡಾ. ರಾಜ್ ಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟ, ಅಖಿಲ ಕರ್ನಾಟಕ ಡಾ. ಶಿವರಾಜ್ ಕುಮಾರ್ ಅಭಿಮಾನಿ ಸಂಘ ಮತ್ತು ಅಖಿಲ ಕರ್ನಾಟಕ ಪುನೀತ್ ರಾಜ್ ಕುಮಾರ್ ಅಭಿಮಾನಿ ಸಂಘಗಳ ವತಿಯಿಂದ  ನಟ ಶಿವರಾಜ್ ಕುಮಾರ್ ರವರ 60ನೇ ಹುಟ್ಟುಹಬ್ಬವನ್ನು ಜು. 12ರಂದು ದಾವಣಗೆರೆಯಲ್ಲಿ ಆಚರಿಸಲಾಗುತ್ತಿರುವುದಾಗಿ ಒಕ್ಕೂಟದ ಜಿಲ್ಲಾಧ್ಯಕ್ಷ ಯೋಗೇಶ್ ತಿಳಿಸಿದರು. ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ,  ಅಂದು ನಗರದ ಜಯದೇವ ವೃತ್ತದಲ್ಲಿ ಬೆಳಿಗ್ಗೆ 11.30ಕ್ಕೆ ನೆಚ್ಚಿನ ನಟ ಶಿವರಾಜ್ … Read more

ದಾವಣಗೆರೆಯಲ್ಲಿ ಜು.11ರಂದು ವಿಶ್ವಕರ್ಮ ಜನಜಾಗೃತಿ ಸಮಾವೇಶ

ವಿಶ್ವ ಬ್ರಾಹ್ಮಣ ಪೀಠಾಧಿಪತಿಗಳ, ಮಠಾಧಿಪತಿಗಳ ಒಕ್ಕೂಟದ ಸಮ್ಮಿಲನ ಸುದ್ದಿ360, ದಾವಣಗೆರೆ, ಜು.10: ಅಖಿಲ ಕರ್ನಾಟಕ ವಿಶ್ವ ಬ್ರಾಹ್ಮಣ ಪೀಠಾಧಿಪತಿಗಳ ಮತ್ತು ಮಠಾಧಿಪತಿಗಳ ಒಕ್ಕೂಟದ ಸಮ್ಮಿಲನ ಮತ್ತು ವಿಶ್ವಕರ್ಮ ಜನಜಾಗೃತಿ ಸಮಾವೇಶ, ಪ್ರಶಸ್ತಿ ಪ್ರದಾನ ಸಮಾರಂಭವು ಅಖಿಲ ಭಾರತ ವಿಶ್ವಕರ್ಮ ಪರಿಷತ್, ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಜುಲೈ 11ರಂದು ನಗರದ ಶಾಬನೂರು ರಸ್ತೆಯ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ನಡೆಯಲಿದೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ರಾಷ್ಟ್ರೀಯ ಅಧ್ಯಕ್ಷ ಎಚ್.ವಿ.ಸತೀಶಕುಮಾರ್, … Read more

ಕಾಳಿಕಾದೇವಿಗೆ ಅಪಮಾನ: ಕಾಳೀ ಚಿತ್ರ ತಡೆಗೆ ವಿಶ್ವಕರ್ಮ ಸಮಾಜ ಒತ್ತಾಯ

ಸುದ್ದಿ360, ದಾವಣಗೆರೆ, ಜು.10: ಕಾಳಿ ಚಿತ್ರದ ಪೋಸ್ಟರ್ ನಲ್ಲಿ ಕಾಳಿ ದೇವತೆಯನ್ನು ಧೂಮಪಾನ ಮಾಡುವ ರೀತಿಯಲ್ಲಿ ಬಿಂಬಿಸುವ ಮೂಲಕ ನಮ್ಮ ಕುಲದೇವತೆಗೆ ಘೋರ ಅಪಮಾನ ಎಸಗಲಾಗಿದೆ ಎಂದು ಜಿಲ್ಲಾ ವಿಶ್ವಕರ್ಮ ಸಮಾಜದ ಕಾರ್ಯದರ್ಶಿ ಬಿ.ವಿ. ಶಿವಾನಂದ  ಆರೋಪಿಸಿದರು. ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ,  ಕಾಳಿ ಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ನಿರ್ಮಿಸಿರುವ ಕಾಳಿ ಚಿತ್ರದ ಈ ಪೋಸ್ಟರ್ನಿಂದ ನಮ್ಮ ವಿಶ್ವಕರ್ಮ ಸಮಾಜದ ಸನಾತನ ಸಂಸ್ಕೃತಿಗೆ ಘನಘೋರ ಅಪಮಾನವಾಗಿದೆ. ಇಂತಹ ಚಿತ್ರ ಬಿಡುಗಡೆಗೆ ಕೇಂದ್ರ ಸರ್ಕಾರ ಅವಕಾಶ … Read more

ಗಾಂಜಾಕ್ಕೆ ಚಾಕೊಲೇಟ್ ರೂಪ ನೀಡಿ ಮಾರಾಟ – ಓರ್ವನ ಬಂಧನ

ಸುದ್ದಿ360, ಕೋಲಾರ, ಜು.9:  ಚಾಕೊಲೇಟ್, ಗುಟ್ಕಾ ರೂಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ  ವ್ಯಕ್ತಿಯನ್ನು ಕೋಲಾರ ಅಬಕಾರಿ ಇಲಾಖೆ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ. ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದ ಕುರುಗಲ್ ಕ್ರಾಸ್ನಲ್ಲಿ ಈ ರೀತಿಯಾಗಿ ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶದ ರಾಯಬರೇಲಿ ಜಿಲ್ಲೆಯ ಶುಭಂ ಎಂಬಾತನನ್ನು ಬಂಧಿಸಿ, 17 ಕೆ.ಜಿ. ತೂಕದ ಗಾಂಜಾ ಚಾಕೊಲೇಟ್ ಹಾಗೂ ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ. ಮಹಾಕಾಲ್ ಎಂಬ ಹೆಸರಿರುವ ಈ ಪ್ಲಾಸ್ಟಿಕ್ ಪೊಟ್ಟಣದಲ್ಲಿ ಚಾಕೋಲೇಟ್ ರೂಪದಲ್ಲಿ ಉಂಡೆ ಮಾಡಿ, ಚಿಲ್ಲರೆ ಅಂಗಡಿ, ಬೀಡಾ, … Read more

ಭದ್ರಾ ಜಲಾಶಯ: ಜು.10ರ ರಾತ್ರಿಯಿಂದ ಕಾಲುವೆಗಳಿಗೆ ನೀರು ಬಿಡುಗಡೆ

ಸುದ್ದಿ360, ಶಿವಮೊಗ್ಗ, ಜು.9:  ಲಕ್ಕವಳ್ಳಿಯ ಭದ್ರಾ ಜಲಾಶಯದಿಂದ ನಾಳೆ (ಜು. 10) ರಾತ್ರಿಯಿಂದಲೇ ಬಲದಂಡೆ ಕಾಲುವೆಗೆ 1000 ಕ್ಯೂಸೆಕ್ ಹಾಗೂ ಎಡದಂಡೆಗೆ 150 ಕ್ಯೂಸೆಕ್ ನೀರು ಹರಿಸಲು ಕಾಡಾ ತೀರ್ಮಾನಿಸಿದೆ. ಉತ್ತಮ ಮಳೆಯಾದ ಹಿನ್ನೆಲೆ ಭದ್ರಾ ಜಲಾಶಯಕ್ಕೆ 30 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಇಂದಿನ (ಜು.09) ನೀರಿನ ಮಟ್ಟ 168.8 ತಲುಪಿದೆ. ಹೀಗಾಗಿ ಬಲದಂಡೆ ಕಾಲುವೆಗೆ 1000 ಕ್ಯೂಸೆಕ್ ಹಾಗೂ ಎಡದಂಡೆಗೆ 150 ಕ್ಯುಸೆಕ್ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭದ್ರಾ ಕಾಡಾ … Read more

ಜು.11: ಯುಬಿಡಿಟಿಯಲ್ಲಿ ಅಭಿನಂದನಾ ಸಮಾರಂಭ

ಸುದ್ದಿ360, ದಾವಣಗೆರೆ, ಜು.9:  ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ವಿವಿಧ ಹೆಸರಾಂತ ಕಂಪನಿಗಳಿಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಜು.11ರಂದು ಬೆಳಿಗ್ಗೆ 11.30ಕ್ಕೆ ಕಾಲೇಜಿನ ವಿವೇಕಾನಂದ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್ ಓದುತ್ತಿರುವ ವಿವಿಧ ವಿಭಾಗಗಳ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬೆಲ್, ಡಿಸಿಎಸ್, ಇನ್‌ಫೋಸಿಸ್, ವಿಪ್ರೋ, ಎಲ್ ಅಂಡ್ ಟಿ ಸೇರಿದಂತೆ ವಿವಿಧ ಹೆಸರಾಂತ ಕಂಪನಿಗಳಲ್ಲಿ ಆಯ್ಕೆಯಾಗಿರುವ ಕಾರಣ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯರು ತಿಳಿಸಿದ್ದಾರೆ.

error: Content is protected !!