ದಾವಣಗೆರೆ: ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದ ಜಿಲ್ಲಾ ಉಸ್ತುವಾರಿ ಸಚಿವರು

ಸುದ್ದಿ360 ದಾವಣಗೆರೆ, ಜೂನ್ 28: ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಬಸವರಾಜ್, ಸಚಿವರಾದ ಎಸ್ ಟಿ ಸೋಮಶೇಖರ್ ಇಂದು ದಾವಣಗೆರೆಗೆ ಆಗಮಿಸಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಸಂಸದರಾದ ಜಿಎಂ ಸಿದ್ದೇಶ್ವರ್, ಶಾಸಕರಾದ ರವೀಂದ್ರನಾಥ್,  ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ವರಿಷ್ಠಾಧಿಕಾರಿ ರಿಷ್ಯಂತ್ ಕುಮಾರ್, ಮಹಾಪೌರರಾದ ಜಯಮ್ಮ ಆರ್ ಗೋಪಿ ನಾಯ್ಕ್, ನಿಕಟಪೂರ್ವ ಮಹಾಪೌರರಾದ ಎಸ್ ಟಿ ವೀರೇಶ್ ಮಹಾನಗರ ಪಾಲಿಕೆ ಸದಸ್ಯರಾದ ಪ್ರಸನ್ನಕುಮಾರ್ ಇನ್ನು ಮುಂತಾದವರು ಉಪಸ್ಥಿತರಿದ್ದರು.

ಮಕ್ಕಳಿಗೆ ಶಾಲಾ ಹಂತದಲ್ಲೆ ಸ್ಪರ್ಧಾತ್ಮಕ ಪರೀಕ್ಷೆ ಅರಿವು ಮೂಡಿಸಿ

ರಾಜ್ಯದ ಯುಪಿಎಸ್‌ಸಿ ಟಾಪರ್ ನಗರದ ವಿ. ಅವಿನಾಶ್ ಸಲಹೆ ಸುದ್ದಿ360 ದಾವಣಗೆರೆ, ಜೂನ್ 28: ಸ್ಪರ್ಧಾತ್ಮಕ ಪರೀಕ್ಷೆ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದ್ದು, ಈ ಸಾಧನೆಗಾಗಿ ವಿದ್ಯಾರ್ಥಿಗಳು ನಿರಂತರ ಅಭ್ಯಾಸ ಮಾಡಬೇಕು ಎಂದು ರಾಜ್ಯದ ಯುಪಿಎಸ್‌ಸಿ ಟಾಪರ್ ನಗರದ ವಿ. ಅವಿನಾಶ್ ಹೇಳಿದರು. ನಗರದ ಅಕ್ಕ ಮಹಾದೇವಿ ರಸ್ತೆಯ ಎವಿ ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ಐಕ್ಯುಎಸಿ ವಿಭಾಗ ಹಮ್ಮಿಕೊಂಡಿದ್ದ ‘ಪ್ರೇರಣಾ ನುಡಿ’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಕುರಿತು ಅವರು ಮಾತನಾಡಿದರು. ಶಾಲೆ ಹಂತದಿಂದಲೇ ಯುಪಿಎಸ್‌ಸಿ ಕುರಿತು ಮಾಹಿತಿ … Read more

ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್‍ ಜೀವನ್‍ ಸಾಗರ್ ಪ್ರಥಮ : ಮಂಜುನಾಥ್ ಗಡಿಗುಡಾಳ್‍ ರಿಂದ ಸನ್ಮಾನ

ಸುದ್ದಿ360 ದಾವಣಗೆರೆ, ಜೂನ್ 28: ಆತ್ಮ ರಕ್ಷಣೆ ಮತ್ತು ಏಕಾಗ್ರತೆಯ ಕರಾಟೆ ಕಲೆಯಲ್ಲಿ ಸಾಕಷ್ಟು ಪರಿಶ್ರಮ ವಹಿಸಿ ಕಠಿಣ ಅಭ್ಯಾಸ ಮಾಡಿರುವ ಇಲ್ಲಿನ ಜಯನಗರದ ಕರಾಟೆ ಕೇಸರಿ ಮಾರ್ಷಲ್ ಆರ್ಟ್ಸ್ ಸಂಸ್ಥೆಯ ಎಂ.‌ ಜೀವನ್ ಸಾಗರ್ ಪಂಜಾಬ್ ನಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಮತ್ತು ರಾಜ್ಯದ ಹಿರಿಮೆಗೆ ಕಾರಣರಾಗಿದ್ದಾರೆ. ಈ ಮೂಲಕ ರಾಷ್ಟ್ರಮಟ್ಟದಲ್ಲಿ ದಾವಣಗೆರೆಯನ್ನು ಗುರುತಿಸುವಂತೆ ಮಾಡಿರುವ ಎಂ.‌ ಜೀವನ್ ಸಾಗರ್ ಅವರನ್ನು ಎಂಸಿಸಿ … Read more

ರೈತರಿಗೆ ಸಿಬಿಲ್ ಸ್ಕೋರ್ ಪರಿಶೀಲನೆ ಬೇಡ: ಸಂಸದ ಜಿ.ಎಂ. ಸಿದ್ದೇಶ್ವರ

ಸುದ್ದಿ360 ದಾವಣಗೆರೆ, ಜೂನ್ 28: 3 ಲಕ್ಷ ರೂ. ಮೇಲ್ಪಟ್ಟು ಸಾಲ ಪಡೆಯುವ ರೈತರಿಗೂ ಸಿಬಿಲ್ ಸ್ಕೋರ್ ಪರಿಶೀಲನೆ ಕಡ್ಡಾಯ ಎಂಬ ಸರಕಾರದ ಆದೇಶದಿಂದ ಬಹಳಷ್ಟು ರೈತರಿಗೆ ತೊಂದರೆಯಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು. ಅವರು ನಗರದ ತ್ರಿಶೂಲ್ ಕಲಾಭವನದಲ್ಲಿ ಇಂದು ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಸರಕಾರದ ಈ ನೀತಿಯಿಂದ ರೈತರು ಸಾಲ ಪಡೆಯಲು ಸಾಧ್ಯವಾಗದೆ, ಬಹಳಷು ಕೃಷಿಕರು ಸರಕಾರದ ಸಾಲ ಸೌಲಭ್ಯದಿಂದ ವಂಚಿತರಾಗುತ್ತಾರೆ. ಆದಕಾರಣ ಕೇಂದ್ರ … Read more

ಸಚಿವರ ಬರುವಿಕೆಯಲ್ಲಿ ಬಸವಳಿದವರಿಗೆ ಸಂಗೀತದೂಟ ಬಡಿಸಿದ ಅಂಧ ಮಕ್ಕಳು

ಸುದ್ದಿ360 ದಾವಣಗೆರೆ, ಜೂನ್ 28: ಜಿಲ್ಲಾ ಉಸ್ತುವಾರಿ ಸಚಿವರೆಂದರೆ ಕೇಳಬೇಕೆ..? ಅವರು ಜಿಲ್ಲೆಗೆ ಭೇಟಿ ನೀಡಿದರೆಂದರೆ ಬಂದಾಗಿನಿಂದ ಹೊರಡುವವರೆಗೂ ಸಾಕಷ್ಟು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಅನಿವಾರ್ಯತೆ. ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ (ಭೈರತಿ)ಯವರ ಜೂ.28ರ ಜಿಲ್ಲಾ ಪ್ರವಾಸದಲ್ಲಿ ಹೀಗೆಯೇ ಸಾಕಷ್ಟು ಕಾರ್ಯಕ್ರಮಗಳು ಸೇರಿದ್ದವು. ಇದೇ ವೇಳೆ ಬೆಜೆಪಿ ಪಕ್ಷದ ಹಿರಿಯ ಮುಖಂಡ ಹಾಗೂ ಯಶವಂತರಾವ್‍ ಜಾಧವ್‍ ರವರ ಹುಟ್ಟುಹಬ್ಬದ ನಿಮಿತ್ತ ನಗರದದ ದೇವರಾಜು ಅರಸು ಬಡಾವಣೆಯ ಅಂಧ ಮಕ್ಕಳ ಶಾಲೆಯಲ್ಲಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲೂ ಸಚಿವರ ಪಾಲ್ಗೊಳ್ಳುವಿಕೆ … Read more

ದಾವಣಗೆರೆಗೆ ಚಿನ್ನದ ಕಿರೀಟ ತೊಡಿಸಿದ ಗಿರೀಶ್

ಸುದ್ದಿ360 ದಾವಣಗೆರೆ, ಜೂನ್ 28: ದಾವಣಗೆರೆ ಸ್ಪೋರ್ಟ್ಸ್ ಹಾಸ್ಟೆಲ್ ನ ಬಿ.ಎ. ಪದವಿಯ  ಮೂರನೇ ವರುಷದ ವಿಧ್ಯಾರ್ಥಿ ಗಿರಿಶ್ ಬಿ ಕುಮಾರ ಪಾಲ್ಯಂ ತಮಿಳುನಾಡು ಸೌತ್ ಇಂಡಿಯಾ ಕುಸ್ತಿ ಚಾಂಪಿಯನ್ ಶಿಪ್ 2022 ರ ಕುಸ್ತಿ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಹರಿಹರ ತಾಲ್ಲೂಕು ಗುತ್ತೂರು ಹಳ್ಳಿಯ ನೀಲಮ್ಮ ಮತ್ತು ಬಸಪ್ಪ ಇವರ ಪುತ್ರ ಗಿರೀಶ್ ಬಿ. ದಾವಣಗೆರೆ ಸ್ಪೋರ್ಟ್ಸ್ ಹಾಸ್ಟೆಲ್ ನಲ್ಲಿ ಇದ್ದುಕೊಂಡು ದೇವರಾಜ್ ಅರಸ್ ಕಾಲೇಜಿನಲ್ಲಿ ಬಿ.ಎ. ಪದವಿಯ ಮೂರನೇ ವರುಷದಲ್ಲಿ … Read more

ಸ್ಕೌಟ್ಸ್ ಗೈಡ್ಸ್ ಶಿಬಿರಕ್ಕೆ ದಾವಣಗೆರೆ ವಿದ್ಯಾರ್ಥಿಗಳು

ಸುದ್ದಿ360 ಬೆಳಗಾವಿ, ಜೂನ್ 28: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ದಾವಣಗೆರೆ. ಜು.01 ರಿಂದ 05 ರವರೆಗೆ ನಡೆಯುವ ನ್ಯಾಷನಲ್ ರೋವರ್ಸ್ ಮತ್ತು ರೇಂಜರ್ಸ್ ಕಾರ್ನಿವಲ್ ಟು ಕಮರೆಟ್ ಅಜಾದಿ ಕಾ ಅಮೃತ ಮಹೋತ್ಸವ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆಯುವ ಶಿಬಿರದಲ್ಲಿ ನಮ್ಮ ದಾವಣಗೆರೆ ಜಿಲ್ಲೆಯ ರೋವರ್ಸ್ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ನವೀನ್ ಉ ಚಾಣಕ್ಯ, ಮುಸ್ತಫ ,ಗುರುಬಸವರಾಜ್, ರೇಂಜರ್ಸ್ ವಿದ್ಯಾರ್ಥಿಗಳು ರೋಹಿಣಿ, ತನು, ಕಾವ್ಯ ದಾವಣಗೆರೆ ಇವರು ಶಿಬಿರದಲ್ಲಿ ಭಾಗವಹಿಸುತ್ತಿದ್ದು, ಈ ವಿದ್ಯಾರ್ಥಿಗಳಿಗೆ … Read more

ಯಶವಂತರಾವ್ ಜಾಧವ್ ಜನ್ಮದಿನಾಚರಣೆ (ಜೂ.29)

ಸುದ್ದಿ360 ದಾವಣಗೆರೆ, ಜೂ.27: ಭಾರತೀಯ ಜನತಾ ಪಕ್ಷದ ಮುಖಂಡ ಹಾಗೂ ಮಾಜಿ ಜಿಲ್ಲಾಧ್ಯಕ್ಷ ಯಶವಂತ ರಾವ್ ಜಾಧವ್ ಅವರ ಜನ್ಮದಿನವನ್ನು ಜೂ.29ರಂದು ಯಶವಂತ ರಾವ್ ಜಾಧವ್ ಸ್ನೇಹಬಳದಿಂದ ಆಯೋಜಿಸಲಾಗಿದೆ ಎಂದು ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 62ನೇ ಜನ್ಮದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿರುವ ಯಶವಂತರಾವ್ ಜಾಧವ್ ಅವರು ಕಳೆದ 35 ವರ್ಷಗಳಿಂದ ಬಿಜೆಪಿಯಲ್ಲಿ ನಿಷ್ಠಾವಂತ ಹಾಗೂ ಸಕ್ರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದು, ಇವರ ಸಮಾಜಮುಖಿ ಕಾರ್ಯಗಳು ಕಾರ್ಯಕರ್ತರಿಗೆ ಪ್ರೇರಣೆ ನೀಡುವಂತವಾಗಿವೆ … Read more

ಜೂ.27 ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಚುನಾವಣೆ

ಸುದ್ದಿ360, ದಾವಣಗೆರೆ, ಜೂ.25: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ 2022-27ನೇ ಸಾಲಿನ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಘಟಕದ ಚುನಾವಣ ಪ್ರಕ್ರಿಯೆ ಇದೇ ಜೂನ್‍ 27ರಿಂದ ಪ್ರಾರಂಭವಾಗಿ ಜುಲೈ 24ರವರೆಗೆ ಮೂರ ಹಂತಗಳಲ್ಲಿ ನಡೆಯಲಿರುವುದಾಗಿ ಜಿಲ್ಲಾಸಹ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಎಂ. ಮಂಜುನಾಥಯ್ಯ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುವುದು ಮತ್ತು ಸಹ ಶಿಕ್ಷಕರಲ್ಲಿ ಸ್ನೇಹ ಸೌಹಾರ್ಧತೆ, … Read more

ಕೆಐಎ ನಲ್ಲಿ ಶೀಘ್ರದಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜೂ. 24: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೀಘ್ರದಲ್ಲಿಯೇಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಮಾಡಲು ಉದ್ದೇಶಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಯಿಂದ ಇಂದು ಹಿಂದಿರುಗಿದ ಸಂದರ್ಭದಲ್ಲಿ ಬೆಂಗಳೂರು ವಿಮಾನನಿಲ್ದಾಣದಲ್ಲಿರುವ ಕೆಂಪೇಗೌಡರ ಬೃಹತ್ ಮೂರ್ತಿಯ ನಿರ್ಮಾಣದ ಸ್ಥಳಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ವಿಮಾನನಿಲ್ದಾಣದಲ್ಲಿರುವ ಕೆಂಪೇಗೌಡರ ಬೃಹತ್ ಮೂರ್ತಿ ಅಂತಿಮ ಘಟ್ಟಕ್ಕೆ ಬಂದಿದೆ. ಸ್ಟೀಲ್ ಮತ್ತು ಕಂಚಿನಿಂದ ಮಾಡಲಾಗಿರುವ ಸುಮಾರು 108 ಅಡಿ ಎತ್ತರದ ಪ್ರತಿಮೆ 220 ಟನ್ … Read more

error: Content is protected !!